MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕನಕನ ಕಿಂಡಿಯಲ್ಲಿ ಕೃಷ್ಣನ ಕಂಡು ಧನ್ಯರಾದ ಪ್ರಧಾನಿ ಮೋದಿ: ಕೃಷ್ಣ ದರ್ಶನದ ಅಪರೂಪದ ಕ್ಷಣಗಳು

ಕನಕನ ಕಿಂಡಿಯಲ್ಲಿ ಕೃಷ್ಣನ ಕಂಡು ಧನ್ಯರಾದ ಪ್ರಧಾನಿ ಮೋದಿ: ಕೃಷ್ಣ ದರ್ಶನದ ಅಪರೂಪದ ಕ್ಷಣಗಳು

ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿ, ಕನಕನ ಕಿಂಡಿಯ ಮೂಲಕ ಕೃಷ್ಣ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಉದ್ಘಾಟಿಸಿ, ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಭಾಗವಹಿಸಿದರು. 

2 Min read
Santosh Naik
Published : Nov 28 2025, 12:46 PM IST
Share this Photo Gallery
  • FB
  • TW
  • Linkdin
  • Whatsapp
111
Image Credit : Asianet News

ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕದ ಕರಾವಳಿ ಹಾಗೂ ಕೃಷ್ಣನ ಊರು ಉಡುಪಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನ ಮಾಡಿದರು.

211
Image Credit : Asianet News

ಈ ವೇಳೆ ಅವರು ಸ್ವರ್ಣ ಲೇಪಿತ ತೀರ್ಥ ಮಂಟಪ ಉದ್ಘಾಟನೆ ಕೂಡ ಮಾಡಿದ್ದಾರೆ. ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷ ಪೂರ್ಣವಾದ ಹಿನ್ನಲೆಯಲ್ಲಿ ಎರಡು ಕೋಟಿ ವೆಚ್ಚದಲ್ಲಿ ತೀರ್ಥ ಮಂಟಪಕ್ಕೆ ಸ್ವರ್ಣ ಲೇಪನ ಮಾಡಲಾಗಿದೆ. ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಲಾಯಿತು. ಮಠಾಧೀಶರು ಗಣ್ಯರು ಈ ವೇಳೆ ಉಪಸ್ಥಿತರಿದ್ದರು.ಅದಾದ ಬಳಿಕ ಮೋದಿ ಮುಖ್ಯಪ್ರಾಣ ದೇವರ ಗರುಡ ದೇವರ ದರ್ಶನ ಮಾಡಿದ್ದಾರೆ.

Related Articles

Related image1
ಉಡುಪಿ ಭೇಟಿ ವೇಳೆ ಪ್ರಧಾನಿ ಮೋದಿ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಡಿಸಿ ಸೂಚನೆ
Related image2
ನವೆಂಬರ್ 28ಕ್ಕೆ ಉಡುಪಿ ಜಿಲ್ಲೆಯ ಮೂರು ಠಾಣಾ ವ್ಯಾಪ್ತಿ ಶಾಲೆಗಳಿಗೆ ರಜೆ ಘೋಷಣೆ
311
Image Credit : Asianet News

ಆ ಬಳಿಕ ಮಠಾಧೀಶರೊಂದಿಗೆ ಪ್ರಧಾನಿ ಮೋದಿ ಮಾತುಕತೆ ಮಾಡಿದರು. ಮಠದ ಪರಿಸರದಲ್ಲಿ ವೈದಿಕರಿಂದ ಉಪನಿಷತ್ತು, ವೇದ, ಗೀತೆ ಪಠಣ ಮಾಡಲಾಗುತ್ತಿತ್ತು.

411
Image Credit : Asianet News

ದೇವರ ಮುಂದೆ ಪ್ರಧಾನಿ ಮೋದಿಯವರಿಗೆ ಕೃಷ್ಣದೇವರ ಪ್ರಸಾದ ವಿತರಣೆ ಮಾಡಲಾಯಿತು. ಆಚಾರ್ಯ ಮಧ್ವರು ಕುಳಿತ ಪೀಠವಾದ ಸರ್ವಜ್ಞ ಪೀಠ ವೀಕ್ಷಣೆ ಮಾಡಿದರು. ಪರ್ಯಾಯ ಪುತ್ತಿಗೆ ಸ್ವಾಮೀಜಿಗಳು ಆಸೀನರಾಗಿದ್ದರು. ಬಳಿಕ ಭೋಜನ ಶಾಲೆಯ ಮುಖ್ಯ ಪ್ರಾಣ ದೇವರು, ಮಠದೊಳಗಿನ ವಿವಿಧ ಗುಡಿಗಳ ದರ್ಶನ ಮಾಡಿದರು.

511
Image Credit : Asianet News

ಮಠದ ಬಳಿಕ ಮೋದಿನ ಗೀತಾ ಮಂದಿರದ ಬಳಿ ತೆರಳಿದರು.ಈ ವೇಳೆ ವಿವಿಧ ವಾದ್ಯಗಳನ್ನು ಕಲಾವಿದರು ಪ್ರದರ್ಶನ ಮಾಡಿದ್ದಾರೆ. ಗೀತಾ ಮಂದಿರದಲ್ಲಿ ನೂತನ ಅನಂತಪದ್ಮನಾಭ ದೇವರ ಪ್ರತಿಮೆ ಅನಾವರಣ ಮಾಡಿದರು. ಧ್ಯಾನ ಮಂದಿರ ದ ಗೋಡೆಯ ಶಿಲೆಯಲ್ಲಿ ಭಗವದ್ಗೀತೆ ಬರಹವನ್ನು ಕೆತ್ತಲಾಗಿದೆ. ಈ ಧ್ಯಾನ ಮಂದಿರವನ್ನು ಮೋದಿ ವೀಕ್ಷಣೆ ಮಾಡಿದರು.

611
Image Credit : Asianet News

ಈ ಹಂತದಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪುತ್ತಿಗೆ ಸುಶ್ರೀಂದ್ರ ತೀರ್ಥ ಸ್ವಾಮೀಜಿ, ಶಿರೂರು ವೇದವರ್ಧನ ತೀರ್ಥ ಸ್ವಾಮೀಜಿ, ಕುಕ್ಕೆ ಸುಬ್ರಹ್ಮಣ್ಯ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

711
Image Credit : Asianet News

ಉಡುಪಿ ಕೃಷ್ಣ ಮಠದಿಂದ ಲಕ್ಷಕಂಠ ಭಗವದ್ಗೀತಾ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅತಿಥಿಯಾಗಿ ಆಗಮಿಸಿದ್ದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮೋದಿಗ ಅವರಿಗೆ ಸ್ವಾಗತ ಕೋರಲಾಯಿತು. ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಕೂಡ ಭಾಗಿಯಾಗಿದ್ದರು.

811
Image Credit : PTI Video Grab

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ. ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಸಂಸದ ರಾಘವೇಂದ್ರ, ಶಾಸಕರಾದ ಸುನೀಲ್ ಕುಮಾರ್, ಯಶ್ ಪಾಲ್ ಸುವರ್ಣ ಸೇರಿ ಹಲವರು ಉಪಸ್ಥಿತರಿದ್ದರು.

911
Image Credit : PTI Video Grab

ದೇವರ ದರ್ಶನದ ಬಳಿಕ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ ಭಾಗಿಯಾದರು. ಸಾವಿರಾರು ಭಕ್ತರು ವೇದಿಕೆಯ ಕೆಳ ಭಾಗದಲ್ಲಿ ಸ್ತೋತ್ರ ಪಠಣ ಮಾಡಿದರು.

1011
Image Credit : PTI Video Grab

ಇದೇ ವೇಳೆ ಮೋದಿ ಕನಕದಾಸರ ವಿಗ್ರಹಕ್ಕೆ ಹೂಮಾಲೆ ಹಾಕಿ ಗೌರವಿಸಿದರು. ಕನಕನ ಕಿಂಡಿಯ ಮೇಲಿರುವ ಶ್ರೀ ಕೃಷ್ಣನ ಮೂರ್ತಿಗೆ ನಮಸ್ಕಾರ ಮಾಡಿದ ಬಳಿಕ ಮೋದಿ ಹಣೆಗೆ ತಿಲಕವಿಟ್ಟು ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಪ್ರಸಾದ ನೀಡಿದರು. ತೀರ್ಥದ ಜೊತೆ ತುಳಸಿ ಮಣಿಯನ್ನು ನೀಡಿದ ಸುಗುಣೇಂದ್ರ ತೀರ್ಥ ಸ್ವಾಮೀಜಿ ನೀಡಿದರು.

1111
Image Credit : PTI Video Grab

ನರೇಂದ್ರ ಮೋದಿಗೆ ಮಾಧ್ವ ಸಂಪ್ರದಾಯದ ತಿಲಕ ಹಾಕಲಾಗಿತ್ತು. ಅಂಗಾರಕ ಅಕ್ಷತೆಯನ್ನು ಪುತ್ತಿಗೆ ಶ್ರೀ ಇರಿಸಿದರು. ಹೋಮದ ಮಸಿಯಲ್ಲಿ ತಯಾರಿಸಿರುವ ವಿಶೇಷ ತಿಲಕ ಇದು.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ನರೇಂದ್ರ ಮೋದಿ
ಉಡುಪಿ
ಕರ್ನಾಟಕ ಸುದ್ದಿ
ಸುದ್ದಿ
Latest Videos
Recommended Stories
Recommended image1
ಬೆಂಗಳೂರು ಮೆಟ್ರೋ ಕಾರ್ಯಾಚರಣೆ ಡೇಟಾ ನಿರ್ವಹಿಸಲಿರುವ ದೆಹಲಿ ಮೆಟ್ರೋ, ಟೆಂಡರ್‌ ಆಹ್ವಾನ
Recommended image2
ಮಂಗ್ಳೂರಲ್ಲಿ ಮಳೆ ಮುನ್ಸೂಚನೆ ನೀಡುವ ಸ್ವದೇಶಿ ರಡಾರ್‌ ಸಿದ್ಧ: ಅತ್ಯಾಧುನಿಕ ಡಾಪ್ಲರ್‌ ರಡಾರ್‌ ಉದ್ಘಾಟನೆ
Recommended image3
‘ಪತಿ’ ಸ್ಥಾನ ವಿವಾಹಿತನಿಗಷ್ಟೇ ಸೀಮಿತವಲ್ಲ : ಹೈ
Related Stories
Recommended image1
ಉಡುಪಿ ಭೇಟಿ ವೇಳೆ ಪ್ರಧಾನಿ ಮೋದಿ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಡಿಸಿ ಸೂಚನೆ
Recommended image2
ನವೆಂಬರ್ 28ಕ್ಕೆ ಉಡುಪಿ ಜಿಲ್ಲೆಯ ಮೂರು ಠಾಣಾ ವ್ಯಾಪ್ತಿ ಶಾಲೆಗಳಿಗೆ ರಜೆ ಘೋಷಣೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved