MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಕುಷ್ಟಗಿಯಿಂದ ಬೆಂಗಳೂರಿಗೆ ನೇರ ರೈಲು ಸಂಪರ್ಕ: ವಿಸ್ತರಣೆಯಾಗುತ್ತಾ ಹುಬ್ಬಳ್ಳಿ ಟ್ರೈನ್?

ಕುಷ್ಟಗಿಯಿಂದ ಬೆಂಗಳೂರಿಗೆ ನೇರ ರೈಲು ಸಂಪರ್ಕ: ವಿಸ್ತರಣೆಯಾಗುತ್ತಾ ಹುಬ್ಬಳ್ಳಿ ಟ್ರೈನ್?

ಕುಷ್ಟಗಿಯಿಂದ ಬೆಂಗಳೂರಿಗೆ ನಿತ್ಯ ರೈಲು ಸಂಚಾರ ಆರಂಭಿಸುವಂತೆ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದೆ. ಶಾಸಕ ದೊಡ್ಡನಗೌಡ ಪಾಟೀಲರ ಒತ್ತಡವನ್ನೂ ಉಲ್ಲೇಖಿಸಿ, ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

1 Min read
Author : Kannadaprabha News
Published : Jul 19 2026, 03:14 PM IST
Share this Photo Gallery
  • FB
  • TW
  • Linkdin
  • Whatsapp
15
ಕುಷ್ಟಗಿಯಿಂದ ಬೆಂಗಳೂರಿಗೆ ನಿತ್ಯ ರೈಲು ಸಂಚಾರ
Image Credit : Gemini

ಕುಷ್ಟಗಿಯಿಂದ ಬೆಂಗಳೂರಿಗೆ ನಿತ್ಯ ರೈಲು ಸಂಚಾರ

ಕೊಪ್ಪಳ ಜಿಲ್ಲೆಯ ಕುಷ್ಟಗಿಯಿಂದ ಬೆಂಗಳೂರಿಗೆ ನಿತ್ಯ ರೈಲು ಸಂಚಾರ ಆರಂಭಿಸುವಂತೆ ಕುಷ್ಟಗಿ ರೈಲ್ವೆ ಹೋರಾಟ ಸಮಿತಿ ಸಲ್ಲಿಸಿದ ಮನವಿಗೆ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸಕಾರಾತ್ಮಕ ಸ್ಪಂದನೆ ನೀಡಿದ್ದು, ಬೇಡಿಕೆ ಗಮನದಲ್ಲಿಟ್ಟುಕೊಂಡು ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಮನವಿ ಸಲ್ಲಿಕೆ
Image Credit : Gemini

ಮನವಿ ಸಲ್ಲಿಕೆ

ಬಾದಾಮಿಯಲ್ಲಿ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ನವೀಕರಿಸಲಾದ ರೈಲು ನಿಲ್ದಾಣದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ನಿವಾಸದಲ್ಲಿ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

Related Articles

Related image1
ಗದಗ ಬೈಪಾಸ್ ಎಫೆಕ್ಟ್? ನಾವು ಹೋಗಬೇಕಲ್ವಾ ? ನಾವೇನು ಮಾಡೋದು? ರೈಲು ಪ್ರಯಾಣಿಕರ ಆಕ್ರೋಶ
Related image2
ಬೆಂಗಳೂರು-ಮಂಗಳೂರು-ಉಡುಪಿ-ಕಾರವಾರ ನಡುವೆ ವಂದೇ ಭಾರತ್ ರೈಲು: ಸಂಸದರು ಹೇಳಿದ್ದೇನು?
35
ಬೆಂಗಳೂರಿಗೆ ನೇರ ರೈಲು
Image Credit : Gemini

ಬೆಂಗಳೂರಿಗೆ ನೇರ ರೈಲು

ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರೇಶ ಬಂಗಾರಶೆಟ್ಟರ್, ಗದಗ–ವಾಡಿ ರೈಲು ಯೋಜನೆಯಡಿ ಕುಷ್ಟಗಿಗೆ ರೈಲು ಸಂಪರ್ಕ ದೊರೆತಿರುವುದು ಸಾರ್ವಜನಿಕರಿಗೆ ಅನುಕೂಲವಾಗಿದೆ. ಆದರೆ ಕುಷ್ಟಗಿಯಿಂದ ಬೆಂಗಳೂರಿಗೆ ನೇರ ರೈಲು ಸಂಪರ್ಕ ಇಲ್ಲದ ಕಾರಣ ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.

45
ಕುಷ್ಟಗಿವರೆಗೂ ವಿಸ್ತರಣೆ
Image Credit : Gemini Generated

ಕುಷ್ಟಗಿವರೆಗೂ ವಿಸ್ತರಣೆ

ಬೆಂಗಳೂರು–ಹುಬ್ಬಳ್ಳಿ ನಡುವೆ ಸಂಚರಿಸುವ ಸೂಪರ್‌ಫಾಸ್ಟ್ ರೈಲನ್ನು ಗದಗ ಜಂಕ್ಷನ್‌ವರೆಗೆ ವಿಸ್ತರಿಸುವ ಪ್ರಸ್ತಾವನೆ ಇದ್ದು, ಅದನ್ನು ಕುಷ್ಟಗಿವರೆಗೂ ವಿಸ್ತರಿಸಿದರೆ ಕುಷ್ಟಗಿ–ಬೆಂಗಳೂರು ನೇರ ರೈಲು ಸೇವೆ ಕಲ್ಪಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: 2ನೇ ವಿಮಾನ ನಿಲ್ದಾಣ ಕನಕಪುರಕ್ಕೆ ಬೇಡ; ಸಿಎಂಗೆ ಪತ್ರ ಬರೆದು ಸ್ಥಳ ಹೇಳಿದ ವಿಜಯೇಂದ್ರ

55
ಕುಷ್ಟಗಿಯ ಶಾಸಕ ದೊಡ್ಡನಗೌಡ ಪಾಟೀಲ ಒತ್ತಡ
Image Credit : Gemini

ಕುಷ್ಟಗಿಯ ಶಾಸಕ ದೊಡ್ಡನಗೌಡ ಪಾಟೀಲ ಒತ್ತಡ

ಮನವಿ ಸ್ವೀಕರಿಸಿದ ಸಚಿವ ವಿ.ಸೋಮಣ್ಣ, ದೇಶದಾದ್ಯಂತ ಹೊಸ ರೈಲು ಮಾರ್ಗ, ರೈಲು ಸೇವೆಗಳ ವಿಸ್ತರಣೆ ಹಾಗೂ ವಿವಿಧ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಬೇಡಿಕೆಗಳಿವೆ.ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಆದ್ಯತೆ ಆಧಾರದ ಮೇಲೆ ಪರಿಗಣಿಸಲಾಗುತ್ತಿದೆ. ಕುಷ್ಟಗಿಯಿಂದ ಬೆಂಗಳೂರಿಗೆ ರೈಲು ಸೇವೆ ಆರಂಭಿಸುವ ಕುರಿತು ಕುಷ್ಟಗಿಯ ಶಾಸಕ ದೊಡ್ಡನಗೌಡ ಪಾಟೀಲ ಒತ್ತಡ ಹೇರಿದ್ದು, ಈ ಬೇಡಿಕೆಯ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಮಹಾಂತಯ್ಯ ಅರಳೇಲಿಮಠ, ಬಾಬು ಘೋರ್ಪಡೆ, ಶರಣಪ್ಪ ಲಿಂಗಶೆಟ್ಟರ ಸೇರಿದಂತೆ ಹೋರಾಟ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಕೊಪ್ಪಳ
ವಿ. ಸೋಮಣ್ಣ
ಭಾರತೀಯ ರೈಲ್ವೆ
ರೈಲು

Latest Videos
Recommended Stories
Recommended image1
Karwar: 8 ಶತಮಾನಗಳ ಲಿಪಿಪರಂಪರೆಯ ರೂಪಗಳನ್ನು ಹೊಂದಿರೋ ಕನ್ನಡದ ಒಂದೇ ಶಾಸನ ಪತ್ತೆ
Recommended image2
ಉಡುಪಿಯ 9 ಗ್ರಾಮ ಪಂಚಾಯ್ತಿಗಳಲ್ಲಿ ಭಾರತ್ ಪಂಪ್, ಭಾರತ್ ಕೆಫೆ, ಇವಿ ಸ್ಟೇಷನ್ ಆರಂಭ
Recommended image3
ಜಪಾನ್‌ ದೈತ್ಯ ಕಂಪನಿಗೆ ತಾಂತ್ರಿಕ ಸಲಹೆಗಾರರಾಗಿ ಮಂಗಳೂರಿನ ಪ್ರೊ.ಡಾ. ಗೋಪಾಲ್ ಮುಗೇರಾಯ ನೇಮಕ
Related Stories
Recommended image1
ಗದಗ ಬೈಪಾಸ್ ಎಫೆಕ್ಟ್? ನಾವು ಹೋಗಬೇಕಲ್ವಾ ? ನಾವೇನು ಮಾಡೋದು? ರೈಲು ಪ್ರಯಾಣಿಕರ ಆಕ್ರೋಶ
Recommended image2
ಬೆಂಗಳೂರು-ಮಂಗಳೂರು-ಉಡುಪಿ-ಕಾರವಾರ ನಡುವೆ ವಂದೇ ಭಾರತ್ ರೈಲು: ಸಂಸದರು ಹೇಳಿದ್ದೇನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved