MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Mandya: 'ಕಲ್ಲು' ಭಯೋತ್ಪಾದಕರಿಂದ ವಿಘ್ನ ವಿನಾಶಕನ ಮೇಲೆ ಕಲ್ಲು ತೂರಾಟ, ನಾಗಮಂಗಲ ಉದ್ವಿಗ್ನ!

Mandya: 'ಕಲ್ಲು' ಭಯೋತ್ಪಾದಕರಿಂದ ವಿಘ್ನ ವಿನಾಶಕನ ಮೇಲೆ ಕಲ್ಲು ತೂರಾಟ, ನಾಗಮಂಗಲ ಉದ್ವಿಗ್ನ!

ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ದರ್ಗಾ ಬಳಿ ಕಲ್ಲು ತೂರಾಟ ನಡೆದಿದೆ. ಮುಸ್ಲಿಂ ಯುವಕರು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ.

2 Min read
Author : Santosh Naik
| Updated : Sep 11 2024, 10:24 PM IST
Share this Photo Gallery
  • FB
  • TW
  • Linkdin
  • Whatsapp
115

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮುಸ್ಲಿಂ ಪುಂಡರಿಂದ ಭಾರೀ ಪ್ರಮಾಣದ ಕಲ್ಲು ತೂರಾಟ ನಡೆದಿದೆ.
 

215

ದರ್ಗಾ ಬಳಿ ಗಣಪತಿ ಮೆರವಣಿಗೆ ಬಂದಾಗ ಮುಸ್ಲಿಂ ಯುವಕರು ಕಲ್ಲು ತೂರಾಟ ಮಾಡಿದ್ದಾರೆ. ದರ್ಗಾ ಬಳಿ ಡೊಳ್ಳು, ತಮಟೆ, ಬಾರಿಸಬೇಡಿ ಎಂದು ಮುಸ್ಲಿಂ ಯುವಕರು ಕಿರಿಕ್‌ ತೆಗೆದಿದ್ದಾರೆ.

315

ಕಲ್ಲು ತೂರಾಟ ಮಾಡಿದ್ದಲ್ಲದೆ, ಮಚ್ಚು-ಲಾಂಗ್‌ಅನ್ನು ಮುಸ್ಲಿಂ ಯುವಕರು ಜಳಪಳಿಸಿದ್ದಾರೆ. ಲಾಠಿ ಚಾರ್ಜ್ ಮಾಡುವ  ಪೊಲೀಸರು ಗುಂಪನ್ನು ಚದುರಿಸಿದ್ದು,  ಉದ್ರಿಕ್ತರ ಗುಂಪಿನಿಂದ ಮಚ್ಚು-ಲಾಂಗ್ ವಶ ಪಡಿಸಿಕೊಂಡಿರುವ ವಿಡಿಯೋ ವೈರಲ್‌ ಆಗಿವೆ.
 

415


ಹಿಂದೂ-ಮುಸ್ಲಿಂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಮುಸ್ಲಿಂ ಯುವಕರು ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.
 

515


ಕಲ್ಲು ತೂರಾಟ ಮಾಡಿದ ಮುಸ್ಲಿಂ ಹುಡುಗರ ಮೇಲೆ ಕ್ರಮಕ್ಕೆ ಆಗ್ರಹಿಸಿ ಹಿಂದೂಗಳು ನಾಗಮಂಗಲ ಪೊಲೀಸ್‌ ಠಾಣೆಯ ಎದುರು ಭಾರೀ ಪ್ರತಿಭಟನೆ ನಡೆಸಿದ್ದಾರೆ. 
 

615

ಗಣಪತಿ ಮೂರ್ತಿಯನ್ನೇ ನಾಗಮಂಗಲ ಪೊಲೀಸ್‌ ಠಾಣೆಯ ಎದುರುಗಡೆ ತಂದು ನಿಲ್ಲಿಸಿ, ಪೊಲೀಸ್‌ ಅಧಿಕಾರಿಗಳಿಂದ ಕ್ರಮಕ್ಕೆ ಆಗ್ರಹಿಸಿದ್ದಾರೆ.

715

ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದ್ದಾರೆ. ಈ ವೇಳೆ ಪೊಲೀಸರ ಮೇಲೂ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ.

815

ಮುಸ್ಲಿಂ ಪುಂಡರು ಕಲ್ಲು ತೂರಾಟ ಮಾಡುತ್ತಿರುವ ಸಾಕಷ್ಟು ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ದರ್ಗಾದಿಂದ ಮೆರವಣಿಗೆ ಮುಂದೆ ಹೋಗುವಾಗ ಈ ಘಟನೆ ನಡೆದಿದೆ.

915


ಕಲ್ಲು ತೂರಾಟ ತೀವ್ರವಾಗುತ್ತಿದ್ದಂತೆ ಗಣಪತಿ ವಿಸರ್ಜನೆಯಲ್ಲಿ ಪಾಲ್ಗೊಂಡಿದ್ದ ಹಿಂದೂ ಯುವಕರು ಇಡೀ ಮೆರವಣಿಗೆಯನ್ನು ಪೊಲೀಸ್‌ ಠಾಣೆಯ ಎದುರಿಗೆ ತಂದು ನಿಲ್ಲಿಸಿದ್ದಾರೆ.
 

1015


ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಮಕ್ಕೆ ಆಗ್ರಹಿಸಿ ಭಾರೀ ಪ್ರತಿಭಟನೆ ಮಾಡಲಾಗಿದೆ. ಕಲ್ಲು ತೂರಾಟದ ವೇಳೆ ಕೆಲ ಹಿಂದೂ ಹುಡುಗರಿಗೆ ಗಾಯವಾಗಿರುವ ಬಗ್ಗೆಯೂ ವರದಿಗಳಿವೆ.

1115

ಮುಂದೆ ಸಾಗುತ್ತಿದ್ದ ಮೆರವಣಿಗೆ ಮೇಲೆ ಗಲ್ಲಿ ಗಲ್ಲಿಗಳಿಂದ ಕಲ್ಲುಗಳು ತೂರಿಬಂದಿವೆ. ಈ ವೇಳೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
 

1215

ಮೆರವಣಿಗೆಯ ಮೇಲೆ ಗುಂಪು-ಗುಂಪಾಗಿ ಬಂದು ಕಲ್ಲು ತೂರಾಟ ಮಾಡಲಾಗಿದೆ. 'ಈದ್‌ ಮಿಲಾದ್‌, ರಂಜಾನ್‌ನಂಥ ಹಬ್ಬಗಳಲ್ಲಿ ಇಲ್ಲಿ ಮೆರವಣಿಗೆ ಆಗುತ್ತದೆ. ಎಲ್ಲಿಯೂ ನಾವು ಕಲ್ಲು ತೂರಾಟ ಮಾಡುವ ಚಿಲ್ಲರೆ ಕೆಲಸ ಮಾಡಿಲ್ಲ' ಎಂದು ಮೆರವಣಿಗೆಯಲ್ಲಿದ್ದ ಹಿಂದು ಯುವಕರು ಹೇಳಿದ್ದಾರೆ.

1315

ದರ್ಗಾದಿಂದ ಮುಂದೆ ಹೋಗಿದ್ದಾಗ, ಗಲಾಟೆ ಆರಂಭಿಸಿ ಕಲ್ಲು ತೂರಾಟ ಮಾಡಿದ್ದಾರೆ. ರಾತ್ರಿ 8 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ ಎಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರು ಹೇಳಿದ್ದಾರೆ.

1415

ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರಿಂದ ಗಣೇಶ ಮೂರ್ತಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.  ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ಕೂಡ ನಡೆದಿದೆ.

1515

ಇನ್ನು ಕಲ್ಲು ತೂರಾಟಕ್ಕೆ ಓರ್ವ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದ್ದು, ಇದೇ ವೇಳೆ ಕತ್ತಿ, ತಲ್ವಾರ್ ಅನ್ನು ಅನ್ಯಕೋಮಿನ ಯುವಕರಿಂದ ಜಳಪಿಸಿದ್ದು, ಕತ್ತಿ ತೋರಿಸಿ ಬೆದರಿಕೆ ಹಾಕುವ ಯತ್ನ ಕೂಡಾ ನಡೆದಿದೆ.

ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳ ಪ್ರತಿಭಟನೆ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಹಿಂದೂ
ಮಂಡ್ಯ
ಮುಸ್ಲಿಂ
ಕಲ್ಲು ತೂರಾಟ

Latest Videos
Recommended Stories
Recommended image1
ಕಿವಿ ಹರ್ಕೊಂಡು ಒಂದು ಕೊಂಬು ಮುರ್ಕೊಂಡಿರೋ ಕಾಡಾನೆ ಭೀಮಾ: ಕಾಫಿ ತೋಟದ ಬೇಲಿಗಳೆಲ್ಲಾ ಪುಡಿ ಪುಡಿ
Recommended image2
ಮಾಲೀಕ ಆಸ್ಪತ್ರೆಯಲ್ಲಿದ್ದಾಗ ಕುರಿ ಶೆಡ್‌ಗೆ ಬೆಂಕಿ: 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ
Recommended image3
ಸೋಮವಾರಪೇಟೆ: ಮನೆಯಲ್ಲಿ ಆಕಸ್ಮಿಕ ಬೆಂಕಿ: 1 ಕಾಲು ಕಳೆದುಕೊಂಡಿದ್ದ ಯೋಧ ಹೊರ ಬಾರಲಾಗದೇ ಸಜೀವ ದಹನ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved