MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಪುತ್ರನ ಹಿಟ್ & ರನ್ ಕೇಸ್, ಪರಿಹಾರ ಕೊಡುವ ನೆಪದಲ್ಲಿ ಕರೆದು ಸಂತ್ರಸ್ತ ಕುಟುಂಬಕ್ಕೆ ಅವಮಾನ, ಪ್ರತಿಕ್ರಿಯೆಗೆ ನಿರಾಕರಿಸಿದ ರೇವಣ್ಣ

ಪುತ್ರನ ಹಿಟ್ & ರನ್ ಕೇಸ್, ಪರಿಹಾರ ಕೊಡುವ ನೆಪದಲ್ಲಿ ಕರೆದು ಸಂತ್ರಸ್ತ ಕುಟುಂಬಕ್ಕೆ ಅವಮಾನ, ಪ್ರತಿಕ್ರಿಯೆಗೆ ನಿರಾಕರಿಸಿದ ರೇವಣ್ಣ

ಮಾಜಿ ಸಚಿವ ಹೆಚ್.ಎಂ.ರೇವಣ್ಣ ಪುತ್ರನ ಹಿಟ್ & ರನ್ ಪ್ರಕರಣ ಹೊಸ ತಿರುವು ಪಡೆದಿದೆ. ಪರಿಹಾರ ನೀಡುವ ಬದಲು, 'ನಮ್ಮ ಕಾರೇ ಬೇಕಿತ್ತಾ ಸಾಯೋಕೆ' ಎಂದು ಅವಮಾನಿಸಿ ದರ್ಪ ತೋರಿದ್ದಾರೆಂದು ಮೃತನ ಕುಟುಂಬ ಗಂಭೀರ ಆರೋಪ ಮಾಡಿದೆ. ಹಣ ಬೇಡ, ನ್ಯಾಯ ಬೇಕು ಎಂದು ಕುಟುಂಬಸ್ಥರು ಪಟ್ಟು ಹಿಡಿದಿದೆ.

2 Min read
Author : Gowthami K
Published : Jan 07 2026, 03:52 PM IST
Share this Photo Gallery
  • FB
  • TW
  • Linkdin
  • Whatsapp
16
ಹಣದ ವಿಚಾರದಲ್ಲಿ ಅವಮಾನಿಸಿ ದರ್ಪ
Image Credit : Asianet News

ಹಣದ ವಿಚಾರದಲ್ಲಿ ಅವಮಾನಿಸಿ ದರ್ಪ

ಬೆಂಗಳೂರು / ಮಾಗಡಿ: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರ ಪುತ್ರ ಶಶಾಂಕ್ ಸಂಬಂಧಿಸಿದ ಹಿಟ್‌ ಅಂಡ್ ರನ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಅಪಘಾತದಲ್ಲಿ ಮೃತಪಟ್ಟ ಯುವಕನ ಪೋಷಕರು ಹೆಚ್.ಎಂ.ರೇವಣ್ಣ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪರಿಹಾರ ನೀಡುವುದಾಗಿ ಕರೆಸಿ, ಹಣದ ವಿಚಾರದಲ್ಲಿ ಅವಮಾನಿಸಿ ದರ್ಪ ತೋರಲಾಗಿದೆ ಎಂದು ಮೃತ ಯುವಕ ರಾಜೇಶ್ ಅವರ ಕುಟುಂಬ ಕಣ್ಣೀರಿಟ್ಟಿದೆ.

26
ಕುಟುಂಬಸ್ಥರ ನೋವು
Image Credit : Asianet News

ಕುಟುಂಬಸ್ಥರ ನೋವು

ಕಳೆದ ಡಿಸೆಂಬರ್ 11ರ ತಡರಾತ್ರಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಸಮೀಪ ನಡೆದ ರಸ್ತೆ ಅಪಘಾತದಲ್ಲಿ, ರೇವಣ್ಣ ಪುತ್ರ ಶಶಾಂಕ್ ಚಾಲನೆ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ಬಿಳಗುಂಬ ಗ್ರಾಮದ 23 ವರ್ಷದ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಅಪಘಾತ ಒಂದು ಕುಟುಂಬವನ್ನು ಸಂಪೂರ್ಣವಾಗಿ ಸಂಕಷ್ಟಕ್ಕೆ ತಳ್ಳಿದೆ ಎಂದು ಕುಟುಂಬಸ್ಥರು ನೋವು ವ್ಯಕ್ತಪಡಿಸಿದ್ದಾರೆ.

Related Articles

Related image1
ದುಬೈನಲ್ಲಿ ಭೀಕರ ಅಪಘಾತ: ಕೇರಳದ ಒಂದೇ ಕುಟುಂಬದ ನಾಲ್ವರು ಪುಟ್ಟ ಮಕ್ಕಳು ಸಾವು
Related image2
ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ - ನಾಲ್ವರು ಕಾರ್ಮಿಕರ ದುರಂತ ಸಾವು!
36
ನಿಮ್ಮ ಮಗ ಸಾಯಲು ನಮ್ಮ ಕಾರೇ ಬೇಕಿತ್ತಾ? ಕುಟುಂಬಕ್ಕೆ ಅವಮಾನ ಆರೋಪ
Image Credit : Asianet News

ನಿಮ್ಮ ಮಗ ಸಾಯಲು ನಮ್ಮ ಕಾರೇ ಬೇಕಿತ್ತಾ? ಕುಟುಂಬಕ್ಕೆ ಅವಮಾನ ಆರೋಪ

ಮೃತ ರಾಜೇಶ್ ಅವರ ಪೋಷಕರು ಮಾಧ್ಯಮಗಳ ಮುಂದೆ ಮಾತನಾಡಿ, ಅಪಘಾತದ ನಂತರ ನಮ್ಮನ್ನು ಕರೆಸಿ, ನಿಮ್ಮ ಮಗ ಸಾಯಲು ನಮ್ಮ ಕಾರೇ ಬೇಕಿತ್ತಾ?’ ಎಂದು ಅವಮಾನಿಸಲಾಗಿದೆ. ಎರಡು ಲಕ್ಷ ರೂಪಾಯಿ ಕೊಡ್ತೀವಿ, ತೆಗೆದುಕೊಂಡು ಹೋಗಿ ಎಂದು ದರ್ಪ ತೋರಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಕಾರಿಗೆ ಇನ್ಸೂರೆನ್ಸ್ ಇದೆ, ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ. ಮಾಧ್ಯಮಗಳ ಮುಂದೆ ಹೋಗಿ ನಮ್ಮ ಮರ್ಯಾದೆ ಹಾಳು ಮಾಡಿದ್ದೀರಿ. ಬೇಕಿದ್ದರೆ ಹಣ ತೆಗೆದುಕೊಳ್ಳಿ, ಇಲ್ಲದಿದ್ದರೆ ಹೋಗಿ ಎಂದು ಹೇಳಿ ನಮಗೆ ಬೆದರಿಕೆ ಹಾಕಲಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ. ಈ ಅವಮಾನದಿಂದ ಮನನೊಂದ ಕುಟುಂಬಸ್ಥರು ಯಾವುದೇ ಹಣ ಸ್ವೀಕರಿಸದೇ ವಾಪಸ್ ಬಂದಿದ್ದಾರೆ.

46
ಅವರಿಗೆ ಒಂದು ಕುಟುಂಬ ಹಾಳಾದರೂ ಪಶ್ಚಾತ್ತಾಪವೇ ಇಲ್ಲ
Image Credit : Asianet News

ಅವರಿಗೆ ಒಂದು ಕುಟುಂಬ ಹಾಳಾದರೂ ಪಶ್ಚಾತ್ತಾಪವೇ ಇಲ್ಲ

ಒಂದು ಕುಟುಂಬ ಹಾಳಾದರೂ ಪಶ್ಚಾತ್ತಾಪವೇ ಇಲ್ಲ ಎಂದು ಯುವಕನ ಕುಟುಂಬ ಬೇಸರ ವ್ಯಕ್ತಪಡಿಸಿದೆ. ಅಪಘಾತದಿಂದ ನಮ್ಮ ಜೀವನವೇ ನಾಶವಾಗಿದೆ. ಆದರೆ, ಯಾವುದೇ ಪಶ್ಚಾತ್ತಾಪವಿಲ್ಲದೇ ನಮ್ಮನ್ನು ಅವಮಾನಿಸಲಾಗಿದೆ. ಮಾಧ್ಯಮಗಳ ಮುಂದೆ ಪರಿಹಾರ ಕೊಡುತ್ತೇನೆ ಎಂದು ಹೇಳಿ, ಈಗ ನಮ್ಮ ಮೇಲೆ ಒತ್ತಡ ಮತ್ತು ಧಮ್ಕಿ ಹಾಕುತ್ತಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ. ನಮ್ಮ ಮಗನ ಸಾವಿಗೆ ನ್ಯಾಯ ಸಿಗಬೇಕು. ಹಣ ಬೇಕಿಲ್ಲ, ನ್ಯಾಯ ಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

56
ಹೆಚ್.ಎಂ.ರೇವಣ್ಣ ಪ್ರತಿಕ್ರಿಯೆ ನೀಡಲು ನಿರಾಕರಣೆ
Image Credit : Asianet News

ಹೆಚ್.ಎಂ.ರೇವಣ್ಣ ಪ್ರತಿಕ್ರಿಯೆ ನೀಡಲು ನಿರಾಕರಣೆ

ಈ ಗಂಭೀರ ಆರೋಪಗಳ ಕುರಿತು ಪ್ರತಿಕ್ರಿಯೆ ಕೇಳಿದಾಗ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಮಾತನಾಡಲು ನಿರಾಕರಿಸಿದ್ದಾರೆ. ಅವರು ಏನು ಬೇಕಾದರೂ ಹೇಳಿಕೆ ಕೊಡಲಿ. ನಾನು ಈ ವಿಚಾರದಲ್ಲಿ ಮಾತನಾಡಲ್ಲ. ಯಾಕೆ ಮಾತನಾಡಬೇಕು? ಎಂದು ಹೇಳಿದ್ದಾರೆ. ಬಳಿಕ ಮಾತನಾಡಿದ ಅವರು, ಕಾರಿಗೆ ಇನ್ಸೂರೆನ್ಸ್ ಇದೆ, ಕ್ಲೇಮ್ ಆಗುತ್ತದೆ. ಆದರೂ ಮಾನವೀಯ ದೃಷ್ಟಿಯಿಂದ ಎರಡು ಲಕ್ಷ ಅಥವಾ ಐದು ಲಕ್ಷ ರೂಪಾಯಿ ಸಹಾಯ ಮಾಡಲು ಹೋಗಿದ್ದೆವು. ಆದರೆ ಅವರು 25 ಲಕ್ಷ ರೂಪಾಯಿ ಕೊಡಬೇಕು ಎಂದು ಬೇಡಿಕೆ ಇಟ್ಟರೆ ನಾವು ಏನು ಮಾಡಬೇಕು? ಎಂದು ತಮ್ಮ ವಾದವನ್ನು ಮಂಡಿಸಿದ್ದಾರೆ.

66
ಪ್ರಕರಣ ಇನ್ನಷ್ಟು ತೀವ್ರ
Image Credit : Asianet News

ಪ್ರಕರಣ ಇನ್ನಷ್ಟು ತೀವ್ರ

ಒಟ್ಟಾರೆ, ಮಾಜಿ ಸಚಿವರ ಪುತ್ರ ಸಂಬಂಧಿಸಿದ ಹಿಟ್‌ & ರನ್ ಪ್ರಕರಣದಲ್ಲಿ ಇದೀಗ ಪರಿಹಾರ, ಅವಮಾನ ಹಾಗೂ ದರ್ಪದ ಆರೋಪಗಳು ಕೇಳಿಬಂದಿದ್ದು, ವಿಷಯ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಮೃತ ಯುವಕನ ಕುಟುಂಬ ನ್ಯಾಯಕ್ಕಾಗಿ ಹೋರಾಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದು, ಮುಂದಿನ ದಿನಗಳಲ್ಲಿ ಪ್ರಕರಣ ಯಾವ ದಿಕ್ಕಿನತ್ತ ಸಾಗಲಿದೆ ಎಂಬ ಕುತೂಹಲ ಮೂಡಿಸಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಅಪಘಾತ
ಬೆಂಗಳೂರು
ಕ್ರೈಮ್ ನ್ಯೂಸ್
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಮಗಳನ್ನು ಮದುವೆ ಮಾಡಿಕೊಡಲು ವಿರೋಧಿ ಸಿದ್ದಕ್ಕೆ ತಾಯಿಗೆ ಬೆಂಕಿ: 20 ದಿನಗಳ ಸಾವು ಬದುಕಿನ ಹೋರಾಟದ ಬಳಿಕ ಮಹಿಳೆ ನಿಧನ
Recommended image2
ಸರ್ಕಾರಿ ಕೆಲಸ ಕೊಡಿಸೋದಾಗಿ ಯುವತಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿದ ಮಂಗಳಮುಖಿ; ಮುಂದಾಗಿದ್ದು ದುರಂತ!
Recommended image3
Infosys: 250 ಕೋಟಿ ಮೌಲ್ಯದ ಭೂಮಿ ಅಕ್ರಮ ಮಾರಾಟ; ಇನ್ಫೋಸಿಸ್‌ಗೆ ಶಾಕ್ ನೀಡಿದ ರಾಜ್ಯ ಸರ್ಕಾರ
Related Stories
Recommended image1
ದುಬೈನಲ್ಲಿ ಭೀಕರ ಅಪಘಾತ: ಕೇರಳದ ಒಂದೇ ಕುಟುಂಬದ ನಾಲ್ವರು ಪುಟ್ಟ ಮಕ್ಕಳು ಸಾವು
Recommended image2
ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ - ನಾಲ್ವರು ಕಾರ್ಮಿಕರ ದುರಂತ ಸಾವು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved