MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • 'CID ವರದಿ ಟ್ರಾನ್ಸ್‌ಲೇಟ್‌ ಮಾಡಿದ್ದನ್ನ ಬಿಟ್ಟು ಮತ್ತೇನು ಮಾಡಿದ್ದೀರಿ..' ಧರ್ಮಸ್ಥಳ Soujanya Case ವಿಚಾರದಲ್ಲಿ ಸಿಬಿಐಗೆ ಸುಪ್ರೀಂ ಚಾಟಿ

'CID ವರದಿ ಟ್ರಾನ್ಸ್‌ಲೇಟ್‌ ಮಾಡಿದ್ದನ್ನ ಬಿಟ್ಟು ಮತ್ತೇನು ಮಾಡಿದ್ದೀರಿ..' ಧರ್ಮಸ್ಥಳ Soujanya Case ವಿಚಾರದಲ್ಲಿ ಸಿಬಿಐಗೆ ಸುಪ್ರೀಂ ಚಾಟಿ

ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ತನಿಖೆಯ ವೈಫಲ್ಯವನ್ನು ತೀವ್ರವಾಗಿ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ.

1 Min read
Author : Santosh Naik
Published : Jul 22 2026, 05:32 PM IST
Share this Photo Gallery
  • FB
  • TW
  • Linkdin
  • Whatsapp
16
ದ್ವಿಸದಸ್ಯ ಪೀಠ ನಡೆಸಿದ ವಿಚಾರಣೆ
Image Credit : X

ದ್ವಿಸದಸ್ಯ ಪೀಠ ನಡೆಸಿದ ವಿಚಾರಣೆ

ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಮರು ತನಿಖೆಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಪೀಠ
Image Credit : X

ಮರು ತನಿಖೆಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಪೀಠ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ತನಿಖೆಯನ್ನು ಯಾವ ಸ್ವರೂಪದಲ್ಲಿ ನಡೆಸಬೇಕು ಎನ್ನುವುದರ ಕುರಿತು ತನ್ನ ತೀರ್ಪನ್ನು ಕಾಯ್ದಿರಿಸಿದೆ. ಅಂತಿಮ ಆದೇಶದಲ್ಲಿ ಈ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಸ್ತೃತವಾದ ನಿರ್ದೇಶನಗಳನ್ನು ನೀಡಲಿದೆ.

Related Articles

Related image1
ಸೌಜನ್ಯ ಕೇಸ್‌: ಭಕ್ತರು ಗೊಂದಲಕ್ಕೆ ಈಡಾಗದಂತೆ ಡಾ.ಹೆಗ್ಗಡೆ ಮನವಿ
Related image2
ಸೌಜನ್ಯ ಕೇಸ್‌ ಮರುತನಿಖೆಗಾಗಿ ವೀರೇಂದ್ರ ಹೆಗ್ಗಡೆ ಕುಟುಂಬ ಹೈಕೋರ್ಟ್‌ಗೆ
36
ಸಿಬಿಐ ತನಿಖಾ ವೈಫಲ್ಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ
Image Credit : X

ಸಿಬಿಐ ತನಿಖಾ ವೈಫಲ್ಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ (CBI) ಕಾರ್ಯವೈಖರಿಯನ್ನು ಕಟುವಾಗಿ ತರಾಟೆಗೆ ತೆಗೆದುಕೊಂಡಿತು. "ಪರಕರಣ ನಡೆದು 14 ವರ್ಷಗಳಾಗಿದ್ದರೂ ಸರಿಯಾದ ತನಿಖೆ ನಡೆದಿಲ್ಲ. ಸಿಐಡಿ ನೀಡಿದ್ದ ವರದಿಯನ್ನಷ್ಟೇ ಭಾಷಾಂತರಿಸಲಾಗಿದೆ ಹೊರತು, ತನಿಖಾಧಿಕಾರಿ ಘಟನಾ ಸ್ಥಳಕ್ಕೂ ಭೇಟಿ ನೀಡಿಲ್ಲ. ಕೆಳಹಂತದ ನ್ಯಾಯಾಲಯದಲ್ಲಿ ಇನ್ನು ಕೆಲ ಆರೋಪಿಗಳ ವಿರುದ್ಧ ತನಿಖೆ ನಡೆಸಬೇಕಿದೆ ಎಂದು ಹೇಳಿದ್ದ ಸಿಬಿಐ, ಈಗ ಸಿಬ್ಬಂದಿ ಹಾಗೂ ಹಣಕಾಸಿನ ಕೊರತೆ ಎಂದು ನೆಪ ಹೇಳುತ್ತಿರುವುದು ಸಮಂಜಸವಲ್ಲ ಎಂದು ಕೋರ್ಟ್ ಕಿಡಿಕಾರಿತು.

46
ಎಸ್‌ಐಟಿ (SIT) ರಚನೆಗೆ ರಾಜ್ಯ ಸರ್ಕಾರ ಸಿದ್ಧ
Image Credit : X

ಎಸ್‌ಐಟಿ (SIT) ರಚನೆಗೆ ರಾಜ್ಯ ಸರ್ಕಾರ ಸಿದ್ಧ

ಸೌಜನ್ಯ ತಾಯಿ ಕುಸುಮಾವತಿ ಅವರು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ತಾವು ಸಿದ್ಧರಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

56
ಎಸ್‌ಐಟಿ ರಚನೆ ಕುರಿತು ಸುಪ್ರೀಂ ನಿರ್ಧಾರ
Image Credit : X

ಎಸ್‌ಐಟಿ ರಚನೆ ಕುರಿತು ಸುಪ್ರೀಂ ನಿರ್ಧಾರ

ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕೇ ಅಥವಾ ಇತರ ಯಾವುದೇ ಸಂಸ್ಥೆಗೆ ವಹಿಸಬೇಕೇ ಎಂಬುದನ್ನು ತಾನೇ ನಿರ್ಧರಿಸುವುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಆದೇಶ ಪ್ರಕಟಿಸಿದ ಬಳಿಕ ಈ ತನಿಖೆಗೆ ಸಂಬಂಧಿಸಿದಂತೆ ಮಧ್ಯಂತರ ವರದಿಯನ್ನು ಕೇಳುವುದಾಗಿ ನ್ಯಾಯಪೀಠ ಹೇಳಿದೆ.

66
ಸಾಕ್ಷಿಗಳಿಗೆ ಭದ್ರತೆ ಮುಂದುವರಿಕೆಗೆ ಸೂಚನೆ
Image Credit : X

ಸಾಕ್ಷಿಗಳಿಗೆ ಭದ್ರತೆ ಮುಂದುವರಿಕೆಗೆ ಸೂಚನೆ

ಪ್ರಕರಣ ನಡೆದ ಇಷ್ಟೂ ವರ್ಷಗಳಲ್ಲಿ ಸಾಕ್ಷ್ಯಗಳು ನಾಶವಾಗದಂತೆ ಮತ್ತು ಸಾಕ್ಷಿಗಳಿಗೆ ಯಾವುದೇ ಅಪಾಯ ಎದುರಾಗದಂತೆ ಅವರಿಗೆ ನೀಡಲಾಗಿರುವ ಭದ್ರತೆಯನ್ನು ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಸೌಜನ್ಯ ಪ್ರಕರಣ
ಧರ್ಮಸ್ಥಳ
ಸುದ್ದಿ
ಸುಪ್ರೀಂ ಕೋರ್ಟ್
ಕೇಂದ್ರೀಯ ತನಿಖಾ ದಳ
ನ್ಯಾಯಾಲಯ
Latest Videos
Recommended Stories
Recommended image1
ಬೆಂಗಳೂರು ಬೀದಿಲಿ ಕಿತ್ತಾಡಿಕೊಂಡ ಬಿಜೆಪಿ-ಕಾಂಗ್ರೆಸ್, ಬಿಪಿ ಹರೀಶ್‌ಗೆ ಮೊಟ್ಟೆ ಎಸೆದ ಕಾರ್ಯಕರ್ತ! ಆರ್.ಅಶೋಕ್ ಬಂಧನ
Recommended image2
ಬ್ರ್ಯಾಂಡ್ ಬೆಂಗಳೂರಿನ ಮಾನ, ಮರ್ಯಾದೆ ಪಬ್ಲಿಕ್ ಟಾಯ್ಲೆಟ್‌ನಲ್ಲಿ ಹರಾಜಾಯ್ತು! ಇಲ್ಲಿದೆ ಶಾಕಿಂಗ್ ರಿಪೋರ್ಟ್
Recommended image3
ಅವನನ್ನು ಯಾವಾಗ ಕರ್ಕೊಂಡು ಬರ್ತೀಯಪ್ಪಾ ಅಂತ ಕೇಳ್ತಿದ್ರು ತಾಯಿ, ಪರೋಕ್ಷವಾಗಿ ಪ್ರಜ್ವಲ್ ಪ್ರಕರಣ ಪ್ರಸ್ತಾಪಿಸಿದ HDK
Related Stories
Recommended image1
ಸೌಜನ್ಯ ಕೇಸ್‌: ಭಕ್ತರು ಗೊಂದಲಕ್ಕೆ ಈಡಾಗದಂತೆ ಡಾ.ಹೆಗ್ಗಡೆ ಮನವಿ
Recommended image2
ಸೌಜನ್ಯ ಕೇಸ್‌ ಮರುತನಿಖೆಗಾಗಿ ವೀರೇಂದ್ರ ಹೆಗ್ಗಡೆ ಕುಟುಂಬ ಹೈಕೋರ್ಟ್‌ಗೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved