ಮೈಸೂರು: ಗ್ರಂಥಾಲಯ ಮರುಸ್ಥಾಪನೆ, ಸೈಯದ್ ಇಸಾಕ್ಗೆ ಸಚಿವ ಎಸ್ಟಿಎಸ್ ನೆರವು
ಮೈಸೂರು(ಏ.14): ಕಿಡಿಗೇಡಿಗಳ ಕೃತ್ಯದಿಂದ ಸುಟ್ಟುಕರಕಲಾದ ಗ್ರಂಥಾಲಯ ಮರುಸ್ಥಾಪನೆಗಾಗಿ ಸೈಯದ್ ಇಸಾಕ್ ಅವರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ವೈಯಕ್ತಿಕವಾಗಿ 25 ಸಾವಿರ ರೂ. ಧನಸಹಾಯ ಮಾಡಿದ್ದಾರೆ.
ಮೈಸೂರಿನ ರಾಜೀವ್ ನಗರದಲ್ಲಿ ಗ್ರಂಥಾಲಯ ನಡೆಸುತ್ತಿದ್ದ ಸೈಯದ್ ಇಸಾಕ್ ಅವರಿಗೆ ಗ್ರಂಥಾಲಯ ಮರುಸ್ಥಾಪನೆಗಾಗಿ 25 ಸಾವಿರ ಧನಸಹಾಯ ಮಾಡಿದ ಸಚಿವ ಸೋಮಶೇಖರ್
ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಮತ್ತು ಭಾರತೀಯ ಜನತಾ ಪಕ್ಷದ ಕಚೇರಿಗೆ ರಾಮಾಯಣ, ಮಹಾಭಾರತ, ಬೈಬಲ್ ಮತ್ತು ಕುರಾನ್ ಪುಸ್ತಕಗಳನ್ನು ನೀಡಿದ ಸಚಿವರು
ಒಂದು ಗ್ರಂಥಾಲಯವು ನೂರು ದೇವಾಲಯಗಳಿಗೆ ಸಮವಾಗಿದೆ. ಮಸೀದಿ, ದೇವಾಲಯ ಹಾಗೂ ಚರ್ಚ್ಗಳು ನಿರ್ಮಾಣವಾದರೆ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಆದರೆ ಗ್ರಂಥಾಲಯ ನಿರ್ಮಾಣವಾದರೆ ಹಲವಾರು ವಿದ್ಯಾವಂತರು ಹುಟ್ಟಿಕೊಳ್ಳುತ್ತಾರೆ. ನೂರು ಜನರ ಸ್ನೇಹ ಬೆಳೆಸಿದರೂ ಒಂದು ದಿನ ಮೋಸ ಮಾಡುತ್ತಾರೆ. ಆದರೆ ಪುಸ್ತಕಗಳು ಎಂದಿಗೂ ಯಾರಿಗೂ ಮೋಸ ಮಾಡುವುದಿಲ್ಲ ಎಂದ ಸೈಯದ್ ಇಸಾಕ್.
ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಇತರರು ಹಾಜರಿದ್ದರು