MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ದಾವಣಗೆರೆ: ಕೇರಿ ಕೇರಿಗೂ ತೆರಳಿ ಜನರ ಮನಗೆದ್ದ ಸಚಿವ ಅಶೋಕ್‌

ದಾವಣಗೆರೆ: ಕೇರಿ ಕೇರಿಗೂ ತೆರಳಿ ಜನರ ಮನಗೆದ್ದ ಸಚಿವ ಅಶೋಕ್‌

ದಾವಣಗೆರೆ(ಅ.18): ಕೋವಿಡ್‌ನಿಂದಾಗಿ ಸ್ಥಗಿತಗೊಂಡಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮ ಹೊನ್ನಾಳಿ ಕ್ಷೇತ್ರದ ಕುಂದೂರು ಗ್ರಾಮದಲ್ಲಿ ಪುನರ್‌ ಆರಂಭಗೊಂಡಿದ್ದು, ಯಶಸ್ವಿಯಾಗಿದೆ. ಕುಂದೂರು ಗ್ರಾಮದ ಸರ್ಕಾರಿ ಹಾಸ್ಟೆಲ್‌ನಲ್ಲಿ ವಾಸ್ತವ್ಯ ಮಾಡಿದ್ದ ಕಂದಾಯ ಸಚಿವ ಆರ್‌.ಅಶೋಕ ಸ್ವತಃ ಇಡೀ ಊರಿನ ಜನರ ಮನೆ ಬಾಗಿಲಿಗೆ ಹೋಗಿ ಜನರ ಅಹವಾಲು ಆಲಿಸುವ ಮೂಲಕ ಇಡೀ ಗ್ರಾಮಸ್ಥರ ಮನ ಗೆದ್ದಿದ್ದಾರೆ. ಒಟ್ಟು 36 ತಾಸುಗಳನ್ನು ಸಚಿವರು ಕುಂದೂರಿನಲ್ಲಿ ಕಳೆದಿದ್ದಾರೆ.

2 Min read
Kannadaprabha News | Asianet News
Published : Oct 18 2021, 07:52 AM IST
Share this Photo Gallery
  • FB
  • TW
  • Linkdin
  • Whatsapp
18

ಶನಿವಾರ ರಾತ್ರಿಯಿಂದಲೇ ಇಡೀ ಗ್ರಾಮದ ಕೇರಿ ಕೇರಿ ಸುತ್ತಾಡಿ, ಮಹಿಳೆಯರು, ಮಕ್ಕಳು, ಹಿರಿಯರು, ವಯೋವೃದ್ಧರ ಜೊತೆಗೆ ಸರ್ಕಾರದ ಯೋಜನೆ, ಸೌಲಭ್ಯ ನಿಮಗೆ ಸುಲಭವಾಗಿ ತಲುಪುತ್ತಿವೆಯಾ ಎಂದೆಲ್ಲಾ ಪ್ರಶ್ನಿಸಿದರು. 

28

ಶನಿವಾರ ತಡರಾತ್ರಿ ನಿದ್ರೆಗೆ ಜಾರಿದರೂ ಭಾನುವಾರ ನಸುಕಿನಲ್ಲೇ ಎದ್ದು ಶಾಸಕ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ, ಜಿಪಂ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ ಜತೆ ವಾಯು ವಿಹಾರ ಮುಗಿ​ಸು​ತ್ತಿ​ದ್ದಂತೆ ಕೇರಿ ಕೇರಿಗೂ ಭೇಟಿ ನೀಡಿ, ಗ್ರಾಮದ ದೇವಸ್ಥಾನ ಮುಂಭಾಗದ ಅಶ್ವತ್ಥ ಕಟ್ಟೆಯಲ್ಲೂ ಗ್ರಾಮಸ್ಥರು, ಹಿರಿಯರೊಂದಿಗೆ ಕುಶಲೋಪರಿ ವಿಚಾರಿಸಿದರು, ಸಮಸ್ಯೆಗಳ ಕುರಿತು ಚರ್ಚಿಸಿದರು.

38

ಭೋವಿ ಕಾಲೋನಿಗೆ ತೆರಳಿದ ಸಚಿವರು ಅಲ್ಲೂ ಜನರ ಅಹವಾಲು ಆಲಿಸಿ ಮನವಿ ಸ್ವೀಕರಿಸಿದರು. ಬಹುತೇಕ ಮನವಿಗಳು ಬಗರ್‌ ಹುಕುಂ ಸಾಗುವಳಿ ಪತ್ರ, ಮನೆ, ನಿವೇಶನ ಕೋರಿ, ಗ್ರಾಮಕ್ಕೆ ಸ್ಮಶಾನ ಕೋರಿದ್ದಾಗಿದ್ದವು. ಗ್ರಾಮಸ್ಥರ ಪೈಕಿ ಯಾರಾದರೂ ಜಮೀನು ನೀಡಿದರೆ ಅದನ್ನು ಸರ್ಕಾರದಿಂದ ಖರೀದಿಸಿ, ಅಲ್ಲಿ ಮನೆ ಕಟ್ಟಿಸಿಕೊಡಲು, ಸ್ಮಶಾನ ನಿರ್ಮಿಸಲು ವ್ಯವಸ್ಥೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು. ಇದೇ ವೇಳೆ ಕೊರೋನಾ ವಾರಿಯ​ರ್ಸ್‌ಗೆ ಸಚಿವರು ಸನ್ಮಾನಿಸಿದರು.

48

ಜನಸಾಮಾನ್ಯರಂತೆ ಕುಂದೂರು ಗ್ರಾಮದ ಗೂಡಂಗಡಿಯಲ್ಲಿ ಟೀ ಕುಡಿ​ದು ಜನರ ಜೊತೆಗೆ ಚರ್ಚಿಸಿದರು. ನಂತರ ದಲಿತರ ಕಾಲೋನಿಗೆ ತೆರಳಿ​ದಾ​ಗ ಮಹಿಳೆಯರು ಆರತಿ ಮಾಡಿ, ಸಚಿವ, ಶಾಸಕರಿಗೆ ಆತ್ಮೀಯ ಸ್ವಾಗತ ಕೋರಿದರು. ಬಳಿಕ ದಲಿತ ಮುಖಂಡ, ಬಗರ್‌ ಹುಕುಂ ಸಮಿತಿ ಸದಸ್ಯ ಡಿ.ಶಾಂತರಾಜ, ಶಾರದಮ್ಮ ದಂಪತಿ ಮನೆಗೆ ತೆರ​ಳಿ ರಾಗಿ ತಾಲಿಪಟ್ಟು, ತಟ್ಟೆಇಡ್ಲಿ, ತರಕಾರಿ ಉಪ್ಪಿಟ್ಟು, ಜಾಮೂನು, ಕಾಳು ಪಲ್ಯ, ಚಟ್ನಿಪುಡಿ, ತುಪ್ಪ, ಮೊಸರು ಒಳಗೊಂಡ ಬೆಳಗಿನ ಉಪಹಾರ ಮುಗಿಸಿದರು. ಯಾವುದೇ ಹಮ್ಮುಬಿಮ್ಮು ಇಲ್ಲದೆ ಇದೇ ತಾಲಿಪಟ್ಟು, ಕೆಂಪು ಚಟ್ನಿ, ತುಪ್ಪ, ತಿಂಡಿಗಳನ್ನೆಲ್ಲಾ ಕಟ್ಟಿಕೊಡಿ. ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಇದನ್ನೇ ತಿನ್ನುತ್ತೇನೆಂದು ಹೇಳುವ ಮೂಲಕ ಶಾಂತರಾಜ ದಂಪತಿ, ಕಾಲೋನಿ ಜನರು, ಗ್ರಾಮಸ್ಥರ ಪ್ರಶಂಸೆಗೆ ಪಾತ್ರರಾದರು.

58

ಅನಾರೋಗ್ಯದಿಂದ ತಂದೆ, ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿರುವ ಕುಂದೂರು ಗ್ರಾಮದ ನಯನಾ, ಮಲ್ಲಿಕಾ ಸೋದರಿಯರನ್ನು ಶೈಕ್ಷಣಿಕವಾಗಿ ದತ್ತು ತೆಗೆದುಕೊಳ್ಳುವುದಾಗಿ ಸಚಿವ ಆರ್‌.ಅಶೋಕ ಘೋಷಿಸಿದರು. ಎಸ್ಸೆಸ್ಸೆಲ್ಸಿವರೆಗಿನ ಓದಿನ ಖರ್ಚನ್ನು ಭರಿಸುತ್ತೇನೆ. ಬೆಂಗಳೂರಲ್ಲಾಗಲಿ ಅಥವಾ ಹೊನ್ನಾಳಿಯಲ್ಲೇ ಆಗಲಿ ಈ ಮಕ್ಕಳ ಓದಿಗೆ ನೆರವು ನೀಡುವೆ. ದೇವರು ಕೊಟ್ಟರೆ ಪಿಯುಸಿಯನ್ನೂ ಓದಿಸುತ್ತೇನೆ ಎಂದರು. ಇಡೀ ಗ್ರಾಮಸ್ಥರು, ಹೊನ್ನಾಳಿ ಜನತೆ ತೋರಿದ ಪ್ರೀತಿ, ಅಭಿಮಾನಕ್ಕೆ ಖುಷಿ ಆದರಲ್ಲದೆ, ಇನ್ನೊಂದು ತಿಂಗಳಲ್ಲಿ ಮತ್ತೆ ಹೊನ್ನಾಳಿಗೆ ಬಂದು, ಎಸಿ ಕಚೇರಿ ಉದ್ಘಾಟಿಸುವ ವಾಗ್ದಾನ ಮಾಡಿದರು.

68

ಗ್ರಾಮ ವಾಸ್ತವ್ಯ ಅಂದರೆ ಬಂದ ಸಿದ್ಧ, ಹೋದ ಸಿದ್ಧ ಅಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಮಧ್ಯೆಕಂದಕ ದೂರವಾಗುವಂತಿರಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದರು.

78

ಕುಂದೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರಿಗಳು ಸರ್ಕಾರಿ ಶಾಲೆಗಳಲ್ಲೇ ಮಲಗಬೇಕು. ಅಂಗನವಾಡಿ ಊಟವನ್ನೇ ಮಾಡಬೇಕು ಎಂದು ಸೂಚಿಸಿದರು.

88

ರಾಜ್ಯದ 227 ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿದೆ. ಅಲ್ಲಿನ ವಸ್ತುಸ್ಥಿತಿ ಅವಲೋಕಿಸಲಾಗಿದೆ. ಕಂದಾಯ ಇಲಾಖೆಯನ್ನೇ ಮನೆ ಮನೆಗೆ ಕೊಂಡೊಯ್ಯುವಂತೆ ಬೇರೆ ಬೇರೆ ಇಲಾಖೆಗಳನ್ನೂ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಪ್ರಯತ್ನ ಮಾಡುತ್ತೇವೆ. ದಲಿತ ಕೇರಿಯ ಜನರು ಬಹುತೇಕ ಜಮೀನು, ಸೂರು, ನೀರು ಕೇಳುತ್ತಿದ್ದಾರೆ. ಅವುಗಳನ್ನು ಆದಷ್ಟು ಬೇಗ ಪೂರೈಸುತ್ತೇನೆ. ಆಶ್ರಯ ಯೋಜನೆಯಿಂದ ಜಮೀನು ಕೊಡಿಸಲು ವ್ಯವಸ್ಥೆ ಮಾಡುತ್ತೇನೆ ಎಂದು ತಿಳಿಸಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved