MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮದುವೆಗೆ 15 ದಿನ ಮುನ್ನವೇ ಮಸಣ ಸೇರಿದ ಯುವತಿ; ಆಪತ್ತು ತಂದ ಅಣ್ಣನ ಬೈಕ್!

ಮದುವೆಗೆ 15 ದಿನ ಮುನ್ನವೇ ಮಸಣ ಸೇರಿದ ಯುವತಿ; ಆಪತ್ತು ತಂದ ಅಣ್ಣನ ಬೈಕ್!

ಶಿವಮೊಗ್ಗದಲ್ಲಿ ಮದುವೆಗೆ ಕೇವಲ 15 ದಿನಗಳು ಬಾಕಿ ಇರುವಾಗ ಯುವತಿ ಕವಿತಾ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾಳೆ. ಈ ಘಟನೆ ಮದುವೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ದುಃಖ ಆವರಿಸಿದೆ.

1 Min read
Sathish Kumar KH
Published : Sep 08 2025, 09:21 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News

ಶಿವಮೊಗ್ಗ (ಸೆ.08): ಇನ್ನೇನು ಹದಿನೈದು ದಿನಗಳಲ್ಲಿ ಮದುವೆಯ ಸಂಭ್ರಮದಲ್ಲಿ ಮನೆ ತುಂಬಿರುತ್ತಿದ್ದ ಯುವತಿಯೊಬ್ಬಳು ಭೀಕರ ರಸ್ತೆ ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದಾಳೆ.

28
Image Credit : Asianet News

ಈ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಮಲವಗೊಪ್ಪ ಗ್ರಾಮದ ಬಳಿ ನಡೆದಿದೆ. ಈ ಸಾವಿನಿಂದಾಗಿ ಇಡೀ ಕುಟುಂಬದಲ್ಲಿ ಮದುವೆಯ ಸಂಭ್ರಮದ ಬದಲು ಸೂತಕದ ವಾತಾವರಣ ಆವರಿಸಿದೆ.

Related Articles

Related image1
ಶಿವಮೊಗ್ಗ: 8 ಮಂದಿ ಭಕ್ತರು ಪ್ರಯಾಣಿಸುತ್ತಿದ್ದ ಜೀಪ್ ಕೊಡಚಾದ್ರಿ ಬೆಟ್ಟದಲ್ಲಿ ಪಲ್ಟಿ!
Related image2
ಮದ್ವೆ ದಿನ ಪತಿಯ ನೋಡಿ ಮೂರ್ಛೆ ಹೋದ ಮದುಮಗಳು! ಮುಂದಿರೋದೇ ಭಾರಿ ಟ್ವಿಸ್ಟು...
38
Image Credit : Asianet News

ದುಮ್ಮಳ್ಳಿ ತಾಂಡಾ ನಿವಾಸಿಯಾಗಿರುವ 'ಕವಿತಾ (26)' ಅಪಘಾತದಲ್ಲಿ ಮೃತಪಟ್ಟ ಯುವತಿ. ಕವಿತಾ ಅವರು ತಮ್ಮ ಸಹೋದರರೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

48
Image Credit : Asianet News

ಈ ವೇಳೆ, ಲಗೇಜ್ ತೆಗೆದುಕೊಂಡು ಹೋಗುತ್ತಿದ್ದ ಮತ್ತೊಬ್ಬ ಬೈಕ್ ಸವಾರ ಇವರ ಬೈಕಿಗೆ ತಾಗಿಸಿದ್ದಾನೆ. ಇದರಿಂದಾಗಿ ಬೈಕ್‌ನ ನಿಯಂತ್ರಣ ತಪ್ಪಿ ಕವಿತಾ ಸಹೋದರ ಪಾದಚಾರಿ ಮಾರ್ಗದ ಮೇಲೆ ಬಿದ್ದಿದ್ದಾನೆ. ಆದರೆ, ಕವಿತಾ ನೇರವಾಗಿ ರಸ್ತೆಗೆ ಬಿದ್ದಿದ್ದಾರೆ.

58
Image Credit : Asianet News

ದುರದೃಷ್ಟವಶಾತ್, ಅದೇ ಸಮಯದಲ್ಲಿ ವೇಗವಾಗಿ ಬರುತ್ತಿದ್ದ ಸಿಟಿ ಬಸ್ ಕವಿತಾ ಅವರ ಮೇಲೆ ಹರಿದಿದೆ. ಪರಿಣಾಮವಾಗಿ ತೀವ್ರ ಗಾಯಗಳಾದ ಕವಿತಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

68
Image Credit : Asianet News

ಕುಟುಂಬದಲ್ಲಿ ಶೋಕದ ವಾತಾವರಣ:

ಮದುವೆಗೆ ಸಿದ್ಧತೆಗಳು ನಡೆದಿರುವಾಗ ಸಂಭವಿಸಿದ ಈ ದುರ್ಘಟನೆ ಇಡೀ ಕುಟುಂಬ ಮತ್ತು ಗ್ರಾಮದ ಜನರಲ್ಲಿ ಆಘಾತ ಮತ್ತು ದುಃಖವನ್ನುಂಟು ಮಾಡಿದೆ. 15 ದಿನಗಳ ನಂತರ ಹಸೆಮಣೆ ಏರಬೇಕಿದ್ದ ಯುವತಿ ಈಗ ಇನ್ನಿಲ್ಲ ಎಂಬ ಸುದ್ದಿ ಕವಿತಾ ಅವರ ಮನೆಯಲ್ಲಿ ಶೋಕದ ಛಾಯೆ ಆವರಿಸುವಂತೆ ಮಾಡಿದೆ.

78
Image Credit : Asianet News

ಕೊನೆಯ ದಿನ ಕಚೇರಿಗೆ ಹೋಗಿ ರಜೆಯನ್ನು ಅಪ್ಲೈ ಮಾಡಿದ್ದ ಕವಿತಾ, ಮದುವೆ ಮುಗಿಸಿಕೊಂಡೇ ವಾಪಸ್ ಕೆಲಸಕ್ಕೆ ಬರುವುದಾಗಿ ಹೇಳಿ ಸಹೋದರನ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಳು. ಆದರೆ, ದುರ್ವಿಧಿ ಮದುವೆಗೂ ಮುನ್ನವೇ ಯುವತಿಯನ್ನು ಮಸಣಕ್ಕೆ ಸೇರಿಸಿದೆ.

88
Image Credit : Asianet News

ಈ ದುರಂತದ ಕುರಿತು ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಶಿವಮೊಗ್ಗ
ಮದುಮಗಳು
ಮಹಿಳೆಯರು
ಅಪಘಾತ
ಮದುವೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved