MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Kalyana Karnataka: ದೋಷಪೂರಿತ ಮೀಸಲು ಸುತ್ತೋಲೆ ಶೀಘ್ರ ರದ್ದು: ಸಚಿವ ರಾಮುಲು

Kalyana Karnataka: ದೋಷಪೂರಿತ ಮೀಸಲು ಸುತ್ತೋಲೆ ಶೀಘ್ರ ರದ್ದು: ಸಚಿವ ರಾಮುಲು

ಕಲಬುರಗಿ(ಫೆ.12):  ರಾಜ್ಯ ಸರ್ಕಾರದ(Government of Karnataka) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಕಾನೂನು ಸಚಿವಾಲಯದ ಜೊತೆ ಚರ್ಚಿಸಿ ಆದಷ್ಟು ಬೇಗ ಉದ್ಯೋಗ ನೇಮಕಾತಿ(Employment Recruitment) ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕದ ಪ್ರತಿಭಾವಂತ ಯುವಕರಿಗೆ ಅಡ್ಡಿಯಾಗಿರುವ ’2020 ರ ದೋಷಪೂರಿತ ಮೀಸಲು ಸುತ್ತೋಲೆ’ ರದ್ದು ಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಲಂ 371 (ಜೆ) ಅನುಷ್ಠಾನದ ಪ್ರಗತಿ ಪರಿಶೀಲನೆ ಹಾಗೂ ಪರಾಮರ್ಶೆಯ ಸಚಿವ ಸಂಪುಟದ ಉಪ ಸಮಿತಿ ಅಧ್ಯಕ್ಷ, ಸಾರಿಗೆ ಸಚಿವ ಬಿ. ಶ್ರೀರಾಮುಲು(B Sriramulu) ಹೇಳಿದ್ದಾರೆ.

1 Min read
Kannadaprabha News | Asianet News
Published : Feb 12 2022, 09:11 AM IST
Share this Photo Gallery
  • FB
  • TW
  • Linkdin
  • Whatsapp
14

ಕಲಬುರಗಿಯ(Kalaburagi) ಕೆಕೆಆರ್‌ಡಿಬಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಲಂ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ(Kalyana Karnataka) ಪ್ರದೇಶಕ್ಕೆ ನೀಡಿರುವ ವಿಶೇಷ ಸ್ಥಾನಮಾನ(Special Status) ಕುರಿತು ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಹಾಗೂ ಪರಾಮರ್ಶಿಸಲು ರಚಿಸಲಾಗಿರುವ ಸಚಿವ ಸಂಪುಟದ ಉಪ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

24

2020 ರ ಜೂನ್‌ ತಿಂಗಳಲ್ಲಿ ಹೊರಬಂದಿರುವ ಕಲ್ಯಾಣ ಕರ್ನಾಟಕ ಉದ್ಯೋಗ ನೇಮಕಾತಿ ಪ್ರಕ್ರಿಯೆ ಕುರಿತಾದ ಸುತ್ತೋಲೆ ಅನೇಕ ದೋಷಪೂರಿತ ಸಂಗತಿಗಳನ್ನು ಒಳಗೊಂಡಿರುವ ವಿಚಾರ ನನ್ನ ಗಮನಕ್ಕೂ ಬಂದಿದೆ. ಶಾಸಕರು, ನೊಂದವರೂ ಈ ಬಗ್ಗೆ ಗಮನ ಸೆಳೆದಿದ್ದಾರೆ. ಈ ಸುತ್ತೋಲೆ ನಮ್ಮ ಭಾಗದವರಿಗೆ ನೇಮಕಾತಿಯಲ್ಲಿ ಅಡ್ಡಿಯಾಗುತ್ತಿದ್ದರೆ ಅದರ ರದ್ದತಿಗೆ ಖಂಡಿತಾ ಕ್ರಮ ಕೈಗೊಳ್ಳುತ್ತೇನೆ. ನಾನೂ ಇದೇ ಪ್ರದೇಶದವನಾದ ಕಾರಣ ನಮ್ಮವರಿಗೆ ಕಲ್ಯಾಣವಾಗಬೇಕು ಎಂಬುದೇ ನನ್ನ ಇಚ್ಛೆ ಎಂದ ಸಚಿವ ರಾಮುಲು

34

ಕಲ್ಯಾಣ ನಾಡಿನ ಯುವಕರಿಗೆ ಆಧುನಿಕ ಕೌಶಲ್ಯ ಕಲಿಯಲು ಅನುವಾಗುವಂತೆ ಕೌಶಲ್ಯ ವಿವಿ ಸ್ಥಾಪನೆಗೆ ತಾವು ಚಿಂತನೆ ನಡೆಸಿದ್ದಾಗಿ ಇದೇ ವೇಳೆ ರಾಮುಲು ತಿಳಿಸಿದರು.

44

ಈ ವಿಚಾರವಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ತಜ್ಞರ ಜೊತೆ ಚರ್ಚಿಸಿ ರೂಪುರೇಷೆ ಸಿದ್ಧಪಡಿಸುವಂತೆ ಯೋಜನಾ ಇಲಾಖೆಯ ಹಿರಿಯ ಅಧಿಕಾರಿ ಶಾಲಿನಿ ರಜನೀಶ್‌ ಅವರಿಗೆ ಸೂಚಿಸಲಾಗಿದೆ. ಅವರೂ ಈ ಕೆಲಸಕ್ಕೆ ಒಪ್ಪಿದ್ದಾರೆ. ಈ ಬಗ್ಗೆ ಸಿಎಂ ಬವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದು ಕೌಶಲ್ಯ ವಿವಿ ಸ್ಥಾಪನೆಗೆ ಅಗತ್ಯ ರೂಪರೇಷೆ ಸಿದ್ಧಪಡಿಸಲಾಗುತ್ತದೆ ಎಂದು ತಿಳಿಸಿದ ಶ್ರೀರಾಮುಲು 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಮೀಸಲಾತಿ
ಕಲಬುರಗಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved