MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಸರಗೂರು ಕೊ*ಲೆಯ ರಹಸ್ಯ ಬಿಚ್ಚಿಟ್ರು ಎಸ್‌ಪಿ; ಅಮೃತಾ-ಸಿದ್ದೇಶ್ ಪ್ಲಾನ್ ಏನಾಗಿತ್ತು?

ಸರಗೂರು ಕೊ*ಲೆಯ ರಹಸ್ಯ ಬಿಚ್ಚಿಟ್ರು ಎಸ್‌ಪಿ; ಅಮೃತಾ-ಸಿದ್ದೇಶ್ ಪ್ಲಾನ್ ಏನಾಗಿತ್ತು?

ಜವರಪ್ಪ ಎಂಬುವವರ ಕೊಲೆಯನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಲಾಗಿತ್ತು. 24 ಗಂಟೆಯೊಳಗೆ ಪ್ರಕರಣ ಭೇದಿಸಿದ ಪೊಲೀಸರು, ಮೃತನ ಪತ್ನಿ ಅಮೃತಾ ಹಾಗೂ ಆಕೆಯ ಪ್ರಿಯಕರ ಸಿದ್ದೇಶ್ ಈ ಕೃತ್ಯದ ಹಿಂದಿದ್ದಾರೆ ಎಂದು ಪತ್ತೆಹಚ್ಚಿದ್ದಾರೆ. ಆರೋಪಿ ಸಿದ್ದೇಶ್‌ನನ್ನು ಬಂಧಿಸಲಾಗಿದೆ.

2 Min read
Author : Mahmad Rafik
Published : Apr 19 2026, 05:19 PM IST
Share this Photo Gallery
  • FB
  • TW
  • Linkdin
  • Whatsapp
15
ಕುರ್ಣೆಗಾಲ ಗ್ರಾಮದ ನಿವಾಸಿ ಜವರಪ್ಪ ಕೊಲೆ
Image Credit : Asianet News

ಕುರ್ಣೆಗಾಲ ಗ್ರಾಮದ ನಿವಾಸಿ ಜವರಪ್ಪ ಕೊಲೆ

ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೆಗಾಲ ಗ್ರಾಮದ ನಿವಾಸಿ ಜವರಪ್ಪ ಎಂಬವರ ಕೊಲೆ ಪ್ರಕರಣದ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಪ್ರಕರಣ ನಡೆದ 24 ಗಂಟೆಯಲ್ಲಿ ಆರೋಪಿ ಸಿದ್ದೇಶ್ ಎಂಬಾತನನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

25
ಮನೆಗೆ ಕರೆದುಕೊಂಡು ಬಂದಿದ್ದ!
Image Credit : Asianet News

ಮನೆಗೆ ಕರೆದುಕೊಂಡು ಬಂದಿದ್ದ!

ಆರೋಪಿ ಸಿದ್ದೇಶ್ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ. ಕೊಲೆಯಾದ ಜವರಪ್ಪ ಕೂಲಿ ಕೆಲಸ ಮಾಡಿಕೊಂಡಿದ್ದರು. ಒಂದು ದಿನ ಆರೋಪಿ ಸಿದ್ದೇಶ್ ನನ್ನು ಜವರಪ್ಪ ತನ್ನ ಮನೆಗೆ ಕರೆದುಕೊಂಡು ಹೋಗಿದ್ದನು.ಈ ವೇಳೆ ಜವರಪ್ಪನ ಹೆಂಡತಿ ಅಮೃತಾಳ ಪರಿಚಯ ಸಿದ್ದೇಶ್‌ಗೆ ಆಗುತ್ತದೆ. ಈ ಭೇಟಿ ಬಳಿಕ ಇಬ್ಬರು ಫೋನ್ ನಂಬರ್ ಎಕ್ಸ್‌ಚೇಂಜ್ ಮಾಡಿಕೊಂಡು ಮಾತನಾಡಲು ಆರಂಭಿಸಿದ್ದರು.

Related Articles

Related image1
Mysuru: ವೀಕೆಂಡ್ ಪಾರ್ಟಿಯಲ್ಲಿ ಗಲಾಟೆ; ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಟೆಕ್ಕಿ
Related image2
ಕಾರ್‌, ಸರ್ಕಾರಿ ಬಸ್, ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ: ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
35
ಕೊಲೆಗೆ ಪ್ಲಾನ್
Image Credit : Asianet News

ಕೊಲೆಗೆ ಪ್ಲಾನ್

ಮೊಬೈಲ್‌ನಲ್ಲಿ ಹೆಚ್ಚು ಮಾತನಾಡುವ ವಿಷಯವಾಗಿಯೇ ಅಮೃತಾ ಮತ್ತು ಜವರಪ್ಪ ನಡುವೆ ಜಗಳ ನಡೆಯುತ್ತಿತ್ತು. ಏಪ್ರಿಲ್ 14ರಂದು ಅಮೃತಾ ಮಕ್ಕಳೊಂದಿಗೆ ತವರಿಗೆ ಹೋಗಿದ್ದಳು. ಈ ವೇಳೆ ಮಕ್ಕಳನ್ನು ನೋಡಲು ಬರುತ್ತೇನೆ ಎಂದು ಅಮೃತಾಳಿಗೆ ಜವರಪ್ಪ ತಿಳಿಸಿದ್ದರು. ಇತ್ತ ಸಿದ್ದೇಶ್‌ಗೆ ಗಂಡನ ಚಲನವಲನದ ಮಾಹಿತಿಯನ್ನು ಅಮೃತಾ ನೀಡುತ್ತಿದ್ದಳು. ಜವರಪ್ಪ ಇದ್ರೆ ನಮ್ಮಿಬ್ಬರ ಸಂಬಂಧಕ್ಕೆ ಅಡ್ಡಿಯಾಗ್ತಾನೆ ಎಂದು ಇಬ್ಬರು ಸೇರಿ ಜವರಪ್ಪನ ಕೊಲೆಗೆ ಪ್ಲಾನ್ ಮಾಡಿದ್ದರು ಎಂದು ಎಸ್‌ಪಿ ಹೇಳಿದ್ದಾರೆ.

45
ಕೊಲೆ ಶಂಕೆ
Image Credit : Asianet News

ಕೊಲೆ ಶಂಕೆ

ಮಕ್ಕಳನ್ನು ನೋಡಲು ಹೊರಟಿದ್ದ ಜವರಪ್ಪ ಅವರಿಗೆ ಮಾರ್ಗಮಧ್ಯೆ ಭೇಟಿಯಾದ ಸಿದ್ದೇಶ್, ತನ್ನ ಕಾರಿನಲ್ಲಿ ಬಾರ್‌ಗೆ ಕರೆದುಕೊಂಡು ಹೋಗಿದ್ದಾನೆ. ಕಂಠ ಪೂರ್ತಿ ಕುಡಿಸಿ ಮನೆಗೆ ಬಿಡುವುದಾಗಿ ಹೇಳಿ ಮಾರ್ಗಮಧ್ಯೆ ಹೊಡೆದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ಮೃತ ದೇಹವನ್ನು ರಸ್ತೆಯಲ್ಲಿ ಬಿಸಾಡಿ ಅಪಘಾತ ಎಂದು ಬಿಂಬಿಸಲು ಮುಂದಾಗುತ್ತಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತ ದೇಹದ ಮೇಲಿನ ಗಾಯದ ಗುರುತನ್ನ ಗಮನಿಸಿ ಕೊಲೆ ಶಂಕೆ ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ: ಪತಿಯ ಅಕ್ರಮ ಸಂಬಂಧ ಪತ್ತೆ ಮಾಡಿದ್ದ ಪತ್ನಿ ನಿಗೂಢ ಸಾವು: ಪೋಷಕರಿಂದ ಕೊಲೆ ಆರೋಪ

55
 24 ಗಂಟೆ ಅವಧಿಯಲ್ಲಿ ಕೊಲೆಯ ರಹಸ್ಯ ಬಯಲು
Image Credit : Asianet News

24 ಗಂಟೆ ಅವಧಿಯಲ್ಲಿ ಕೊಲೆಯ ರಹಸ್ಯ ಬಯಲು

ಕೊಲೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ತನಿಖೆಹೆ ಎರಡು ತಂಡ ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆ ಅವಧಿಯಲ್ಲಿ ಕೊಲೆಯ ರಹಸ್ಯ ಬಯಲಾಗಿದೆ. ಆರೋಪಿ ಸಿದ್ದೇಶ್ ನನ್ನ ಬಂದಿಸಲಾಗಿದೆ. ಈ ಕೊಲೆಯ ಸಂಚಿನಲ್ಲಿ ಅಮೃತಾಳ ಕೈವಾಡವು ಇದೆ ಎಂದು ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ. ಇತ್ತ ಜವರಪ್ಪ ಸೋದರ ರವಿ ಸಹ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಮುದ್ದಾದ ಮೂರು ಮಕ್ಕಳ ಜೊತೆಗೆ ವಿದೇಶಕ್ಕೆ ಹೋಗಿ ಅಲ್ಲೇ ಸೆಟಲ್ ಆದ ಪತ್ನಿ; ಏಕಾಂಗಿಯಾದ ಕಿರುತೆರೆ ನಟ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮೈಸೂರು
ಕ್ರೈಮ್ ನ್ಯೂಸ್
ಕೊಲೆ
ಅಕ್ರಮ ಸಂಬಂಧ

Latest Videos
Recommended Stories
Recommended image1
RCB ಬಡ ಅಭಿಮಾನಿಗಳ ಪರವಾಗಿ ಘರ್ಜಿಸಿದ ಹುಲಿ ಕಾರ್ತಿಕ್; ವಿರಾಟ್ ಕೊಹ್ಲಿಗೆ ಗಂಭೀರ ಮನವಿ ಮಾಡಿದ ಕಾಮಿಡಿ ಕಿಲಾಡಿ!
Recommended image2
ಬೆಂಗಳೂರಿನ ಭಲೇ ಕಳ್ಳಿ ಅರೆಸ್ಟ್: ಬಂಗಾರದ ಅಂಗಡಿಗೆ ಹೋಗಿ ಉಂಗುರ ಕದ್ದು ಸಿಕ್ಕಿಬಿದ್ದ ಆಕಾಂಶ!
Recommended image3
ಗಜೇಂದ್ರಗಡದಲ್ಲಿ 'ಥರ್ಡ್ ಐ' ತಪ್ಪಿಸಲು ವಾಹನ ಸವಾರರ ವಾಮಮಾರ್ಗ! ಸಫಲವಾಗದ ಸುಗಮ ಸಂಚಾರ
Related Stories
Recommended image1
Mysuru: ವೀಕೆಂಡ್ ಪಾರ್ಟಿಯಲ್ಲಿ ಗಲಾಟೆ; ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಟೆಕ್ಕಿ
Recommended image2
ಕಾರ್‌, ಸರ್ಕಾರಿ ಬಸ್, ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ: ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved