MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ಮನೆಯಲ್ಲಿ ಜೂಜಾಟ: ಸರ್ಕಾರಿ ಅಧಿಕಾರಿಗಳು ಸೇರಿ 6 ಜನರ ಬಂಧನ!

ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ಮನೆಯಲ್ಲಿ ಜೂಜಾಟ: ಸರ್ಕಾರಿ ಅಧಿಕಾರಿಗಳು ಸೇರಿ 6 ಜನರ ಬಂಧನ!

ಪಿಎಸ್‌ಐ ನೇಮಕಾತಿ ಅಕ್ರಮದ ಆರೋಪಿ ದಿವ್ಯಾ ಹಾಗರಗಿ ಅವರ ಕಲಬುರಗಿ ನಿವಾಸದಲ್ಲಿ ದೀಪಾವಳಿ ಹಬ್ಬದಂದು ಜೂಜಾಟ ನಡೆದಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಆರು ಜನರನ್ನು ಬಂಧಿಸಲಾಗಿದೆ.

2 Min read
Author : Sathish Kumar KH
Published : Oct 23 2025, 11:54 AM IST
Share this Photo Gallery
  • FB
  • TW
  • Linkdin
  • Whatsapp
15
ದಿವ್ಯಾ ಹಾಗರಗಿ ಮನೆಯಲ್ಲಿ ಜೂಜಾಟ
Image Credit : Asianet News

ದಿವ್ಯಾ ಹಾಗರಗಿ ಮನೆಯಲ್ಲಿ ಜೂಜಾಟ

ಕಲಬುರಗಿ (ಅ.23): ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಕಲಬುರಗಿ ನಿವಾಸದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೂಜಾಟ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳು ಸೇರಿದಂತೆ ಒಟ್ಟು ಆರು ಜನ ಜೂಜುಕೋರರನ್ನು ಬಂಧಿಸಲಾಗಿದೆ.

25
ಸರ್ಕಾರಿ ಅಧಿಕಾರಿಗಳು ಸೇರಿ 6 ಜನ ಬಂಧನ
Image Credit : Asianet News

ಸರ್ಕಾರಿ ಅಧಿಕಾರಿಗಳು ಸೇರಿ 6 ಜನ ಬಂಧನ

ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯಾ ಹಾಗರಗಿ ಅವರ ಮನೆಯ ಮೇಲೆ ಪೊಲೀಸರು ಮಿಂಚಿನ ದಾಳಿ ನಡೆಸಿದ್ದು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ರಾಜು ಲೆಂಗಟಿ, ಸಂಗಮೇಶ ನಾಗನಹಳ್ಳಿ, ತಾಲೂಕಾ ಬಿಸಿಊಟ ಅಧಿಕಾರಿ ಚಂದ್ರಕಾಂತ ಸೇರಿದಂತೆ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ ನಲವತ್ತು ಸಾವಿರ ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Related image1
ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ಭೇಟಿ ಮಾಡಿದ ಉಮೇಶ್ ಜಾಧವ
Related image2
PSI Recruitment Scam: ಜೈಲಿಂದ ಹೊರಬಂದ ಕಿಂಗ್‌ಪಿನ್ ದಿವ್ಯಾ ಹಾಗರಗಿಗೆ ಭವ್ಯ ಸ್ವಾಗತ!
35
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದಿವ್ಯಾ ಹಾಗರಗಿ ವಾಗ್ದಾಳಿ
Image Credit : Asianet News

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದಿವ್ಯಾ ಹಾಗರಗಿ ವಾಗ್ದಾಳಿ

ಮನೆಯ ಮೇಲೆ ನಡೆದ ಈ ಪೊಲೀಸ್ ದಾಳಿಯ ಬಗ್ಗೆ ದಿವ್ಯಾ ಹಾಗರಗಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಮ್ಮಕ್ಕಿನಿಂದ ನಡೆದ ಉದ್ದೇಶಪೂರ್ವಕ ದಾಳಿ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ.

45
ಪೊಲೀಸರು ಸುಳ್ಳು ಇಸ್ಪೆಟ್ ಆಟದ ಕಥೆ ಕಟ್ಟಿದ್ದಾರೆ
Image Credit : Asianet News

ಪೊಲೀಸರು ಸುಳ್ಳು ಇಸ್ಪೆಟ್ ಆಟದ ಕಥೆ ಕಟ್ಟಿದ್ದಾರೆ

ಮಾಧ್ಯಮಗಳೊಂದಿಗೆ ಮಾತನಾಡಿರುವ ದಿವ್ಯಾ, 'ನಾನು ದೀಪಾವಳಿ ಹಬ್ಬದ ನಿಮಿತ್ತ ಹಲವು ಆಪ್ತರನ್ನು ಮನೆಗೆ ಕರೆದಿದ್ದೆ. ಎಲ್ಲರೂ ಟೀ ಕುಡಿಯುತ್ತಾ ಕುಳಿತಿದ್ದಾಗ ಮನೆಗೆ ನುಗ್ಗಿದ ಪೊಲೀಸರು ಸುಳ್ಳು ಇಸ್ಪೆಟ್ ಆಟದ ಕಥೆ ಕಟ್ಟಿದ್ದಾರೆ. ಆರು ಜನರ ಬಳಿ ನಲವತ್ತು ಸಾವಿರ ರೂಪಾಯಿ ಇರದೆ ಇರುತ್ತದೆಯೇ? ಇದು ಪ್ರಿಯಾಂಕ್ ಖರ್ಗೆ ಅವರು ನನ್ನನ್ನು ನೇರವಾಗಿ ಟಾರ್ಗೆಟ್ ಮಾಡಿ, ನನ್ನ ಮರ್ಯಾದೆ ತೆಗೆಯಲು ಮಾಡಿಸಿರುವ ಹೊಲಸು ಕೆಲಸವಾಗಿದೆ' ಎಂದು ಗುಡುಗಿದ್ದಾರೆ.

55
ಗಂಡ, ಮಕ್ಕಳಿಗೆ ತೊಂದರೆಯಾದರೆ ಪ್ರಿಯಾಂಕ ಖರ್ಗೆ ಹೊಣೆ
Image Credit : Asianet News

ಗಂಡ, ಮಕ್ಕಳಿಗೆ ತೊಂದರೆಯಾದರೆ ಪ್ರಿಯಾಂಕ ಖರ್ಗೆ ಹೊಣೆ

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಹಿರಂಗ ಸವಾಲು ಹಾಕಿರುವ ದಿವ್ಯಾ, 'ಖರ್ಗೆಯವರೆ, ನನ್ನದೇನಾದರೂ ತಪ್ಪು ಇದ್ದರೆ ನೇರವಾಗಿ ಕ್ರಮ ಕೈಗೊಳ್ಳಿ, ಅದು ಬಿಟ್ಟು ಇಂತಹ ಹೊಲಸ ಕೆಲಸ ಮಾಡಬೇಡಿ. ನನಗೆ, ನನ್ನ ಗಂಡನಿಗೆ, ನನ್ನ ಮಕ್ಕಳಿಗೆ ಏನಾದರೂ ತೊಂದರೆಯಾದರೆ ಅದಕ್ಕೆ ಪ್ರಿಯಾಂಕ್ ಖರ್ಗೆ ಅವರೇ ನೇರ ಜವಾಬ್ದಾರರಾಗುತ್ತಾರೆ' ಎಂದು ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ಪಿಎಸ್‌ಐ ಹಗರಣದ ಬಳಿಕ ಜೂಜಾಟ ಪ್ರಕರಣದಿಂದಾಗಿ ದಿವ್ಯಾ ಹಾಗರಗಿ ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ದೀಪಾವಳಿ
ಕರ್ನಾಟಕ ಪೊಲೀಸ್

Latest Videos
Recommended Stories
Recommended image1
Sullia: ಕ್ರಾಂತಿಗಳ ಊರು ಸುಳ್ಯ ತಾಲೂಕಿಗೆ ಈಗ 60ರ ಹರೆಯ, ದಕ್ಷಿಣದ ಕನ್ನಡದ ಈ ತಾಲೂಕು ಕೊಡುಗೆ ಅಪಾರ
Recommended image2
ಕಾರವಾರಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗಿಫ್ಟ್; ಮುಂದಿನ ಬಜೆಟ್‌ನಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ!
Recommended image3
ಬೆಂಗಳೂರು: ಮಾದಾವರ ಮೆಟ್ರೋ ನಿಲ್ದಾಣ ಬಳಿ 4 ವಾಹನಗಳ ಮಧ್ಯೆ ಸರಣಿ ಅಪಘಾತ! 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Related Stories
Recommended image1
ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ಭೇಟಿ ಮಾಡಿದ ಉಮೇಶ್ ಜಾಧವ
Recommended image2
PSI Recruitment Scam: ಜೈಲಿಂದ ಹೊರಬಂದ ಕಿಂಗ್‌ಪಿನ್ ದಿವ್ಯಾ ಹಾಗರಗಿಗೆ ಭವ್ಯ ಸ್ವಾಗತ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved