ರಾಯಚೂರು: ಮಂತ್ರಾಲಯದಲ್ಲಿ ಗುರುರಾಯರ ಮದ್ಯಾರಾಧನೆಯ ಫೋಟೋಸ್
ರಾಯಚೂರು(ಆ.06): ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಗುರುಸಾರ್ವಭೌಮರ 349ನೇ ಆರಾಧನಾ ಮಹೋತ್ಸವ ಸಪ್ತರಾತ್ರೋತ್ಸವದ ಮದ್ಯಾರಾಧನೆ ದಿನ ತಿರುಮಲ ತಿಮ್ಮಪ್ಪನ ಶೇಷವಸ್ತ್ರ ಸಮರ್ಪಣೆ, ಪ್ರಹ್ಲಾದ ರಾಯರ ಸುವರ್ಣ ರಥೋತ್ಸವ ಸೇರಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಬುಧವಾರ ಜರುಗಿದವು.

<p>ಶ್ರೀಗುರುರಾಜರ ಮದ್ಯಾರಾಧನೆ ನಿಮಿತ್ತ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ಶ್ರೀಉತ್ಸವ ರಾಯರ ಪಾದಪೂಜೆ ಮತ್ತು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಗ್ರಂಥಗಳ ಪಾರಾಯಣ, ಪಲ್ಲಕ್ಕಿ ಸೇವೆ, ವೇದ-ಮಂತ್ರಗಳ ಘೋಷಣೆ, ದಾಸವಾಣಿ, ಪ್ರವಚನಗಳು ನಡೆದವು.</p>
ಶ್ರೀಗುರುರಾಜರ ಮದ್ಯಾರಾಧನೆ ನಿಮಿತ್ತ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ಶ್ರೀಉತ್ಸವ ರಾಯರ ಪಾದಪೂಜೆ ಮತ್ತು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಗ್ರಂಥಗಳ ಪಾರಾಯಣ, ಪಲ್ಲಕ್ಕಿ ಸೇವೆ, ವೇದ-ಮಂತ್ರಗಳ ಘೋಷಣೆ, ದಾಸವಾಣಿ, ಪ್ರವಚನಗಳು ನಡೆದವು.
<p>ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಗುರುರಾಯರ ಮೂಲ ವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ-ಪೂಜೆ, ಮೂಲ ರಾಮದೇವರಿಗೆ ವಿಶೇಷ ಪೂಜೆ, ಅಲಂಕಾರ ಸಮರ್ಪಣೆ, ಹಸ್ತೋದಕ, ಮಹಾಮಂಗಳಾರತಿ ಸೇವೆ ನೆರವೇರಿಸಿದರು. </p>
ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಗುರುರಾಯರ ಮೂಲ ವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ-ಪೂಜೆ, ಮೂಲ ರಾಮದೇವರಿಗೆ ವಿಶೇಷ ಪೂಜೆ, ಅಲಂಕಾರ ಸಮರ್ಪಣೆ, ಹಸ್ತೋದಕ, ಮಹಾಮಂಗಳಾರತಿ ಸೇವೆ ನೆರವೇರಿಸಿದರು.
<p>ರಾಯರ ಮದ್ಯಾರಾಧನೆ ದಿನದಂದು ಪ್ರತಿ ವರ್ಷ ಟಿಟಿಡಿ ತಿರುಮಲ ತಿಮ್ಮಪ್ಪರ ದೇವಸ್ಥಾನದಿಂದ ಬರುವ ಶೇಷವಸ್ತ್ರವನ್ನು ಶ್ರೀಗಳು ತಮ್ಮ ತಲೆಯ ಮೇಲೆ ಹೊತ್ತು ಮೆರವಣಿಗೆ ಮೂಲಕ ಮಂಚಾಲಮ್ಮ ದೇವಿಗೆ ಬಳಿಕ ರಾಯರ ಮೂಲಬೃಂದಾವನದ ಮುಂದೆ ಇರಿಸಿ ವಿಶೇಷ ಪೂಜೆ ಸಲ್ಲಿಸಿ ಶ್ರೀಗುರುರಾಜರಿಗೆ ಸಮರ್ಪಿಸಿದರು.</p>
ರಾಯರ ಮದ್ಯಾರಾಧನೆ ದಿನದಂದು ಪ್ರತಿ ವರ್ಷ ಟಿಟಿಡಿ ತಿರುಮಲ ತಿಮ್ಮಪ್ಪರ ದೇವಸ್ಥಾನದಿಂದ ಬರುವ ಶೇಷವಸ್ತ್ರವನ್ನು ಶ್ರೀಗಳು ತಮ್ಮ ತಲೆಯ ಮೇಲೆ ಹೊತ್ತು ಮೆರವಣಿಗೆ ಮೂಲಕ ಮಂಚಾಲಮ್ಮ ದೇವಿಗೆ ಬಳಿಕ ರಾಯರ ಮೂಲಬೃಂದಾವನದ ಮುಂದೆ ಇರಿಸಿ ವಿಶೇಷ ಪೂಜೆ ಸಲ್ಲಿಸಿ ಶ್ರೀಗುರುರಾಜರಿಗೆ ಸಮರ್ಪಿಸಿದರು.
<p>ಶ್ರೀಮಠದ ಧಾರ್ಮಿಕ-ವಿಧಿವಿಧಾನಗಳಿಂದ ಗುರುರಾಜರಿಗೆ ಪಾದಪೂಜೆ ಮಾಡಲಾಯಿತು. </p>
ಶ್ರೀಮಠದ ಧಾರ್ಮಿಕ-ವಿಧಿವಿಧಾನಗಳಿಂದ ಗುರುರಾಜರಿಗೆ ಪಾದಪೂಜೆ ಮಾಡಲಾಯಿತು.
<p>ಬಳಿಕ ಮಠದ ಪ್ರಾಂಗಣದಲ್ಲಿ ಪ್ರಹ್ಲಾದರಾಜರ ವಿಗ್ರಹವನ್ನು ಸುವರ್ಣ ರಥದಲ್ಲಿರಿಸಿ ಮಹಾಮಂಗಳಾರತಿ ಸೇವೆಯನ್ನು ನೆರವೇರಿಸಿದ ಶ್ರೀಗಳು ಮೆರವಣಿಗೆಗೆ ಚಾಲನೆ ನೀಡಿದರು.</p>
ಬಳಿಕ ಮಠದ ಪ್ರಾಂಗಣದಲ್ಲಿ ಪ್ರಹ್ಲಾದರಾಜರ ವಿಗ್ರಹವನ್ನು ಸುವರ್ಣ ರಥದಲ್ಲಿರಿಸಿ ಮಹಾಮಂಗಳಾರತಿ ಸೇವೆಯನ್ನು ನೆರವೇರಿಸಿದ ಶ್ರೀಗಳು ಮೆರವಣಿಗೆಗೆ ಚಾಲನೆ ನೀಡಿದರು.
<p>ರಾಯರ ಮಠದ ಪ್ರಾಂಗಣದ ಸುತ್ತಲು ಸಾಗಿದ ರಥೋತ್ಸವ </p>
ರಾಯರ ಮಠದ ಪ್ರಾಂಗಣದ ಸುತ್ತಲು ಸಾಗಿದ ರಥೋತ್ಸವ
<p>ಕೊರೋನಾ ಮಹಾಮಾರಿ ಹಾವಳಿಯಿಂದಾಗಿ ಈ ಬಾರಿಯ ರಾಯರ ಆರಾಧನಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. </p>
ಕೊರೋನಾ ಮಹಾಮಾರಿ ಹಾವಳಿಯಿಂದಾಗಿ ಈ ಬಾರಿಯ ರಾಯರ ಆರಾಧನಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ.
<p>ಸಪ್ತರಾತ್ರೋತ್ಸವದ ಎಲ್ಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೀಮಿತ ಜನರಿಗೆ ಅವಕಾಶ </p>
ಸಪ್ತರಾತ್ರೋತ್ಸವದ ಎಲ್ಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೀಮಿತ ಜನರಿಗೆ ಅವಕಾಶ
<p>ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯಾರಾಧನೆಯಲ್ಲಿ ಪಾಲ್ಗೊಂಡ ಮಠದ ವಿದ್ವಾಂಸರು, ಪಂಡಿತರು, ಆಡಳಿತ ಅಧಿಕಾರಿ, ಸಿಬ್ಬಂದಿ ವರ್ಗ, ಗಣ್ಯರು</p>
ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯಾರಾಧನೆಯಲ್ಲಿ ಪಾಲ್ಗೊಂಡ ಮಠದ ವಿದ್ವಾಂಸರು, ಪಂಡಿತರು, ಆಡಳಿತ ಅಧಿಕಾರಿ, ಸಿಬ್ಬಂದಿ ವರ್ಗ, ಗಣ್ಯರು