MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಹಾವೇರಿ: ಕೊರೋನಾ ಬಳಿಕ ಸರ್ಕಾರಿ ಶಾಲೆಗಳಿಗೆ ಜೀವಕಳೆ!

ಹಾವೇರಿ: ಕೊರೋನಾ ಬಳಿಕ ಸರ್ಕಾರಿ ಶಾಲೆಗಳಿಗೆ ಜೀವಕಳೆ!

ನಾರಾಯಣ ಹೆಗಡೆಹಾವೇರಿ(ಸೆ.28): ಕೊರೋನಾ ಮಹಾಮಾರಿಯಿಂದ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮತ್ತೊಂದೆಡೆ 6 ತಿಂಗಳಿಂದ ಮುಚ್ಚಿದ್ದ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ. ಜಿಲ್ಲೆಯ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಆಗಮನಕ್ಕೆ ಅಣಿಯಾಗಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹಲವು ಮೂಲ ಸೌಲಭ್ಯಗಳನ್ನು ಹೆಚ್ಚಿಸಿಕೊಂಡು ಸರ್ಕಾರಿ ಶಾಲೆಗಳು ಈ ಸಲ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿವೆ. 

2 Min read
Kannadaprabha News | Asianet News
Published : Sep 28 2020, 12:27 PM IST| Updated : Sep 28 2020, 12:37 PM IST
Share this Photo Gallery
  • FB
  • TW
  • Linkdin
  • Whatsapp
17
<p>ಒಂದೆಡೆ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಶಾಲೆಗಳನ್ನು ಆರಂಭಿಸಬೇಕೇ ಬೇಡವೇ ಎಂಬ ಚರ್ಚೆ ಇನ್ನೂ ನಡೆಯುತ್ತಲೇ ಇದೆ. ಈ ಮಧ್ಯೆ ಸರ್ಕಾರಿ ಶಾಲೆಗಳಲ್ಲಿ ‘ವಿದ್ಯಾಗಮ’ ಕಾರ್ಯಕ್ರಮದ ಮೂಲಕ ಕಲಿಕೆಯ ನಿರಂತರತೆಯನ್ನು ಕಾಪಾಡುವ ಕಾರ್ಯ ನಡೆದಿದೆ. ಅಲ್ಲದೇ ಇದೇ ಅವಧಿಯಲ್ಲಿ ಶಾಲೆಗಳು ದುರಸ್ತಿ ಭಾಗ್ಯವನ್ನು ಕಂಡಿದ್ದು, ಹಲವು ಕೊಠಡಿ ನಿರ್ಮಾಣವೂ ಪ್ರಗತಿಯಲ್ಲಿದೆ.&nbsp;</p>

<p>ಒಂದೆಡೆ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಶಾಲೆಗಳನ್ನು ಆರಂಭಿಸಬೇಕೇ ಬೇಡವೇ ಎಂಬ ಚರ್ಚೆ ಇನ್ನೂ ನಡೆಯುತ್ತಲೇ ಇದೆ. ಈ ಮಧ್ಯೆ ಸರ್ಕಾರಿ ಶಾಲೆಗಳಲ್ಲಿ ‘ವಿದ್ಯಾಗಮ’ ಕಾರ್ಯಕ್ರಮದ ಮೂಲಕ ಕಲಿಕೆಯ ನಿರಂತರತೆಯನ್ನು ಕಾಪಾಡುವ ಕಾರ್ಯ ನಡೆದಿದೆ. ಅಲ್ಲದೇ ಇದೇ ಅವಧಿಯಲ್ಲಿ ಶಾಲೆಗಳು ದುರಸ್ತಿ ಭಾಗ್ಯವನ್ನು ಕಂಡಿದ್ದು, ಹಲವು ಕೊಠಡಿ ನಿರ್ಮಾಣವೂ ಪ್ರಗತಿಯಲ್ಲಿದೆ.&nbsp;</p>

ಒಂದೆಡೆ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಶಾಲೆಗಳನ್ನು ಆರಂಭಿಸಬೇಕೇ ಬೇಡವೇ ಎಂಬ ಚರ್ಚೆ ಇನ್ನೂ ನಡೆಯುತ್ತಲೇ ಇದೆ. ಈ ಮಧ್ಯೆ ಸರ್ಕಾರಿ ಶಾಲೆಗಳಲ್ಲಿ ‘ವಿದ್ಯಾಗಮ’ ಕಾರ್ಯಕ್ರಮದ ಮೂಲಕ ಕಲಿಕೆಯ ನಿರಂತರತೆಯನ್ನು ಕಾಪಾಡುವ ಕಾರ್ಯ ನಡೆದಿದೆ. ಅಲ್ಲದೇ ಇದೇ ಅವಧಿಯಲ್ಲಿ ಶಾಲೆಗಳು ದುರಸ್ತಿ ಭಾಗ್ಯವನ್ನು ಕಂಡಿದ್ದು, ಹಲವು ಕೊಠಡಿ ನಿರ್ಮಾಣವೂ ಪ್ರಗತಿಯಲ್ಲಿದೆ. 

27
<p>ಲಾಕ್‌ಡೌನ್‌ ಅವಧಿಯಲ್ಲಿ ಶಾಲಾ ಕೈತೋಟ ನಿರ್ಮಾಣ, ಸುಣ್ಣ ಬಣ್ಣ, ಚಿತ್ತಾಕರ್ಷಕ ಕಲೆಗಳಿಂದ ಸರ್ಕಾರಿ ಶಾಲೆಗಳನ್ನು ಸುಂದರಗೊಳಿಸಲಾಗಿದೆ. ಇದು ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಮುಖ ಮಾಡುವಂತೆ ಮಾಡಿದೆ. ಪಾಲಕರು ಖಾಸಗಿ ಶಾಲೆಗಳಿಂದ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಜಿಲ್ಲೆಯ ಮಟ್ಟಿಗೆ ಕೊರೋನಾದಿಂದ ಸರ್ಕಾರಿ ಶಾಲೆಗಳು ಮತ್ತೆ ಗತವೈಭವದ ದಿನಗಳನ್ನು ಮರುಕಳಿಸುವಂತೆ ಮಾಡಿದೆ.</p>

<p>ಲಾಕ್‌ಡೌನ್‌ ಅವಧಿಯಲ್ಲಿ ಶಾಲಾ ಕೈತೋಟ ನಿರ್ಮಾಣ, ಸುಣ್ಣ ಬಣ್ಣ, ಚಿತ್ತಾಕರ್ಷಕ ಕಲೆಗಳಿಂದ ಸರ್ಕಾರಿ ಶಾಲೆಗಳನ್ನು ಸುಂದರಗೊಳಿಸಲಾಗಿದೆ. ಇದು ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಮುಖ ಮಾಡುವಂತೆ ಮಾಡಿದೆ. ಪಾಲಕರು ಖಾಸಗಿ ಶಾಲೆಗಳಿಂದ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಜಿಲ್ಲೆಯ ಮಟ್ಟಿಗೆ ಕೊರೋನಾದಿಂದ ಸರ್ಕಾರಿ ಶಾಲೆಗಳು ಮತ್ತೆ ಗತವೈಭವದ ದಿನಗಳನ್ನು ಮರುಕಳಿಸುವಂತೆ ಮಾಡಿದೆ.</p>

ಲಾಕ್‌ಡೌನ್‌ ಅವಧಿಯಲ್ಲಿ ಶಾಲಾ ಕೈತೋಟ ನಿರ್ಮಾಣ, ಸುಣ್ಣ ಬಣ್ಣ, ಚಿತ್ತಾಕರ್ಷಕ ಕಲೆಗಳಿಂದ ಸರ್ಕಾರಿ ಶಾಲೆಗಳನ್ನು ಸುಂದರಗೊಳಿಸಲಾಗಿದೆ. ಇದು ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಮುಖ ಮಾಡುವಂತೆ ಮಾಡಿದೆ. ಪಾಲಕರು ಖಾಸಗಿ ಶಾಲೆಗಳಿಂದ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಜಿಲ್ಲೆಯ ಮಟ್ಟಿಗೆ ಕೊರೋನಾದಿಂದ ಸರ್ಕಾರಿ ಶಾಲೆಗಳು ಮತ್ತೆ ಗತವೈಭವದ ದಿನಗಳನ್ನು ಮರುಕಳಿಸುವಂತೆ ಮಾಡಿದೆ.

37
<p>ಜಿಲ್ಲೆಯಲ್ಲಿ 7127 ಪ್ರಾಥಮಿಕ ಶಾಲಾ ಕೊಠಡಿ ಹಾಗೂ 1090 ಪ್ರೌಢಶಾಲೆ ಕೊಠಡಿ ಸೇರಿ 8217 ಕೊಠಡಿಗಳಿವೆ. ಕಳೆದ ವರ್ಷದ ನೆರೆ ಸಂದರ್ಭದಲ್ಲಿ ನೂರಾರು ಶಾಲೆಗಳಿಗೆ ಹಾನಿಯಾಗಿತ್ತು. ಜಿಲ್ಲೆಯ ಜನಪ್ರತಿನಿಧಿಗಳ ಪ್ರಯತ್ನದ ಫಲವಾಗಿ ಆರ್‌ಐಡಿಎಫ್‌ ಯೋಜನೆಯಡಿ 18 ಕೋಟಿ, ಸಮಗ್ರ ಶಿಕ್ಷಣ ಯೋಜನೆಯಡಿ 4 ಕೋಟಿ ಸೇರಿದಂತೆ 34.44 ಕೋಟಿ ಅನುದಾನ ಬಂದಿದೆ. ಇದರಲ್ಲಿ ಚಾವಣಿ, ಸಣ್ಣಪುಟ್ಟದುರಸ್ತಿ ಇರುವ ಕೊಠಡಿಗಳನ್ನು ಈಗಾಗಲೇ ರಿಪೇರಿ ಮಾಡಲಾಗಿದೆ.&nbsp;</p>

<p>ಜಿಲ್ಲೆಯಲ್ಲಿ 7127 ಪ್ರಾಥಮಿಕ ಶಾಲಾ ಕೊಠಡಿ ಹಾಗೂ 1090 ಪ್ರೌಢಶಾಲೆ ಕೊಠಡಿ ಸೇರಿ 8217 ಕೊಠಡಿಗಳಿವೆ. ಕಳೆದ ವರ್ಷದ ನೆರೆ ಸಂದರ್ಭದಲ್ಲಿ ನೂರಾರು ಶಾಲೆಗಳಿಗೆ ಹಾನಿಯಾಗಿತ್ತು. ಜಿಲ್ಲೆಯ ಜನಪ್ರತಿನಿಧಿಗಳ ಪ್ರಯತ್ನದ ಫಲವಾಗಿ ಆರ್‌ಐಡಿಎಫ್‌ ಯೋಜನೆಯಡಿ 18 ಕೋಟಿ, ಸಮಗ್ರ ಶಿಕ್ಷಣ ಯೋಜನೆಯಡಿ 4 ಕೋಟಿ ಸೇರಿದಂತೆ 34.44 ಕೋಟಿ ಅನುದಾನ ಬಂದಿದೆ. ಇದರಲ್ಲಿ ಚಾವಣಿ, ಸಣ್ಣಪುಟ್ಟದುರಸ್ತಿ ಇರುವ ಕೊಠಡಿಗಳನ್ನು ಈಗಾಗಲೇ ರಿಪೇರಿ ಮಾಡಲಾಗಿದೆ.&nbsp;</p>

ಜಿಲ್ಲೆಯಲ್ಲಿ 7127 ಪ್ರಾಥಮಿಕ ಶಾಲಾ ಕೊಠಡಿ ಹಾಗೂ 1090 ಪ್ರೌಢಶಾಲೆ ಕೊಠಡಿ ಸೇರಿ 8217 ಕೊಠಡಿಗಳಿವೆ. ಕಳೆದ ವರ್ಷದ ನೆರೆ ಸಂದರ್ಭದಲ್ಲಿ ನೂರಾರು ಶಾಲೆಗಳಿಗೆ ಹಾನಿಯಾಗಿತ್ತು. ಜಿಲ್ಲೆಯ ಜನಪ್ರತಿನಿಧಿಗಳ ಪ್ರಯತ್ನದ ಫಲವಾಗಿ ಆರ್‌ಐಡಿಎಫ್‌ ಯೋಜನೆಯಡಿ 18 ಕೋಟಿ, ಸಮಗ್ರ ಶಿಕ್ಷಣ ಯೋಜನೆಯಡಿ 4 ಕೋಟಿ ಸೇರಿದಂತೆ 34.44 ಕೋಟಿ ಅನುದಾನ ಬಂದಿದೆ. ಇದರಲ್ಲಿ ಚಾವಣಿ, ಸಣ್ಣಪುಟ್ಟದುರಸ್ತಿ ಇರುವ ಕೊಠಡಿಗಳನ್ನು ಈಗಾಗಲೇ ರಿಪೇರಿ ಮಾಡಲಾಗಿದೆ. 

47
<p>2018- 19ನೇ ಸಾಲಿನಲ್ಲಿ 4 ಕೋಟಿ ವೆಚ್ಚದಲ್ಲಿ 112 ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದ್ದರೆ. ಪ್ರಸಕ್ತ ಸಾಲಿನಲ್ಲಿ 290 ಕೊಠಡಿ ನಿರ್ಮಾಣ ಪ್ರಗತಿಯಲ್ಲಿದೆ. ಇನ್ನೂ ಸುಮಾರು 350 ಕೊಠಡಿಗಳ ದುರಸ್ತಿ ಕಾರ್ಯ ಆಗಬೇಕಿದ್ದು, ಅದಕ್ಕಾಗಿ ಅನುದಾನ ಕೋರಿ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಲ್ಲದೇ ನರೇಗಾ ಯೋಜನೆಯಡಿ ಶಾಲಾ ಶೌಚಾಲಯ, ಕಾಂಪೌಂಡ್‌ ನಿರ್ಮಾಣ, ಶಾಲಾ ಕೈತೋಟ, ಆಟದ ಮೈದಾನ ಸೇರಿದಂತೆ ಹಲವು ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದರಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಶೈಕ್ಷಣಿಕ ಮೂಲ ಸೌಲಭ್ಯದಲ್ಲಿ ಗಣನೀಯ ಹೆಚ್ಚಳವಾಗಿದೆ.</p>

<p>2018- 19ನೇ ಸಾಲಿನಲ್ಲಿ 4 ಕೋಟಿ ವೆಚ್ಚದಲ್ಲಿ 112 ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದ್ದರೆ. ಪ್ರಸಕ್ತ ಸಾಲಿನಲ್ಲಿ 290 ಕೊಠಡಿ ನಿರ್ಮಾಣ ಪ್ರಗತಿಯಲ್ಲಿದೆ. ಇನ್ನೂ ಸುಮಾರು 350 ಕೊಠಡಿಗಳ ದುರಸ್ತಿ ಕಾರ್ಯ ಆಗಬೇಕಿದ್ದು, ಅದಕ್ಕಾಗಿ ಅನುದಾನ ಕೋರಿ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಲ್ಲದೇ ನರೇಗಾ ಯೋಜನೆಯಡಿ ಶಾಲಾ ಶೌಚಾಲಯ, ಕಾಂಪೌಂಡ್‌ ನಿರ್ಮಾಣ, ಶಾಲಾ ಕೈತೋಟ, ಆಟದ ಮೈದಾನ ಸೇರಿದಂತೆ ಹಲವು ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದರಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಶೈಕ್ಷಣಿಕ ಮೂಲ ಸೌಲಭ್ಯದಲ್ಲಿ ಗಣನೀಯ ಹೆಚ್ಚಳವಾಗಿದೆ.</p>

2018- 19ನೇ ಸಾಲಿನಲ್ಲಿ 4 ಕೋಟಿ ವೆಚ್ಚದಲ್ಲಿ 112 ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದ್ದರೆ. ಪ್ರಸಕ್ತ ಸಾಲಿನಲ್ಲಿ 290 ಕೊಠಡಿ ನಿರ್ಮಾಣ ಪ್ರಗತಿಯಲ್ಲಿದೆ. ಇನ್ನೂ ಸುಮಾರು 350 ಕೊಠಡಿಗಳ ದುರಸ್ತಿ ಕಾರ್ಯ ಆಗಬೇಕಿದ್ದು, ಅದಕ್ಕಾಗಿ ಅನುದಾನ ಕೋರಿ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಲ್ಲದೇ ನರೇಗಾ ಯೋಜನೆಯಡಿ ಶಾಲಾ ಶೌಚಾಲಯ, ಕಾಂಪೌಂಡ್‌ ನಿರ್ಮಾಣ, ಶಾಲಾ ಕೈತೋಟ, ಆಟದ ಮೈದಾನ ಸೇರಿದಂತೆ ಹಲವು ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದರಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಶೈಕ್ಷಣಿಕ ಮೂಲ ಸೌಲಭ್ಯದಲ್ಲಿ ಗಣನೀಯ ಹೆಚ್ಚಳವಾಗಿದೆ.

57
<p>ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಸರ್ಕಾರಿ ಶಾಲೆಗಳಿಗೆ 2,58,713 ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪ್ರವೇಶ ಪಡೆದಿದ್ದಾರೆ. ಇನ್ನೂ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 17500 ಮಕ್ಕಳು ಪ್ರವೇಶ ಪಡೆಯುವ ನಿರೀಕ್ಷೆ ಹೊಂದಲಾಗಿದೆ. ಬ್ಯಾಡಗಿ ತಾಲೂಕಿನಲ್ಲಿ 23837, ಹಾನಗಲ್ಲ 41587, ಹಾವೇರಿ 49201, ಹಿರೇಕೆರೂರು 34595, ರಾಣಿಬೆನ್ನೂರು 53358, ಸವಣೂರು 24539 ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ 31596 ವಿದ್ಯಾರ್ಥಿಗಳು ಸೇರಿದಂತೆ 2.58 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.</p>

<p>ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಸರ್ಕಾರಿ ಶಾಲೆಗಳಿಗೆ 2,58,713 ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪ್ರವೇಶ ಪಡೆದಿದ್ದಾರೆ. ಇನ್ನೂ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 17500 ಮಕ್ಕಳು ಪ್ರವೇಶ ಪಡೆಯುವ ನಿರೀಕ್ಷೆ ಹೊಂದಲಾಗಿದೆ. ಬ್ಯಾಡಗಿ ತಾಲೂಕಿನಲ್ಲಿ 23837, ಹಾನಗಲ್ಲ 41587, ಹಾವೇರಿ 49201, ಹಿರೇಕೆರೂರು 34595, ರಾಣಿಬೆನ್ನೂರು 53358, ಸವಣೂರು 24539 ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ 31596 ವಿದ್ಯಾರ್ಥಿಗಳು ಸೇರಿದಂತೆ 2.58 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.</p>

ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಸರ್ಕಾರಿ ಶಾಲೆಗಳಿಗೆ 2,58,713 ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪ್ರವೇಶ ಪಡೆದಿದ್ದಾರೆ. ಇನ್ನೂ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 17500 ಮಕ್ಕಳು ಪ್ರವೇಶ ಪಡೆಯುವ ನಿರೀಕ್ಷೆ ಹೊಂದಲಾಗಿದೆ. ಬ್ಯಾಡಗಿ ತಾಲೂಕಿನಲ್ಲಿ 23837, ಹಾನಗಲ್ಲ 41587, ಹಾವೇರಿ 49201, ಹಿರೇಕೆರೂರು 34595, ರಾಣಿಬೆನ್ನೂರು 53358, ಸವಣೂರು 24539 ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ 31596 ವಿದ್ಯಾರ್ಥಿಗಳು ಸೇರಿದಂತೆ 2.58 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.

67
<p>ಲಾಕ್‌ಡೌನ್‌ ಅವಧಿಯಲ್ಲಿ ಜಿಲ್ಲೆಯ ಕಲಾ ಶಿಕ್ಷಕರು ಸೇರಿದಂತೆ ಉತ್ಸಾಹಿ ಶಿಕ್ಷಕರು ತಮ್ಮ ಶಾಲೆಗಳನ್ನು ಆಕರ್ಷಣೀಯಗೊಳಿಸುವಲ್ಲಿ ನಿರತರಾಗಿದ್ದರು. ಅನೇಕ ಶಾಲೆಗಳು ಸುಣ್ಣಬಣ್ಣಗಳಿಂದ ಮಿಂಚುತ್ತಿದೆ. ಕೆಲವು ಶಾಲೆಗಳ ಆವರಣ, ಗೋಡೆಗಳಿಗೆಲ್ಲ ವರ್ಲಿ ಕಲೆಯಿಂದ ಮಿಂಚುತ್ತಿವೆ. ವಿದ್ಯಾರ್ಥಿಗಳಿಗೆ ಶಾಲೆ ಆರಂಭವಾಗದಿದ್ದರೂ ಶಿಕ್ಷಕರು ಕಳೆದ ಮೂರು ತಿಂಗಳಿಂದ ಶಾಲೆಗೆ ಹೋಗುತ್ತಿದ್ದಾರೆ. ಶಾಲೆಯ ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಆವರಣ, ಅಡುಗೆ ಕೋಣೆಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳಲು ಶ್ರಮಿಸಿದ್ದಾರೆ. ಇದರಿಂದ ಸರ್ಕಾರ ಶಾಲಾ ಆರಂಭಕ್ಕೆ ಯಾವಾಗ ಅನುಮತಿ ನೀಡಿದರೂ ಅದಕ್ಕೆ ಸಿದ್ಧ ಎಂಬಂತೆ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಅಣಿಯಾಗಿವೆ.</p>

<p>ಲಾಕ್‌ಡೌನ್‌ ಅವಧಿಯಲ್ಲಿ ಜಿಲ್ಲೆಯ ಕಲಾ ಶಿಕ್ಷಕರು ಸೇರಿದಂತೆ ಉತ್ಸಾಹಿ ಶಿಕ್ಷಕರು ತಮ್ಮ ಶಾಲೆಗಳನ್ನು ಆಕರ್ಷಣೀಯಗೊಳಿಸುವಲ್ಲಿ ನಿರತರಾಗಿದ್ದರು. ಅನೇಕ ಶಾಲೆಗಳು ಸುಣ್ಣಬಣ್ಣಗಳಿಂದ ಮಿಂಚುತ್ತಿದೆ. ಕೆಲವು ಶಾಲೆಗಳ ಆವರಣ, ಗೋಡೆಗಳಿಗೆಲ್ಲ ವರ್ಲಿ ಕಲೆಯಿಂದ ಮಿಂಚುತ್ತಿವೆ. ವಿದ್ಯಾರ್ಥಿಗಳಿಗೆ ಶಾಲೆ ಆರಂಭವಾಗದಿದ್ದರೂ ಶಿಕ್ಷಕರು ಕಳೆದ ಮೂರು ತಿಂಗಳಿಂದ ಶಾಲೆಗೆ ಹೋಗುತ್ತಿದ್ದಾರೆ. ಶಾಲೆಯ ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಆವರಣ, ಅಡುಗೆ ಕೋಣೆಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳಲು ಶ್ರಮಿಸಿದ್ದಾರೆ. ಇದರಿಂದ ಸರ್ಕಾರ ಶಾಲಾ ಆರಂಭಕ್ಕೆ ಯಾವಾಗ ಅನುಮತಿ ನೀಡಿದರೂ ಅದಕ್ಕೆ ಸಿದ್ಧ ಎಂಬಂತೆ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಅಣಿಯಾಗಿವೆ.</p>

ಲಾಕ್‌ಡೌನ್‌ ಅವಧಿಯಲ್ಲಿ ಜಿಲ್ಲೆಯ ಕಲಾ ಶಿಕ್ಷಕರು ಸೇರಿದಂತೆ ಉತ್ಸಾಹಿ ಶಿಕ್ಷಕರು ತಮ್ಮ ಶಾಲೆಗಳನ್ನು ಆಕರ್ಷಣೀಯಗೊಳಿಸುವಲ್ಲಿ ನಿರತರಾಗಿದ್ದರು. ಅನೇಕ ಶಾಲೆಗಳು ಸುಣ್ಣಬಣ್ಣಗಳಿಂದ ಮಿಂಚುತ್ತಿದೆ. ಕೆಲವು ಶಾಲೆಗಳ ಆವರಣ, ಗೋಡೆಗಳಿಗೆಲ್ಲ ವರ್ಲಿ ಕಲೆಯಿಂದ ಮಿಂಚುತ್ತಿವೆ. ವಿದ್ಯಾರ್ಥಿಗಳಿಗೆ ಶಾಲೆ ಆರಂಭವಾಗದಿದ್ದರೂ ಶಿಕ್ಷಕರು ಕಳೆದ ಮೂರು ತಿಂಗಳಿಂದ ಶಾಲೆಗೆ ಹೋಗುತ್ತಿದ್ದಾರೆ. ಶಾಲೆಯ ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಆವರಣ, ಅಡುಗೆ ಕೋಣೆಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳಲು ಶ್ರಮಿಸಿದ್ದಾರೆ. ಇದರಿಂದ ಸರ್ಕಾರ ಶಾಲಾ ಆರಂಭಕ್ಕೆ ಯಾವಾಗ ಅನುಮತಿ ನೀಡಿದರೂ ಅದಕ್ಕೆ ಸಿದ್ಧ ಎಂಬಂತೆ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಅಣಿಯಾಗಿವೆ.

77
<p>ಕೊರೋನಾ ಆತಂಕದ ಮಧ್ಯೆಯೂ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಶಾಲಾ ಕೊಠಡಿ ದುರಸ್ತಿ, ನಿರ್ಮಾಣ ಕಾರ್ಯವೂ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ ದಾಖಲಾತಿ ಸಂಖ್ಯೆಯೂ ಹೆಚ್ಚಿದೆ. ಸರ್ಕಾರ ಅನುಮತಿ ನೀಡಿದ ತಕ್ಷಣ ಶಾಲೆ ಪುನಾರಂಭಕ್ಕೆ ಬೇಕಾದ ಎಲ್ಲ ಸಿದ್ಧತೆ ನಡೆದಿದೆ ಎಂದು ಹಾವೇರಿ ಡಿಡಿಪಿಐ ಅಂದಾನಪ್ಪ ವಡಗೇರಿ ಅವರು ತಿಳಿಸಿದ್ದಾರೆ.&nbsp;</p>

<p>ಕೊರೋನಾ ಆತಂಕದ ಮಧ್ಯೆಯೂ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಶಾಲಾ ಕೊಠಡಿ ದುರಸ್ತಿ, ನಿರ್ಮಾಣ ಕಾರ್ಯವೂ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ ದಾಖಲಾತಿ ಸಂಖ್ಯೆಯೂ ಹೆಚ್ಚಿದೆ. ಸರ್ಕಾರ ಅನುಮತಿ ನೀಡಿದ ತಕ್ಷಣ ಶಾಲೆ ಪುನಾರಂಭಕ್ಕೆ ಬೇಕಾದ ಎಲ್ಲ ಸಿದ್ಧತೆ ನಡೆದಿದೆ ಎಂದು ಹಾವೇರಿ ಡಿಡಿಪಿಐ ಅಂದಾನಪ್ಪ ವಡಗೇರಿ ಅವರು ತಿಳಿಸಿದ್ದಾರೆ.&nbsp;</p>

ಕೊರೋನಾ ಆತಂಕದ ಮಧ್ಯೆಯೂ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಶಾಲಾ ಕೊಠಡಿ ದುರಸ್ತಿ, ನಿರ್ಮಾಣ ಕಾರ್ಯವೂ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ ದಾಖಲಾತಿ ಸಂಖ್ಯೆಯೂ ಹೆಚ್ಚಿದೆ. ಸರ್ಕಾರ ಅನುಮತಿ ನೀಡಿದ ತಕ್ಷಣ ಶಾಲೆ ಪುನಾರಂಭಕ್ಕೆ ಬೇಕಾದ ಎಲ್ಲ ಸಿದ್ಧತೆ ನಡೆದಿದೆ ಎಂದು ಹಾವೇರಿ ಡಿಡಿಪಿಐ ಅಂದಾನಪ್ಪ ವಡಗೇರಿ ಅವರು ತಿಳಿಸಿದ್ದಾರೆ. 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Recommended image1
ಬೆಂಗಳೂರು ದರೋಡೆ: ಪ್ರಕರಣ ಭೇದಿಸುವಲ್ಲಿ ಪೊಲೀಸರಿಗೆ ಸವಾಲಾಗಿದ್ದ ಅಂಶವೇನು?
Recommended image2
ಚಿಕ್ಕಮಗಳೂರಿನ 1960ರ ಹೋಟೆಲ್ ಮೆನು: ಅಂದಿನ ಊಟದ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ
Recommended image3
ಬೆಳಗಾವಿ: ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಶಾಸಕ ರಾಜು ಕಾಗೆ ಮತ್ತೊಂದು ಯಡವಟ್ಟು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved