MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಆಂಜನೇಯ ದೇವಾಲಯದಲ್ಲಿ ನಿಧಿ ಶೋಧ; ದೇವರ ಮೂರ್ತಿ ಕಿತ್ತೆಸೆದು 10 ಗುಂಡಿ ತೋಡಿದ ಕಿಡಿಗೇಡಿಗಳು!

ಆಂಜನೇಯ ದೇವಾಲಯದಲ್ಲಿ ನಿಧಿ ಶೋಧ; ದೇವರ ಮೂರ್ತಿ ಕಿತ್ತೆಸೆದು 10 ಗುಂಡಿ ತೋಡಿದ ಕಿಡಿಗೇಡಿಗಳು!

ರಾಮನಗರ ತಾಲೂಕಿನ ಹಳ್ಳಿಮಾಳ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ನಿಧಿಗಾಗಿ ಗುಂಡಿ ತೋಡಿದ ದುಷ್ಕರ್ಮಿಗಳು ವಿಗ್ರಹಕ್ಕೂ ಹಾನಿ ಮಾಡಿದ್ದಾರೆ. ಹುಣ್ಣುಮೆ ರಾತ್ರಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

1 Min read
Sathish Kumar KH
Published : Jul 13 2025, 06:55 PM IST
Share this Photo Gallery
  • FB
  • TW
  • Linkdin
  • Whatsapp
14
Image Credit : Asianet News

ರಾಮನಗರ ತಾಲೂಕಿನ ಹಳ್ಳಿಮಾಳ ಗ್ರಾಮದ ಹೊರವಲಯದಲ್ಲಿರುವ ಆಂಜನೇಯಸ್ವಾಮಿ ದೇವಾಲಯದಲ್ಲಿ ಅದೃಶ್ಯ ನಿಧಿಗಾಗಿ ಗುಂಡಿ ತೋಡಲಾಗಿದೆ. ಈ ವೇಳೆ ದೇವಾಲಯದ ಆಂಜನೇಯಸ್ವಾಮಿ ವಿಗ್ರಹಕ್ಕೂ ಹಾನಿಯುಂಟಾಗಿದೆ ಎಂಬ ಮಾಹಿತಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

24
Image Credit : Asianet News

ಹುಣ್ಣುಮೆ ರಾತ್ರಿಯ ನಿಧಿಗಾಗಿ ಕನ್ನ!

ಹುಣ್ಣುಮೆ ಮತ್ತು ಅಮಾವಾಸ್ಯೆ ರಾತ್ರಿಯಂದು ಈ ಅಪರಿಚಿತ ಕಾರ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಸ್ಥಳೀಯರ ಪ್ರಕಾರ, ದೇವಸ್ಥಾನದ ಒಳಭಾಗದಲ್ಲಿ ಸುಮಾರು 10 ಅಡಿ ಆಳದ ಗುಂಡಿ ತೋಡಲಾಗಿದೆ. ಇದು ಸಂಪೂರ್ಣ ಯೋಜಿತ ರೀತಿಯಲ್ಲಿ ನಡೆದಿರಬಹುದೆಂಬ ಸಂದೇಹವಿದೆ. 

ದಿನ ನಿತ್ಯದಂತೆ ಹತ್ತಿರದ ರೈತರೊಬ್ಬರು ದನ ಮೇಯಿಸಲು ಅರಣ್ಯ ಭಾಗದತ್ತ ಹೋಗಿದ್ದ ವೇಳೆ ದೇವಾಲಯದ ಒಳಗೆ ತೋಡಿದ ಗುಂಡಿ ಹಾಗೂ ಅಲ್ಲಿರುವ ಮಣ್ಣಿನ ರಾಶಿಯನ್ನು ಕಂಡು ಆಘಾತಕ್ಕೆ ಒಳಗಾದರು. ಕೂಡಲೇ ಈ ಮಾಹಿತಿಯನ್ನು ಗ್ರಾಮಸ್ಥರಿಗೆ ಹಾಗೂ ಪೊಲೀಸರಿಗೆ ತಿಳಿಸಿದ್ದಾರೆ.

Related Articles

Related image1
ಗಾಳಿ ಆಂಜನೇಯ ದೇಗುಲ ಆಡಳಿತ ಮಂಡಳಿಗೆ ವಾಪಸ್: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
Related image2
ಗಾಳಿ ಆಂಜನೇಯ ದೇವಾಲಯ ಮುಜರಾಯಿಗೆ ಭಾರೀ ವಿರೋಧ, ಪ್ರತಿಭಟನೆ
34
Image Credit : Asianet News

ದೇವರ ವಿಗ್ರಹಕ್ಕೂ ಹಾನಿ

ಅಪರಾಧಿಗಳು ನಿಧಿ ಶೋಧದ ವೇಳೆ ಆಂಜನೇಯಸ್ವಾಮಿ ವಿಗ್ರಹಕ್ಕೂ ಹಾನಿ ಮಾಡಿದ್ದಾರೆ ಎಂಬ ಸುದ್ದಿ ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ದೇವರ ಪ್ರತಿಮೆ ವಿಕೃತಗೊಂಡಿರುವುದು ಭಕ್ತರಲ್ಲಿ ಆಕ್ರೋಶವನ್ನು ಮೂಡಿಸಿದೆ. ಇದು ಕೇವಲ ಕಾನೂನು ಭಂಗವಷ್ಟೇ ಅಲ್ಲ, ಧಾರ್ಮಿಕ ಭಾವನೆಗಳನ್ನೂ ಕುಗ್ಗಿಸುವ ಘಟನೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

44
Image Credit : Asianet News

ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಹಿಂದೆ ದೇವಾಲಯದಲ್ಲಿ ನಿಧಿಗಾಗಿ ಯಾರಾದರೂ ಇಂತಹ ಕೃತ್ಯಗಳನ್ನು ಎಸಗಿದ್ದಾರೆ ಎಂಬ ಮೂಲದ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಅಪರಾಧಿಗಳಿಗೆ ಭಾರೀ ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ದೇವಸ್ಥಾನ
ಟ್ರೆಂಡಿಂಗ್ ನ್ಯೂಸ್
ವೈರಲ್ ಸುದ್ದಿ
ರಾಮನಗರ

Latest Videos
Recommended Stories
Recommended image1
ಬೆಂಗಳೂರು ಜನತೆಗೆ ಶೀಘ್ರವೇ ದೊಡ್ಡ ಮುಕ್ತಿ, ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಮುಂದಿನ ತಿಂಗಳೊಳಗೆ ಸಂಚಾರ ಮುಕ್ತ!
Recommended image2
ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ
Recommended image3
ಉಬರ್ ಆ್ಯಪ್‌ನಲ್ಲೂ ಬೆಂಗಳೂರು ಮೆಟ್ರೋ ಟಿಕೆಟ್ ಖರೀದಿ ಸೌಲಭ್ಯ, ಬುಕಿಂಗ್ ಮಾಡುವುದು ಹೇಗೆ?
Related Stories
Recommended image1
ಗಾಳಿ ಆಂಜನೇಯ ದೇಗುಲ ಆಡಳಿತ ಮಂಡಳಿಗೆ ವಾಪಸ್: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
Recommended image2
ಗಾಳಿ ಆಂಜನೇಯ ದೇವಾಲಯ ಮುಜರಾಯಿಗೆ ಭಾರೀ ವಿರೋಧ, ಪ್ರತಿಭಟನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved