ಕೋವಿಡ್ ವಿರುದ್ಧ ಹೋರಾಟ: ಕೊರೋನಾ ವಾರಿಯರ್ಸ್ಗೆ ಪುಷ್ಪಾರ್ಚನೆ
ಕೊಪ್ಪಳ(ಮೇ.04): ನಗರದ ಸಭೆಯ ಸದಸ್ಯರ ಸಹಯೋಗದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಕೊರೋನಾ ಕುರಿತು ಜಾಗೃತಿಯನ್ನು ಮೂಡಿಸಲಾಯಿತು. ಅಲ್ಲದೆ ಲಾಕ್ಡೌನ್ ವಿಸ್ತರಣೆಯಾಗಿರುವ ಕುರಿತು ಜಾಗೃತಿಯನ್ನು ಮೂಡಿಸಲಾಯಿತು. ಇದೇ ವೇಳೆಯಲ್ಲಿ ಡಿವೈಎಸ್ಪಿ ವೆಂಕಟಪ್ಪ ನಾಯಕ, ನಗರ ಠಾಣೆಯ ಪಿಐ ಮೌನೇಶ ಸೇರಿದಂತೆ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಲಾಯಿತು.
ಕೊಪ್ಪಳ ನಗರಸಭೆ ಸದಸ್ಯರ ಸಹಯೋಗದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಕೊರೋನಾ ಕುರಿತು ಜಾಗೃತಿ ಅಭಿಯಾನ
ನಗರದ ಜವಾಹರ ರಸ್ತೆ ಸೇರಿದಂತೆ ಪ್ರಮುಖ ಬೀದಿಯುದ್ದಕ್ಕೂ ಸುತ್ತಾಡಿ ಜಾಗೃತಿ ಮೂಡಿಸಲಾಯಿತು
ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಂಕಟಪ್ಪ ನಾಯಕ, ನಗರ ಠಾಣೆಯ ಪಿಐ ಮೌನೇಶ ಸೇರಿದಂತೆ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪುಷ್ಪಾರ್ಚನೆ ಮಾಡಿ, ಗೌರವ
ಕೊರೋನಾ ನಿಗ್ರಹದಲ್ಲಿ ಹೋರಾಟ ಮಾಡಿ, ಕೊಪ್ಪಳ ಜಿಲ್ಲೆಗೆ ಒಂದೇ ಒಂದು ಪಾಸಿಟಿವ್ ಕೇಸ್ ಬರದಂತೆ ಮಾಡಿದ ವಾರಿಯರ್ಸ್
ತಮ್ಮ ಪ್ರಾಣದ ಹಂಗು ತೊರೆದು ಹೋರಾಟ ಮಾಡುತ್ತಿರುವ ಪೊಲೀಸರು
ಆರಕ್ಷಕರು ರಸ್ತೆಯಲ್ಲಿ ಪಥಸಂಚಲನ ಮಾಡುವ ವೇಳೆಯಲ್ಲಿ ದಾರಿಯುದ್ದಕ್ಕೂ ಪುಷ್ಪಾರ್ಚನೆ ಮಾಡಲಾಯಿತು
ಮಾಸ್ಕ್ ಧರಿಸಿಯೇ ಮನೆಯಿಂದ ಆಚೆ ಬರಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದ್ದು, ಇದನ್ನು ಅನುಷ್ಠಾನ ಮಾಡುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ಕುಮಾರ ಆದೇಶ
ಮಾಸ್ಕ್ ಧರಿಸದೆ ಹೊರ ಬಂದರೆ ಗ್ರಾಮೀಣ ಪ್ರದೇಶದಲ್ಲಿ 100 ರು. ದಂಡ ಹಾಗೂ ನಗರ ಪ್ರದೇಶದಲ್ಲಿ 200 ರು. ದಂಡ
ನಗರ ಪ್ರದೇಶದಲ್ಲಿ ಪೊಲೀಸ್ ಇಲಾಖೆಗೆ ದಂಡ ವಿಧಿಸುವ ಅಧಿಕಾರ ನೀಡಿದ್ದರೆ ಗ್ರಾಮೀಣ ಪ್ರದೇಶದಲ್ಲಿ ಪಿಡಿಓಗಳಿಗೆ ಅಧಿಕಾರ
ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಬೇಕು, ದಂಡ ನೀಡಲು ನಿರಾಕರಿಸಿದರೆ ಪ್ರಕರಣ ದಾಖಲು ಮಾಡುವುದಕ್ಕೆ ಅವಕಾಶ ನೀಡಲಾಗಿದೆ