MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ದಾವಣಗೆರೆ ನವ ವಿವಾಹಿತನ ಆತ್ಮ*ಹತ್ಯೆಗೆ ಮೇಜರ್ ಟ್ವಿಸ್ಟ್; ಹೆಂಡತಿ ಬೇರೆಯವನೊಟ್ಟಿಗೆ ಹೋಗಿದ್ದೇ ಸಾವಿಗೆ ಕಾರಣವಾ?

ದಾವಣಗೆರೆ ನವ ವಿವಾಹಿತನ ಆತ್ಮ*ಹತ್ಯೆಗೆ ಮೇಜರ್ ಟ್ವಿಸ್ಟ್; ಹೆಂಡತಿ ಬೇರೆಯವನೊಟ್ಟಿಗೆ ಹೋಗಿದ್ದೇ ಸಾವಿಗೆ ಕಾರಣವಾ?

ದಾವಣಗೆರೆ: ಕೇವಲ ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಹರೀಶ್ ಆತ್ಮ*ಹತ್ಯೆ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಡೆತ್‌ ನೋಟ್‌ನಲ್ಲಿ ತಮ್ಮ ಸಾವಿಗೆ ಕಾರಣವೇನು ಎನ್ನುವುದನ್ನು ಹರೀಶ್ ಎಂಬಾತ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. 

1 Min read
Author : Naveen Kodase
Published : Jan 27 2026, 01:56 PM IST
Share this Photo Gallery
  • FB
  • TW
  • Linkdin
  • Whatsapp
16
ಮದುವೆಯಾದ ಎರಡೂವರೆ ತಿಂಗಳಲ್ಲೇ ನವ ವಿವಾಹಿತನ ಬದುಕು ಅಂತ್ಯ
Image Credit : Asianet News

ಮದುವೆಯಾದ ಎರಡೂವರೆ ತಿಂಗಳಲ್ಲೇ ನವ ವಿವಾಹಿತನ ಬದುಕು ಅಂತ್ಯ

ದಾವಣಗೆರೆ ತಾಲೂಕಿನ ಗುಮ್ಮನೂರು ನಿವಾಸಿ 32 ವರ್ಷದ ಹರೀಶ್ ಕಳೆದ ಎರಡೂವರೆ ತಿಂಗಳ ಹಿಂದಷ್ಟೇ ಸರಸ್ವತಿ ಎಂಬುವವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಆ ಸಂತೋಷ ಹೆಚ್ಚು ಸಮಯ ಉಳಿಯಲೇ ಇಲ್ಲ.

26
ಮದುವೆಯಾದ ಎರಡೂವರೆ ತಿಂಗಳಿಗೆ ನವ ವಿವಾಹಿತ ಆತ್ಮ*ಹತ್ಯೆ
Image Credit : Asianet News

ಮದುವೆಯಾದ ಎರಡೂವರೆ ತಿಂಗಳಿಗೆ ನವ ವಿವಾಹಿತ ಆತ್ಮ*ಹತ್ಯೆ

ಮದುವೆಯಾಗಿ ಕೇವಲ ಎರಡೂವರೆ ತಿಂಗಳಲ್ಲೇ ಹರೀಶ್‌, ತಮ್ಮ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣಾಗಿದ್ದರು. ಇನ್ನು ಹರೀಶ್ ಸಾವಿಗೆ ಶರಣಾಗುತ್ತಿದ್ದಂತೆಯೇ ಹರೀಶ್ ಅವರಿಗೆ ಮದುವೆ ಮಾಡಿಸಿದ್ದ ಸರಸ್ವತಿಯವರ ಸೋದರ ಮಾವ ರುದ್ರೇಶ್ ಕೂಡಾ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿದ್ದರು.

Related Articles

Related image1
ಎರಡೂವರೆ ತಿಂಗಳ ಹಿಂದೆ ನಡೆದ ಒಂದು ಮದುವೆಗೆ ಎರಡು ಆತ್ಮ*ಹತ್ಯೆ! ನವ ವಿವಾಹಿತನ ಜತೆ ಮದುವೆ ಮಾಡಿಸಿದವನೂ ಸಾವಿಗೆ ಶರಣು!
Related image2
ದಾವಣಗೆರೆ: ನನಗೆ ಗಂಡ ಬೇಕು ಎಂದು ಮಗಳೊಂದಿಗೆ ಪತಿ ಮನೆ ಮುಂದೆ ಪತ್ನಿ ಧರಣಿ!
36
ಡೆತ್‌ನೋಟ್‌ನಲ್ಲಿ ಸಾವಿಗೆ ಕಾರಣ ಬಿಚ್ಚಿಟ್ಟ ಹರೀಶ್
Image Credit : Asianet News

ಡೆತ್‌ನೋಟ್‌ನಲ್ಲಿ ಸಾವಿಗೆ ಕಾರಣ ಬಿಚ್ಚಿಟ್ಟ ಹರೀಶ್

ಇನ್ನು ಹರೀಶ್ ನೇಣು ಹಾಕಿಕೊಂಡು ಆತ್ಮ*ಹತ್ಯೆಗೆ ಶರಣಾಗುವ ಮುನ್ನ ಡೆತ್‌ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದ್ದು, ತಮ್ಮ ಸಾವಿಗೆ ಕಾರಣ ಯಾರು ಎನ್ನುವುದನ್ನು ಎಳೆಎಳೆಯಾಗಿ ವಿವರಿಸಿದ್ದಾರೆ. ಇದರ ಜತೆಗೆ ತಮ್ಮ ಅಂತ್ಯ ಸಂಸ್ಕಾರವನ್ನು ಯಾವ ರೀತಿ ಮಾಡಬೇಕು ಎನ್ನುವುದನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

46
ಮದುವೆ ಬೆನ್ನಲ್ಲೇ ಪರ ಪುರಷನ ಜತೆ ಓಡಿ ಹೋಗಿದ್ದ ಹರೀಶ್ ಪತ್ನಿ
Image Credit : Asianet News

ಮದುವೆ ಬೆನ್ನಲ್ಲೇ ಪರ ಪುರಷನ ಜತೆ ಓಡಿ ಹೋಗಿದ್ದ ಹರೀಶ್ ಪತ್ನಿ

ಹರೀಶ್, ಸರಸ್ವತಿಯವರನ್ನು ಮದುವೆಯಾದ ಎರಡೂವರೆ ತಿಂಗಳೊಳಗಾಗಿ ಪತ್ನಿ ಪರ ಪುರುಷನ ಜತೆ ಓಡಿ ಹೋಗಿದ್ದರು. ಇದರಿಂದ ಹರೀಶ್ ಮನನೊಂದಿದ್ದರು. ಇದರ ನಡುವೆ ಹರೀಶ್ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದಲ್ಲದೇ, ಸರಸ್ವತಿ ಅವರ ಕುಟುಂಬಸ್ಥರು ಪ್ರಾಣ ಬೆದರಿಕೆಯನ್ನೂ ಹಾಕಿದ್ದರು ಎನ್ನಲಾಗಿದೆ.

56
ಡೆತ್‌ನೋಟ್‌ನಲ್ಲಿ ಮೂವರ ಮೇಲೆ ಆರೋಪ
Image Credit : Asianet News

ಡೆತ್‌ನೋಟ್‌ನಲ್ಲಿ ಮೂವರ ಮೇಲೆ ಆರೋಪ

ಇದೀಗ ಹರೀಶ್ ತಮ್ಮ ಡೆತ್‌ ನೋಟ್‌ನಲ್ಲಿ ತಮ್ಮ ಸಾವಿಗೆ ಪತ್ನಿ ಸರಸ್ವತಿ, ಅತ್ತೆ, ಮಾವ ಹಾಗೂ ತಮ್ಮ ಪತ್ನಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ. ಅವರೆಲ್ಲರಿಗೂ ಜೀವಾವಧಿ ಶಿಕ್ಷೆಯಾಗಬೇಕು. ನಾನು ಜೀವನದಲ್ಲಿ ತುಂಬಾ ನೊಂದಿದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾರೆ.

66
ಅಂತ್ಯ ಸಂಸ್ಕಾರದ ಬಗ್ಗೆ ಉಲ್ಲೇಖ ಮಾಡಿದ ಹರೀಶ್
Image Credit : Asianet News

ಅಂತ್ಯ ಸಂಸ್ಕಾರದ ಬಗ್ಗೆ ಉಲ್ಲೇಖ ಮಾಡಿದ ಹರೀಶ್

ಇನ್ನು ಹರೀಶ್ ತಮ್ಮ ಅಂತ್ಯ ಸಂಸ್ಕಾರವನ್ನು ಬಸವಧರ್ಮದ ಪ್ರಕಾರವಾಗಿ ನಡೆಸುವಂತೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಪ್ರಕರಣ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರೈಮ್ ನ್ಯೂಸ್
ದಾವಣಗೆರೆ

Latest Videos
Recommended Stories
Recommended image1
ಲಕ್ಕುಂಡಿ ಬಂಗಾರದ ನಿಧಿ ತೆಗೆದುಕೊಂಡ ಸರ್ಕಾರ, ಪ್ರತಿವರ್ಷ ಲಕ್ಕುಂಡಿ ಉತ್ಸವ ಆಚರಿಸಿ: ಎಸ್.ಎಸ್. ಪಾಟೀಲ ಆಗ್ರಹ
Recommended image2
ಮದುವೆಯಾಗಿ 2 ತಿಂಗಳಿಗೆ ಓಡಿಹೋದ ಪತ್ನಿ: ಗಂಡ ಹಾಗೂ ಮದುವೆ ಮಾಡಿಸಿದ ಹುಡುಗಿ ಸೋದರಮಾವ ಇಬ್ಬರೂ ಆತ್ಮ*ಹತ್ಯೆ!
Recommended image3
ಎರಡೂವರೆ ತಿಂಗಳ ಹಿಂದೆ ನಡೆದ ಒಂದು ಮದುವೆಗೆ ಎರಡು ಆತ್ಮ*ಹತ್ಯೆ! ನವ ವಿವಾಹಿತನ ಜತೆ ಮದುವೆ ಮಾಡಿಸಿದವನೂ ಸಾವಿಗೆ ಶರಣು!
Related Stories
Recommended image1
ಎರಡೂವರೆ ತಿಂಗಳ ಹಿಂದೆ ನಡೆದ ಒಂದು ಮದುವೆಗೆ ಎರಡು ಆತ್ಮ*ಹತ್ಯೆ! ನವ ವಿವಾಹಿತನ ಜತೆ ಮದುವೆ ಮಾಡಿಸಿದವನೂ ಸಾವಿಗೆ ಶರಣು!
Recommended image2
ದಾವಣಗೆರೆ: ನನಗೆ ಗಂಡ ಬೇಕು ಎಂದು ಮಗಳೊಂದಿಗೆ ಪತಿ ಮನೆ ಮುಂದೆ ಪತ್ನಿ ಧರಣಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved