MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • New Year 2026: ಕಾಫಿನಾಡಿಗರಿಗೆ ನಿರಾಸೆ ಮೂಡಿಸಿದ ಹೊಸ ವರ್ಷ, ಉದ್ಯಮಿಗಳಿಗೆ ಆತಂಕ!

New Year 2026: ಕಾಫಿನಾಡಿಗರಿಗೆ ನಿರಾಸೆ ಮೂಡಿಸಿದ ಹೊಸ ವರ್ಷ, ಉದ್ಯಮಿಗಳಿಗೆ ಆತಂಕ!

ಈ ಬಾರಿ ಹೊಸ ವರ್ಷದ ಸಂಭ್ರಮಕ್ಕೆ ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಜಿಲ್ಲಾಡಳಿತದ ನಿರ್ಬಂಧಗಳು ಮತ್ತು ವಾರದ ಮಧ್ಯದಲ್ಲಿ ಹೊಸ ವರ್ಷ ಬಂದಿರುವುದರಿಂದ, ಹೋಂ ಸ್ಟೇಗಳು ಹಾಗೂ ರೆಸಾರ್ಟ್‌ಗಳು ಖಾಲಿಯಾಗಿದ್ದು, ಪ್ರಮುಖ ಪ್ರವಾಸಿ ತಾಣಗಳು ನಿಶ್ಶಬ್ದವಾಗಿವೆ. 

2 Min read
Author : Gowthami K
Published : Dec 31 2025, 04:02 PM IST
Share this Photo Gallery
  • FB
  • TW
  • Linkdin
  • Whatsapp
15
ಹೊಸ ವರ್ಷದಲ್ಲಿ ಕಾಫಿನಾಡಿಗೆ ನಿರಾಸೆ
Image Credit : Asianet News

ಹೊಸ ವರ್ಷದಲ್ಲಿ ಕಾಫಿನಾಡಿಗೆ ನಿರಾಸೆ

ಚಿಕ್ಕಮಗಳೂರು: ಹೊಸ ವರ್ಷದ ಸಂಭ್ರಮ ಕಾಫಿನಾಡಿನಲ್ಲಿ ಈ ಬಾರಿ ನಿರೀಕ್ಷೆಯ ಮಟ್ಟಿಗೆ ಕಾಣುತ್ತಿಲ್ಲ. ಪ್ರತೀ ವರ್ಷ ಹೊಸ ವರ್ಷಕ್ಕೆ ಪ್ರವಾಸಿಗರಿಂದ ಕಿಕ್ಕಿರಿದು ತುಂಬಿರುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ, ಈ ಬಾರಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದರ ಪರಿಣಾಮವಾಗಿ ಜಿಲ್ಲೆಯಾದ್ಯಂತ ಅರ್ಧಕ್ಕಿಂತ ಹೆಚ್ಚು ಹೋಂ ಸ್ಟೇಗಳು ಮತ್ತು ರೆಸಾರ್ಟ್‌ಗಳು ಖಾಲಿ ಖಾಲಿಯಾಗಿವೆ. ಸಾಮಾನ್ಯವಾಗಿ ಡಿಸೆಂಬರ್ 30 ಮತ್ತು 31ರಂದು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿ, ಕೆಮ್ಮಣ್ಣಗುಂಡಿ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳು ಈ ಬಾರಿ ನಿಶ್ಶಬ್ದವಾಗಿವೆ. ಹೊಸ ವರ್ಷ ವಾರದ ಮಧ್ಯದಲ್ಲಿ ಬಂದಿರುವುದು ಹಾಗೂ ಜಿಲ್ಲಾಡಳಿತದ ಕೆಲವು ನಿರ್ಬಂಧಾತ್ಮಕ ನಿರ್ಧಾರಗಳು ಪ್ರವಾಸಿಗರ ಸಂಖ್ಯೆ ಇಳಿಮುಖವಾಗಲು ಪ್ರಮುಖ ಕಾರಣಗಳೆಂದು ಪ್ರವಾಸೋದ್ಯಮ ಕ್ಷೇತ್ರದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

25
ಜಿಲ್ಲಾಡಳಿತದ ನಿರ್ಬಂಧಗಳು ಪ್ರವಾಸೋದ್ಯಮಕ್ಕೆ ಹೊಡೆತ
Image Credit : Asianet News

ಜಿಲ್ಲಾಡಳಿತದ ನಿರ್ಬಂಧಗಳು ಪ್ರವಾಸೋದ್ಯಮಕ್ಕೆ ಹೊಡೆತ

ಪಶ್ಚಿಮ ಘಟ್ಟಗಳ ತಪ್ಪಲಿನ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಜಿಲ್ಲಾಡಳಿತವು ಪ್ರತಿದಿನ ಗರಿಷ್ಠ 1,600 ವಾಹನಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ. ಈ ನಿರ್ಧಾರವು ಪರಿಸರದ ದೃಷ್ಟಿಯಿಂದ ಅಗತ್ಯವಿದ್ದರೂ, ಪ್ರವಾಸಿಗರಲ್ಲಿ ಗೊಂದಲ ಮತ್ತು ಹಿಂಜರಿತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ದರ ಪರಿಣಾಮವಾಗಿ, ಹೊಸ ವರ್ಷದ ಮೊದಲ ದಿನವಾದ ಇಂದು ಬೆಳಗ್ಗೆಯಿಂದ ಕೇವಲ 800 ರಿಂದ 1,000ರಷ್ಟು ವಾಹನಗಳು ಮಾತ್ರ ಮುಳ್ಳಯ್ಯನಗಿರಿ ಕಡೆಗೆ ಭೇಟಿ ನೀಡಿರುವುದು ದಾಖಲಾಗಿದೆ. ವಾಹನಗಳ ಕೊರತೆಯಿಂದ ಮುಳ್ಳಯ್ಯನಗಿರಿ ರಸ್ತೆಯು ಬಣಗುಡುತ್ತಿರುವ ದೃಶ್ಯ ಕಂಡುಬಂತು.

Related Articles

Related image1
ಮದ್ಯ ಮಾಂಸ ತ್ಯಜಿಸಿ, ಹೊಸ ವರ್ಷದ ಮೊದಲ ದಿನ ಪಾಪ ಮಾಡ್ಬೇಡಿ, Virat Kohli ಗುರು ನೀಡಿದ್ರು ಸ್ಪೆಷಲ್ ಸಂದೇಶ
Related image2
ಹೊಸ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಸಜ್ಜು- ಸಂಚಾರಕ್ಕೆ ಪರ್ಯಾಯ ಮಾರ್ಗ
35
ಹಿಂದಿನ ವರ್ಷಗಳ ಹೋಲಿಕೆಯಲ್ಲಿ ಭಾರೀ ಕುಸಿತ
Image Credit : Asianet News

ಹಿಂದಿನ ವರ್ಷಗಳ ಹೋಲಿಕೆಯಲ್ಲಿ ಭಾರೀ ಕುಸಿತ

ಹಿಂದಿನ ವರ್ಷಗಳಲ್ಲಿ ಡಿಸೆಂಬರ್ 30 ಮತ್ತು 31ರಂದು ಮುಳ್ಳಯ್ಯನಗಿರಿ ಪ್ರದೇಶ ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ರಸ್ತೆಗಳಲ್ಲಿ ವಾಹನಗಳ ಸಾಲು, ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ಮುಂಗಡ ಬುಕ್ಕಿಂಗ್‌ಗಳು ತುಂಬಿ ಹೋಗುತ್ತಿದ್ದವು. ಆದರೆ ಈ ಬಾರಿ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಪ್ರವಾಸಿಗರ ಕೊರತೆಯಿಂದ ಪ್ರವಾಸಿ ತಾಣಗಳು, ಹೋಂ ಸ್ಟೇಗಳು ಮತ್ತು ರೆಸಾರ್ಟ್‌ಗಳು ಖಾಲಿ ಖಾಲಿಯಾಗಿದ್ದು, ಪ್ರವಾಸೋದ್ಯಮದ ಮೇಲೆ ಅವಲಂಬಿತವಾಗಿರುವ ಸ್ಥಳೀಯ ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು ಮತ್ತು ಚಾಲಕರು ನಿರಾಸೆಯಲ್ಲಿದ್ದಾರೆ.

45
ಪ್ರವಾಸೋದ್ಯಮ ಉದ್ಯಮಿಗಳ ಆತಂಕ
Image Credit : Asianet News

ಪ್ರವಾಸೋದ್ಯಮ ಉದ್ಯಮಿಗಳ ಆತಂಕ

ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿರುವುದರಿಂದ ಹೋಂ ಸ್ಟೇ ಮಾಲೀಕರು ಹಾಗೂ ರೆಸಾರ್ಟ್ ಉದ್ಯಮಿಗಳು ಆರ್ಥಿಕ ನಷ್ಟದ ಭೀತಿಯಲ್ಲಿ ಇದ್ದಾರೆ. ಹೊಸ ವರ್ಷ ನಮ್ಮ ಪಾಲಿಗೆ ಅತ್ಯಂತ ಪ್ರಮುಖ ಸೀಸನ್. ಆದರೆ ಈ ಬಾರಿ ನಿರೀಕ್ಷಿತ ಪ್ರಮಾಣದ ಪ್ರವಾಸಿಗರು ಬಂದಿಲ್ಲ ಎಂದು ಸ್ಥಳೀಯ ಉದ್ಯಮಿಗಳು ಅಳಲು ತೋಡಿಕೊಂಡಿದ್ದಾರೆ.

55
ಕಾಫಿನಾಡಿನ ಮೌನ ಹೊಸ ವರ್ಷ
Image Credit : Asianet News

ಕಾಫಿನಾಡಿನ ಮೌನ ಹೊಸ ವರ್ಷ

ಪ್ರಕೃತಿ ಸೌಂದರ್ಯ, ಹಸಿರು ಬೆಟ್ಟಗಳು ಮತ್ತು ತಂಪಾದ ಹವಾಮಾನಕ್ಕಾಗಿ ಪ್ರಸಿದ್ಧವಾದ ಕಾಫಿನಾಡು ಈ ಬಾರಿ ಹೊಸ ವರ್ಷವನ್ನು ಮೌನದಲ್ಲೇ ಸ್ವಾಗತಿಸಿದೆ. ಪ್ರವಾಸಿಗರ ಗದ್ದಲ, ಸಂಭ್ರಮದ ವಾತಾವರಣ ಇಲ್ಲದೆ, ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಶಾಂತವಾಗಿವೆ. ಹೊಸ ವರ್ಷದ ನಂತರ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಬಹುದೇ ಎಂಬ ನಿರೀಕ್ಷೆಯಲ್ಲಿ ಕಾಫಿನಾಡಿನ ಪ್ರವಾಸೋದ್ಯಮ ಕ್ಷೇತ್ರ ಎದುರು ನೋಡುತ್ತಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಹೊಸ ವರ್ಷ
ಚಿಕ್ಕಮಗಳೂರು
ಪ್ರವಾಸೋದ್ಯಮ
ಪ್ರವಾಸ

Latest Videos
Recommended Stories
Recommended image1
ಮುಗಿದ ವಿದ್ಯುದೀಕರಣ ಪ್ರಕ್ರಿಯೆ, ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಸಿಕ್ತು ಗ್ರೀನ್‌ಸಿಗ್ನಲ್‌!
Recommended image2
ಬಸ್‌ನಲ್ಲಿ ನಿದ್ದೆ ಮಾಡ್ತಿದ್ದ ಯುವತಿಗೆ ಕಾಮುಕನ ಕಿರುಕುಳ; ಗಟ್ಟಿಗಿತ್ತಿ ಹುಡುಗಿಯ ತಕ್ಕ ಶಾಸ್ತಿ ವಿಡಿಯೋ ವೈರಲ್!
Recommended image3
'ಬೆಂಗಳೂರು ಬಿಡ್ತಿರೋದು ಬೆಸ್ಟ್‌ ನಿರ್ಧಾರ..' ಹೈದ್ರಾಬಾದ್‌ ಯುವತಿಯ ಸೋಶಿಯಲ್‌ ಮೀಡಿಯಾ ಪೋಸ್ಟ್‌ಗೆ ಸಿಡಿದೆದ್ದ ಕನ್ನಡಿಗರು
Related Stories
Recommended image1
ಮದ್ಯ ಮಾಂಸ ತ್ಯಜಿಸಿ, ಹೊಸ ವರ್ಷದ ಮೊದಲ ದಿನ ಪಾಪ ಮಾಡ್ಬೇಡಿ, Virat Kohli ಗುರು ನೀಡಿದ್ರು ಸ್ಪೆಷಲ್ ಸಂದೇಶ
Recommended image2
ಹೊಸ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಸಜ್ಜು- ಸಂಚಾರಕ್ಕೆ ಪರ್ಯಾಯ ಮಾರ್ಗ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved