MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಬಿಗ್ ಶಾಕ್: ಅಡ್ವಾನ್ಸ್ ಬುಕಿಂಗ್ ಆರಂಭ, ಮೊದಲ 600 ವಾಹನಗಳಿಗಷ್ಟೇ ಪ್ರವೇಶ!

ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಬಿಗ್ ಶಾಕ್: ಅಡ್ವಾನ್ಸ್ ಬುಕಿಂಗ್ ಆರಂಭ, ಮೊದಲ 600 ವಾಹನಗಳಿಗಷ್ಟೇ ಪ್ರವೇಶ!

ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು ನಿಯಂತ್ರಿಸಲು ಚಿಕ್ಕಮಗಳೂರು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ದಿನಕ್ಕೆ 2 ಬಾರಿ ತಲಾ 600 ವಾಹನಗಳಿಗೆ ಮಾತ್ರ ಪ್ರವೇಶ. ಅಡ್ವಾನ್ಸ್ ಬುಕಿಂಗ್ ಕಡ್ಡಾಯ. ಸ್ವಂತ ವಾಹನ ಬಳಕೆಗೆ ಶುಲ್ಕ (ಟಿಟಿ-200, ಕಾರು-100, ಬೈಕ್/ಆಟೋ-50 ರೂ.). ಭೂಕುಸಿತದ ಅಪಾಯ ತಡೆಯಲು ಈ ಕ್ರಮ.

2 Min read
Author : Sathish Kumar KH
| Updated : Jul 16 2025, 08:17 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News

ಚಿಕ್ಕಮಗಳೂರು (ಜು.16): ಕಾಫಿನಾಡು ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರ ದಂಡು ಹಿನ್ನೆಲೆಯಲ್ಲಿ ಪ್ರವಾಸಿಗರ ನಿಯಂತ್ರಣಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದಾಗಿದೆ. ಬೆಳಿಗ್ಗೆ 600 ಮಧ್ಯಾಹ್ನ 600 ವಾಹನಗಳಿಗೆ ಮಾತ್ರ ಮುಳ್ಳಯ್ಯನಗಿರಿ ಬೆಟ್ಟದ ಪ್ರದೇಶಕ್ಕೆ ಹೋಗಲು ಅವಕಾಶ ನೀಡಲು ತೀರ್ಮಾನ ಕೈಗೊಂಡಿದೆ.

28
Image Credit : Asianet News

ಈ ಮೂಲಕ ಒಂದು ದಿನಕ್ಕೆ 1200 ವಾಹನಗಳಿಗೆ ಮಾತ್ರ ಪ್ರವೇಶಾವಕಾಶ ನೀಡಲಿದ್ದು, ಮುಗಿಬೀಳುವ ಪ್ರವಾಸಿಗರಿಗೆ ಕಡಿವಾಣ ಹಾಕಲು ಮುಂದಾಗಿದೆ. ಇನ್ನು ಇಲ್ಲಿಗೆ ಹೋಗುವವರು ಅಡ್ವಾನ್ಸ್ ಬುಕಿಂಗ್ ಮಾಡಿಕೊಂಡು ಹೋಗಬೇಕು.

Related Articles

Related image1
Now Playing
Chikkamagaluru | ಕಾಫಿನಾಡು ಕಳಸದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ, ಡ್ರೋನ್ ಕ್ಯಾಮರಾದಲ್ಲಿ ಸೆರೆ‌
Related image2
School Student's Plea: ಚಿಕ್ಕಮಗಳೂರು ರಸ್ತೆಗಾಗಿ ಪ್ರಧಾನಿ ಮೋದಿಗೆ ವಿದ್ಯಾರ್ಥಿನಿ ಪತ್ರ, ಪತ್ರದಲ್ಲೇನಿದೆ?
38
Image Credit : Asianet News

ಹೌದು, ಇನ್ನು ಮುಂದೆ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿಗರ ಸ್ವರ್ಗವಾಗಿರುವ ಮುಳ್ಳಯ್ಯನಗಿರಿಗೆ ಹೋಗಲು ಅಡ್ವಾನ್ಸ್ ಬುಕಿಂಗ್ ಮಾಡಬೇಕು. ಬುಕ್ಕಿಂಗ್ ವಾಹನಗಳು ಸೇರಿದಂತೆ ನಿತ್ಯ ಬೆಳಗ್ಗೆ 600, ಮಧ್ಯಾಹ್ನ 600 ವಾಹನಗಳಿಷ್ಟೆ ಅವಕಾಶ ನೀಡಲಾಗುತ್ತದೆ. ಬುಕ್ಕಿಂಗ್ ಮಾಡಿಕೊಂಡು ಬಂದು ಸ್ವಂತ ವಾಹನದಲ್ಲೇ ಹೋಗೋಕೆ ಹಣ ಪಾವತಿಸಬೇಕು.

48
Image Credit : Asianet News

ಮುಳ್ಳಯ್ಯನಗಿರಿ ಸೇರಿದಂತೆ ದತ್ತಪೀಠ, ಗಾಳಿಕೆರೆಗೆ ಹೋಗುವ ಭಕ್ತರು ಹಣ ಪಾವತಿಸಿಯೇ ಹೋಗಬೇಕು. ಒಂದು ಟಿ.ಟಿ. ವಾಹನಕ್ಕೆ 200, ಕಾರಿಗೆ 100, ಬೈಕು-ಆಟೋಗೆ 50 ರೂಪಾಯಿ ಕೊಡಬೇಕು.

58
Image Credit : Asianet News

ಚಿಕ್ಕಮಗಳೂರು ಜಿಲ್ಲಾಡಳಿತವು ಪ್ರವಾಸಿಗರ ಹಿತದೃಷ್ಟಿಯಿಂದ ಪ್ರವಾಸಿಗರ ನಿಯಂತ್ರಣಕ್ಕೆ ಮುಂದಾಗಿದೆ. ಮಳೆಯಿಂದ ಗಿರಿ ಪ್ರದೇಶದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

68
Image Credit : Asianet News

ಜಿಲ್ಲಾಡಳಿತ ಸಿದ್ಧಪಡಿಸಿರುವ ಅಪಾಯಕಾರಿ ಪ್ರದೇಶಗಳ ಪಟ್ಟಿಯಲ್ಲಿ ಮುಳ್ಳಯ್ಯನಗಿರಿ ರಸ್ತೆಯೂ ಸೇರಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಹೆಚ್ಚಳದಿಂದ ಗಿರಿಯಲ್ಲಿ ಅಪಾಯಕ್ಕೆ ಆಹ್ವಾನವೆಂದು ಪ್ರವಾಸಿಗರ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

78
Image Credit : Asianet News

ಚೆಕ್ ಪೋಸ್ಟ್ ಬಳಿಯೇ ಖಾಸಗಿ ವಾಹನ ನಿಲುಗಡೆ:

ಗಿರಿ ಪ್ರವಾಸಕ್ಕೆ ಹೋಗುವವರಿಗೆ ಚೆಕ್ ಪೋಸ್ಟ್ ಬಳಿಯೇ ಪ್ರವಾಸಿಗರ ಖಾಸಗಿ ವಾಹನಗಳಿಗೆ ಬ್ರೇಕ್ ಹಾಕಲಾಗಿದೆ. ಇಲ್ಲಿಂದ ಮುಂದಕ್ಕೆ ಹೋಗಲು ಜಿಲ್ಲಾಡಳಿತದಿಂದ ವಾಹನ ವ್ಯವಸ್ಥೆ ಮಾಡಲಾಗುತ್ತದೆ. ಆನ್ ಲೈನ್ ಮೂಲಕ ಬುಕ್ ಮಾಡಿ ಸ್ವಂತ ವಾಹನದಲ್ಲಿ ಹೋಗೋಕೆ ಹಣ ಪಾವತಿ ಮಾಡಬೇಕು. ಹಣ ಪಾವತಿ ಮಾಡಲ್ಲ ಎಂದರೆ ಚೆಕ್ ಪೋಸ್ಟ್ ಬಳಿ ಗಾಡಿ ನಿಲ್ಲಿಸಿ ಜಿಲ್ಲಾಡಳಿತದ ವಾಹನದಲ್ಲಿ ಹೋಗಬೇಕು. ಇನ್ನು ಟ್ರಕಿಂಗ್ ಮಾಡುವರಿಗೆ ಮುಕ್ತ ಅವಕಾಶ ನೀಡಲಾಗುತ್ತದೆ. ನಿಗದಿತ ವಾಹನದಲ್ಲೇ ಪ್ರವಾಸಿಗರು ಮುಳ್ಳಯ್ಯನಗಿರಿಗೆ ಹೋಗಬೇಕು.

88
Image Credit : Asianet News

ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್, ಭೂಕುಸಿತ ತಡೆಯಲು ಕ್ರಮ:

ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಹೋಗಲು ಇನ್ನುಮುಂದೆ ಜಿಲ್ಲಾಡಳಿತದ ಅನುಮತಿ ಪಡೆಯುವುದು ಕಡ್ಡಾಯ ಆಗಲಿದೆ. ಇದರಿಂದ ಮುಳ್ಳಯ್ಯನ ಗಿರಿ ಭಾಗದಲ್ಲಿ ಉಂಟಾಗುತ್ತಿದ್ದ ವಾಹನಗಳ ಟ್ರಾಫಿಕ್ ಜಾಮ್, ಭೂ ಕುಸಿತದ ಆತಂಕವನ್ನು ತಡೆಗಟ್ಟಲು ನೆರವಾಗಲಿದೆ. ಮುಳ್ಳಯ್ಯನಗಿರಿಗೆ ನಿತ್ಯ ಸಾವಿರಾರು ವಾಹನಗಳಲ್ಲಿ ಬರುವ ಪ್ರವಾಸಿಗರು ಈ ಜಿಲ್ಲಾಡಳಿತದ ಕ್ರಮವನ್ನು ನೋಡಿಕೊಂಡು ಹೋದರೆ ಅನುಕೂಲಕರ ಆಗಲಿದೆ. ಇಲ್ಲದಿದ್ದರೆ ಚಿಕ್ಕಮಗಳೂರಿನ ಗಿರಿ ಪ್ರದೇಶ ನೋಡಲಾಗದೇ ಸಪ್ಪೆ ಮೋರೆ ಹೊತ್ತು ಸಮಯ ವ್ಯರ್ಥ ಮಾಡಿಕೊಂಡು ವಾಪಸ್ ಬರಬೇಕಾಗುತ್ತದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಚಿಕ್ಕಮಗಳೂರು
ಪ್ರವಾಸ
ಪ್ರವಾಸೋದ್ಯಮ

Latest Videos
Recommended Stories
Recommended image1
ಹೂಳಲು ತೆಗೆದಿದ್ದ ಗುಂಡಿ ಮುಚ್ಚಿ, ಮೃತದೇಹ ಸುಟ್ಟಿದ್ದೇಕೆ? ಸಾಕ್ಷಿ ನಾಶದ ಆರೋಪಕ್ಕೆ ಸಿಕ್ಕಿತು ಬಿಗ್ ಟ್ವಿಸ್ಟ್!
Recommended image2
ರಾಜಕೀಯಕ್ಕೆ ಸುಮಲತಾ ರೀ-ಎಂಟ್ರಿ, ಮತ್ತೆ ಸ್ವತಂತ್ರವಾಗಿ ಸ್ಫರ್ಧೆ, ದೇವೇಗೌಡ ನಮ್ಮ ತ್ಯಾಗ ಮರೆತಿದ್ದಾರೆ, ಮಾಜಿ ಸಚಿವ ನಾರಾಯಣ ಕಿಡಿ
Recommended image3
ಸೋಡಾ ಬಾಟಲಿಯಲ್ಲಿ ಪೆಟ್ರೋಲ್, ಗನ್ ಮ್ಯಾನ್ ಪೈರಿಂಗ್: ಪಕ್ಕಾ ಫಿಲ್ಮ್ ಸ್ಟೈಲ್‌ ಮರ್ಡರ್ ಪ್ಲಾನ್?
Related Stories
Recommended image1
Now Playing
Chikkamagaluru | ಕಾಫಿನಾಡು ಕಳಸದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ, ಡ್ರೋನ್ ಕ್ಯಾಮರಾದಲ್ಲಿ ಸೆರೆ‌
Recommended image2
School Student's Plea: ಚಿಕ್ಕಮಗಳೂರು ರಸ್ತೆಗಾಗಿ ಪ್ರಧಾನಿ ಮೋದಿಗೆ ವಿದ್ಯಾರ್ಥಿನಿ ಪತ್ರ, ಪತ್ರದಲ್ಲೇನಿದೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved