ಕೊರೋನಾದಿಂದ ಅನ್ನದಾತನ ಬದುಕು ಮೂರಾಬಟ್ಟಿ: ಕಟಾವಿಗೆ ಬಂದ ಹೂಕೋಸು ಹರಗಿದ ರೈತ
ಕೊಪ್ಪಳ(ಏ.16): ದೇಶಾದ್ಯಂತ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಹಾಗೂ ಬೆಲೆ ಸಿಗದಿದ್ದರಿಂದ ರೈತನೊಬ್ಬ 3 ಎಕರೆ ಹೊಲದಲ್ಲಿ ಹಾಕಿದ್ದ ಹೂಕೋಸನ್ನು ಹರಗಿದ ಘಟನೆ ಕೊಪ್ಪಳ ತಾಲೂಕಿನ ಓಜನಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮಾರು 1 ಲಕ್ಷ ರುಪಾಯಿ ಖರ್ಚು ಮಾಡಿ ಬೆಳೆದಿದ್ದ ಹೂಕೋಸು ಒಳ್ಳೆ ಮಾರುಕಟ್ಟೆ ಸಿಕ್ಕಿದ್ದರೇ ಬರೋಬ್ಬರಿ ನಾಲ್ಕೈದು ಲಕ್ಷ ರುಪಾಯಿ ಆದಾಯ ಬರುತ್ತಿತ್ತು.
ಕೊರೋನಾ ಮಹಾಮಾರಿಯ ಅಟ್ಟಹಾಸದಿಂದ ರೈತರ ಪಾಡು ಹೇಳತೀರದಾಗಿದೆ
ಮಾರುಕಟ್ಟೆ ಅತಂತ್ರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಾದ ರೈತರ ಚಿಂತೆ
ಚಿನ್ನಪ್ಪ ಮೇಟಿ ಅವರ 3 ಎಕರೆ ಹೊಲದಲ್ಲಿ ಹಾಕಿದ್ದ ಹೂಕೋಸನ್ನು ಕೇಳುವವರೇ ಇಲ್ಲದಂತಾಗಿದೆ
ವಿಧಿಯಿಲ್ಲದೆ ಹೂಕೋಸು ಸಮೇತ ಹರಗಿದ ರೈತ ಚಿನ್ನಪ್ಪ ಮೇಟಿ