MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಪುನೀತ್ ಕೆರೆಹಳ್ಳಿ, ಗೋಪಿಗೌಡಗೆ ಹೊಡೆಯೋಕೆ ಹೋಗ್ತಿದ್ದೀವಿ ಎಂದಿದ್ದ ಸಿರಾಜ್ ವಿರುದ್ಧ ಎಫ್‌ಐಆರ್

ಪುನೀತ್ ಕೆರೆಹಳ್ಳಿ, ಗೋಪಿಗೌಡಗೆ ಹೊಡೆಯೋಕೆ ಹೋಗ್ತಿದ್ದೀವಿ ಎಂದಿದ್ದ ಸಿರಾಜ್ ವಿರುದ್ಧ ಎಫ್‌ಐಆರ್

ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ಸಿರಾಜ್ ಅಲಿಬೇಗ್ ವಿರುದ್ಧ ಎಫ್‌ಐಆರ್ ದಾಖಲು. ಮದ್ದೂರು ಕಲ್ಲು ತೂರಾಟ ಪ್ರಕರಣದಲ್ಲಿ ಪ್ರತಿಭಟನಾಕಾರರ ವಿರುದ್ಧವೂ ಪ್ರಕರಣ ದಾಖಲು.

1 Min read
Mahmad Rafik
Published : Sep 09 2025, 12:18 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Facebook

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಪುನೀತ್ ಕೆರೆಹಳ್ಳಿ ಮತ್ತು ಗೋಪಿ ಗೌಡಗೆ ಹೊಡೆಯೋಕೆ ಹೋಗ್ತಿದ್ದೀವಿ ಎಂದು ಧಮ್ಕಿ ಹಾಕಿದ್ದ ಸಿರಾಜ್ ಅಲಿಬೇಗ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

25
Image Credit : Facebook

ಕರ್ತವ್ಯನಿರತ ಕಾನ್‌ಸ್ಟೇಬಲ್ ಮುಂದೆಯೇ ಸಿರಾಜ್ ಅಲಿಬೇಗ್, ಈ ರೀತಿಯ ಹೇಳಿಕೆ ನೀಡಿದ್ದನು. ಕಾನ್‌ಸ್ಟೇಬಲ್ ನೀಡಿರುವ ದೂರಿನಡಿಯಲ್ಲಿಯೂ ಅರಸೀಕರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Related image1
ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿರುದ್ಧ ಪ್ರತಿಭಟನೆ ಪುನೀತ್ ಕೆರೆಹಳ್ಳಿ ವಶಕ್ಕೆ, ಪೊಲೀಸರೊಂದಿಗೆ ಮಾತಿನ ಚಕಮಕಿ!
Related image2
ಅಕ್ರಮ ಕಸಾಯಿಖಾನೆ ಮೇಲೆ ಪುನೀತ್ ಕೆರೆಹಳ್ಳಿ ತಂಡ ದಾಳಿ; ಗೋವುಗಳ ರಕ್ಷಣೆ
35
Image Credit : Facebook

ಪುನೀತ್ ಕೆರೆಹಳ್ಳಿಯನ್ನು ಕೊಲೆ ಮಾಡುವ ಉದ್ದೇಶದಿಂದ ಈ ಹೇಳಿಕೆ ನೀಡಲಾಗಿದೆ. ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ವಿಡಿಯೋ ಇದಾಗಿದೆ. ಹಾಗಾಗಿ ಪ್ರಚೋದನಾತ್ಮಕ ಹೇಳಿಕೆಯನ್ನು ನೀಡಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು.

45
Image Credit : Asianet News

ಮದ್ದೂರು ಕಲ್ಲು ತೂರಾಟ

ಮಂಡ್ಯ ಜಿಲ್ಲೆಯ ಮದ್ದೂರು ಕಲ್ಲು ತೂರಾಟ ಪ್ರಕರಣ ಖಂಡಿಸದವರ ಮೇಲೆ ಎಫ್ಐಆರ್ ದಾಖಲಾಗಿದೆ. ಘಟನೆ ಖಂಡಿಸಿ ಸೆಪ್ಟೆಂಬರ್ 9ರಂದು ಮದ್ದೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಸಂಬಂಧ ಪ್ರತಿಭಟನಾಕಾರರ ಮೇಲೆ ಪ್ರತ್ಯೇಕ ಎರಡು ಎಫ್ಐಆರ್ ದಾಖಲಾಗಿದೆ.

55
Image Credit : Asianet News

ಮುಸ್ಲಿಂ ಧರ್ಮದ ಬಾವುಟಕ್ಕೆ ಬೆಂಕಿ ಹಾಕಿದ್ದ ಮತ್ತು ಈದ್ ಮಿಲಾದ್ ಗೆ ಹಬ್ಬದ ಹಿನ್ನಲೆ ಹಾಕಿದ್ದ ಬಂಟಿಂಗ್ಸ್ ಕಿತ್ತೆಸೆದವರ ವಿರುದ್ದ ಒಂದು ಎಫ್ಐಆರ್ ಆಗಿದೆ. ಪ್ರತಿಭಟನಾ ಮೆರವಣಿಗೆ ವೇಳೆ ಮಸೀದಿಗೆ ನುಗ್ಗಲು ಯತ್ನಿಸಲಾಗಿದ್ದು, ಆ ವೇಳೆ ಕಲ್ಲು ತೂರಿದ ವಿಚಾರವಾಗಿ ಮತ್ತೊಂದು ಎಫ್ಐಆರ್ ಆಗಿದೆ. ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಗಿರೀಶ್, ಸೌಮ್ಯ, ರಮ್ಯ, ಪಲ್ಲವಿ ಸೇರಿದಂತೆ 500 ಜನರ ಮೇಲೆ BNS 189(2), 189(4), 121, 121(2), 190 ಅಡಿ ಎಫ್ಐಆರ್ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ತುಮಕೂರು
ಪೊಲೀಸ್
ಕರ್ನಾಟಕ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved