MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru: ಸಿಪಿಪಿ ಸಹಯೋಗದಲ್ಲಿ ಬಿಬಿಎಂಪಿಯಿಂದ ಹೆಮ್ಮಿಗೆಪುರ ವಾರ್ಡ್‌ನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ

Bengaluru: ಸಿಪಿಪಿ ಸಹಯೋಗದಲ್ಲಿ ಬಿಬಿಎಂಪಿಯಿಂದ ಹೆಮ್ಮಿಗೆಪುರ ವಾರ್ಡ್‌ನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ

ಸಿಪಿಪಿ (ನಾಗರಿಕ ಭಾಗವಹಿಸುವಿಕೆ ಕಾರ್ಯಕ್ರಮ) ಸಹಯೋಗದಲ್ಲಿ ಬಿಬಿಎಂಪಿಯು ನಿನ್ನೆ (ಮೇ.20) ವಿಶೇಷ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಿದ್ದು, ಕಾರ್ಯಕ್ರಮವು ತಲಘಟ್ಟಪುರದ ವಕೀಲ ಗಾರ್ಡನ್ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿತ್ತು. 

2 Min read
Author : Govindaraj S
Published : May 21 2023, 08:31 PM IST
Share this Photo Gallery
  • FB
  • TW
  • Linkdin
  • Whatsapp
110

ಬೆಂಗಳೂರು (ಮೇ.21): ಸಿಪಿಪಿ (ನಾಗರಿಕ ಭಾಗವಹಿಸುವಿಕೆ ಕಾರ್ಯಕ್ರಮ) ಸಹಯೋಗದಲ್ಲಿ ಬಿಬಿಎಂಪಿಯು ನಿನ್ನೆ (ಮೇ.20) ವಿಶೇಷ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಿತ್ತು. 

210

ಈ ಆಂದೋಲನದಲ್ಲಿ ಬಸ್ ನಿಲ್ದಾಣದ ಸ್ವಚ್ಛತೆ, ಅಕ್ರಮ ಫ್ಲೆಕ್ಸ್, ಬ್ಯಾನರ್, ಕಸ ತೆಗೆಯುವುದು ಮತ್ತು ಗೋಡೆಗಳಿಗೆ ಬಣ್ಣ ಬಳಿಯುವುದು. ಈ ಕಾರ್ಯಕ್ರಮದಲ್ಲಿ ಮಕ್ಕಳು ಕೂಡ ಸಕ್ರಿಯವಾಗಿ ಭಾಗವಹಿಸಲು ಬಿಬಿಎಂಪಿಯು ಕೋರಿತ್ತು. 

310

ಈ ಕಾರ್ಯಕ್ರಮವು ತಲಘಟ್ಟಪುರದ ವಕೀಲ ಗಾರ್ಡನ್ ಸಿಟಿ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 7.00 ರಿಂದ 10.00 ರವರೆಗೆ ನಡೆದಿತ್ತು. 

410

ಈ ಕಾರ್ಯಕ್ರಮದಲ್ಲಿ ದಯವಿಟ್ಟು ನಿಮ್ಮ ಸ್ವಂತ ನೀರಿನ ಬಾಟಲಿಗಳನ್ನು ತನ್ನಿ ಹಾಗೂ ನಿಮ್ಮ ಸ್ವಂತ ಕೈಗವಸುಗಳು, ಮುಖವಾಡ, ಬಣ್ಣದ ಬ್ರಷ್‌ಗಳು ಸೇರಿದಂತೆ ಸ್ವಚ್ಛತೆಗೆ ಬೇಕಾಗುವಂತಹ ಇತ್ಯಾದಿ ವಸ್ತುಗಳನ್ನು ನೀವು ತರಬಹುದು ಎಂದು ಬಿಬಿಎಂಪಿಯು ಸೂಚನೆ ಹೊರಡಿಸಿತ್ತು. 

510

ಇನ್ನು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ದಯವಿಟ್ಟು ಬಿಬಿಎಂಪಿಯೊಂದಿಗೆ ಕೈ ಜೋಡಿಸಿ ಎಂದು ತಿಳಿಸಿತ್ತು. ಸ್ವಚ್ಛ ಪರಿಸರ ಸ್ವಚ್ಛ ಹೆಮ್ಮಿಗೆಪುರ ವಾರ್ಡ್‌ ಎಂಬ ಹೆಸರಿನಲ್ಲಿ ಕಾರ್ಯಕ್ರಮವು ನಡೆದಿತ್ತು. ವಿಶೇಷವಾಗಿ ಈ ತೀವ್ರ ಶುಚಿಗೊಳಿಸುವಿಕೆಯ ಕಾರ್ಯಕ್ರಮ ಒಂದು ವರ್ಷ ಪೂರೈಸಿದೆ.

610

ಪಾಲಿಕೆ ಅರಣ್ಯ ಘಟಕದಿಂದ ಉಚಿತ ವಿವಿಧ ಸಸಿ ವಿತರಣೆ: ಮಳೆಗಾಲ ಆರಂಭಗೊಳ್ಳುತ್ತಿರುವುದರಿಂದ ಬಿಬಿಎಂಪಿ ಅರಣ್ಯ ಘಟಕ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಉಚಿತವಾಗಿ ವಿವಿಧ ಜಾತಿಯ ಸಸಿ ವಿತರಿಸಲು ತೀರ್ಮಾನಿಸಿದೆ.

710

ಜೂನ್‌ 5ರ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆಗಾಲ ಅರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಹಸಿರೀಕರಣ ಹೆಚ್ಚಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಹಾಗೂ ವಿವಿಧ ಸಂಘ- ಸಂಸ್ಥೆಗಳಿಗೆ ಬಿಬಿಎಂಪಿಯ ಅರಣ್ಯ ಘಟಕ ಸಸ್ಯ ಕ್ಷೇತ್ರದಲ್ಲಿ ಬೆಳೆಸಿದ ಸಸಿಗಳನ್ನು ಉಚಿತವಾಗಿ ನೀಡಲಿದೆ.

810

ಆಸಕ್ತರು ಅಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿ ಉಚಿತವಾಗಿ ಸಸಿಗಳನ್ನು ಪಡೆದು ಸಸಿಗಳನ್ನು ನೆಟ್ಟು ಪೋಷಣೆ ಮಾಡುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

910

ಬೊಮ್ಮನಹಳ್ಳಿ ವಲಯದ ಕೂಡ್ಲು ಸಸ್ಯ ಕ್ಷೇತ್ರದಲ್ಲಿ ಸಸಿಗಳನ್ನು ಪಡೆಯಲು ಉಪ ಅರಣ್ಯಾಧಿಕಾರಿ ಎಚ್‌.ಆರ್‌.ಹರೀಶ್‌ (9480685039), ಯಲಹಂಕದ ಅಟ್ಟೂರು ಸಸ್ಯ ಕ್ಷೇತ್ರದಲ್ಲಿ ವಲಯ ಅರಣ್ಯಾಧಿಕಾರಿ ವಿ.ಚಂದ್ರಪ್ಪ (9164042566).

1010

ಆರ್‌ಆರ್‌ ನಗರದ ಜ್ಞಾನಭಾರತಿ ಆವರಣದ ಸಸ್ಯ ಕ್ಷೇತ್ರದಲ್ಲಿ ವಲಯ ಅರಣ್ಯಾಧಿಕಾರಿ ಕೆ.ಪಿ.ಮುತ್ತುರಾಜ್‌ (9483139438) ಹಾಗೂ ಮಹದೇವಪುರದ ಕೆಂಪಾಪುರ ಸಸ್ಯ ಕ್ಷೇತ್ರದಲ್ಲಿ ಸಸಿಗಳನ್ನು ಪಡೆಯಲು ಉಪ ವಲಯ ಅರಣ್ಯಾಧಿಕಾರಿ ಎ.ಸುದರ್ಶನ್‌ (9480685541) ಅವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಬಿಬಿಎಂಪಿ
ಬೆಂಗಳೂರು

Latest Videos
Recommended Stories
Recommended image1
Bengaluru: ಇಸ್ರೋ ಮಾಜಿ ನೌಕರನಿಂದ ಪತ್ನಿಯ ಹ*ತ್ಯೆ, ತಾಯಿ ಚಿತೆಗೆ ಬೆಂಕಿಯಿಡಲೂ ಅಮೆರಿಕದಿಂದ ಬರದ ಒಬ್ಬಳೇ ಮಗಳು!
Recommended image2
Bengaluru: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಚಂದ್ರು ಮಗ ಆತ್ಮ*ಹತ್ಯೆ
Recommended image3
ಗೋಲ್‌ಗುಂಬಜ್ ಎಕ್ಸಪ್ರೆಸ್ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡ ಮನ್‌ಮುಲ್‌ ಉಪವ್ಯವಸ್ಥಾಪಕ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved