ಕಲಬುರಗಿ: ಕೊರೋನಾ ಆತಂಕದ ಮಧ್ಯೆ ಚಿರತೆ ಪ್ರತ್ಯಕ್ಷ, ಬೆಚ್ಚಿಬಿದ್ದ ಗ್ರಾಮಸ್ಥರು..!
ಕಲಬುರಗಿ(ಮೇ.01): ಕಬ್ಬಿನ ಗದ್ದೆಗಳಲ್ಲಿ ಚಿರತೆ ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಮೂಡಿಸಿದ ಘಟನೆ ಕಲಬುರಗಿ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ. ಕಬ್ಬಿನ ಗದ್ದೆಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಹೊಲದಲ್ಲಿ ಕೆಲಸ ಮಾಡುವವರು ಬೆಚ್ಚಿಬಿದ್ದಿದ್ದಾರೆ. ಚಿರತೆ ಸೆರೆ ಹಿಡಿಯಲು ನಾಯಿ ಇರುವ ಬೋನ್ ಬಳಸಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.
ಕಲಬುರಗಿ ತಾಲೂಕಿನ ಬಬಲಾದ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡ ಚಿರತೆ
ಕೊರೋನಾ ಆತಂಕ ಹೆಚ್ಚುತ್ತಿರುವಾಗಲೇ ಇತ್ತ ಕಬ್ಬಿನ ಗದ್ದೆಗಳಲ್ಲಿ ಚಿರತೆ ಪ್ರತ್ಯಕ್ಷವಾಗಿ ಭೀತಿ ಮೂಡಿಸಿದೆ
ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆ 20 ಕ್ಕೂ ಹೆಚ್ಚು ಸಿಬ್ಬಂದಿಗಳಿರುವ ತಂಡ ಬಬಲಾದ ಗ್ರಾಮಕ್ಕೆ ಭೇಟಿ
ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿರುವ ಚಿರತೆ ಪತ್ತೆಗಾಗಿ ಡ್ರೋಣ್ ಕ್ಯಾಮೆರಾ ಬಳಕೆ