MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಶಿವಮೊಗ್ಗ-ಶೃಂಗೇರಿ-ಮಂಗಳೂರು ರೈಲು ಮಾರ್ಗ: ಈ 5 ಜಿಲ್ಲೆಗಳಿಗೆ ಗುಡ್‌ ನ್ಯೂಸ್! ನೂತನ ಮಾರ್ಗ ಎಲ್ಲಿಂದ ಎಲ್ಲಿಗೆ?

ಶಿವಮೊಗ್ಗ-ಶೃಂಗೇರಿ-ಮಂಗಳೂರು ರೈಲು ಮಾರ್ಗ: ಈ 5 ಜಿಲ್ಲೆಗಳಿಗೆ ಗುಡ್‌ ನ್ಯೂಸ್! ನೂತನ ಮಾರ್ಗ ಎಲ್ಲಿಂದ ಎಲ್ಲಿಗೆ?

ಶಿವಮೊಗ್ಗ: ಮಲೆನಾಡು-ಕರಾವಳಿ ಸಂಪರ್ಕದ ಕೊಂಡಿ ಎನಿಸಿಕೊಂಡಿರುವ ನೂತನ ಶಿವಮೊಗ್ಗ-ಮಂಗಳೂರು ರೈಲು ಮಾರ್ಗ ನಿರ್ಮಾಣ ಕಾರ್ಯಕ್ಕೆ ವೇಗ ಸಿಕ್ಕಿದ್ದು, ಈ ಯೋಜನೆ ಸಾಕಾರಗೊಂಡರೆ ಐದು ಜಿಲ್ಲೆಗಳಿಗೆ ರೈಲ್ವೇ ನೇರ ಸಂಪರ್ಕ ಸಿಗಲಿದೆ. ನೂತನ ರೈಲ್ವೇ ಮಾರ್ಗದ ಬಗ್ಗೆ ಕುತೂಹಲ ಮನೆ ಮಾಡಿದೆ. 

1 Min read
Author : Naveen Kodase
Published : May 28 2026, 11:19 AM IST
Share this Photo Gallery
  • FB
  • TW
  • Linkdin
  • Whatsapp
16
ಶಿವಮೊಗ್ಗ ಮಂಗಳೂರು ನೂತನ ರೈಲ್ವೇ ಮಾರ್ಗ
Image Credit : Social Media

ಶಿವಮೊಗ್ಗ ಮಂಗಳೂರು ನೂತನ ರೈಲ್ವೇ ಮಾರ್ಗ

ಬಹುದಿನಗಳ ಕನಸಾಗಿರುವ ಶಿವಮೊಗ್ಗ-ಮಂಗಳೂರು ರೈಲು ಮಾರ್ಗ ಬರೋಬ್ಬರಿ 332 ಕಿಲೋಮೀಟರ್ ಉದ್ದವಿರಲಿದ್ದು, ಈ ನೂತನ ರೈಲ್ವೇ ಟ್ರ್ಯಾಕ್‌ಗೆ ಸುಮಾರು 3,300 ಕೋಟಿ ರುಪಾಯಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಯೋಜನೆ ಸಾಕಾರಗೊಂಡರೇ ಮಲೆನಾಡು, ಅರೆ ಮಲೆನಾಡು ಹಾಗೂ ಕರಾವಳಿಯನ್ನು ಬೆಸೆಯುವ ಕೊಂಡಿಯಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಡಿಪಿಆರ್ ತಯಾರಿಕೆಗೆ ಟೆಂಡರ್ ಆಹ್ವಾನ
Image Credit : Asianet News

ಡಿಪಿಆರ್ ತಯಾರಿಕೆಗೆ ಟೆಂಡರ್ ಆಹ್ವಾನ

ಈ ರೈಲ್ವೇ ಮಾರ್ಗದ ಕುರಿತಂತೆ ಭಾರತೀಯ ರೈಲ್ವೇ ಇಲಾಖೆಯೂ ಈಗಾಗಲೇ ಅಂತಿಮ ಸ್ಥಳ ಸಮೀಕ್ಷೆಗೆ ಅನುಮೋದನೆ ನೀಡಿದೆ. ಇದೀಗ ಈ ಬೃಹತ್ ಯೋಜನೆಯ ಕುರಿತಂತೆ ಡಿಪಿಆರ್‌ ತಯಾರಿಕೆಗೆ ಟೆಂಡರ್‌ ಕರೆಯಲು ರೈಲ್ವೇ ಇಲಾಖೆ ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ.

Related Articles

Related image1
ಶಿವಮೊಗ್ಗ-ತಾಳಗುಪ್ಪ ಮಲೆನಾಡು ರೈಲ್ವೇ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಕೊಟ್ಟ ಸಂಸದ ಬಿ.ವೈ ರಾಘವೇಂದ್ರ!
Related image2
Indian Railways: ರೈಲಲ್ಲಿ ಬ್ಯಾಗ್, ಫೋನ್ ಮರೆತು ಹೋಯ್ತಾ? ಈ ನಂಬರ್‌ಗೆ ಕಾಲ್ ಮಾಡಿದ್ರೆ ಸಾಕು!
36
ಐದು ಜಿಲ್ಲೆಯ ಜನರಿಗೆ ಪ್ರಯೋಜನ!
Image Credit : Asianet News

ಐದು ಜಿಲ್ಲೆಯ ಜನರಿಗೆ ಪ್ರಯೋಜನ!

ಈ ಮೊದಲು 2018ರ ರೈಲ್ವೇ ಬಜೆಟ್‌ನಲ್ಲಿ ಆಗಿನ ಕೇಂದ್ರ ಸಚಿವರಾಗಿದ್ದ ಡಿ.ವಿ. ಸದಾನಂದಗೌಡರು ಮೊದಲ ಬಾರಿಗೆ ಶಿವಮೊಗ್ಗ-ಮಂಗಳೂರು ಮಾರ್ಗದ ಕುರಿತಂತೆ ಪ್ರಸ್ತಾಪ ಮಾಡಿದ್ದರು. ಇದು ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಸೇರಿದಂತೆ ಐದು ಜಿಲ್ಲೆಯ ಜನರಿಗೆ ನೇರ ರೈಲು ಸಂಪರ್ಕ ಸಿಗುವಂತೆ ಮಾಡಲಿದೆ.

46
ನೂತನ ರೈಲ್ವೆ ಮಾರ್ಗ ಎಲ್ಲಿಂದ ಎಲ್ಲಿಗೆ?
Image Credit : https://erail.in/

ನೂತನ ರೈಲ್ವೆ ಮಾರ್ಗ ಎಲ್ಲಿಂದ ಎಲ್ಲಿಗೆ?

ಇದೀಗ ಈ ನೂತನ ರೈಲು ಮಾರ್ಗವು ಎಲ್ಲಿಂದ ಎಲ್ಲಿಗೆ ತಲುಪಲಿದೆ ಎನ್ನುವ ಕುತೂಹಲ ಮನೆ ಮಾಡಿದೆ. ಈ ಮೊದಲು ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ, ಶೃಂಗೇರಿ ಮಾರ್ಗವಾಗಿ ಮಂಗಳೂರು ತಲುಪುವ ಬಗ್ಗೆ ಚಿಂತನೆ ನಡೆದಿತ್ತು ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

56
ಅರಸಾಳುವಿನಿಂದ ಮಂಗಳೂರು ನಡುವೆ ಹೊಸ ರೈಲ್ವೇ ಟ್ರ್ಯಾಕ್?
Image Credit : Asianet News

ಅರಸಾಳುವಿನಿಂದ ಮಂಗಳೂರು ನಡುವೆ ಹೊಸ ರೈಲ್ವೇ ಟ್ರ್ಯಾಕ್?

ಇದೀಗ ಹೊಸ ಬೆಳವಣಿಗೆಯೊಂದರಲ್ಲಿ ಈಗಾಗಲೇ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ ಅರಸಾಳು(ಮಾಲ್ಗುಡಿ ಮ್ಯೂಸಿಯಂ)ವಿನಿಂದ ರಿಪ್ಪನ್‌ಪೇಟೆ, ಹುಂಚ, ಕೋಣಂದೂರು, ತೀರ್ಥಹಳ್ಳಿ, ಶೃಂಗೇರಿ ಮಾರ್ಗವಾಗಿ ಮಂಗಳೂರು ತಲುಪುವಂತೆ ನೂತನ ಟ್ರ್ಯಾಕ್ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.

66
ಶಿವಮೊಗ್ಗ-ಮಂಗಳೂರು ನೂತನ ರೈಲ್ವೇ ಮಾರ್ಗದ ಸವಾಲು
Image Credit : Getty

ಶಿವಮೊಗ್ಗ-ಮಂಗಳೂರು ನೂತನ ರೈಲ್ವೇ ಮಾರ್ಗದ ಸವಾಲು

ಈ ರೈಲ್ವೇ ಮಾರ್ಗವು ಪಶ್ಚಿಮಘಟ್ಟದ ತಪ್ಪಲಿನಲ್ಲಿ ಬರುವುದರಿಂದ ಈ ಮಾರ್ಗ ಅನುಷ್ಟಾನಕ್ಕೆ ಕೇಂದ್ರ ಅರಣ್ಯ ಹಾಗೂ ಪರಿಸರ ಇಲಾಖೆ ಒಪ್ಪಿಗೆ ಪಡೆಯುವುದು ಅಷ್ಟು ಸುಲಭವಲ್ಲ ಎನ್ನಲಾಗುತ್ತಿದೆ. ಯಾಕೆಂದರೆ ಈಗಾಗಲೇ ಈಗಾಗಲೇ ತಾಳಗುಪ್ಪದಿಂದ ಹೊನ್ನಾವರ ರೈಲ್ವೇ ಮಾರ್ಗ ಯೋಜನೆ ಕುಂಟುತ್ತಲೇ ಸಾಗುತ್ತಿದೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಭಾರತೀಯ ರೈಲ್ವೆ
ಶಿವಮೊಗ್ಗ
ಮಂಗಳೂರು

Latest Videos
Recommended Stories
Recommended image1
ರಾಜ್ಯ ರಾಜಕೀಯದಲ್ಲಿ ಕೊನೆ ಹಂತದ ಸಸ್ಪೆನ್ಸ್​: ಡಿಕೆಶಿ ಮುಖದಲ್ಲಿ ನಿನ್ನೆಯಿದ್ದ ನಗು ಇಂದಿಲ್ಲ- ಸಿಎಂ ಖುರ್ಚಿ ಅವರಿಗಾ, ಇವರಿಗಾ
Recommended image2
ಜೇಬಿನಲ್ಲಿ ಐಫೋನ್, ಕೈನಲ್ಲಿ ಗೋಲ್ಡ್ ರಿಂಗ್- ಸೋಶಿಯಲ್ ಮೀಡಿಯಾದಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ವೈರಲ್
Recommended image3
Tantan Dating App; ₹1.66 ಕೋಟಿ ಹೂಡಿಕೆ… ಲಾಭ ಕೇವಲ ₹4,250! ಡೇಟಿಂಗ್ ಆ್ಯಪ್‌ನಲ್ಲಿ ಸಿಕ್ಕ ಸುಂದರಿ ಮಾತು ಕೇಳಿ ಬೆತ್ತಲಾದ ಟೆಕ್ಕಿ!
Related Stories
Recommended image1
ಶಿವಮೊಗ್ಗ-ತಾಳಗುಪ್ಪ ಮಲೆನಾಡು ರೈಲ್ವೇ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಕೊಟ್ಟ ಸಂಸದ ಬಿ.ವೈ ರಾಘವೇಂದ್ರ!
Recommended image2
Indian Railways: ರೈಲಲ್ಲಿ ಬ್ಯಾಗ್, ಫೋನ್ ಮರೆತು ಹೋಯ್ತಾ? ಈ ನಂಬರ್‌ಗೆ ಕಾಲ್ ಮಾಡಿದ್ರೆ ಸಾಕು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved