MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮತ್ತೆರಡು ಜಿಲ್ಲೆಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನೀಡಿದ ಜಿಲ್ಲಾಧಿಕಾರಿಗಳು

ಮತ್ತೆರಡು ಜಿಲ್ಲೆಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನೀಡಿದ ಜಿಲ್ಲಾಧಿಕಾರಿಗಳು

ಬೆಳಗಾವಿ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಯಚೂರಿನಲ್ಲಿ ಮಳೆಯಿಂದಾಗಿ ಬೆಳೆ ಹಾನಿಯ Befaru ಆತಂಕ ಎದುರಾಗಿದೆ. ಮಕ್ಕಳ ಸುರಕ್ಷತೆಗಾಗಿ ಜಿಲ್ಲಾಡಳಿತಗಳು ರಜೆ ಘೋಷಿಸಿವೆ.

1 Min read
Mahmad Rafik
Published : Aug 18 2025, 08:37 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : our own

ಬೆಳಗಾವಿಯ ಜಿಲ್ಲೆಯ ಐದು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಅಬ್ಬರ ಹಿನ್ನೆಲೆ ರಜೆ ನೀಡಲಾಗಿದೆ.

25
Image Credit : Getty

ಜಿಲ್ಲೆಯ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲೂಕಿನ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Related Articles

Related image1
6ರ ಜೊತೆ ಉಡುಪಿ: ಒಟ್ಟು 7 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ; ಇತ್ತ ಶಿರಾಡಿ ಸಂಚಾರಕ್ಕೆ ಮುಕ್ತ
Related image2
ರಾಜ್ಯದ ಕೆಲವೆಡೆ ಭಾರಿ ಮಳೆ, ಕೊಡುಗು ಜಿಲ್ಲಾ ಶಾಲಾ ಕಾಲೇಜಿಗೆ ಬುಧವಾರ ರಜೆ
35
Image Credit : Asianet News

ದಾವಣೆಗೆರೆಯಲ್ಲಿಯೂ ರಜೆ

ದಾವಣಗೆರೆ ನಗರ ಸೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

45
Image Credit : Getty

ರಾಯಚೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಭಾನುವಾರ ಸಂಜೆ ಆರಂಭವಾದ ಮಳೆಯಿಂದ ಬಿಸಿಲುನಾಡು ರಾಯಚೂರು ಮಲೆನಾಡಿನಂತಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯಿಂದ ಹೊರಗೆ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. ಮಳೆಗೆ ಹತ್ತಿ ಬೆಳೆ ಹಾಗೂ ದಾಳಿಂಬೆ ಹಾಳಾಗುವ ಆತಂಕ ಎದುರಾಗಿದೆ. ಈಗಾಗಲೇ ಸುರಿದ ಮಳೆಗೆ ಹತ್ತಿ ಬೆಳೆ ನೆಲಕಚ್ಚಿದೆ.

55
Image Credit : Getty

ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ರಜೆ ನೀಡಲಾಗಿದೆ. ಮಳೆಯ ತೀವ್ರತೆಯನ್ನು ಗಮನಿಸಿಕೊಂಡು ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ರಜೆ ಘೋಷಿಸಿಸುತ್ತಿದ್ದಾರೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮಳೆ
ಕರ್ನಾಟಕ ಸುದ್ದಿ
ಕರ್ನಾಟಕ ಮಳೆ
ಶಾಲೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved