MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಒಪನ್ ಮ್ಯೂಸಿಯಂ ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ

ಒಪನ್ ಮ್ಯೂಸಿಯಂ ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 3000ಕ್ಕೂ ಅಧಿಕ ಪುರಾತನ ಕುರುಹುಗಳು ಪತ್ತೆಯಾಗಿದ್ದು, ಇದು ದೇಶದಲ್ಲೇ ಅತಿ ಹೆಚ್ಚು ಪ್ರಾಚ್ಯಾವಶೇಷಗಳನ್ನು ಹೊಂದಿದ ಗ್ರಾಮವಾಗುವತ್ತ ಸಾಗಿದೆ. ಇತ್ತೀಚಿನ ಉತ್ಖನನದಲ್ಲಿ 9-10ನೇ ಶತಮಾನದ ರಾಷ್ಟ್ರಕೂಟರ ಕಾಲದ ಅಪರೂಪದ ವೀರಗಲ್ಲು ಕೂಡ ಪತ್ತೆಯಾಗಿದೆ

2 Min read
Author : Kannadaprabha News
Published : May 11 2026, 06:35 AM IST
Share this Photo Gallery
  • FB
  • TW
  • Linkdin
  • Whatsapp
18
 3000ಕ್ಕೂ ಅಧಿಕ ಪುರಾತನ ಕುರುಹುಗಳು ಪತ್ತೆ
Image Credit : Asianet News

3000ಕ್ಕೂ ಅಧಿಕ ಪುರಾತನ ಕುರುಹುಗಳು ಪತ್ತೆ

ಕಲೆ ಮತ್ತು ವಾಸ್ತುಶಿಲ್ಪದ ತವರೂರು, ಐತಿಹಾಸಿಕ ಲಕ್ಕುಂಡಿ ಗ್ರಾಮವು ಇದೀಗ ದೇಶದಲ್ಲೇ ಅತಿ ಹೆಚ್ಚು ಪ್ರಾಚ್ಯಾವಶೇಷಗಳನ್ನು ಹೊಂದಿದ ಮೊದಲ ಗ್ರಾಮ ಎಂಬ ಐತಿಹಾಸಿಕ ದಾಖಲೆ ನಿರ್ಮಿಸುವ ಕಾಲ ಸನ್ನಿಹಿತವಾಗಿದೆ. ಈವರೆಗಿನ ಅನ್ವೇಷಣೆ ಹಾಗೂ ಇತ್ತೀಚಿನ ಪ್ರಾಚ್ಯಾವಶೇಷ ಅನ್ವೇಷಣೆ ಮಾಸಾಚರಣೆಯ ಫಲವಾಗಿ ಲಕ್ಕುಂಡಿಯಲ್ಲಿ ಈಗ ಒಟ್ಟು 3000ಕ್ಕೂ ಅಧಿಕ ಪುರಾತನ ಕುರುಹುಗಳು ಪತ್ತೆಯಾಗಿದ್ದು, ಇಡೀ ದೇಶದ ಗಮನ ಸೆಳೆಯುತ್ತಿದೆ.

Add Asianetnews Kannada as a Preferred SourcegooglePreferred
28
​ವಾರಂಗಲ್ ಹಿಂದಿಕ್ಕಿದ ಲಕ್ಕುಂಡಿ
Image Credit : Asianet News

​ವಾರಂಗಲ್ ಹಿಂದಿಕ್ಕಿದ ಲಕ್ಕುಂಡಿ

​ಇದುವರೆಗೆ ತೆಲಂಗಾಣದ ವಾರಂಗಲ್ ದೇಶದ ಮೊದಲ ಒಪನ್ ಮ್ಯೂಸಿಯಂ ಎಂಬ ಹೆಗ್ಗಳಿಕೆ ಹೊಂದಿತ್ತು. ಅಲ್ಲಿ ಸುಮಾರು 2 ಸಾವಿರ ಪ್ರಾಚ್ಯಾವಶೇಷಗಳಿದ್ದವು. ಲಕ್ಕುಂಡಿಯಲ್ಲಿಗ ಈ ಸಂಖ್ಯೆ 3 ಸಾವಿರ ದಾಟುವ ಹಂತದಲ್ಲಿದೆ. ಮೊದಲ ಹಂತದಲ್ಲಿ 1500 ಅವಶೇಷಗಳನ್ನು ಗುರುತಿಸಲಾಗಿತ್ತು. ಇತ್ತೀಚಿನ ವಿಶೇಷ ಅನ್ವೇಷಣಾ ಕಾರ್ಯದಲ್ಲಿ ಮತ್ತೆ 1500 ವಸ್ತುಗಳು ಪತ್ತೆಯಾಗಿವೆ. ಈ ಮೂಲಕ ಲಕ್ಕುಂಡಿ ಅಧಿಕೃತವಾಗಿ ದೇಶದ ಪ್ರಾಚ್ಯಾವಶೇಷಗಳ ರಾಜಧಾನಿ ಎಂಬ ಪಟ್ಟಕ್ಕೇರುವ ಸಾಧ್ಯತೆ ನಿಚ್ಚಳವಾಗಿದೆ.

Related Articles

Related image1
ಲಕ್ಕುಂಡಿ ಚಿನ್ನದ ನಿಧಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್​: ಇದು ಎಂಟು ಕೋಟಿಯ ರಹಸ್ಯ! 2 ತಿಂಗಳ ಬಳಿಕ ನಡೆದದ್ದೇನು?
Related image2
ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ಸರ್ಕಾರದಿಂದ ಸಿಕ್ತು ಬಂಪರ್ ಗಿಫ್ಟ್
38
ಅಪರೂಪದ ವೀರಗಲ್ಲು ಅನಾವರಣ
Image Credit : Asianet News

ಅಪರೂಪದ ವೀರಗಲ್ಲು ಅನಾವರಣ

ಇತ್ತೀಚಿನ ಉತ್ಖನನದ ವೇಳೆ ಲಕ್ಕುಂಡಿಯ ಕುಂಬಾರ ಬಾವಿಯ ಬಳಿ 9- 10ನೇ ಶತಮಾನದ ರಾಷ್ಟ್ರಕೂಟರ ಕಾಲದ ಅತ್ಯಂತ ಅಪರೂಪದ ವೀರಗಲ್ಲು ಪತ್ತೆಯಾಗಿದೆ. ಇದು ಕೇವಲ ಕಲ್ಲಲ್ಲ, ಅಂದಿನ ಶೌರ್ಯ ಮತ್ತು ಸಂಸ್ಕೃತಿಯ ಜೀವಂತ ಸಾಕ್ಷಿಯಾಗಿವೆ. ಈ ವೀರಗಲ್ಲು ನಾಲ್ಕು ಹಂತದ ಕೆತ್ತನೆಗಳನ್ನು ಹೊಂದಿದೆ. ಕೆಳಗಿನ ಪಟ್ಟಿಕೆಯಲ್ಲಿ ಯುದ್ಧದ ದೃಶ್ಯವಿದ್ದು (ಮಣ್ಣಿನಲ್ಲಿ ಹೂತಿದೆ), ಎರಡನೇ ಪಟ್ಟಿಕೆಯಲ್ಲಿ ಅಪ್ಸರೆಯರು ವೀರನನ್ನು ಸ್ವರ್ಗಕ್ಕೆ ಕರೆದೊಯ್ಯುತ್ತಿರುವ ಮನಮೋಹಕ ದೃಶ್ಯವಿದೆ.

48
ಸಂಗೀತ ವಾದ್ಯಗಳ ಕೆತ್ತನೆ
Image Credit : Asianet News

ಸಂಗೀತ ವಾದ್ಯಗಳ ಕೆತ್ತನೆ

ಸಂಗೀತ ವಾದ್ಯಗಳ ಕೆತ್ತನೆ ಅಂದಿನ ವೈಭವವನ್ನು ಸಾರುತ್ತಿದೆ. ಮೂರನೇ ಪಟ್ಟಿಕೆಯಲ್ಲಿ ವೀರನು ಸ್ವರ್ಗದಲ್ಲಿ ಆಸೀನನಾಗಿದ್ದು, ಚಾಮರಧಾರಿಗಳು ಸೇವೆಯಲ್ಲಿ ನಿಂತಿರುವುದು ಕಂಡುಬರುತ್ತದೆ. ಮೇಲ್ಭಾಗದ ಪಟ್ಟಿಕೆಯಲ್ಲಿ ಸೂರ್ಯ- ಚಂದ್ರ ಹಾಗೂ ಶಿವಲಿಂಗಕ್ಕೆ ಯತಿಯೊಬ್ಬರು ಪೂಜೆ ಸಲ್ಲಿಸುತ್ತಿರುವ ಚಿತ್ರಣವಿದ್ದು, ಇದು ಶಾಸನೋಕ್ತವಾದ ವಿಶೇಷ ವೀರಗಲ್ಲಾಗಿದೆ.

58
ಅವಿರತ ಶ್ರಮ
Image Credit : Asianet News

ಅವಿರತ ಶ್ರಮ

ಲಕ್ಕುಂಡಿಯ ಈ ಜಾಗತಿಕ ಮಟ್ಟದ ಸಾಧನೆಯ ಹಿಂದೆ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರ ಅವಿರತ ಶ್ರಮವಿದೆ. ಲಕ್ಕುಂಡಿಯನ್ನು ವಿಶ್ವ ಪರಂಪರೆಯ ತಾಣವನ್ನಾಗಿ ರೂಪಿಸುವ ಅವರ ಕನಸು ಈಗ ನನಸಾಗುತ್ತಿದೆ. ಅವರ ವಿಶೇಷ ಆಸಕ್ತಿಯಿಂದಾಗಿ ಇಲ್ಲಿ ನಿರಂತರ ಅನ್ವೇಷಣೆ, ಮಾರ್ಕಿಂಗ್ ಹಾಗೂ ಸಂರಕ್ಷಣಾ ಕಾರ್ಯಗಳು ಯುದ್ಧೋಪಾದಿಯಲ್ಲಿ ನಡೆಯುತ್ತಿವೆ ಎಂದು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸಿದ್ದಲಿಂಗೇಶ್ವರ ಪಾಟೀಲ ತಿಳಿಸಿದರು.

68
ಕೈಬೀಸಿ ಕರೆಯುತ್ತಿದೆ ಲಕ್ಕುಂಡಿ
Image Credit : Asianet News

ಕೈಬೀಸಿ ಕರೆಯುತ್ತಿದೆ ಲಕ್ಕುಂಡಿ

​ಒಟ್ಟಾರೆಯಾಗಿ ಲಕ್ಕುಂಡಿಯು ಕೇವಲ ಗದಗ ಜಿಲ್ಲೆಯ ಹೆಮ್ಮೆಯಷ್ಟೇ ಅಲ್ಲದೆ, ಭಾರತದ ಸಾಂಸ್ಕೃತಿಕ ಭೂಪಟದಲ್ಲಿ ಅಗ್ರಸ್ಥಾನಕ್ಕೇರಿದೆ. ಇಲ್ಲಿನ ಪ್ರತಿಯೊಂದು ಕಲ್ಲು ಈಗ ಇತಿಹಾಸದ ಕಥೆ ಹೇಳುತ್ತಿದ್ದು, ಪ್ರವಾಸಿಗರನ್ನು ಹಾಗೂ ಸಂಶೋಧಕರನ್ನು ಕೈಬೀಸಿ ಕರೆಯುತ್ತಿದೆ. ಇಲ್ಲಿನ ಮಣ್ಣಿನ ಹುದುಗಿ ಹೋಗಿರುವ ಇತಿಹಾಸ ಅಗೆದಷ್ಟು ಆಳಕ್ಕಿಳಿಯುತ್ತಿದೆ ಎಂದು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

78
ಯುನೆಸ್ಕೋ ಪಟ್ಟಿ
Image Credit : Kannada Prabha

ಯುನೆಸ್ಕೋ ಪಟ್ಟಿ

ಲಕ್ಕುಂಡಿಯನ್ನು ನಾವೆಲ್ಲರೂ ಇಲ್ಲಿಯವರೆಗೂ ನೋಡುತ್ತಿದ್ದ ದೃಷ್ಟಿಕೋನವೇ ಬೇರೆ ಇತ್ತು. ಪ್ರಾಚ್ಯಾವಶೇಷಗಳ ಅನ್ವೇಷಣೆಯ ನಂತರ ಜಗತ್ತೇ ಕಣ್ಣರಳಿಸಿ ನೋಡುವಂತಾಗಿದೆ. ದೇಶ ವಿದೇಶದ ಇತಿಹಾಸ ತಜ್ಞರು ಸಂಶೋಧನಾ ದೃಷ್ಟಿಯಿಂದ ಲಕ್ಕುಂಡಿ ಬರುವಂತಾಗಿದೆ. ಲಕ್ಕುಂಡಿ ಯುನೆಸ್ಕೋ ಪಟ್ಟಿಗೆ ಸೇರುವ ಎಲ್ಲ ಅರ್ಹತೆ ಹೊಂದಿದೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ತಿಳಿಸಿದರು.

88
ಮ್ಯೂಜಿಯಂ ನಿರ್ಮಾಣವಾಗಲಿ
Image Credit : Asianet News

ಮ್ಯೂಜಿಯಂ ನಿರ್ಮಾಣವಾಗಲಿ

ದೇಶದಲ್ಲಿಯೇ ಅತ್ಯುತ್ಕೃಷ್ಟ, ಪ್ರಾಚ್ಯಾವಶೇಷಗಳು ಲಕ್ಕುಂಡಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಜೋಡಿಸುವ ಕಾರ್ಯವೂ ನಡೆದಿದೆ. ಆದರೆ ಪ್ರಸ್ತುತ ದೇಶದಲ್ಲಿಯೇ ಅತಿ ದೊಡ್ಡದು ಎನ್ನಲಾದ ವಾರಂಗಲ್ಲನಲ್ಲಿರುವ ತೆರೆದ ಮ್ಯೂಜಿಯಂಗಿಂತಲೂ ಉತ್ತಮವಾದ ಸೌಲಭ್ಯ ಹೊಂದಿರುವ ಒಪನ್ ಮ್ಯೂಜಿಯಂ ಲಕ್ಕುಂಡಿಯಲ್ಲಿ ನಿರ್ಮಾಣವಾಗಬೇಕಿದೆ. ಅಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಒಂದು ವಿಶೇಷ ಅನುಭವ ಮತ್ತು ಇತಿಹಾಸ ಕಲ್ಪನೆ ದೊರೆಯುವಂತಹ ಮ್ಯೂಜಿಯಂ ನಿರ್ಮಾಣವಾಗಲಿ ಎನ್ನುವುದು ಬಹುತೇಕರ ಆಸೆಯಾಗಿದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಲಕ್ಕುಂಡಿ
ಗದಗ
ಕರ್ನಾಟಕ ಸುದ್ದಿ
ಹೆಚ್. ಕೆ. ಪಾಟೀಲ
ಬಂಗಾರದ ನಿಧಿ

Latest Videos
Recommended Stories
Recommended image1
ಸರ್ಕಾರಿ ಗೌರವದ ಜತೆ ಚಳ್ಳಕೆರೆಯಲ್ಲಿ ಇಂದು ಸಚಿವ ಸುಧಾಕರ್‌ ಅಂತ್ಯಕ್ರಿಯೆ
Recommended image2
ಹೈದರಾಬಾದ್ ಉದ್ಯಮಿ ಅಂಜನಾದ್ರಿಗೆ ಅರ್ಪಿಸಿದ ಚಿನ್ನದ ಕಿರೀಟ, ಗದೆ ಅಸಲಿಯತ್ತು ಬಯಲು
Recommended image3
ಮಳೆ ನಿಂತು 10 ದಿನ ಕಳೆದ್ರೂ ಬಿದ್ದ ಮರಗಳ ಸಂಗ್ರಹಕ್ಕೆ ಜಿಬಿಎ ಪರದಾಟ; ಅಗತ್ಯ ಜಾಗವೇ ಇಲ್ಲ
Related Stories
Recommended image1
ಲಕ್ಕುಂಡಿ ಚಿನ್ನದ ನಿಧಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್​: ಇದು ಎಂಟು ಕೋಟಿಯ ರಹಸ್ಯ! 2 ತಿಂಗಳ ಬಳಿಕ ನಡೆದದ್ದೇನು?
Recommended image2
ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ಸರ್ಕಾರದಿಂದ ಸಿಕ್ತು ಬಂಪರ್ ಗಿಫ್ಟ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved