MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಕೊಡಗಿನಲ್ಲಿ ಮಳೆ ಅಬ್ಬರ: ಕಾವೇರಿ ಅಬ್ಬರಕ್ಕೆ ಭಾಗಮಂಡಲ ಜಲಾವೃತ, ನಾಪೋಕ್ಲು ರಸ್ತೆ ಸಂಪರ್ಕ ಕಡಿತ

ಕೊಡಗಿನಲ್ಲಿ ಮಳೆ ಅಬ್ಬರ: ಕಾವೇರಿ ಅಬ್ಬರಕ್ಕೆ ಭಾಗಮಂಡಲ ಜಲಾವೃತ, ನಾಪೋಕ್ಲು ರಸ್ತೆ ಸಂಪರ್ಕ ಕಡಿತ

ಕರ್ನಾಟಕದ ಸ್ಕಾಟ್ಲೆಂಡ್ ಖ್ಯಾತೊಯ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಪ್ರವಾಹದ ನೀರು ಭಾಗಂಡೇಶ್ವರ ದೇವಾಲಯದ ಆವರಣಕ್ಕೆ ನುಗ್ಗಿದ್ದು, ಪ್ರಮುಖ ರಸ್ತೆಗಳು ಮುಳುಗಡೆಯಾಗಿವೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ.

1 Min read
Author : Sathish Kumar KH
Published : Aug 01 2026, 09:17 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಕೊಡಗು (ಆ.01): ಕರ್ನಾಟಕದ ಸ್ಕಾಟ್ಲೆಂಡ್ ಖ್ಯಾತಿಯ ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ (Heavy Rain) ಇದೀಗ ಪ್ರವಾಹದ (Flood) ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಬ್ರಹ್ಮಗಿರಿ (Brahmagiri) ಹಾಗೂ ತಲಕಾವೇರಿ (Talacauvery) ಬೆಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮವಾಗಿ ಭಾಗಮಂಡಲದ (Bhagamandala) ತ್ರಿವೇಣಿ ಸಂಗಮ (Triveni Sangama) ಸಂಪೂರ್ಣ ಜಲಾವೃತವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

ಕಾವೇರಿ (Cauvery), ಕನಿಕೆ (Kannike) ಮತ್ತು ಸುಜ್ಯೋತಿ (Sujyothi) ನದಿಗಳ ಸಂಗಮ ಸ್ಥಳವಾಗಿರುವ ತ್ರಿವೇಣಿ ಸಂಗಮದ ಸ್ನಾನಘಟ್ಟ (Bathing Ghat) ಸಂಪೂರ್ಣ ನೀರಿನಲ್ಲಿ ಮುಳುಗಿದ್ದು, ಅದರ ಸಮೀಪದಲ್ಲಿದ್ದ ಅಂಗಡಿ-ಮುಂಗಟ್ಟುಗಳಿಗೂ ಪ್ರವಾಹದ ನೀರು ನುಗ್ಗಿದೆ. ಇದರಿಂದ ಸ್ಥಳೀಯ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಜೊತೆಗೆ, ಪ್ರಸಿದ್ಧ ಭಾಗಂಡೇಶ್ವರ ದೇವಾಲಯ (Bhagandeshwara Temple) ಆವರಣಕ್ಕೂ ಪ್ರವಾಹದ ನೀರು ನುಗ್ಗಲಾರಂಭಿಸಿದ್ದು, ಭಕ್ತರಲ್ಲಿ ಆತಂಕ ಮೂಡಿಸಿದೆ.

Related Articles

Related image1
ಕಾವೇರಿ ಕೊಳ್ಳದಲ್ಲಿ ವರುಣನ ಆರ್ಭಟ: ಕಬಿನಿ ಭರ್ತಿ, ಹಾರಂಗಿ ಜಲಾಶಯದಿಂದ ಭಾರಿ ನೀರು ತಮಿಳುನಾಡಿಗೆ ಬಿಡುಗಡೆ!
Related image2
ಕಾವೇರಿ ಕಿಚ್ಚು ಏರಿದ ನಡುವೆ, ನಳನಳಿಸಿದ ಕಬಿನಿ, ಹಾರಂಗಿ ಜಲಾಶಯ!
35
Image Credit : Asianet News

ರಸ್ತೆಗಳು ಜಲಾವೃತ, ಮೇಲ್ಸೇತುವೆ ಮೂಲಕ ಮಾತ್ರ ಸಂಚಾರ

ಭಾಗಮಂಡಲ–ನಾಪೋಕ್ಲು (Napoklu) ರಸ್ತೆಯ ಮೇಲೆ ಪ್ರವಾಹದ ನೀರು ಹರಿಯುತ್ತಿದ್ದು, ಭಾಗಮಂಡಲ–ಮಡಿಕೇರಿ (Madikeri) ರಸ್ತೆಯ ಕೆಳಭಾಗವೂ ಜಲಾವೃತವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಮೇಲ್ಸೇತುವೆ (Flyover) ಮೂಲಕ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೆಳಭಾಗದ ರಸ್ತೆಯಲ್ಲಿ ಯಾರೂ ಸಂಚರಿಸದಂತೆ ಪೊಲೀಸರು (Police) ಸೂಚನಾ ಫಲಕಗಳನ್ನು ಅಳವಡಿಸಿದ್ದು, ಸಾರ್ವಜನಿಕರು ಅನಗತ್ಯವಾಗಿ ಪ್ರವಾಹದ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.

45
Image Credit : Asianet News

ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಆತಂಕ

ಬ್ರಹ್ಮಗಿರಿ ಬೆಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿರುವ ಕಾರಣ ಕಾವೇರಿ ನದಿಯ (Cauvery River) ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಇದರಿಂದ ನದಿ ಪಾತ್ರದ (River Basin) ಗ್ರಾಮಗಳ ನಿವಾಸಿಗಳಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ.

55
Image Credit : Asianet News

ಹವಾಮಾನ ಇಲಾಖೆ (IMD) ಈಗಾಗಲೇ ಕೊಡಗು ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ. ಮಳೆ ಮತ್ತಷ್ಟು ತೀವ್ರಗೊಂಡರೆ ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚಿಸುವ ಸಾಧ್ಯತೆ ಇದೆ. ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಜಿಲ್ಲಾಡಳಿತ ಮತ್ತು ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕೊಡಗು
ಕರ್ನಾಟಕ ಸುದ್ದಿ
ಕರ್ನಾಟಕ ಮಳೆ
ಕರ್ನಾಟಕದ ನದಿಗಳು
ಕಾವೇರಿ
Latest Videos
Recommended Stories
Recommended image1
ಜಮೀರ್ ಅಹ್ಮದ್ ಖಾನ್ ಜನ್ಮದಿನ ಸಂಭ್ರಮ: ನಾಯಕರು, ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ
Recommended image2
ದೇಗುಲ ಪ್ರವೇಶಿಸಿದ್ದಕ್ಕೆ ದಲಿತ ಯುವಕರಿಗೆ ಹಿಗ್ಗಾಮುಗ್ಗಾ ಹಲ್ಲೆ ಆರೋಪ -ದಾವಣಗೆರೆಯಲ್ಲಿ ಇವತ್ತು ಏನಾಯ್ತು?
Recommended image3
ಉತ್ತರ ಪ್ರದೇಶಕ್ಕೆ 19,208 ಕೋಟಿ ಕೊಟ್ಟ ಕೇಂದ್ರ.. ಕರ್ನಾಟಕಕ್ಕೆ ಮೋದಿ ಕೊಟ್ಟಿದ್ದು ಎಷ್ಟು ಕೋಟಿ..?
Related Stories
Recommended image1
ಕಾವೇರಿ ಕೊಳ್ಳದಲ್ಲಿ ವರುಣನ ಆರ್ಭಟ: ಕಬಿನಿ ಭರ್ತಿ, ಹಾರಂಗಿ ಜಲಾಶಯದಿಂದ ಭಾರಿ ನೀರು ತಮಿಳುನಾಡಿಗೆ ಬಿಡುಗಡೆ!
Recommended image2
ಕಾವೇರಿ ಕಿಚ್ಚು ಏರಿದ ನಡುವೆ, ನಳನಳಿಸಿದ ಕಬಿನಿ, ಹಾರಂಗಿ ಜಲಾಶಯ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved