MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಸೇಬಿಗಿಂತ ಈರುಳ್ಳಿಯೇ ದುಬಾರಿ: ಗ್ರಾಹಕರ ಜೇಬಿಗೆ ಕತ್ತರಿ..!

ಸೇಬಿಗಿಂತ ಈರುಳ್ಳಿಯೇ ದುಬಾರಿ: ಗ್ರಾಹಕರ ಜೇಬಿಗೆ ಕತ್ತರಿ..!

ಶಿವಕುಮಾರ ಕುಷ್ಟಗಿಗದಗ(ಅ.22): ರಾಜ್ಯಾದ್ಯಂತ ಈರುಳ್ಳಿ ಬೆಲೆ ಗಗನಕ್ಕೆ ಏರಿದ್ದು, ಸೇಬಿಗಿಂತಲೂ ದುಬಾರಿ ದರದಲ್ಲಿ ಮಾರಾಟವಾಗುತ್ತಿದೆ. ಇದು ಒಂದೆಡೆ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದ್ದರೆ, ರಾಜ್ಯದಲ್ಲಿಯೇ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಜಿಲ್ಲೆ ಎನ್ನುವ ಹೆಗ್ಗಳಿಕೆ ಹೊಂದಿರುವ ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬಿತ್ತನೆಯಾಗಿದ್ದ ಈರುಳ್ಳಿಯ ಶೇ. 95ರಷ್ಟು ಅತಿಯಾದ ಮಳೆಯಿಂದಾಗಿ ಕೊಳೆತು ಹೋಗಿದ್ದು, ದರದಲ್ಲಿ ಆಗಿರುವ ಭಾರೀ ಹೆಚ್ಚಳದ ಲಾಭ ರೈತರಿಗೂ ಸಿಗುತ್ತಿಲ್ಲ. 

2 Min read
Author : Kannadaprabha News | Asianet News
Published : Oct 22 2020, 03:57 PM IST
Share this Photo Gallery
  • FB
  • TW
  • Linkdin
  • Whatsapp
15
<p>ಜಿಲ್ಲೆಯಲ್ಲಿ ಸೇಬಿನ ಬೆಲೆ ಕೆಜಿಗೆ 80 ರಿಂದ 100 ವರೆಗೆ ಇದ್ದರೆ, ಈರುಳ್ಳಿ ಕೆಜಿಗೆ 80 ರಿಂದ 120ರ ವರೆಗೆ ಮಾರಾಟವಾಗುತ್ತಿದೆ. ಸಗಟು ದರದಲ್ಲಿ ಈರುಳ್ಳಿಯು 4500 ಮಾರಾಟವಾಗುತ್ತಿದೆ. ಆದರೆ, ಇದರ ಲಾಭ ಮಾತ್ರ ಗದಗ ಜಿಲ್ಲೆ ಸೇರಿದಂತೆ ರಾಜ್ಯದ ಬೆಳೆಗಾರರಿಗೆ ಸಿಗುತ್ತಿಲ್ಲ. ನಿರಂತರ ಮಳೆಯಿಂದ ಈರುಳ್ಳಿ ಕೊಳೆತುಹೋಗಿದೆ. ಅದರಲ್ಲಿಯೂ ಕಪ್ಪು ಮಣ್ಣಿನಲ್ಲಿ ಬೆಳೆಯುವ ಈರುಳ್ಳಿ ಹೆಚ್ಚು ತೇವಾಂಶದಿಂದ ಕೂಡಿರುತ್ತದೆ. ರೈತರ ಹೊಲದಲ್ಲಿ ಈರುಳ್ಳಿಯೇ ಉಳಿದಿಲ್ಲ. ಸದ್ಯ ಸೇಬು ಹಣ್ಣಿಗಿಂತ ಹೆಚ್ಚಿನ ದರದಲ್ಲಿ ಮಾರಾಟವಾಗುತ್ತಿರುವ ಈರುಳ್ಳಿ ಬೆಲೆಯ ಲಾಭ ರೈತರಿಗೆ ಮಾತ್ರ ಸಿಗುತ್ತಿಲ್ಲ.</p>

<p>ಜಿಲ್ಲೆಯಲ್ಲಿ ಸೇಬಿನ ಬೆಲೆ ಕೆಜಿಗೆ 80 ರಿಂದ 100 ವರೆಗೆ ಇದ್ದರೆ, ಈರುಳ್ಳಿ ಕೆಜಿಗೆ 80 ರಿಂದ 120ರ ವರೆಗೆ ಮಾರಾಟವಾಗುತ್ತಿದೆ. ಸಗಟು ದರದಲ್ಲಿ ಈರುಳ್ಳಿಯು 4500 ಮಾರಾಟವಾಗುತ್ತಿದೆ. ಆದರೆ, ಇದರ ಲಾಭ ಮಾತ್ರ ಗದಗ ಜಿಲ್ಲೆ ಸೇರಿದಂತೆ ರಾಜ್ಯದ ಬೆಳೆಗಾರರಿಗೆ ಸಿಗುತ್ತಿಲ್ಲ. ನಿರಂತರ ಮಳೆಯಿಂದ ಈರುಳ್ಳಿ ಕೊಳೆತುಹೋಗಿದೆ. ಅದರಲ್ಲಿಯೂ ಕಪ್ಪು ಮಣ್ಣಿನಲ್ಲಿ ಬೆಳೆಯುವ ಈರುಳ್ಳಿ ಹೆಚ್ಚು ತೇವಾಂಶದಿಂದ ಕೂಡಿರುತ್ತದೆ. ರೈತರ ಹೊಲದಲ್ಲಿ ಈರುಳ್ಳಿಯೇ ಉಳಿದಿಲ್ಲ. ಸದ್ಯ ಸೇಬು ಹಣ್ಣಿಗಿಂತ ಹೆಚ್ಚಿನ ದರದಲ್ಲಿ ಮಾರಾಟವಾಗುತ್ತಿರುವ ಈರುಳ್ಳಿ ಬೆಲೆಯ ಲಾಭ ರೈತರಿಗೆ ಮಾತ್ರ ಸಿಗುತ್ತಿಲ್ಲ.</p>

ಜಿಲ್ಲೆಯಲ್ಲಿ ಸೇಬಿನ ಬೆಲೆ ಕೆಜಿಗೆ 80 ರಿಂದ 100 ವರೆಗೆ ಇದ್ದರೆ, ಈರುಳ್ಳಿ ಕೆಜಿಗೆ 80 ರಿಂದ 120ರ ವರೆಗೆ ಮಾರಾಟವಾಗುತ್ತಿದೆ. ಸಗಟು ದರದಲ್ಲಿ ಈರುಳ್ಳಿಯು 4500 ಮಾರಾಟವಾಗುತ್ತಿದೆ. ಆದರೆ, ಇದರ ಲಾಭ ಮಾತ್ರ ಗದಗ ಜಿಲ್ಲೆ ಸೇರಿದಂತೆ ರಾಜ್ಯದ ಬೆಳೆಗಾರರಿಗೆ ಸಿಗುತ್ತಿಲ್ಲ. ನಿರಂತರ ಮಳೆಯಿಂದ ಈರುಳ್ಳಿ ಕೊಳೆತುಹೋಗಿದೆ. ಅದರಲ್ಲಿಯೂ ಕಪ್ಪು ಮಣ್ಣಿನಲ್ಲಿ ಬೆಳೆಯುವ ಈರುಳ್ಳಿ ಹೆಚ್ಚು ತೇವಾಂಶದಿಂದ ಕೂಡಿರುತ್ತದೆ. ರೈತರ ಹೊಲದಲ್ಲಿ ಈರುಳ್ಳಿಯೇ ಉಳಿದಿಲ್ಲ. ಸದ್ಯ ಸೇಬು ಹಣ್ಣಿಗಿಂತ ಹೆಚ್ಚಿನ ದರದಲ್ಲಿ ಮಾರಾಟವಾಗುತ್ತಿರುವ ಈರುಳ್ಳಿ ಬೆಲೆಯ ಲಾಭ ರೈತರಿಗೆ ಮಾತ್ರ ಸಿಗುತ್ತಿಲ್ಲ.

25
<p>ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 1.24 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿತ್ತು. ಆದರೆ, ಸತತವಾಗಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ 95 ಸಾವಿರ ಹೆಕ್ಟೇರ್‌ ಪ್ರದೇಶದ ಈರುಳ್ಳಿ ಸಂಪೂರ್ಣವಾಗಿ ನೆನೆದು ಹೋಗಿದ್ದು, ಕೀಳಲು ಸಹ ಬಾರದಂತಹ ಸ್ಥಿತಿಯಲ್ಲಿ ಇದೆ. ಇದರಿಂದಾಗಿ ಪ್ರತಿ ಹೆಕ್ಟೇರ್‌ಗೆ . 20ರಿಂದ 30 ಸಾವಿರ ಖರ್ಚು ಮಾಡಿದ್ದ ಜಿಲ್ಲೆಯ ರೈತರಿಗೀಗ ಈರುಳ್ಳಿಗೆ ಉತ್ತಮ ಬೆಲೆ ಇದ್ದರೂ ಮಾಡಿದ ಖರ್ಚು ಮರಳಿ ಬರದಂತಹ ಸ್ಥಿತಿ ನಿರ್ಮಾಣವಾಗಿದೆ.</p>

<p>ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 1.24 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿತ್ತು. ಆದರೆ, ಸತತವಾಗಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ 95 ಸಾವಿರ ಹೆಕ್ಟೇರ್‌ ಪ್ರದೇಶದ ಈರುಳ್ಳಿ ಸಂಪೂರ್ಣವಾಗಿ ನೆನೆದು ಹೋಗಿದ್ದು, ಕೀಳಲು ಸಹ ಬಾರದಂತಹ ಸ್ಥಿತಿಯಲ್ಲಿ ಇದೆ. ಇದರಿಂದಾಗಿ ಪ್ರತಿ ಹೆಕ್ಟೇರ್‌ಗೆ . 20ರಿಂದ 30 ಸಾವಿರ ಖರ್ಚು ಮಾಡಿದ್ದ ಜಿಲ್ಲೆಯ ರೈತರಿಗೀಗ ಈರುಳ್ಳಿಗೆ ಉತ್ತಮ ಬೆಲೆ ಇದ್ದರೂ ಮಾಡಿದ ಖರ್ಚು ಮರಳಿ ಬರದಂತಹ ಸ್ಥಿತಿ ನಿರ್ಮಾಣವಾಗಿದೆ.</p>

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 1.24 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿತ್ತು. ಆದರೆ, ಸತತವಾಗಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ 95 ಸಾವಿರ ಹೆಕ್ಟೇರ್‌ ಪ್ರದೇಶದ ಈರುಳ್ಳಿ ಸಂಪೂರ್ಣವಾಗಿ ನೆನೆದು ಹೋಗಿದ್ದು, ಕೀಳಲು ಸಹ ಬಾರದಂತಹ ಸ್ಥಿತಿಯಲ್ಲಿ ಇದೆ. ಇದರಿಂದಾಗಿ ಪ್ರತಿ ಹೆಕ್ಟೇರ್‌ಗೆ . 20ರಿಂದ 30 ಸಾವಿರ ಖರ್ಚು ಮಾಡಿದ್ದ ಜಿಲ್ಲೆಯ ರೈತರಿಗೀಗ ಈರುಳ್ಳಿಗೆ ಉತ್ತಮ ಬೆಲೆ ಇದ್ದರೂ ಮಾಡಿದ ಖರ್ಚು ಮರಳಿ ಬರದಂತಹ ಸ್ಥಿತಿ ನಿರ್ಮಾಣವಾಗಿದೆ.

35
<p>ಗದಗ ಮಾರುಕಟ್ಟೆಗೆ ಕಳೆದೆರಡು ದಿನಗಳಿಂದ ವ್ಯಾಪಕ ಪ್ರಮಾಣ ಈರುಳ್ಳಿ ಮಾರಾಟಕ್ಕೆ ಬರುತ್ತಿದೆ. ಅತಿಯಾದ ಮಳೆಯಿಂದಾಗಿ ಗುಣಮಟ್ಟದ ಈರುಳ್ಳಿ ಬರುತ್ತಿಲ್ಲ. ಅದೇ ಕಳಪೆ ಗುಣಮಟ್ಟದ ಈರುಳ್ಳಿಗೆ ಭಾರೀ ಬೇಡಿಕೆ ಬಂದಿರುವುದು ಎಲ್ಲರಿಗೂ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ.</p>

<p>ಗದಗ ಮಾರುಕಟ್ಟೆಗೆ ಕಳೆದೆರಡು ದಿನಗಳಿಂದ ವ್ಯಾಪಕ ಪ್ರಮಾಣ ಈರುಳ್ಳಿ ಮಾರಾಟಕ್ಕೆ ಬರುತ್ತಿದೆ. ಅತಿಯಾದ ಮಳೆಯಿಂದಾಗಿ ಗುಣಮಟ್ಟದ ಈರುಳ್ಳಿ ಬರುತ್ತಿಲ್ಲ. ಅದೇ ಕಳಪೆ ಗುಣಮಟ್ಟದ ಈರುಳ್ಳಿಗೆ ಭಾರೀ ಬೇಡಿಕೆ ಬಂದಿರುವುದು ಎಲ್ಲರಿಗೂ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ.</p>

ಗದಗ ಮಾರುಕಟ್ಟೆಗೆ ಕಳೆದೆರಡು ದಿನಗಳಿಂದ ವ್ಯಾಪಕ ಪ್ರಮಾಣ ಈರುಳ್ಳಿ ಮಾರಾಟಕ್ಕೆ ಬರುತ್ತಿದೆ. ಅತಿಯಾದ ಮಳೆಯಿಂದಾಗಿ ಗುಣಮಟ್ಟದ ಈರುಳ್ಳಿ ಬರುತ್ತಿಲ್ಲ. ಅದೇ ಕಳಪೆ ಗುಣಮಟ್ಟದ ಈರುಳ್ಳಿಗೆ ಭಾರೀ ಬೇಡಿಕೆ ಬಂದಿರುವುದು ಎಲ್ಲರಿಗೂ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ.

45
<p>ದರದಲ್ಲಿ ಆಗಿರುವ ಭಾರೀ ಹೆಚ್ಚಳದ ಬಿಸಿ ನೇರವಾಗಿ ಗ್ರಾಹಕರಿಗೆ ತಟ್ಟಿದ್ದು, ನಿತ್ಯವೂ ಮನೆಯಲ್ಲಿ ಬೇಕಾಗುವ ಈ ತರಕಾರಿಗೆ ಇಷ್ಟೊಂದು ಬೆಲೆ ನೀಡಿ ಖರೀದಿಸುವಂತಾಗಿದೆ. ಒಂದೆಡೆ ಅತಿಯಾದ ಮಳೆಯಿಂದ ಕೊಳೆತಿರುವ ಈರುಳ್ಳಿ ಬಿತ್ತನೆ ಮಾಡಿದ್ದ ರೈತರ ಪಾಲಿಗೆ ಕಣ್ಣೀರುಳ್ಳಿ ಆಗಿದ್ದರೆ, ಇತ್ತ ನಿತ್ಯವೂ ಉಪಯೋಗಿಸುವ ಗ್ರಾಹಕರಿಗೆ ಇದು ಕಣ್ಣೀರುಳ್ಳಿಯೇ ಆಗಿದೆ. ಹಾಗಾಗಿ ಪ್ರಸಕ್ತ ಸಾಲಿನ ಅತಿಯಾದ ಮಳೆ ರೈತರಿಗೆ ಹಾಗೂ ಗ್ರಾಹಕರಿಗೂ ತೀವ್ರ ನಷ್ಟವನ್ನುಂಟು ಮಾಡಿದೆ.</p>

<p>ದರದಲ್ಲಿ ಆಗಿರುವ ಭಾರೀ ಹೆಚ್ಚಳದ ಬಿಸಿ ನೇರವಾಗಿ ಗ್ರಾಹಕರಿಗೆ ತಟ್ಟಿದ್ದು, ನಿತ್ಯವೂ ಮನೆಯಲ್ಲಿ ಬೇಕಾಗುವ ಈ ತರಕಾರಿಗೆ ಇಷ್ಟೊಂದು ಬೆಲೆ ನೀಡಿ ಖರೀದಿಸುವಂತಾಗಿದೆ. ಒಂದೆಡೆ ಅತಿಯಾದ ಮಳೆಯಿಂದ ಕೊಳೆತಿರುವ ಈರುಳ್ಳಿ ಬಿತ್ತನೆ ಮಾಡಿದ್ದ ರೈತರ ಪಾಲಿಗೆ ಕಣ್ಣೀರುಳ್ಳಿ ಆಗಿದ್ದರೆ, ಇತ್ತ ನಿತ್ಯವೂ ಉಪಯೋಗಿಸುವ ಗ್ರಾಹಕರಿಗೆ ಇದು ಕಣ್ಣೀರುಳ್ಳಿಯೇ ಆಗಿದೆ. ಹಾಗಾಗಿ ಪ್ರಸಕ್ತ ಸಾಲಿನ ಅತಿಯಾದ ಮಳೆ ರೈತರಿಗೆ ಹಾಗೂ ಗ್ರಾಹಕರಿಗೂ ತೀವ್ರ ನಷ್ಟವನ್ನುಂಟು ಮಾಡಿದೆ.</p>

ದರದಲ್ಲಿ ಆಗಿರುವ ಭಾರೀ ಹೆಚ್ಚಳದ ಬಿಸಿ ನೇರವಾಗಿ ಗ್ರಾಹಕರಿಗೆ ತಟ್ಟಿದ್ದು, ನಿತ್ಯವೂ ಮನೆಯಲ್ಲಿ ಬೇಕಾಗುವ ಈ ತರಕಾರಿಗೆ ಇಷ್ಟೊಂದು ಬೆಲೆ ನೀಡಿ ಖರೀದಿಸುವಂತಾಗಿದೆ. ಒಂದೆಡೆ ಅತಿಯಾದ ಮಳೆಯಿಂದ ಕೊಳೆತಿರುವ ಈರುಳ್ಳಿ ಬಿತ್ತನೆ ಮಾಡಿದ್ದ ರೈತರ ಪಾಲಿಗೆ ಕಣ್ಣೀರುಳ್ಳಿ ಆಗಿದ್ದರೆ, ಇತ್ತ ನಿತ್ಯವೂ ಉಪಯೋಗಿಸುವ ಗ್ರಾಹಕರಿಗೆ ಇದು ಕಣ್ಣೀರುಳ್ಳಿಯೇ ಆಗಿದೆ. ಹಾಗಾಗಿ ಪ್ರಸಕ್ತ ಸಾಲಿನ ಅತಿಯಾದ ಮಳೆ ರೈತರಿಗೆ ಹಾಗೂ ಗ್ರಾಹಕರಿಗೂ ತೀವ್ರ ನಷ್ಟವನ್ನುಂಟು ಮಾಡಿದೆ.

55
<p>ಮುಂಗಾರಿನಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಈರುಳ್ಳಿ ಬಿತ್ತನೆ ಮಾಡಿದ್ದೆವು. ಆದರೆ, ಅತಿಯಾದ ಪ್ರಮಾಣದಲ್ಲಿ ಮಳೆಯಾಗಿ ಈರುಳ್ಳಿ ಸಂಪೂರ್ಣ ಕೊಳೆತು ಹೋಗಿದೆ. ನಮ್ಮ ಮನೆಗೆ ನಾವು ಈರುಳ್ಳಿ ಕೊಂಡು ತಂದು ತಿನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೊಲದಲ್ಲಿನ ಎಲ್ಲ ಈರುಳ್ಳಿ ಸಂಪೂರ್ಣವಾಗಿ ನೆನೆದು ಕೊಳೆತು ಹೋಗಿವೆ. ಮಾರುಕಟ್ಟೆಯಲ್ಲಿ ಮಾತ್ರ ಉತ್ತಮ ಬೆಲೆ ಇದೆ. ಆದರೆ ಮಾರಾಟ ಮಾಡಲು ಈರುಳ್ಳಿಯೇ ಉಳಿದಿಲ್ಲ. ಅಳಿದುಳಿದ ಅಲ್ಪ ಈರುಳ್ಳಿ ಮಾರಾಟಕ್ಕೆ ತಂದರೆ ವ್ಯಾಪಾರಸ್ಥರು ಹಸಿ ಈರುಳ್ಳಿಗೆ ಹೆಚ್ಚಿನ ದರವಿಲ್ಲ ಎಂದು ಎಂದಿನಂತೆ ಶೋಷಣೆ ಮಾಡುತ್ತಿದ್ದಾರೆ ಎಂದು ಸವಡಿ ಗ್ರಾಮದ ರೈತರಾದ ಸುರೇಶ ಜಿಗಳೂರ, ರಾಮನಗೌಡ ಅರಹುಣಸಿ ಅವರು ತಿಳಿಸಿದ್ದಾರೆ.</p>

<p>ಮುಂಗಾರಿನಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಈರುಳ್ಳಿ ಬಿತ್ತನೆ ಮಾಡಿದ್ದೆವು. ಆದರೆ, ಅತಿಯಾದ ಪ್ರಮಾಣದಲ್ಲಿ ಮಳೆಯಾಗಿ ಈರುಳ್ಳಿ ಸಂಪೂರ್ಣ ಕೊಳೆತು ಹೋಗಿದೆ. ನಮ್ಮ ಮನೆಗೆ ನಾವು ಈರುಳ್ಳಿ ಕೊಂಡು ತಂದು ತಿನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೊಲದಲ್ಲಿನ ಎಲ್ಲ ಈರುಳ್ಳಿ ಸಂಪೂರ್ಣವಾಗಿ ನೆನೆದು ಕೊಳೆತು ಹೋಗಿವೆ. ಮಾರುಕಟ್ಟೆಯಲ್ಲಿ ಮಾತ್ರ ಉತ್ತಮ ಬೆಲೆ ಇದೆ. ಆದರೆ ಮಾರಾಟ ಮಾಡಲು ಈರುಳ್ಳಿಯೇ ಉಳಿದಿಲ್ಲ. ಅಳಿದುಳಿದ ಅಲ್ಪ ಈರುಳ್ಳಿ ಮಾರಾಟಕ್ಕೆ ತಂದರೆ ವ್ಯಾಪಾರಸ್ಥರು ಹಸಿ ಈರುಳ್ಳಿಗೆ ಹೆಚ್ಚಿನ ದರವಿಲ್ಲ ಎಂದು ಎಂದಿನಂತೆ ಶೋಷಣೆ ಮಾಡುತ್ತಿದ್ದಾರೆ ಎಂದು ಸವಡಿ ಗ್ರಾಮದ ರೈತರಾದ ಸುರೇಶ ಜಿಗಳೂರ, ರಾಮನಗೌಡ ಅರಹುಣಸಿ ಅವರು ತಿಳಿಸಿದ್ದಾರೆ.</p>

ಮುಂಗಾರಿನಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಈರುಳ್ಳಿ ಬಿತ್ತನೆ ಮಾಡಿದ್ದೆವು. ಆದರೆ, ಅತಿಯಾದ ಪ್ರಮಾಣದಲ್ಲಿ ಮಳೆಯಾಗಿ ಈರುಳ್ಳಿ ಸಂಪೂರ್ಣ ಕೊಳೆತು ಹೋಗಿದೆ. ನಮ್ಮ ಮನೆಗೆ ನಾವು ಈರುಳ್ಳಿ ಕೊಂಡು ತಂದು ತಿನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೊಲದಲ್ಲಿನ ಎಲ್ಲ ಈರುಳ್ಳಿ ಸಂಪೂರ್ಣವಾಗಿ ನೆನೆದು ಕೊಳೆತು ಹೋಗಿವೆ. ಮಾರುಕಟ್ಟೆಯಲ್ಲಿ ಮಾತ್ರ ಉತ್ತಮ ಬೆಲೆ ಇದೆ. ಆದರೆ ಮಾರಾಟ ಮಾಡಲು ಈರುಳ್ಳಿಯೇ ಉಳಿದಿಲ್ಲ. ಅಳಿದುಳಿದ ಅಲ್ಪ ಈರುಳ್ಳಿ ಮಾರಾಟಕ್ಕೆ ತಂದರೆ ವ್ಯಾಪಾರಸ್ಥರು ಹಸಿ ಈರುಳ್ಳಿಗೆ ಹೆಚ್ಚಿನ ದರವಿಲ್ಲ ಎಂದು ಎಂದಿನಂತೆ ಶೋಷಣೆ ಮಾಡುತ್ತಿದ್ದಾರೆ ಎಂದು ಸವಡಿ ಗ್ರಾಮದ ರೈತರಾದ ಸುರೇಶ ಜಿಗಳೂರ, ರಾಮನಗೌಡ ಅರಹುಣಸಿ ಅವರು ತಿಳಿಸಿದ್ದಾರೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ಪ್ರಾಧ್ಯಾಪಕ ವೃತ್ತಿಯಿಂದ ಭಾಸ್ಕರ ಹೆಗಡೆ ನಿವೃತ್ತಿ, ನಾಳೆ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’
Recommended image2
ಬಂಡೀಪುರ: ರಾತ್ರಿ ಸಂಚಾರ ನಡೆಸಲು ಸುರಂಗ ಮಾರ್ಗ?
Recommended image3
ಬ್ಯಾನರ್ ಗಲಾಟೆ ಕೇಸ್‌: ಚಾರ್ಜ್ ಕೊಡದೆ ಪಟ್ಟು ಹಿಡಿದ ಡಿವೈಎಸ್‌ಪಿ? ಐಪಿಎಸ್ ಅಧಿಕಾರಿ ವರ್ಗಾವಣೆಯೇ ರದ್ದು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved