MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಪಾಕಿಸ್ತಾನ ವಿರುದ್ಧ ಗೆದ್ದು ಚಿನ್ನದ ಪದಕ ಮುಡಿಗೇರಿಸಿಕೊಂಡ ಬೆಂಗಳೂರು ಪೊಲೀಸ್ ಪುತ್ರ ಶ್ರೀಹರ್ಷ!

ಪಾಕಿಸ್ತಾನ ವಿರುದ್ಧ ಗೆದ್ದು ಚಿನ್ನದ ಪದಕ ಮುಡಿಗೇರಿಸಿಕೊಂಡ ಬೆಂಗಳೂರು ಪೊಲೀಸ್ ಪುತ್ರ ಶ್ರೀಹರ್ಷ!

ಬೆಂಗಳೂರಿನ ಪೊಲೀಸ್ ಅಧಿಕಾರಿಯ ಪುತ್ರ ಶ್ರೀಹರ್ಷ ಬಿ.ಕೆ., ಶ್ರೀಲಂಕಾದಲ್ಲಿ ನಡೆದ ಪ್ರತಿಷ್ಠಿತ ಮುಯ್ ಥಾಯ್ ಕ್ರೀಡಾಕೂಟದಲ್ಲಿ ಪಾಕಿಸ್ತಾನದ ಸ್ಪರ್ಧಿಯನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಸ್ವಂತ ಪರಿಶ್ರಮದಿಂದ ಈ ಅಂತರರಾಷ್ಟ್ರೀಯ ಸಾಧನೆ ಮಾಡಿರುವುದು ಅವರ ಹೋರಾಟದ ಕಥೆಯನ್ನು ಸಾರುತ್ತದೆ.

2 Min read
Author : Sathish Kumar KH
Published : Jun 09 2026, 07:09 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : Asianet News

ಬೆಂಗಳೂರು: ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಧ್ವಜವನ್ನು ಎತ್ತಿಹಿಡಿಯುವ ಮೂಲಕ ಕನ್ನಡಿಗನೊಬ್ಬ ಜಾಗತಿಕ ಮಟ್ಟದಲ್ಲಿ ಭರ್ಜರಿ ಸಾಧನೆ ಮಾಡಿದ್ದಾನೆ. ಶ್ರೀಲಂಕಾದ ನೆಗೊಂಬೋದಲ್ಲಿ ಆಯೋಜಿಸಲಾಗಿದ್ದ ಪ್ರತಿಷ್ಠಿತ ಮುಯ್ ಥಾಯ್ (Muay Thai) ಸಮರ ಕಲೆಯ ಕ್ರೀಡಾಕೂಟದಲ್ಲಿ ಬೆಂಗಳೂರಿನ ಪೊಲೀಸ್ ಅಧಿಕಾರಿಯೊಬ್ಬರ ಪುತ್ರ ಚಿನ್ನದ ಪದಕ ಗೆದ್ದು ದೇಶ ಮತ್ತು ರಾಜ್ಯ ಹೆಮ್ಮೆಪಡುವಂತೆ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27
Image Credit : Asianet News

ಬೆಂಗಳೂರಿನ ಬನಶಂಕರಿ ಸಂಚಾರ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕರಾದ (ASI) ಕಾಂತರಾಜು ಅವರ ಸುಪುತ್ರ ಶ್ರೀಹರ್ಷ ಬಿ.ಕೆ. ಈ ಅಪ್ರತಿಮ ಸಾಧನೆಗೈದ ಯುವ ಕ್ರೀಡಾಪಟು.

Related Articles

Related image1
ಒಂದೇ ಶಾಲೆಯ 17 ವಿದ್ಯಾರ್ಥಿಗಳು ಅಗ್ನಿವೀರರಾಗಿ ಆಯ್ಕೆ: ಧಾರವಾಡದ ಯುವಕರ ಐತಿಹಾಸಿಕ ಸಾಧನೆ
Related image2
ಸಿಕ್ಸರ್‌ಗಳ 'ಹಾಫ್ ಸೆಂಚುರಿ' ಬಾರಿಸಿದ ವೈಭವ್ ಸೂರ್ಯವಂಶಿ; ಈ ಸಾಧನೆ ಮಾಡಿದ ಮೊದಲ ಭಾರತೀಯ! ಮುಂದಿನ ಟಾರ್ಗೆಟ್ ಗೇಲ್
37
Image Credit : Asianet News

ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನಕ್ಕೆ ಧೂಳೀಪಟ:

ಇಂಟರ್ ನ್ಯಾಷನಲ್ ಥಾಯ್ ಮಾರ್ಷಲ್ ಆರ್ಟ್ಸ್ (ITMA) ಸಂಸ್ಥೆಯು ಶ್ರೀಲಂಕಾದಲ್ಲಿ ಏರ್ಪಡಿಸಿದ್ದ 'ಇಂಟರ್ ನ್ಯಾಷನಲ್ ಆಂಡ್ ಥಾಯ್ ಮಾರ್ಷಲ್ ಆರ್ಟ್ಸ್ ಏಷ್ಯನ್ ಗೇಮ್ಸ್-2026' (ITMA Asian Games 2026) ಕ್ರೀಡಾಕೂಟದಲ್ಲಿ ಶ್ರೀಹರ್ಷ ಭಾರತವನ್ನು ಪ್ರತಿನಿಧಿಸಿದ್ದರು. 57 ಕೆಜಿ ವಿಭಾಗದ ತೀವ್ರ ಹಣಾಹಣಿಯ ಮುಯ್ ಥಾಯ್ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದ ಇವರು, ಫೈನಲ್ ಪಂದ್ಯದಲ್ಲಿ ಭಾರತದ ಸಾಂಪ್ರದಾಯಿಕ ಎದುರಾಳಿಯಾದ ಪಾಕಿಸ್ತಾನದ ಸ್ಪರ್ಧಿಯ ವಿರುದ್ಧ ಸೆಣಸಾಡಿದರು. ಆರಂಭದಿಂದಲೇ ಅದ್ಭುತ ಪ್ರದರ್ಶನ ನೀಡಿದ ಶ್ರೀಹರ್ಷ, ಪಾಕ್ ಆಟಗಾರನಿಗೆ ಮಣ್ಣು ಮುಕ್ಕಿಸಿ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡರು.

47
Image Credit : Asianet News

ಸರ್ಕಾರದ ನೆರವಿಲ್ಲದೆ ಸ್ವಪ್ರಯತ್ನದ ಸಾಧನೆ:

ಮೂಲತಃ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನವರಾದ ಶ್ರೀಹರ್ಷ ಅವರಿಗೆ ಈ ಹಂತಕ್ಕೆ ತಲುಪಲು ಯಾವುದೇ ಸರ್ಕಾರಿ ನೆರವು ಅಥವಾ ಪ್ರೋತ್ಸಾಹ ಸಿಕ್ಕಿರಲಿಲ್ಲ. ಆರ್ಥಿಕ ಮುಗ್ಗಟ್ಟು ಮತ್ತು ಸೌಲಭ್ಯಗಳ ಕೊರತೆಯ ನಡುವೆಯೂ ಕೇವಲ ತಮ್ಮ ಕಠಿಣ ಪರಿಶ್ರಮ, ತಂದೆಯ ಬೆಂಬಲ ಮತ್ತು ಅಚಲ ಛಲದಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಚಿನ್ನ ಗೆದ್ದು ಬೀಗಿದ್ದಾರೆ.

57
Image Credit : Asianet News

‘ಪಾಕಿಸ್ತಾನದ ವಿರುದ್ಧದ ಪಂದ್ಯಾವಳಿ ಯಾವಾಗಲೂ ಸವಾಲಿನಿಂದ ಕೂಡಿರುತ್ತದೆ. ದೇಶಕ್ಕಾಗಿ ಚಿನ್ನ ಗೆದ್ದಿರುವುದು ಅಪಾರ ಸಂತಸ ತಂದಿದೆ. ಯಾವುದೇ ಸರ್ಕಾರದ ಸಹಾಯವಿಲ್ಲದೆ ಇಲ್ಲಿಯವರೆಗೆ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತರಬೇಕೆಂಬ ಆಸೆಯಿದೆ. ಸರ್ಕಾರ ನನ್ನಂತಹ ಕ್ರೀಡಾಪಟುಗಳಿಗೆ ಆರ್ಥಿಕ ನೆರವು ನೀಡಿದರೆ ಇನ್ನು ಹೆಚ್ಚಿನ ಸಾಧನೆ ಮಾಡಬಹುದು’ ಎಂದು ಕ್ರೀಡಾಪಟು ಶ್ರೀಹರ್ಷ ಹೇಳಿದರು.

67
Image Credit : Asianet News

ನಗರ ಪೊಲೀಸ್ ಆಯುಕ್ತರಿಂದ ವಿಶೇಷ ಸನ್ಮಾನ:

ಬೆಂಗಳೂರು ಪೊಲೀಸ್ ಕುಟುಂಬದ ಯುವಕನೊಬ್ಬ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿರುವುದನ್ನು ಗುರುತಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಶ್ರೀಹರ್ಷ ಅವರನ್ನು ತಮ್ಮ ಕಚೇರಿಗೆ ಆಹ್ವಾನಿಸಿದ್ದರು. ಶ್ರೀಹರ್ಷ ಮತ್ತು ಅವರ ತಂದೆ ಎಎಸ್‌ಐ ಕಾಂತರಾಜು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಕಮಿಷನರ್, ಹಾರ ಹಾಕಿ, ನೆನಪಿನ ಕಾಣಿಕೆ ನೀಡಿ ವಿಶೇಷವಾಗಿ ಸನ್ಮಾನಿಸಿ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು.

77
Image Credit : Asianet News

ವಿದೇಶಿ ಮಣ್ಣಿನಲ್ಲಿ ಪಾಕಿಸ್ತಾನವನ್ನು ಸೋಲಿಸಿ ದೇಶದ ಗೌರವ ಹೆಚ್ಚಿಸಿರುವ ಈ ಗ್ರಾಮೀಣ ಭಾಗದ ಪ್ರತಿಭೆಗೆ ರಾಜ್ಯ ಸರ್ಕಾರ ಇನ್ಮುಂದಾದರೂ ಸೂಕ್ತ ಆರ್ಥಿಕ ನೆರವು ಹಾಗೂ ಕ್ರೀಡಾ ಸೌಲಭ್ಯಗಳನ್ನು ಒದಗಿಸಬೇಕಿದೆ ಎಂಬುದು ಸಾರ್ವಜನಿಕರ ಆಶಯವಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಕ್ರೀಡೆಗಳು
ಪಾಕಿಸ್ತಾನ
ಕರ್ನಾಟಕ ಪೊಲೀಸ್
Latest Videos
Recommended Stories
Recommended image1
ಕನಕಗಿರಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಮಹಿಳೆ ಮೇಲೆ ಸಾಮೂಹಿಕ ಅತ್ಯಾ*ಚಾರ ಶಂಕೆ, ಬೆಂಕಿ ಹಚ್ಚಿ ಹ*ತ್ಯೆ?
Recommended image2
ಕಾಡುಗೋಡಿ ಮಗು ಹತ್ಯೆ ಪ್ರಕರಣ: ಐಸ್‌ಕ್ರೀಂ ಕೇಳಿದ್ದಕ್ಕೆ ಕಾರಲ್ಲೇ ಒದ್ದು ಕೊಂದೆ, ಪೊಲೀಸರೆದುರು ಬಾಯಿಬಿಟ್ಟ ಪ್ರಿಯಕರ!
Recommended image3
ಬೆಂಗಳೂರಲ್ಲಿ ಬದಲಾಗುತ್ತಾ ಕೆ.ಆರ್.ಮಾರುಕಟ್ಟೆ ನಸೀಬು; ಬೆಂಕಿಗೆ ನೀರು, ಕಸಕ್ಕೆ ಮುಕ್ತಿ ಕೊಡಿಸ್ತಾರಾ ಕಮಿಷನರ್!
Related Stories
Recommended image1
ಒಂದೇ ಶಾಲೆಯ 17 ವಿದ್ಯಾರ್ಥಿಗಳು ಅಗ್ನಿವೀರರಾಗಿ ಆಯ್ಕೆ: ಧಾರವಾಡದ ಯುವಕರ ಐತಿಹಾಸಿಕ ಸಾಧನೆ
Recommended image2
ಸಿಕ್ಸರ್‌ಗಳ 'ಹಾಫ್ ಸೆಂಚುರಿ' ಬಾರಿಸಿದ ವೈಭವ್ ಸೂರ್ಯವಂಶಿ; ಈ ಸಾಧನೆ ಮಾಡಿದ ಮೊದಲ ಭಾರತೀಯ! ಮುಂದಿನ ಟಾರ್ಗೆಟ್ ಗೇಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved