MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • 4 ವರ್ಷದಲ್ಲಿ ಕ್ಷಯ ಮುಕ್ತ ರಾಜ್ಯ ಗುರಿ: ಸಚಿವ ಸುಧಾಕರ್‌

4 ವರ್ಷದಲ್ಲಿ ಕ್ಷಯ ಮುಕ್ತ ರಾಜ್ಯ ಗುರಿ: ಸಚಿವ ಸುಧಾಕರ್‌

ಬೆಂಗಳೂರು(ಮಾ.25): ಕರ್ನಾಟಕವನ್ನು 2025ರ ವೇಳೆಗೆ ‘ಕ್ಷಯರೋಗ ಮುಕ್ತ ರಾಜ್ಯ’ ಮಾಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ.

1 Min read
Kannadaprabha News | Asianet News
Published : Mar 25 2021, 08:11 AM IST| Updated : Mar 25 2021, 08:15 AM IST
Share this Photo Gallery
  • FB
  • TW
  • Linkdin
  • Whatsapp
14
<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಮಾಗಡಿ ರಸ್ತೆಯ ಆರೋಗ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಕ್ಷಯರೋಗ ದಿನ 2021’ ಕಾರ್ಯಕ್ರಮ ಉದ್ಘಾಟಿಸಿದ ಸುಧಾಕರ್‌</p>

<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಮಾಗಡಿ ರಸ್ತೆಯ ಆರೋಗ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಕ್ಷಯರೋಗ ದಿನ-2021’ ಕಾರ್ಯಕ್ರಮ ಉದ್ಘಾಟಿಸಿದ ಸುಧಾಕರ್‌</p>

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಮಾಗಡಿ ರಸ್ತೆಯ ಆರೋಗ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಕ್ಷಯರೋಗ ದಿನ-2021’ ಕಾರ್ಯಕ್ರಮ ಉದ್ಘಾಟಿಸಿದ ಸುಧಾಕರ್‌

24
<p>‘ಎಚ್ಚರ.. ಕ್ಷಯ ರೋಗ ನಿರ್ಮೂಲನೆಗೆ ಕಾಲ ಘಟಿಸುತ್ತಿದೆ’ ಎಂದು ಹೇಳುವಷ್ಟರಲ್ಲೇ, ಜಗತ್ತಿನಲ್ಲಿ ಇಬ್ಬರು ಸಾವನ್ನಪ್ಪುತ್ತಿದ್ದಾರೆ. ಪ್ರತಿ 22 ಸೆಕೆಂಡಿಗೆ ಓರ್ವ ಕ್ಷಯ ರೋಗಿ ಸಾವನ್ನಪ್ಪುತ್ತಿದ್ದಾನೆ. ಜಗತ್ತಿನಲ್ಲಿ ಒಂದು ತಿಂಗಳಲ್ಲಿ 1.20 ಲಕ್ಷ ಜನ ಹಾಗೂ ವರ್ಷದಲ್ಲಿ 14 ಲಕ್ಷ ಜನರು ಮೃತಪಡುತ್ತಿದ್ದಾರೆ. ಭಾರತದಲ್ಲಿ ಕಳೆದ ವರ್ಷ 4 ಲಕ್ಷ ಜನರ ಸಾವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಸಚಿವರು</p>

<p>‘ಎಚ್ಚರ.. ಕ್ಷಯ ರೋಗ ನಿರ್ಮೂಲನೆಗೆ ಕಾಲ ಘಟಿಸುತ್ತಿದೆ’ ಎಂದು ಹೇಳುವಷ್ಟರಲ್ಲೇ, ಜಗತ್ತಿನಲ್ಲಿ ಇಬ್ಬರು ಸಾವನ್ನಪ್ಪುತ್ತಿದ್ದಾರೆ. ಪ್ರತಿ 22 ಸೆಕೆಂಡಿಗೆ ಓರ್ವ ಕ್ಷಯ ರೋಗಿ ಸಾವನ್ನಪ್ಪುತ್ತಿದ್ದಾನೆ. ಜಗತ್ತಿನಲ್ಲಿ ಒಂದು ತಿಂಗಳಲ್ಲಿ 1.20 ಲಕ್ಷ ಜನ ಹಾಗೂ ವರ್ಷದಲ್ಲಿ 14 ಲಕ್ಷ ಜನರು ಮೃತಪಡುತ್ತಿದ್ದಾರೆ. ಭಾರತದಲ್ಲಿ ಕಳೆದ ವರ್ಷ 4 ಲಕ್ಷ ಜನರ ಸಾವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಸಚಿವರು</p>

‘ಎಚ್ಚರ.. ಕ್ಷಯ ರೋಗ ನಿರ್ಮೂಲನೆಗೆ ಕಾಲ ಘಟಿಸುತ್ತಿದೆ’ ಎಂದು ಹೇಳುವಷ್ಟರಲ್ಲೇ, ಜಗತ್ತಿನಲ್ಲಿ ಇಬ್ಬರು ಸಾವನ್ನಪ್ಪುತ್ತಿದ್ದಾರೆ. ಪ್ರತಿ 22 ಸೆಕೆಂಡಿಗೆ ಓರ್ವ ಕ್ಷಯ ರೋಗಿ ಸಾವನ್ನಪ್ಪುತ್ತಿದ್ದಾನೆ. ಜಗತ್ತಿನಲ್ಲಿ ಒಂದು ತಿಂಗಳಲ್ಲಿ 1.20 ಲಕ್ಷ ಜನ ಹಾಗೂ ವರ್ಷದಲ್ಲಿ 14 ಲಕ್ಷ ಜನರು ಮೃತಪಡುತ್ತಿದ್ದಾರೆ. ಭಾರತದಲ್ಲಿ ಕಳೆದ ವರ್ಷ 4 ಲಕ್ಷ ಜನರ ಸಾವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಸಚಿವರು

34
<p>ಕರ್ನಾಟಕವನ್ನು 2025ರ ವೇಳೆಗೆ ಕ್ಷಯ ಮುಕ್ತ ರಾಜ್ಯ ಮಾಡಲು ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ಷಯರೋಗದ ಬಗ್ಗೆ ಅರಿವು ಮೂಡಿಸಲು ಸಾಕಷ್ಟುಕಾರ್ಯಕ್ರಮ ಘೋಷಿಸಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ರಾಜ್ಯದಲ್ಲಿ ಪರೀಕ್ಷೆಗಳು ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಯಾವ ಗ್ರಾಮ ಕ್ಷಯರೋಗ ಮುಕ್ತವಾಗುತ್ತದೆಯೋ, ಆ ಗ್ರಾಮವನ್ನು ‘ಕ್ಷಯ ಮುಕ್ತ ಗ್ರಾಮ’ ಎಂದು ಘೋಷಿಸಲಾಗುತ್ತದೆ. ಅದೇ ರೀತಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ, ನಗರ ಪ್ರದೇಶಗಳಲ್ಲಿ ಕ್ಷಯ ಮುಕ್ತ ವಾರ್ಡ್‌ ಆಗಬೇಕು. ಈ ಹೊಸ ಆಂದೋಲನ ಶೈಲಿ ಅಳವಡಿಸಿಕೊಂಡು, ಇಡೀ ದೇಶದಲ್ಲಿ ಮೊದಲ ಕ್ಷಯರೋಗ ಮುಕ್ತ ರಾಜ್ಯ ಕರ್ನಾಟಕ ಎಂದು ಘೋಷಿಸಬೇಕು ಎಂದು ಕರೆ ನೀಡಿದರು.</p>

<p>ಕರ್ನಾಟಕವನ್ನು 2025ರ ವೇಳೆಗೆ ಕ್ಷಯ ಮುಕ್ತ ರಾಜ್ಯ ಮಾಡಲು ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ಷಯರೋಗದ ಬಗ್ಗೆ ಅರಿವು ಮೂಡಿಸಲು ಸಾಕಷ್ಟುಕಾರ್ಯಕ್ರಮ ಘೋಷಿಸಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ರಾಜ್ಯದಲ್ಲಿ ಪರೀಕ್ಷೆಗಳು ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಯಾವ ಗ್ರಾಮ ಕ್ಷಯರೋಗ ಮುಕ್ತವಾಗುತ್ತದೆಯೋ, ಆ ಗ್ರಾಮವನ್ನು ‘ಕ್ಷಯ ಮುಕ್ತ ಗ್ರಾಮ’ ಎಂದು ಘೋಷಿಸಲಾಗುತ್ತದೆ. ಅದೇ ರೀತಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ, ನಗರ ಪ್ರದೇಶಗಳಲ್ಲಿ ಕ್ಷಯ ಮುಕ್ತ ವಾರ್ಡ್‌ ಆಗಬೇಕು. ಈ ಹೊಸ ಆಂದೋಲನ ಶೈಲಿ ಅಳವಡಿಸಿಕೊಂಡು, ಇಡೀ ದೇಶದಲ್ಲಿ ಮೊದಲ ಕ್ಷಯರೋಗ ಮುಕ್ತ ರಾಜ್ಯ ಕರ್ನಾಟಕ ಎಂದು ಘೋಷಿಸಬೇಕು ಎಂದು ಕರೆ ನೀಡಿದರು.</p>

ಕರ್ನಾಟಕವನ್ನು 2025ರ ವೇಳೆಗೆ ಕ್ಷಯ ಮುಕ್ತ ರಾಜ್ಯ ಮಾಡಲು ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ಷಯರೋಗದ ಬಗ್ಗೆ ಅರಿವು ಮೂಡಿಸಲು ಸಾಕಷ್ಟುಕಾರ್ಯಕ್ರಮ ಘೋಷಿಸಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ರಾಜ್ಯದಲ್ಲಿ ಪರೀಕ್ಷೆಗಳು ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಯಾವ ಗ್ರಾಮ ಕ್ಷಯರೋಗ ಮುಕ್ತವಾಗುತ್ತದೆಯೋ, ಆ ಗ್ರಾಮವನ್ನು ‘ಕ್ಷಯ ಮುಕ್ತ ಗ್ರಾಮ’ ಎಂದು ಘೋಷಿಸಲಾಗುತ್ತದೆ. ಅದೇ ರೀತಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ, ನಗರ ಪ್ರದೇಶಗಳಲ್ಲಿ ಕ್ಷಯ ಮುಕ್ತ ವಾರ್ಡ್‌ ಆಗಬೇಕು. ಈ ಹೊಸ ಆಂದೋಲನ ಶೈಲಿ ಅಳವಡಿಸಿಕೊಂಡು, ಇಡೀ ದೇಶದಲ್ಲಿ ಮೊದಲ ಕ್ಷಯರೋಗ ಮುಕ್ತ ರಾಜ್ಯ ಕರ್ನಾಟಕ ಎಂದು ಘೋಷಿಸಬೇಕು ಎಂದು ಕರೆ ನೀಡಿದರು.

44
<p>ಕಾರ್ಯಕ್ರಮದಲ್ಲಿ ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿ ಆ್ಯಪ್‌ ಅನ್ನು ಅನಾವರಣ ಮಾಡಲಾಯಿತು. ಕ್ಷಯರೋಗ ಮುಕ್ತ ಕರ್ನಾಟಕದ ಕಿರು ಹೊತ್ತಿಗೆ, ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನದಿಂದ ಹೊರ ತಂದ ಕೈಪಿಡಿ ಮತ್ತು ಭಿತ್ತಿ ಚಿತ್ರ ಬಿಡುಗಡೆಗೊಳಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಾ ಕೆ.ವಿ.ತ್ರಿಲೋಕ್‌ ಚಂದ್ರ, ನಿರ್ದೆಶಕ ಡಾ. ಪಾಟೀಲ್‌ ಓಂ ಪ್ರಕಾಶ್‌ ಆರ್‌, ಜಂಟಿ ನಿರ್ದೇಶಕ (ಕ್ಷಯ) ಡಾ. ರಮೇಶ್‌ ಚಂದ್ರ ರೆಡ್ಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಡಾ. ಅರುಂಧತಿ, ಡಾ. ಎಂ.ಕೆ.ಸುದರ್ಶನ್‌ ಮತ್ತಿತರಿದ್ದರು.</p>

<p>ಕಾರ್ಯಕ್ರಮದಲ್ಲಿ ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿ ಆ್ಯಪ್‌ ಅನ್ನು ಅನಾವರಣ ಮಾಡಲಾಯಿತು. ಕ್ಷಯರೋಗ ಮುಕ್ತ ಕರ್ನಾಟಕದ ಕಿರು ಹೊತ್ತಿಗೆ, ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನದಿಂದ ಹೊರ ತಂದ ಕೈಪಿಡಿ ಮತ್ತು ಭಿತ್ತಿ ಚಿತ್ರ ಬಿಡುಗಡೆಗೊಳಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಾ ಕೆ.ವಿ.ತ್ರಿಲೋಕ್‌ ಚಂದ್ರ, ನಿರ್ದೆಶಕ ಡಾ. ಪಾಟೀಲ್‌ ಓಂ ಪ್ರಕಾಶ್‌ ಆರ್‌, ಜಂಟಿ ನಿರ್ದೇಶಕ (ಕ್ಷಯ) ಡಾ. ರಮೇಶ್‌ ಚಂದ್ರ ರೆಡ್ಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಡಾ. ಅರುಂಧತಿ, ಡಾ. ಎಂ.ಕೆ.ಸುದರ್ಶನ್‌ ಮತ್ತಿತರಿದ್ದರು.</p>

ಕಾರ್ಯಕ್ರಮದಲ್ಲಿ ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿ ಆ್ಯಪ್‌ ಅನ್ನು ಅನಾವರಣ ಮಾಡಲಾಯಿತು. ಕ್ಷಯರೋಗ ಮುಕ್ತ ಕರ್ನಾಟಕದ ಕಿರು ಹೊತ್ತಿಗೆ, ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನದಿಂದ ಹೊರ ತಂದ ಕೈಪಿಡಿ ಮತ್ತು ಭಿತ್ತಿ ಚಿತ್ರ ಬಿಡುಗಡೆಗೊಳಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಾ ಕೆ.ವಿ.ತ್ರಿಲೋಕ್‌ ಚಂದ್ರ, ನಿರ್ದೆಶಕ ಡಾ. ಪಾಟೀಲ್‌ ಓಂ ಪ್ರಕಾಶ್‌ ಆರ್‌, ಜಂಟಿ ನಿರ್ದೇಶಕ (ಕ್ಷಯ) ಡಾ. ರಮೇಶ್‌ ಚಂದ್ರ ರೆಡ್ಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಡಾ. ಅರುಂಧತಿ, ಡಾ. ಎಂ.ಕೆ.ಸುದರ್ಶನ್‌ ಮತ್ತಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved