MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಕೊಲೆ ನಡೆದು 2 ವರ್ಷ: ಜೈಲಿನಲ್ಲಿ ವಾರಕ್ಕೆ 3 ಪುಸ್ತಕ ಓದುತ್ತಿರುವ ದರ್ಶನ್, ಬರವಣಿಗೆಯಲ್ಲಿ ನಿರತಳಾದ ಪವಿತ್ರಾಗೌಡ!

ಕೊಲೆ ನಡೆದು 2 ವರ್ಷ: ಜೈಲಿನಲ್ಲಿ ವಾರಕ್ಕೆ 3 ಪುಸ್ತಕ ಓದುತ್ತಿರುವ ದರ್ಶನ್, ಬರವಣಿಗೆಯಲ್ಲಿ ನಿರತಳಾದ ಪವಿತ್ರಾಗೌಡ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಪುಸ್ತಕ ಓದುತ್ತಾ ಕಾಲ ಕಳೆದರೆ, ಪವಿತ್ರಾ ಗೌಡ ತಮ್ಮ ಆತ್ಮಕಥೆ ಬರೆಯುತ್ತಿದ್ದಾರೆ ಎಂದು ವರದಿಯಾಗಿದೆ.  ದರ್ಶನ್‌ ಮತ್ತು ಸಹಚರರು ಮೊದಲ ಬಾರಿಗೆ ಬಂಧನವಾಗಿ ಎರಡು ವರ್ಷ ಕಳೆದಿದೆ.

3 Min read
Author : Gowthami K
Published : Jun 12 2026, 08:54 AM IST
Share this Photo Gallery
  • FB
  • TW
  • Linkdin
  • Whatsapp
16
ಆತ್ಮಕಥೆ ಬರೆಯುತ್ತಿದ್ದಾರಾ ಪವಿತ್ರ!
Image Credit : Instagram

ಆತ್ಮಕಥೆ ಬರೆಯುತ್ತಿದ್ದಾರಾ ಪವಿತ್ರ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಪುಸ್ತಕದ ಮೊರೆ ಹೋಗಿದ್ದು, ಆರೋಪಿ ಪವಿತ್ರಾಗೌಡ ಬರವಣಿಗೆಯ ಮೊರೆ ಹೋಗಿದ್ದಾರೆ. ಜೈಲಿನಲ್ಲಿರುವ ದರ್ಶನ್, ಕಾಲ ಕಳೆಯಲು ಪುಸ್ತಕದ ಮೊರೆ ಹೋಗಿದ್ದಾರೆ. ಸಹ ಕೈದಿಗಳೊಡನೆ ಒಂದೇ ಬ್ಯಾರಕ್‌ನಲ್ಲಿದ್ದು, ವಾರಕ್ಕೆ 2-3 ಪುಸ್ತಕ ಓದುತ್ತಿರು ವುದಾಗಿ ಮೂಲಗಳು ತಿಳಿಸಿವೆ. ಎ1 ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಬರವಣಿಗೆಯ ಮೊರೆ ಹೋಗಿದ್ದಾರೆ. ತಮ್ಮ ಆತ್ಮಕಥೆ ಬರೆಯುತ್ತಿದ್ದಾರಂತೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಮೊದಲ ಬಾರಿಗೆ ಬಂಧನವಾಗಿ ಎರಡು ವರ್ಷ
Image Credit : Instagram

ಮೊದಲ ಬಾರಿಗೆ ಬಂಧನವಾಗಿ ಎರಡು ವರ್ಷ

ನಟ ದರ್ಶನ್‌ ಮತ್ತು ಸಹಚರರು ಮೊದಲ ಬಾರಿಗೆ ಬಂಧನವಾಗಿ ಎರಡು ವರ್ಷ ಕಳೆದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ 2025ರ ಜೂ.11 ರಂದು ದರ್ಶನ್‌ರನ್ನು ಮೈಸೂರಿನ ಹೋಟೆಲ್‌ವೊಂದರಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಜೂ.7 ರಂದು ಚಿತ್ರದುರ್ಗದಿಂದ ರೇಣುಕಸ್ವಾಮಿಯನ್ನು ಕಿಡ್ನಾಪ್ ಮಾಡಿ ಬೆಂಗಳೂರಿನ ಆರ್‌.ಆರ್‌. ನಗರದಲ್ಲಿರುವ ಪಟ್ಟಣಗೆರೆ ಶೆಡ್‌ಗೆ ಕರೆತಂದು ಹಲ್ಲೆ ಮಾಡಿದ್ದರು. ಆರೋಪಿಗಳು ದರ್ಶನ್‌ ಹೆಸರು ಬಾಯ್ಬಿಟ್ಟಿದ್ದರಿಂದ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜೈಲು ಸೇರಿದ್ದ ದರ್ಶನ್‌ ಮತ್ತು ಸಹಚರರು ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು. ಜಾಮೀನು ರದ್ದುಪಡಿಸುವಂತೆ ಕೋರಿ ಪೊಲೀಸರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್‌ ದರ್ಶನ್‌ ಮತ್ತು ಸಹಚರರ ಜಾಮೀನು ರದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಸೇರಿ ಏಳು ಜನ ಆರೋಪಿಗಳು ಮತ್ತೆ ಜೈಲುಪಾಲಾಗಿದ್ದರು.

Related Articles

Related image1
ಡಿಕೆಶಿ ಹೇಳಿಕೆ ಬಳಿಕ ನಟ ದರ್ಶನ್ ಫ್ಯಾನ್ಸ್ ಪರಿಸ್ಥಿತಿ ಹೇಗಾಗಿದೆ ಗೊತ್ತಾ? 'ಹೀಗಾಗಿದೆ' ಅಂತ ಹೇಳಬಹುದಾ..?!
Related image2
ರೇಣುಕಾಸ್ವಾಮಿ ಕೇಸ್: ದರ್ಶನ್ ಗ್ಯಾಂಗ್‌ನ ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್
36
ದರ್ಶನ್‌ ಗೆಳೆಯರು ಸದ್ಯ ಸೇಫ್
Image Credit : Sicial Media

ದರ್ಶನ್‌ ಗೆಳೆಯರು ಸದ್ಯ ಸೇಫ್

ಇನ್ನು ಕೊಲೆ ಪ್ರಕರಣದಲ್ಲಿ ಸಹ ಆರೋಪಿಯಾಗಿರುವ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ ಮಾಲೀಕ ವಿನಯ್‌ ಹಾಗೂ ಮೊದಲನೇ ಆರೋಪಿ ಪವಿತ್ರಗೌಡ ಸಹಾಯಕ ಪವನ್‌ ಸೇರಿ ಐವರಿಗೆ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ. ಪ್ರಕರಣ‌ಲ್ಲಿ ಒಂಬತ್ತನೇ ಆರೋಪಿ ವಿನಯ್‌, ಮೂರನೇ ಆರೋಪಿ ಪವನ್‌, ಚಿತ್ರದುರ್ಗದ ದರ್ಶನ್‌ ಅಭಿಮಾನಿ ಬಳಗದ ಅಧ್ಯಕ್ಷನಾಗಿರುವ ನಾಲ್ಕನೇ ಆರೋಪಿ ರಾಘವೇಂದ್ರ, ಐದನೇ ಆರೋಪಿ ನಂದೀಶ್‌, ಒಂಬತ್ತನೇ ಆರೋಪಿ ಧನರಾಜ್‌ಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ 2024ರ ಡಿ. 24ರಂದು ಮಂಜೂರು ಮಾಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಕಾಮಾಕ್ಷಿಪಾಳ್ಯ ಪೊಲೀಸರು (ಪ್ರಾಸಿಕ್ಯೂಷನ್) ಹೈಕೋರ್ಟ್‌ಗೆ ಪ್ರತ್ಯೇಕ ನಾಲ್ಕು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಸ್‌.ರಾಚಯ್ಯ ಅವರ ಪೀಠ ಈ ಅರ್ಜಿಗಳ ವಿಚಾರಣೆಯನ್ನು ಏ.11ರಂದು ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು. ಕಾಮಾಕ್ಷಿಪಾಳ್ಯ ಪೊಲೀಸರ ಪ್ರತ್ಯೇಕ ನಾಲ್ಕು ಅರ್ಜಿಗಳನ್ನು ತಿರಸ್ಕರಿಸಿ ನ್ಯಾಯಮೂರ್ತಿ. ಎಸ್.ರಾಚಯ್ಯ ಅವರ ಪೀಠ ಬುಧವಾರ ಜೂನ್ 10ಕ್ಕೆ ಆದೇಶ ಪ್ರಕಟಿಸಿದೆ.

46
ನಡೆದಿದ್ದೇನು?
Image Credit : Asianet News

ನಡೆದಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೂ.11ರಂದು ದರ್ಶನ್‌ ಮತ್ತಿತರರನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಜೂ.22ರಿಂದ ದರ್ಶನ್‌, ನಟಿ ಪವಿತ್ರಾ ಗೌಡ ಹಾಗೂ ಅರ್ಜಿದಾರ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್‌ಗೆ ಅ. 30ರಂದು ಹೈಕೋರ್ಟ್‌ ವೈದ್ಯಕೀಯ ಕಾರಣಕ್ಕೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅ.14ರಂದು ವಿಚಾರಣಾಧೀನ ನ್ಯಾಯಾಲಯ ದರ್ಶನ್‌, ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್‌ಗೆ ಜಾಮೀನು ನಿರಾಕರಿಸಿತ್ತು. ಎಂಟನೇ ಆರೋಪಿ ರವಿಶಂಕರ್‌ ಅಲಿಯಾಸ್‌ ರವಿ, 13ನೇ ಆರೋಪಿ ದೀಪಕ್‌ ಕುಮಾರ್‌ ಅಲಿಯಾಸ್‌ ದೀಪಕ್‌, ಕಾರ್ತಿಕ್‌ ಅಲಿಯಾಸ್‌ ಕಪ್ಪೆ, ಕೇಶವಮೂರ್ತಿ ಮತ್ತು ನಿಖಿಲ್‌ ನಾಯಕ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು.

56
ಜಾಮೀನು ರದ್ಧತಿಗೆ ಮನವಿ ಮಾಡಿದ್ದ ಸರ್ಕಾರ
Image Credit : X

ಜಾಮೀನು ರದ್ಧತಿಗೆ ಮನವಿ ಮಾಡಿದ್ದ ಸರ್ಕಾರ

2024ರ ಡಿಸೆಂಬರ್‌ 13ರಂದು ದರ್ಶನ್‌, ಪವಿತ್ರಾಗೌಡ, ಆರ್‌ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್‌ ಅಲಿಯಾಸ್‌ ಅನು, ಜಗದೀಶ್‌ ಅಲಿಯಾಸ್‌ ಜಗ್ಗ, ಪ್ರದೋಷ್‌ ರಾವ್‌ ಅವರಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಇದರ ಬೆನ್ನಿಗೇ 2024ರ ಡಿಸೆಂಬರ್‌ 24ರಂದು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು ಪವನ್‌, ವಿನಯ್‌ ಸೇರಿ ಐವರಿಗೆ ಜಾಮೀನು ಮಂಜೂರು ಮಾಡಿತ್ತು.

2025ರ ಆಗಸ್ಟ್‌ 14ರಂದು ಸುಪ್ರೀಂ ಕೋರ್ಟ್‌ 2ನೇ ಆರೋಪಿ ದರ್ಶನ್‌ 1ನೇ ಆರೋಪಿ ಪವಿತ್ರಾ ಗೌಡ, 11ನೇ ಆರೋಪಿ ಆರ್‌.ನಾಗರಾಜು, 7ನೇ ಆರೋಪಿ ಅನುಕುಮಾರ್‌ ಅಲಿಯಾಸ್‌ ಅನು, 12ನೇ ಆರೋಪಿ ಡ್ರೈವರ್‌ ಎಂ.ಲಕ್ಷ್ಮಣ್‌, 6ನೇ ಆರೋಪಿ ಜಗದೀಶ್‌ ಅಲಿಯಾಸ್‌ ಜಗ್ಗ, 14ನೇ ಆರೋಪಿ ಪ್ರದೋಷ್‌ ಎಸ್‌. ರಾವ್‌ ಅಲಿಯಾಸ್‌ ಪ್ರದೋಷ್‌ಗೆ ಹೈಕೋರ್ಟ್‌ ಮಂಜೂರು ಮಾಡಿದ್ದ ಜಾಮೀನು ರದ್ದುಪಡಿಸಿತ್ತು. ಇದನ್ನು ಆಧರಿಸಿ ರಾಜ್ಯ ಸರ್ಕಾರ ಪವನ್‌, ವಿನಯ್‌ ಮತ್ತಿತರ ಜಾಮೀನು ರದ್ದತಿಗೆ ಮನವಿ ಮಾಡಿತ್ತು.

66
ಜೂ.1ರಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ ವಿಚಾರಣೆ ಆರಂಭ
Image Credit : our own

ಜೂ.1ರಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ ವಿಚಾರಣೆ ಆರಂಭ

ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂಬ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಜೂ.1ರಿಂದ ನಗರದ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ದರ್ಶನ್ ತೂಗುದೀಪ
ಪವಿತ್ರಾ ಗೌಡ
ರೇಣುಕಾಸ್ವಾಮಿ ಪ್ರಕರಣ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
Bengauru Ladies PG: ಬೆಂಗಳೂರಲ್ಲಿ ರಾತ್ರೋರಾತ್ರಿ ಪಿಜಿಯಲ್ಲಿ ಕಿರಿಕ್, ಮಾಲೀಕರ ವಿರುದ್ಧ ತಿರುಗಿಬಿದ್ದ ಯುವತಿಯರು
Recommended image2
ರೈಲು ನಿಲ್ಲಿಸಿ ಕೇರಳ ವ್ಯಕ್ತಿಯ ಜೀವ ಉಳಿಸಿದ ಹೆಬ್ಬಗೋಡಿ ಪೊಲೀಸರು; 5 ನಿಮಿಷ ತಡವಾಗಿದ್ರೂ ಅನಾಹುತ ಆಗ್ತಿತ್ತು! ನಡೆದಿದ್ದೇನು?
Recommended image3
Bengaluru Crime: ಸಿಎಂ ಡಿಕೆ ಶಿವಕುಮಾರ್ ಸೂಚನೆ ಬೆನ್ನಲ್ಲೇ ರೌಡಿಗಳ ಬೇಟೆ ಶುರು; ಸುಲಿಗೆಕೋರನಿಗೆ ಗುಂಡೇಟು!
Related Stories
Recommended image1
ಡಿಕೆಶಿ ಹೇಳಿಕೆ ಬಳಿಕ ನಟ ದರ್ಶನ್ ಫ್ಯಾನ್ಸ್ ಪರಿಸ್ಥಿತಿ ಹೇಗಾಗಿದೆ ಗೊತ್ತಾ? 'ಹೀಗಾಗಿದೆ' ಅಂತ ಹೇಳಬಹುದಾ..?!
Recommended image2
ರೇಣುಕಾಸ್ವಾಮಿ ಕೇಸ್: ದರ್ಶನ್ ಗ್ಯಾಂಗ್‌ನ ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved