MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಧಾರವಾಡ: ಆರ್‌ಎಸ್‌ಎಸ್‌ ಬೈಠಕ್‌ ಆರಂಭ

ಧಾರವಾಡ: ಆರ್‌ಎಸ್‌ಎಸ್‌ ಬೈಠಕ್‌ ಆರಂಭ

ಧಾರವಾಡ(ಅ.29):  ಇಲ್ಲಿಯ ಗರಗ ರಸ್ತೆಯಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕಾರ್ಯಕಾರಿ ಮಂಡಳಿಯ ಸಭೆಯು ಗುರುವಾರ ಸರಸಂಘಚಾಲಕ ಡಾ. ಮೋಹನ್‌ ಭಾಗವತ್‌ ಮತ್ತು ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಅವರು ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಪ್ರಾರಂಭವಾಯಿತು. 

1 Min read
Kannadaprabha News | Asianet News
Published : Oct 29 2021, 08:42 AM IST
Share this Photo Gallery
  • FB
  • TW
  • Linkdin
  • Whatsapp
15

ದೇಶಾದ್ಯಂತದಿಂದ ಆಗಮಿಸಿರುವ ಎಲ್ಲ ಪ್ರಾಂತಗಳ ಹಾಗೂ ಕ್ಷೇತ್ರಗಳ ಸಂಘಚಾಲಕ, ಕಾರ್ಯವಾಹ, ಪ್ರಚಾರಕ, ಅಖಿಲ ಭಾರತ ಕಾರ್ಯಕಾರಿಣಿ ಸದಸ್ಯರು ಮತ್ತು ಕೆಲ ಆಯ್ದ ಸಂಘಟನೆಗಳ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಸೇರಿದಂತೆ ಸುಮಾರು 350 ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ.

25

ಬಾಂಗ್ಲಾದೇಶದಲ್ಲಿ ಇತ್ತೀಚಿಗೆ ನಡೆದ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ನಿರ್ಣಯವನ್ನು ಅಂಗೀಕರಿಸುವುದು ಸೇರಿದಂತೆ ಸಭೆಯಲ್ಲಿ ಸಂಘದ ಕಾರ್ಯದ ಪ್ರಸ್ತುತ ಸ್ಥಿತಿಗತಿ, ಕಾರ್ಯ ವಿಸ್ತಾರ ಹಾಗೂ ಕಾರ್ಯಕರ್ತರ ವಿಕಾಸದ ಯೋಜನೆಗಳು ಹಾಗೂ ದೇಶದ ವರ್ತಮಾನ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. 

35

ಸಭೆಯಲ್ಲಾದ ತೀರ್ಮಾನಗಳ ಕುರಿತು ಮಾಧ್ಯಮಗಳಿಗೆ ಅ. 30ರಂದು ಮಾಹಿತಿ ಒದಗಿಸಲಾಗುವುದು ಎಂದು ಅಖಿಲ ಭಾರತ ಸಹ ಪ್ರಚಾರಕ ನರೇಂದ್ರ ಕುಮಾರ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು.

45

ಸಭೆಯ ಆರಂಭದಲ್ಲಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದರಲ್ಲಿ ಸಂಸ್ಕಾರ ಭಾರತೀಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಅಮೀರ್‌ ಚಂದ್‌, ಕನ್ನಡ ಲೇಖಕರಾದ ಜಿ. ವೆಂಕಟಸುಬ್ಬಯ್ಯ, ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ, ಖ್ಯಾತ ಕವಿ ಡಾ. ಎಚ್‌. ಸಿದ್ದಲಿಂಗಯ್ಯ, ರಾಜಕಾರಣಿ ಆಸ್ಕರ್‌ ಫೆರ್ನಾಂಡಿಸ್‌, ಸ್ವಾಮಿ ಅಧ್ಯಾತ್ಮಾನಂದಜೀ, ಸ್ವಾಮಿ ಓಂಕಾರಾನಂಜೀ, ಸ್ವಾಮಿ ಅರುಣಗಿರಿಜೀ, ಹಿರಿಯ ಪತ್ರಕರ್ತ ಶ್ಯಾಮ್‌ ಖೋಸ್ಲಾ ಸೇರಿದಂತೆ ಹಲವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

55

ಝಡ್‌ ಪ್ಲಸ್‌ ಭದ್ರತೆ ಹೊಂದಿರುವ ಡಾ. ಮೋಹನ ಭಾಗವತ್‌ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಆರ್‌ಎಸ್‌ಎಸ್‌ ಮುಖಂಡರು ಆಗಮಿಸಿದ ಕಾರಣ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಸುತ್ತಲೂ ಸೂಕ್ತ ಭದ್ರತೆ ಒದಗಿಸಲಾಗಿತ್ತು. ಗರಗ ರಸ್ತೆ ತುಂಬೆಲ್ಲಾ ಕೇಸರಿ ಧ್ವಜಗಳು ರಾರಾಜಿಸುತ್ತಿದ್ದವು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಧಾರವಾಡ
ಮೋಹನ್ ಭಾಗವತ್
ಆರ್‌ಎಸ್‌ಎಸ್‌

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved