MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಕಳೆದು ಹೋದ ಸಾಕು ನಾಯಿ ಹುಡುಕಲು ಹೋದ ಮಗ ರೈಲ್ವೆ ಟ್ರ್ಯಾಕ್ ಹೆಣವಾದ; ರೈಲು ಡಿಕ್ಕಿಯಾಗಿ 16ರ ಬಾಲಕ ಸಾವು!

ಕಳೆದು ಹೋದ ಸಾಕು ನಾಯಿ ಹುಡುಕಲು ಹೋದ ಮಗ ರೈಲ್ವೆ ಟ್ರ್ಯಾಕ್ ಹೆಣವಾದ; ರೈಲು ಡಿಕ್ಕಿಯಾಗಿ 16ರ ಬಾಲಕ ಸಾವು!

ನೆಲಮಂಗಲದಲ್ಲಿ, ಕಾಣೆಯಾದ ತನ್ನ ಸಾಕು ನಾಯಿಯನ್ನು ಹುಡುಕಲು ಹೋಗಿದ್ದ 16 ವರ್ಷದ ಪಿಯುಸಿ ವಿದ್ಯಾರ್ಥಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಯೋಗೇಂದ್ರ ಎಂಬ ಈ ಬಾಲಕ, ಭರವಸೆಯ ಕ್ರೀಡಾಪಟುವಾಗಿದ್ದು, ಈ ದುರ್ಘಟನೆಯು ಕುಟುಂಬ ಮತ್ತು ಸ್ನೇಹಿತರಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.

1 Min read
Author : Sathish Kumar KH
Published : Jan 24 2026, 05:03 PM IST
Share this Photo Gallery
  • FB
  • TW
  • Linkdin
  • Whatsapp
15
ನಾಯಿ ಹುಡುಕಲು ಹೋಗಿ ರೈಲ್ವೆ ಟ್ರ್ಯಾಕ್ ಹೆಣವಾದ ಮಗ
Image Credit : Asianet News

ನಾಯಿ ಹುಡುಕಲು ಹೋಗಿ ರೈಲ್ವೆ ಟ್ರ್ಯಾಕ್ ಹೆಣವಾದ ಮಗ

ಬೆಂಗಳೂರು (ಜ.24): ಸಾಕು ಪ್ರಾಣಿಗಳ ಮೇಲಿನ ಅತಿಯಾದ ಪ್ರೀತಿ ಇಂದು ಒಂದು ಅಮೂಲ್ಯ ಜೀವವನ್ನು ಬಲಿಪಡೆದಿದೆ. ಕಾಣೆಯಾದ ತನ್ನ ನೆಚ್ಚಿನ ಸಾಕು ನಾಯಿಯನ್ನು ಹುಡುಕುತ್ತಾ ಹೋದ 16 ವರ್ಷದ ಪಿಯುಸಿ ವಿದ್ಯಾರ್ಥಿಯೋರ್ವ ರೈಲು ಡಿಕ್ಕಿಯಾಗಿ ಕೊನೆಯುಸಿರೆಳೆದ ಮನಕಲಕುವ ಘಟನೆ ನೆಲಮಂಗಲ ತಾಲೂಕಿನ ಮುದ್ದಲಿಂಗನಹಳ್ಳಿ ಗೇಟ್ ಬಳಿ ನಡೆದಿದೆ.

25
ಘಟನೆಯ ವಿವರ
Image Credit : Asianet News

ಘಟನೆಯ ವಿವರ

ಮುದ್ದಲಿಂಗನಹಳ್ಳಿಯ ಶ್ರೀನಿವಾಸ್ ಮತ್ತು ಚನ್ನಮ್ಮ ದಂಪತಿಯ ಪುತ್ರ ಯೋಗೇಂದ್ರ (16) ಮೃತಪಟ್ಟ ಬಾಲಕ. ಯೋಗೇಂದ್ರ ಅವರ ಮನೆಯಲ್ಲಿದ್ದ ಸಾಕು ನಾಯಿಯು ಕಳೆದ ಎರಡು ದಿನಗಳ ಹಿಂದೆ ಕಾಣೆಯಾಗಿತ್ತು. ನಾಯಿಯ ಮೇಲೆ ಅತಿಯಾದ ಒಲವು ಹೊಂದಿದ್ದ ಯೋಗೇಂದ್ರ, ಅದು ಕಾಣೆಯಾದಾಗಿನಿಂದಲೂ ತೀವ್ರವಾಗಿ ಮನನೊಂದಿದ್ದ.

Related Articles

Related image1
ಚಿಕ್ಕಮಗಳೂರು: ರಾಟ್‌ವೀಲರ್ ನಾಯಿ vs ನಾಗರಹಾವು ಮಧ್ಯೆ ಭೀಕರ ಕಾಳಗ, ಹಾವು ಕೊಂದು ಪ್ರಾಣಬಿಟ್ಟ ಶ್ವಾನ! ಹಾವಿಗೆ ಶಾಸ್ತ್ರೋಕ್ತ ಅಂತ್ಯಸಂಸ್ಕಾರ
Related image2
ಅಡ್ಡ ಬಂದ ನಾಯಿ ಜೀವ ಉಳಿಸಲು ಹೋಗಿ ಸಚಿವರ ಕಾರು ಅಪಘಾತ, ಹೆದ್ದಾರಿಯಲ್ಲಿ ಘಟನೆ
35
ಯೋಗೇಂದ್ರನಿಗೆ ಡಿಕ್ಕಿ
Image Credit : Asianet News

ಯೋಗೇಂದ್ರನಿಗೆ ಡಿಕ್ಕಿ

ಇಂದು ಬೆಳಿಗ್ಗೆ ಯಾರಿಗೂ ತಿಳಿಸದೆ, ತನ್ನ ನೆಚ್ಚಿನ ನಾಯಿ ಎಲ್ಲಿದೆ ಎಂದು ಹುಡುಕುತ್ತಾ ರೈಲ್ವೇ ಹಳಿಯ ಬಳಿ ತೆರಳಿದ್ದ ಎನ್ನಲಾಗಿದೆ. ಈ ವೇಳೆ ಹಳಿಯ ಮೇಲೆ ವೇಗವಾಗಿ ಬಂದ ರೈಲು ಯೋಗೇಂದ್ರನಿಗೆ ಡಿಕ್ಕಿ ಹೊಡೆದಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಓಡಿಬಂದ ಪೋಷಕರ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

45
ಕಳೆದುಹೋಯಿತು ಕ್ರೀಡಾ ಲೋಕದ ಪ್ರತಿಭೆ
Image Credit : Asianet News

ಕಳೆದುಹೋಯಿತು ಕ್ರೀಡಾ ಲೋಕದ ಪ್ರತಿಭೆ

ಮೃತ ಯೋಗೇಂದ್ರ ಕೇವಲ ವಿದ್ಯಾರ್ಥಿಯಲ್ಲದೆ, ಒಬ್ಬ ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದ. ಲಾಂಗ್ ಜಂಪ್‌ನಲ್ಲಿ ಆಸಕ್ತಿ ಹೊಂದಿದ್ದ ಆತ, ಶಾಲಾ ಹಂತದಲ್ಲಿ ಹಲವಾರು ಪದಕ ಹಾಗೂ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದ. ಭವಿಷ್ಯದಲ್ಲಿ ಕ್ರೀಡಾ ಲೋಕದಲ್ಲಿ ಸಾಧನೆ ಮಾಡುವ ಕನಸು ಕಂಡಿದ್ದ ಯುವಕನಿಗೀಗ ವಿಧಿಯು ಸಾವಿನ ರೂಪದಲ್ಲಿ ಬಂದಪ್ಪಿರುವುದು ದುರಂತವೇ ಸರಿ.

55
ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ
Image Credit : Asianet News

ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ

ಇನ್ನು ಘಟನಾ ಸ್ಥಳಕ್ಕೆ ಯಶವಂತಪುರ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು. ಶವಗಾರದ ಬಳಿ ಸೇರಿದ ಮೃತನ ಗೆಳೆಯರು ಹಾಗೂ ಕುಟುಂಬಸ್ಥರ ಕಣ್ಣೀರು ನೋಡುಗರ ಕಣ್ಣಾಲಿಗಳನ್ನು ತೇವಗೊಳಿಸುತ್ತಿತ್ತು. ಈ ಕುರಿತು ಯಶವಂತಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ರೈಲು
ನಾಯಿ
ಬೆಂಗಳೂರು ಗ್ರಾಮಾಂತರ

Latest Videos
Recommended Stories
Recommended image1
ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡ್ತಿದ್ದ ವ್ಯಕ್ತಿಗೆ ಪೊಲೀಸರ ಕಿರುಕುಳ; ವಿಧಾನಸೌಧ ಮುಂದೆ ವಿಷ ಸೇವನೆ!
Recommended image2
ಗಂಡು ಕಾಳಿಂಗ ಸರ್ಪ ಏಕಪತ್ನಿ ವ್ರತಸ್ಥನಾ? ಮಿಲನದ ನಂತರ ಸಂಗಾತಿಯನ್ನೇ ತಿನ್ನುತ್ತಾ?
Recommended image3
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ 7 ಹೆಡೆಯ ಘಟಸರ್ಪ ಶಿಲೆ ಪತ್ತೆ; ಹಾವಿನ ತಲೆ ಮೇಲಿದೆ ವಿಶೇಷ ನಾಗಮಣಿ!
Related Stories
Recommended image1
ಚಿಕ್ಕಮಗಳೂರು: ರಾಟ್‌ವೀಲರ್ ನಾಯಿ vs ನಾಗರಹಾವು ಮಧ್ಯೆ ಭೀಕರ ಕಾಳಗ, ಹಾವು ಕೊಂದು ಪ್ರಾಣಬಿಟ್ಟ ಶ್ವಾನ! ಹಾವಿಗೆ ಶಾಸ್ತ್ರೋಕ್ತ ಅಂತ್ಯಸಂಸ್ಕಾರ
Recommended image2
ಅಡ್ಡ ಬಂದ ನಾಯಿ ಜೀವ ಉಳಿಸಲು ಹೋಗಿ ಸಚಿವರ ಕಾರು ಅಪಘಾತ, ಹೆದ್ದಾರಿಯಲ್ಲಿ ಘಟನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved