MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Hirekerur| ರೈತರ ಜೊತೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹುಟ್ಟುಹಬ್ಬ

Hirekerur| ರೈತರ ಜೊತೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹುಟ್ಟುಹಬ್ಬ

ಹಿರೇಕೆರೂರು(ನ.15):  ಬೇಸಾಯದಲ್ಲಿ ವೈಜ್ಞಾನಿಕತೆ, ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿಯನ್ನು ಲಾಭದಾಯಕವನ್ನಾಗಿಸಿಕೊಳ್ಳಬೇಕು. ರೈತರು ಒಂದೇ ಬೆಳೆಗೆ ಸೀಮಿತವಾಗದೇ ಬಹುಬೆಳೆ ಪದ್ಧತಿಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌(BC Patil) ಸಲಹೆ ನೀಡಿದ್ದಾರೆ.

1 Min read
Kannadaprabha News | Asianet News
Published : Nov 15 2021, 08:09 AM IST| Updated : Nov 15 2021, 08:19 AM IST
Share this Photo Gallery
  • FB
  • TW
  • Linkdin
  • Whatsapp
15

ತಾಲೂಕಿನ ಎತ್ತಿನಹಳ್ಳಿ ಎಂ.ಕೆ.ಗ್ರಾಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಜನ್ಮದಿನದ(Birthday) ಅಂಗವಾಗಿ ಅವರ ಅಭಿಮಾನಿಗಳು ಆಯೋಜಿಸಿದ್ದ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಮಗ್ರ ಕೃಷಿ ಪದ್ಧತಿ ಅನುಸರಿಸಿ ತರಕಾರಿ, ಹೂವು ಹಣ್ಣು ಬೆಳೆಯಲು ಮುಂದಾಗುವ ಮೂಲಕ ಆರ್ಥಿಕವಾಗಿ ಮತ್ತಷ್ಟು ಸದೃಢರಾಗಬೇಕು. ಸಮಗ್ರ ಕೃಷಿಯೊಂದಿಗೆ ಉಪಕಸುಬುಗಳನ್ನು ಕೈಗೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದ ಬಿ.ಸಿ.ಪಾಟೀಲ್‌ 

25

ಇದಕ್ಕೂ ಮುನ್ನ ಗ್ರಾಮದ ಮುಖ್ಯ ಬೀದಿಯಲ್ಲಿ ಗೋವಿನಜೋಳದ ತೆನೆಗಳಿಂದ ಅಲಂಕರಿಸಿದ ಎತ್ತಿನ ಬಂಡಿಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಅವರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ಬಳಿಕ ಚಿನ್ನಮುಳಗುಂದ ಗ್ರಾಮಕ್ಕೆ ಕೃಷಿ(Agriculture) ಸಚಿವ ಬಿ.ಸಿ. ಪಾಟೀಲ ಬರುತ್ತಿದ್ದಂತೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ನೂರಾರು ಕುಂಬ ಹೊತ್ತ ಮಹಿಳೆಯರು, ವೀರಗಾಸೆ, ಡೊಳ್ಳು ಕುಣಿತ, ಎತ್ತಿನ ಬಂಡಿ ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಮೆರವಣಿಗೆಯ ಮೂಲಕ ಅದ್ಧೂರಿ ಸ್ವಾಗತ ಕೋರಲಾಯಿತು.

35

ಕಾರ್ಯಕ್ರಮದಲ್ಲಿ ಕೃಷಿಯಲ್ಲಿ ಸಾಧನೆ ಮಾಡಿದ ರೈತರನ್ನು ಸನ್ಮಾನಿಸಲಾಯಿತು. ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಜೇನು ಸಾಕಾಣಿಕೆ ಕುರಿತು ಪ್ರಾತ್ಯಕ್ಷಿಕೆ, ಪುರುಷರಿಗೆ ಹಾಲು ಕರೆಯುವ ಸ್ಪರ್ಧೆ, ಮಹಿಳೆಯರಿಗೆ ಮಜ್ಜಿಗೆ ಕಡೆಯುವ ಮತ್ತು ಗೋದಿ ಕಲ್ಲಿನಲ್ಲಿ ಹಿಟ್ಟು ಬೀಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

45

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ(UB Banakar), ಯುವ ನಾಯಕಿ ಸೃಷ್ಟಿ ಪಾಟೀಲ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಗ್ರಾಮಸ್ಥರು, ಅಭಿಮಾನಿಗಳು(Fans) ಇದ್ದರು. ಚಿನ್ನಮುಳಗುಂದ, ಯತ್ನಳ್ಳಿ, ಯಡಗೋಡ, ಕಣವಿಸಿದ್ದಗೇರಿ, ಹಿರೇಕೆರೂರು ಮುಂತಾದ ಗ್ರಾಮಗಳ ರೈತರ ತಾಕುಗಳಿಗೆ ಭೇಟಿ ನೀಡಿ ಜನ್ಮದಿನವನ್ನು ಸಚಿವ ಬಿ.ಸಿ. ಪಾಟೀಲ ಅವರು ರೈತರೊಂದಿಗೆ ಕಳೆದರು.

55

ಶಿಳ್ಳೆ, ಚಪ್ಪಾಳೆ ಇದ್ದರೇನೇ ಕಲಾವಿದರ ಜೀವನ. ಚಿತ್ರಮಂದಿರಗಳಲ್ಲಿ ಚಲನಚಿತ್ರಗಳನ್ನು ನೋಡುವ ಮೂಲಕ ಚಿತ್ರರಂಗವನ್ನು ಕಲಾವಿದರನ್ನು ಜನರು ಬೆಳೆಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು. ಹಿರೇಕೆರೂರಿನಲ್ಲಿ ನಡೆದ ರೈತರೊಂದಿಗೊಂದು ದಿನ ವೇದಿಕೆ ಕಾರ್ಯಕ್ರಮದಲ್ಲಿ ಗರಡಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಚಾಲೆಂಜಿಂಗ್ ಸ್ಟಾರ್‌ ದರ್ಶನ್‌(Darshan) ಕೂಡ ಬಿ.ಸಿ. ಪಾಟೀಲ್‌ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದರು. 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಹುಟ್ಟುಹಬ್ಬ
ಹಾವೇರಿ
ರೈತರು
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved