ಬೆಂಗಳೂರಿನಲ್ಲಿ ವಲಸೆ ಕಾರ್ಮಿಕರಿಗೆ ದಿನಸಿ ವಿತರಣೆ
ಸಂಸದೆ ಶೋಭಾ ಕರಂದ್ಲಾಜೆ ಬೆಂಗಳೂರಿನ ತನಿಸಂದ್ರದಲ್ಲಿರುವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ಮತ್ತು ಉತ್ತರ ಕರ್ನಾಟಕ ಭಾಗದ ವಲಸೆ ಕಾರ್ಮಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಇಲ್ಲಿವೆ ಫೋಟೋಸ್
ಬೆಂಗಳೂರಿನ ತನಿಸಂದ್ರದಲ್ಲಿರುವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ಮತ್ತು ಉತ್ತರ ಕರ್ನಾಟಕ ಭಾಗದ ವಲಸೆ ಕಾರ್ಮಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ.
ಲಾಕ್ಡೌನ್ನಿಂದಾಗಿ ಜನರು ಆಹಾರ, ದಿನಬಳಕೆ ವಸ್ತುಗಳಿಲ್ಲದೆ ಪರದಾಡುವಂತಾಗಿದೆ.
ವಲಸೆ ಕಾರ್ಮಿಕರು ತಮ್ಮ ಊರಿಗೂ ಹೋಗಲಾಗದೆ, ಬೆಂಗಳೂರಿನಲ್ಲಿ ಕೆಲಸವಿಲ್ಲದೆ ಹೊಟ್ಟೆ ತುಂಬಿಸಲು ಕಷ್ಟಪಡುತ್ತಿದ್ದಾರೆ.
ಸಂಸದೆ ಶೋಭಾ ವಲಸೆ ಕಾರ್ಮಿಕರನ್ನು ಭೇಟಿ ಮಾಡಿಅವರಿಗೆ ದಿನಸಿಯ ಕಿಟ್ಗಳನ್ನು ವಿತರಿಸಿದ್ದಾರೆ.
ಈ ನಡುವೆ ಸಂಸದೆ ಉಡುಪಿ, ಚಿಕ್ಕಮಗಳೂರು ಭಾಗಕ್ಕೂ ಭೇಟಿ ನೀಡಿ ಆಟೋ ಚಾಲಕರಿಗೆ, ದಿನಗೂಲಿ ಕಾರ್ಮಿಕರಿಗೆ ನೆರವಾಗಿದ್ದಾರೆ.
ಉಡುಪಿಯ ಕಾಪುವಿನಲ್ಲಿಯೂ ಸಂಸದೆ ಪಡಿತರವಿಲ್ಲದ ಜನರಿಗೆ ಆಹಾರ ಕಿಟ್ಗಳನ್ನು ವಿತರಿಸಿದ್ದರು.
ಈ ನಡುವೆ ಸಂಸದೆ ಶೋಭಾ ಅವರು ಉಡುಪಿ, ಚಿಕ್ಕಮಗಳೂರಿನ ಜನರನ್ನು ನಿರ್ಲಕ್ಷ್ಯಿಸಿ, ಬೆಂಗಳೂರಿನಲ್ಲಿ ಕಿಟ್ ವಿತರಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು.