MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Hulikal Ghat Landslide: ಹುಲಿಕಲ್ ಘಾಟ್‌ನಲ್ಲಿ ವಾಹನಗಳ ಸಂಚಾರ ಆರಂಭ; ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಪುನಾರಂಭ!

Hulikal Ghat Landslide: ಹುಲಿಕಲ್ ಘಾಟ್‌ನಲ್ಲಿ ವಾಹನಗಳ ಸಂಚಾರ ಆರಂಭ; ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಪುನಾರಂಭ!

ಭೂಕುಸಿತದಿಂದಾಗಿ ಮುಚ್ಚಲಾಗಿದ್ದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯ ಹುಲಿಕಲ್ ಘಾಟ್ ಮಾರ್ಗವನ್ನು ಇದೀಗ ಲಘು ವಾಹನಗಳ ಸಂಚಾರಕ್ಕೆ ತೆರೆಯಲಾಗಿದೆ. ತಾತ್ಕಾಲಿಕ ದುರಸ್ತಿ ಮತ್ತು ಸುರಕ್ಷತಾ ಕ್ರಮಗಳ ನಂತರ, ಅಧಿಕಾರಿಗಳು ಸಂಚಾರಕ್ಕೆ ಚಾಲನೆ ನೀಡಿದ್ದು, ಮಲೆನಾಡು-ಕರಾವಳಿ ಪ್ರಯಾಣಿಕರಿಗೆ ನಿರಾಳವಾಗಿದೆ.

2 Min read
Author : Sathish Kumar KH
Published : Jun 13 2026, 10:01 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಶಿವಮೊಗ್ಗ (ಜೂ.13): ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಹುಲಿಕಲ್ ಘಾಟ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಕೊನೆಗೂ ನಿರಾಳತೆಯ ಸುದ್ದಿ ಸಿಕ್ಕಿದೆ. ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ಮಾರ್ಗದಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಶಾಸಕ ಹಾಗೂ ಮಾಜಿ ಸಚಿವ ಹರಗ ಜ್ಞಾನೇಂದ್ರ ಮತ್ತು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಜಂಟಿಯಾಗಿ ವಾಹನ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಈ ಮೂಲಕ ಕಳೆದ ಕೆಲವು ತಿಂಗಳುಗಳಿಂದ ಸಂಚಾರ ದುಸ್ತರವಾಗಿದ್ದ ಮಾರ್ಗದಲ್ಲಿ ಮತ್ತೆ ವಾಹನಗಳ ಸದ್ದು ಕೇಳಲಾರಂಭಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
Image Credit : Asianet News

ಏನಾಗಿತ್ತು? ಸಂಪೂರ್ಣ ಹಿನ್ನೆಲೆ:

ಕಳೆದ ಏಪ್ರಿಲ್ 9 ರಂದು ಹುಲಿಕಲ್ ಘಾಟ್‌ನ ಪ್ರಮುಖ ಹೇರ್‌ಪಿನ್ ತಿರುವಿನಲ್ಲಿ ಭಾರಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಭೂಕುಸಿತ ಉಂಟಾಗಿತ್ತು. ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ 5 ಅಡಿಯಷ್ಟು ಮಣ್ಣು ಕುಸಿದು ಬಿದ್ದಿತ್ತು. ಇದರ ಬೆನ್ನಲ್ಲೇ ರಸ್ತೆಯ ಮೇಲ್ಭಾಗದಲ್ಲೂ ದೊಡ್ಡ ಬಿರುಕುಗಳು ಕಾಣಿಸಿಕೊಂಡಿದ್ದವು. ಸಾರ್ವಜನಿಕರು ಮತ್ತು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತವು ತಕ್ಷಣವೇ ಎಚ್ಚೆತ್ತುಕೊಂಡು, ಮಾಸ್ತಿ ಕಟ್ಟೆಯಿಂದ ಹೊಸ ಅಂಗಡಿವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಬಳಿಕ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು.

Related Articles

Related image1
ಹುಲಿಕಲ್ ಘಾಟ್ ದುರಸ್ತಿ ವೇಳೆ 3 ಕಾರ್ಮಿಕರು ಬಲಿ ಹಿನ್ನೆಲೆ ಮುಂದಿನ ಆದೇಶದವರೆಗೆ ವಾಹನ ಸಂಚಾರ ಸಂಪೂರ್ಣ ಬಂದ್!
Related image2
ಹುಲಿಕಲ್ ಘಾಟ್ ಮಣ್ಣು ಕುಸಿತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
36
Image Credit : Asianet News

ನಂತರದ ದಿನಗಳಲ್ಲಿ ಸಾರ್ವಜನಿಕರ ತೀವ್ರ ಕಷ್ಟಗಳನ್ನು ಮನಗಂಡು, ಚಂಡಿಕಾಂಬ ದೇವಸ್ಥಾನದ ಬಳಿ ಮೆಟ್ಟಿಲುಗಳನ್ನು ಬಳಸಿಕೊಂಡು ವಾಹನಗಳ ಅದಲು-ಬದಲು (ಷಟಲ್ ಸರ್ವೀಸ್) ಮಾಡುವ ಮೂಲಕ ಪ್ರಯಾಣಕ್ಕೆ ತಾತ್ಕಾಲಿಕ ಅನುವು ಮಾಡಿಕೊಡಲಾಗಿತ್ತು. ಆದರೆ ಇದು ಪ್ರಯಾಣಿಕರಿಗೆ ತೀವ್ರ ಕಿರಿಕಿರಿ ಉಂಟುಮಾಡಿತ್ತು.

46
Image Credit : Asianet News

ತಾತ್ಕಾಲಿಕ ದುರಸ್ತಿ ಮತ್ತು ಸುರಕ್ಷತಾ ಕ್ರಮಗಳು:

ಸದ್ಯ ಲೋಕೋಪಯೋಗಿ ಇಲಾಖೆ (PWD) ಕಾರ್ಯಪಾಲಕ ಇಂಜಿನಿಯರ್, ಪೊಲೀಸ್ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಜಂಟಿ ವರದಿ ಮತ್ತು ಪ್ರಸ್ತಾವನೆಯನ್ನು ಪರಿಶೀಲಿಸಿದ ನಂತರ ಜಿಲ್ಲಾಡಳಿತ ಈ ಮಹತ್ವದ ತೀರ್ಮಾನ ಕೈಗೊಂಡಿದೆ.

ಘಾಟ್ ರಸ್ತೆಯ ತಿರುವಿನಲ್ಲಿ ಭದ್ರವಾದ ತಡೆಗೋಡೆ (Retaining Wall) ನಿರ್ಮಿಸಲಾಗಿದ್ದು, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ಲೀನ್ ಕಾಂಕ್ರೀಟ್ ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ಸುಸ್ಥಿತಿಗೆ ತರಲಾಗಿದೆ. ಘಾಟಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆಯಾಗಿ ಈ ಕೆಳಗಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ:

56
Image Credit : Asianet News

ಎಚ್ಚರಿಕೆ ಫಲಕಗಳು: ಘಾಟಿ ರಸ್ತೆಯುದ್ದಕ್ಕೂ ತಡೆಗೋಡೆ ಹಾಗೂ ಅಗತ್ಯ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.

ಮಾಹಿತಿ ಸೂಚಿಗಳು: ಸವಾರರ ಗಮನ ಸೆಳೆಯಲು ಸೂಕ್ತ ಮಾಹಿತಿ ಮತ್ತು ಸೂಚನಾ ಫಲಕಗಳನ್ನು ಹಾಕಲಾಗಿದೆ.

ರಾತ್ರಿ ಸಂಚಾರಕ್ಕೆ ಸುಲಭ: ರಾತ್ರಿ ವೇಳೆ ವಾಹನ ಸವಾರರ ಅನುಕೂಲಕ್ಕಾಗಿ ರಸ್ತೆಯ ಇಕ್ಕೆಲಗಳಲ್ಲಿ 'ಕ್ಯಾಟ್ ಐ' (Cat Eye) ಹಾಗೂ ಸೋಲಾರ್ ಸ್ಟಡ್ಸ್‌ಗಳನ್ನು (Solar Studs) ಅಳವಡಿಸಿ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ.

66
Image Credit : Asianet News

ಪ್ರಸ್ತುತ ಕೇವಲ ಲಘು ವಾಹನಗಳಿಗೆ (ಕಾರು, ಜೀಪ್, ಆಟೋ, ದ್ವಿಚಕ್ರ ವಾಹನಗಳು) ಮಾತ್ರ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದ್ದು, ಭಾರಿ ವಾಹನಗಳ ಸಂಚಾರಕ್ಕೆ ಇನ್ನೂ ಕಾಯಬೇಕಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಶಿವಮೊಗ್ಗ
ಕರ್ನಾಟಕ ಸುದ್ದಿ
ರಸ್ತೆ ಸಾರಿಗೆ
ಪ್ರವಾಸ

Latest Videos
Recommended Stories
Recommended image1
Now Playing
ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Recommended image2
Now Playing
ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Recommended image3
How to save money: ಲೈಫ್‌ಸ್ಟೈಲ್‌ ಬದಲಾಯಿಸದೆ ಈ 7 ಸೂತ್ರದಿಂದ ಹಣ ಉಳಿತಾಯ ಮಾಡಿದ ಬೆಂಗಳೂರಿನ ವ್ಯಕ್ತಿ! ಅದೇನು?
Related Stories
Recommended image1
ಹುಲಿಕಲ್ ಘಾಟ್ ದುರಸ್ತಿ ವೇಳೆ 3 ಕಾರ್ಮಿಕರು ಬಲಿ ಹಿನ್ನೆಲೆ ಮುಂದಿನ ಆದೇಶದವರೆಗೆ ವಾಹನ ಸಂಚಾರ ಸಂಪೂರ್ಣ ಬಂದ್!
Recommended image2
ಹುಲಿಕಲ್ ಘಾಟ್ ಮಣ್ಣು ಕುಸಿತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved