MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Hassan: ಕಾಂಪೌಂಡ್ ತೆರವು ಪ್ರಕರಣ: ಪುಷ್ಪಾ ಅರುಣ್‌ಕುಮಾರ್‌ಗೆ ಸವಾಲು ಹಾಕಿದ ದೇವರಾಜು

Hassan: ಕಾಂಪೌಂಡ್ ತೆರವು ಪ್ರಕರಣ: ಪುಷ್ಪಾ ಅರುಣ್‌ಕುಮಾರ್‌ಗೆ ಸವಾಲು ಹಾಕಿದ ದೇವರಾಜು

ವಿವಾದಿತ ನಿವೇಶನದ ಜಿಪಿಎ ಹೊಂದಿರುವ ದೇವರಾಜು, ನಟ ಯಶ್ ತಾಯಿ ಪುಷ್ಪಾ ಅವರಿಗೆ ಕಾನೂನುಬದ್ಧ ದಾಖಲೆಗಳನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ. ನ್ಯಾಯಾಲಯದ ಆದೇಶದಂತೆ ಕಾಂಪೌಂಡ್ ತೆರವುಗೊಳಿಸಲಾಗಿದೆ ಎಂದು ಹೇಳಿದ ಅವರು, ಪುಷ್ಪಾ ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

2 Min read
Author : Kannadaprabha News
Published : Jan 14 2026, 07:18 AM IST
Share this Photo Gallery
  • FB
  • TW
  • Linkdin
  • Whatsapp
16
ಪುಷ್ಪಾ ಅರುಣ್‌ಕುಮಾರ್‌ಗೆ ಸವಾಲು
Image Credit : Asianet News

ಪುಷ್ಪಾ ಅರುಣ್‌ಕುಮಾರ್‌ಗೆ ಸವಾಲು

ನಾನು ಕೂಡ ನಟ ಯಶ್ ಅವರ ಅಭಿಮಾನಿ. ಆದರೆ ಯಶ್‌ ತಾಯಿ ಪುಷ್ಪ ಅವರ ಬಳಿ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ಬದ್ಧ ದಾಖಲೆಗಳಿದ್ದರೆ ಅವುಗಳನ್ನು ಕೂಡಲೇ ಬಹಿರಂಗಪಡಿಸಲಿ. ಅದುಬಿಟ್ಟು ಇಲ್ಲಸಲ್ಲದ ಆರೋಪ ಮಾಡಬಾರದು. ಬೇಕಾದರೆ ಈ ಬಗ್ಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ಆಣೆ ಮಾಡಲು ಸಿದ್ದರಿದ್ದೇವೆ ಎಂದು ನಿವೇಶನದ ಜಿಪಿಎ ಹೊಂದಿರುವ ದೇವರಾಜು ಸವಾಲು ಹಾಕಿದ್ದಾರೆ.

26
ಸಾಮಾನ್ಯ ಅಧಿಕಾರ ಪತ್ರ
Image Credit : Asianet News

ಸಾಮಾನ್ಯ ಅಧಿಕಾರ ಪತ್ರ

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ವಿವಾದಿತ ನಿವೇಶನವು 1965ರಿಂದಲೂ ಮೂಲ ಮಾಲೀಕರಾಗಿರುವ ಕರೀಗೌಡ ಸಿದ್ದೇಗೌಡ ಎಂಬುವರು 5 ಗುಂಟೆ ಜಾಗವನ್ನು ಇಬ್ಬರಿಗೆ ಮಾರಾಟ ಮಾಡುತ್ತಾರೆ. ಒಬ್ಬರು ರಾಮಕೃಷ್ಣ, ಮತ್ತೊಬ್ಬರು ನಮ್ಮ ಮಾಲೀಕರಾದ ಲಕ್ಷ್ಮಮ್ಮ. ಹಾಗಾಗಿ ಅವರೇ ನನಗೆ ಸಾಮಾನ್ಯ ಅಧಿಕಾರ ಪತ್ರ (ಜಿಪಿಎ) ಬರೆದುಕೊಟ್ಟಿದ್ದಾರೆ ಎಂದು ತಿಳಿಸಿದರು.

Related Articles

Related image1
ಕಿರಾತಕರ ವಿರುದ್ಧ ದೂರು ದಾಖಲಿಸಿದ 'ಪ್ಯಾನ್ ಇಂಡಿಯಾ ಸ್ಟಾರ್' ಅಮ್ಮ ಪುಷ್ಪಾ ಅರುಣ್‌ಕುಮಾರ್!
Related image2
'ಕೊತ್ತಲವಾಡಿ' ಟ್ರೇಲರ್ ರಿಲೀಸ್; ಪುಷ್ಪಾ ಅರುಣ್‌ಕುಮಾರ್ ನಿರ್ಮಾಣದ ಸಿನಿಮಾಗೆ ಭರವಸೆ ಬೆಳಕು...!
36
ನಿಯಮ ಉಲ್ಲಂಘಿಸಿ ಕಾಂಪೌಂಡ್ ನಿರ್ಮಾಣ
Image Credit : Asianet News

ನಿಯಮ ಉಲ್ಲಂಘಿಸಿ ಕಾಂಪೌಂಡ್ ನಿರ್ಮಾಣ

ಈ ಜಿಪಿಎಗೆ ಲಕ್ಷ್ಮಮ್ಮ ಅವರ ಮಕ್ಕಳ ಸಹಿ ಸಹ ಇದ್ದು, ಪ್ರಕ್ರಿಯೆ ಸಂಪೂರ್ಣ ಕಾನೂನುಬದ್ಧವಾಗಿದೆ. 2025ರ ನ.11 ರಂದು ನಿವೇಶನದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿತ್ತು. ಆದರೂ ನಿಯಮ ಉಲ್ಲಂಘಿಸಿ ಕಾಂಪೌಂಡ್ ನಿರ್ಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನ್ಯಾಯಾಲಯದ ಆದೇಶದಂತೆ ಕಾಂಪೌಂಡ್ ತೆರವುಗೊಳಿಸಲಾಗಿದೆ ಎಂದು ದೇವರಾಜು ಹೇಳಿದರು.

46
ತೆರಿಗೆ ಅಧಿಕಾರಿ ಕುಮ್ಮಕ್ಕು
Image Credit : Asianet News

ತೆರಿಗೆ ಅಧಿಕಾರಿ ಕುಮ್ಮಕ್ಕು

ವಿವಾದಕ್ಕೆ ಮತ್ತಷ್ಟು ಗೊಂದಲ ಉಂಟಾಗಲು ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ನಟರಾಜ ಅವರು ಯಶ್ ಅವರ ತಾಯಿಗೆ ಕುಮಕ್ಕು ನೀಡುತ್ತಿರುವುದೇ ಕಾರಣ ಎಂದು ಆರೋಪಿಸಿದರು. ಯಶ್ ಅವರ ತಾಯಿ ನಿರ್ಮಿಸಿರುವ ಮನೆ ಕೂಡ ಕಾಲುದಾರಿಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದೆ. 

ಇದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇವೆ. ನನಗೆ ಜಿಪಿಎ ನೀಡಿರುವ 95 ವರ್ಷದ ಲಕ್ಷ್ಮಮ್ಮ ಅವರು ಇಂದಿಗೂ ಬದುಕಿದ್ದು, ಮೈಸೂರಿನಲ್ಲಿ ವಾಸವಾಗಿದ್ದಾರೆ. ಬೇಕಿದ್ದರೆ ಯಾರೂ ಬೇಕಾದರೂ ಅವರನ್ನು ಪ್ರಶ್ನಿಸಬಹುದು.

56
 ನಮ್ಮ ವಿರುದ್ಧ ಸುಳ್ಳು ಆರೋಪ
Image Credit : Asianet News

ನಮ್ಮ ವಿರುದ್ಧ ಸುಳ್ಳು ಆರೋಪ

ಈ ಪ್ರಕರಣ ಸಂಬಂಧ ನಮ್ಮ ವಿರುದ್ಧ ಸುಳ್ಳು ಆರೋಪಗಳೊಂದಿಗೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರತಿಯಾಗಿ ಯಶ್ ಅವರ ತಾಯಿ ಪುಷ್ಪ ಅವರಿಗೆ ನಿವೇಶನ ಮಾರಾಟ ಮಾಡಿರುವ ದುರ್ಗಾಪ್ರಸಾದ್ ಹಾಗೂ ನಟರಾಜ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದು ದೇವರಾಜು ತಿಳಿಸಿದರು.

66
ದಾಖಲೆಗಳಿಲ್ಲದೆ ಇಲ್ಲಸಲ್ಲದ ಆರೋಪ
Image Credit : stockPhoto

ದಾಖಲೆಗಳಿಲ್ಲದೆ ಇಲ್ಲಸಲ್ಲದ ಆರೋಪ

ಲಕ್ಷ್ಮಮ್ಮ ಅವರೇ ಈ ನಿವೇಶನದ ಮೂಲ ಮಾಲೀಕರಾಗಿದ್ದು, ಯಶ್ ಅವರ ತಾಯಿ ವೀಣಾ ಎಂಬುವರಿಂದ ನಿವೇಶನ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಆದರೆ ನಿವೇಶನ ಇನ್ನೂ ಲಕ್ಷ್ಮಮ್ಮ ಅವರ ಹೆಸರಿನಲ್ಲಿಯೇ ಉಳಿದಿದ್ದು, ಅನ್ಯಸಂಕ್ರಮಣ ಸೇರಿದಂತೆ ಎಲ್ಲಾ ಅಗತ್ಯ ಕಾನೂನು ದಾಖಲೆಗಳು ನಮ್ಮ ವಶದಲ್ಲಿವೆ. ಪುಷ್ಪ ಅವರ ಬಳಿ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ಬದ್ಧ ದಾಖಲೆಗಳಿದ್ದರೆ ಅವುಗಳನ್ನು ಬಹಿರಂಗವಾಗಿ ತೋರಿಸಬೇಕು. 

ದಾಖಲೆಗಳಿಲ್ಲದೆ ಇಲ್ಲಸಲ್ಲದ ಆರೋಪ ಮಾಡಿ ಪೊಲೀಸ್ ಠಾಣೆಗೆ ದೂರು ನೀಡುವುದು ಸರಿಯಲ್ಲ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದೇವರಾಜೇಗೌಡ ಸಂಬಂಧಿಕಾರ ದಿಲೀಪ್, ಕುಮಾರ್, ಸುಶೀಲೇಗೌಡ, ಶೇಖರ್ ಇತರರು ಇದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಯಶ್
ಹಾಸನ

Latest Videos
Recommended Stories
Recommended image1
ಬೆಂಗಳೂರು ನಗರದಲ್ಲಿ 16 ಅಕ್ರಮ ಬಾಂಗ್ಲಾದೇಶದ ನಿವಾಸಿಗಳ ಬಂಧನ
Recommended image2
ಅಕ್ರಮ ಕಟ್ಟಡ ಪರಿಶೀಲಿಸಿ ತೆರವಿಗೆ ತಂಡ ರಚಿಸಲು ಮಹೇಶ್ವರ್ ರಾವ್ ಸೂಚನೆ
Recommended image3
ಸಂಕ್ರಾಂತಿ ದಿನ ನಮ್ಮ ಮೆಟ್ರೋಗೆ ಮತ್ತೊಂದು ರೈಲು ಸೇರ್ಪಡೆ, ಪ್ರಯಾಣಿಕರಿಗೆ ಗುಡ್ ನ್ಯೂಸ್
Related Stories
Recommended image1
ಕಿರಾತಕರ ವಿರುದ್ಧ ದೂರು ದಾಖಲಿಸಿದ 'ಪ್ಯಾನ್ ಇಂಡಿಯಾ ಸ್ಟಾರ್' ಅಮ್ಮ ಪುಷ್ಪಾ ಅರುಣ್‌ಕುಮಾರ್!
Recommended image2
'ಕೊತ್ತಲವಾಡಿ' ಟ್ರೇಲರ್ ರಿಲೀಸ್; ಪುಷ್ಪಾ ಅರುಣ್‌ಕುಮಾರ್ ನಿರ್ಮಾಣದ ಸಿನಿಮಾಗೆ ಭರವಸೆ ಬೆಳಕು...!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved