ಗೋವು ಇದ್ದ ಮನೆ ಭಾಗ್ಯಶಾಲಿ: ಸಚಿವ ಪ್ರಭು ಚವ್ಹಾಣ
ನಿಪ್ಪಾಣಿ(ನ.19): ಯಾರ ಮನೆಯಲ್ಲಿ ಗೋವು ಇರುತ್ತದೋ ಆ ಕುಟುಂಬ ಭಾಗ್ಯಶಾಲಿ ಎಂದು ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ.
ನಗರದ ಆರ್ಐಡಿಎಫ್ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಪಶು ಆಸ್ಪತ್ರೆಯ ಕಟ್ಟಡಕ್ಕೆ ಬುಧವಾರ ಭೂಮಿ ಪೂಜೆ ನೆರವೇರಿಸಿದ ಪ್ರಭು ಚವ್ಹಾಣ
ಗೋವು ನಮಗೆ ಪೂಜನೀಯ, ತಾಯಿಯ ಸಮಾನ ನಮ್ಮ ಆರೋಗ್ಯವನ್ನು ಎಲ್ಲ ವಿಧಗಳಿಂದ ಕಾಪಾಡುತ್ತಿರುವ ಗೋವನ್ನು ಎಂದು ಕಸಾಯಿಖಾನೆಗೆ ಹೋಗಲು ಬಿಡಬಾರದು. ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಎಲ್ಲವನ್ನು ಇಂದು ನಾವು ಯಥೇಚ್ಛವಾಗಿ ಬಳಸುತ್ತಿದ್ದೇವೆ. ಕಟ್ಟಡ ನಿರ್ಮಾಣಕ್ಕೆ ಎಪಿಎಂಸಿಯಿಂದ ಸ್ಥಳ ನೀಡಿದ್ದು ಸಂತಸವಾಗಿದೆ. ಇಲಾಖೆಗಳ ಮಧ್ಯ ಈ ತರಹದ ಸಮನ್ವಯತೆ ಇದ್ದರೆ ಸರ್ಕಾರಿ ಕೆಲಸಗಳು ಅತ್ಯಂತ ಸರಾಗವಾಗಿ ನಡೆಯುವುದಲ್ಲದೆ ರೈತಾಪಿ ವರ್ಗಕ್ಕೂ ಅನುಕೂಲವಾಗುತ್ತದೆ ಎಂದು ಹೇಳಿದ ಸಚಿವರು
ಕಟ್ಟಡದ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 21 ಲಕ್ಷ ನೀಡುವುದಾಗಿ ಈ ಸಂಧರ್ಭದಲ್ಲಿ ಘೋಷಣೆ ಮಾಡಿದ ಸಚಿವ ಪ್ರಭು ಚವ್ಹಾಣ್
ಈ ಸಂದರ್ಭದಲ್ಲಿ ಮಠದ ಗೋಶಾಲೆಗೂ ಸಹ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಪಶುಸಂಗೋಪನೆ ಇಲಾಖೆಯ ಆಯುಕ್ತ ಬಸವರಾಜೇಂದ್ರ ಹಾಗೂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.