MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಹುಡುಗ ಡಿಗ್ರಿ ಮಾಡಿಲ್ಲವೆಂದು ಮದುವೆ ರದ್ದು: ಮನನೊಂದ ಯುವತಿ ಆತ್ಮಹ*ತ್ಯೆ

ಹುಡುಗ ಡಿಗ್ರಿ ಮಾಡಿಲ್ಲವೆಂದು ಮದುವೆ ರದ್ದು: ಮನನೊಂದ ಯುವತಿ ಆತ್ಮಹ*ತ್ಯೆ

ಮದುವೆ ನಿಶ್ಚಯವಾದ ಹುಡುಗ ಡಿಗ್ರಿ ಓದಿಲ್ಲವೆಂದು ತಿಳಿದ ನಂತರ ಮದುವೆ ರದ್ದಾಗಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ.

1 Min read
Sathish Kumar KH
Published : Sep 06 2025, 05:25 PM IST
Share this Photo Gallery
  • FB
  • TW
  • Linkdin
  • Whatsapp
14
Image Credit : Asianet News

ಮಂಡ್ಯ (ಸೆ.06): ಮದುವೆ ನಿಶ್ಚಯವಾದ ಹುಡುಗ ಡಿಗ್ರಿ ಓದಿಲ್ಲವೆಂದು ಮನೆಯವರು ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ನನ್ನ ಜೊತೆಗೆ ಡಿಗ್ರಿ ಮಾಡಿದ್ದಾಗಿ ಸುಳ್ಳು ಹೇಳಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾನೆಂದು  ಮನನೊಂದ ಯುವತಿ ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ನಡೆದಿದೆ.

24
Image Credit : Asianet News

ಮೃತಳನ್ನು ಕೆ.ಆರ್.ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ ನಿವಾಸಿ ಕಾವ್ಯ (26) ಎಂದು ಗುರುತಿಸಲಾಗಿದೆ. ಸುಮಾರು 15 ದಿನಗಳ ಹಿಂದೆ ಹಾಸನ ಜಿಲ್ಲೆಯ ಯುವಕರೊಬ್ಬರೊಂದಿಗೆ ಮದುವೆ ನಿಶ್ಚಯಗೊಂಡಿತ್ತು. ಮದುವೆಗೂ ಮುನ್ನ ತಾನು ಡಿಗ್ರಿ ಮಾಡಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಹುಡುಗಿ ಮನೆಯವರಿಗೆ ಹೇಳಿದ್ದನು.

ಇನ್ನು ಎಂಗೇಜ್ಮೆಂಟ್ ಆದ ನಂತರ ಹುಡುಗನ ಪೂರ್ವಾಪರ ವಿಚಾರಿಸಿದಾಗ ಆತ ಯಾವುದೇ ಡಿಗ್ರಿ ಮಾಡದೇ, ತಂದೆಯ ಸೆಕ್ಯೂರಿಟಿ ಕಂಪನಿಯೊಂದನ್ನು ನಡೆಸಿಕೊಂಡು ಹೋಗುತ್ತಿರುವುದು ಬೆಳಕಿಗೆ ಬಂದಿದೆ. ಇದರಿಂದ ಮದುವೆಯನ್ನು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಯುವತಿಗೆ ಮನೆಯವರು ಸಮಾಧಾನ ಮಾಡಿದ್ದಾರೆ.

Related Articles

Related image1
ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ದೂರು ನೀಡಿದ ಅನಾಮಿಕನ ಹುಟ್ಟು, 3 ಹೆಂಡತಿಯರ ಗುಟ್ಟು ಬಿಚ್ಚಿಟ್ಟ ಮಂಡ್ಯ ಜನ!
Related image2
ಕೆಎಸ್ಆರ್ ಬೆಂಗಳೂರು–ಮಂಡ್ಯ ನಡುವೆ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಿಂದ ವಿಂಡೋ-ಟ್ರೈಲಿಂಗ್ ತಪಾಸಣೆ
34
Image Credit : Asianet News

ಈ ನಿರ್ಧಾರದಿಂದ ಮನನೊಂದು ಕಾವ್ಯ, ಕೆಲಸ ಮಾಡುತ್ತಿದ್ದ ಕಿಕ್ಕೇರಿ ರೈತ ಸಂಪರ್ಕ ಕೇಂದ್ರದಲ್ಲೇ ನಿನ್ನೆ ನಿದ್ರಾಮಾತ್ರೆ ಸೇವಿಸಿ ಅಸ್ವಸ್ಥಳಾದಳು. ತಕ್ಷಣವೇ ಸಹೋದ್ಯೋಗಿಗಳು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕಾವ್ಯ ಪ್ರಾಣ ಕಳೆದುಕೊಂಡರು.

44
Image Credit : Asianet News

ಘಟನೆಯ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಗ್ರಾಮದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ಛಾಯೆ ಆವರಿಸಿದೆ. ಮದುವೆ ಎಂಬ ಹಬ್ಬದ ಕನಸು ಜೀವವನ್ನೇ ಕಸಿದುಕೊಂಡಿರುವುದು ಕುಟುಂಬದವರಿಗೂ ಸ್ನೇಹಿತರೂ ಸಹ ಅಘಾತ ತಂದಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಮಂಡ್ಯ
ಸಂಬಂಧಗಳು
ಮದುವೆ
ಪ್ರೇಮ ವಿವಾಹ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved