MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಹುಡುಗರು ಲವ್ ಪ್ರಪೋಸ್ ಮಾಡಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 15ರ ಬಾಲಕಿ!

ಹುಡುಗರು ಲವ್ ಪ್ರಪೋಸ್ ಮಾಡಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 15ರ ಬಾಲಕಿ!

ಮಂಡ್ಯ (ಸೆ.01): ಹೈಸ್ಕೂಲ್ ಓದುವ ಬಾಲಕಿಯ ಹಿಂದೆ ಬಿದ್ದ ಮೂರ್ನಾಲ್ಕು ಹದಿಹರೆಯದ ಹುಡುಗರು, ನಿನ್ನನ್ನು ಪ್ರೀತಿಸುತ್ತೇವೆ ಎಂದು ಲವ್ ಪ್ರಪೋಸ್ ಮಾಡಿದ್ದಾರೆ. ಆದರೆ, ಬಾಲಕಿ ಇದಕ್ಕೊಪ್ಪದಿದ್ದಾಗ ಆಕೆಯೊಂದಿಗೆ ವಾಗ್ವಾದ ಮಾಡಿದ್ದಾರೆ. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ.

1 Min read
Sathish Kumar KH
Published : Sep 01 2024, 05:00 PM IST
Share this Photo Gallery
  • FB
  • TW
  • Linkdin
  • Whatsapp
15

ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕಿ ಹೈಸ್ಕೂಲ್ ಓದುತ್ತಿದ್ದ ಇಂಪನ (15) ಎಂದು ಗುರುತಿಸಲಾಗಿದೆ. ಪ್ರೌಢಶಾಲೆಗೆ ಹೋಗುವ ಬಾಲಕಿಗೆ ಪ್ರೀತಿಸುವಂತೆ ಒತ್ತಾಯ ಮಾಡಿದ ಕಿರುಕುಳಕ್ಕೆ ಬಾಲಕಿ ಮನನೊಂದಿದ್ದು, ಸಾವಿಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ.

25

ಪ್ರೌಢಶಾಲಾ ವಿದ್ಯಾರ್ಥಿನಿ ಇಂಪನಳನ್ನು ಇದೇ ಹನಕೆರೆ ಗ್ರಾಮದ ಅಪ್ರಾಪ್ತ ಬಾಲಕರು ಪ್ರೀತಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಇದೇ ವೇಳೆ ಬಾಲಕಿ ಇಂಪನಾಗೆ ಪ್ರೀತಿಸುವಂತೆ ಕೂಡ ಒತ್ತಾಯ ಮಾಡಿದ್ದಾರೆ.

35

ಬಾಲಕಿಯೊಂದಿಗೆ ಪ್ರೀತಿಸುವಂತೆ ಪೀಡಿಸುವ ಸಂದರ್ಭದ ಆಡಿಯೋ ಸೆರೆ ಹಿಡಿದಿರುವ ಬಾಲಕರು, ಅದನ್ನು ಇಂಪನಾಳ ತಾಯಿಯ ವಾಟ್ಸಾಪ್‌ಗೆ ಕಳಿಸಿದ್ದಾರೆ. ಬಾಲಕಿಗೆ ಹುಡುಗರು ಸೇರಿಕೊಂಡು ಪ್ರೀತಿಸುವಂತೆ ಕಿರುಕುಳ ನೀಡಿದ್ದ ಮಾತಿನ ಚಕಮಕಿಯ ಆಡಿಯೋ ವೈರಲ್ ಆಗಿತ್ತು.

45

ಇಷ್ಟಕ್ಕೆ ಸುಮ್ಮನಾಗದ ಕಿಡಿಗೇಡಿ ಬಾಲಕರು ವೈರಲ್ ಆಗಿರುವ ಆಡಿಯೋ ತುಣಕನ್ನು ಆ ಬಾಲಕಿಯ ತಾಯಿಗೆ ವಾಟ್ಸಪ್‌ ಮೂಲಕ ಕಳುಹಿಸಿದ್ದಾರೆ. ಇದರಿಂದ ಮನನೊಂದು ಬಾಲಕಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

55

ಇನ್ನು ದುರ್ಘಟನೆ ನಡೆಯುತ್ತಿದ್ದಂತೆಯೇ ಕಿರುಕುಳ ನೀಡಿದ್ದ ಎಲ್ಲ ಅಪ್ರಾಪ್ತ ಬಾಲಕರು ಗ್ರಾಮವನ್ನು ಬಿಟ್ಟು ಪರಾರಿ ಆಗಿದ್ದಾರೆ. ಮೃತ ಬಾಲಕಿಯ ಕುಟುಂಬ ಸದಸ್ಯರು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಮಂಡ್ಯ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved