MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Good Bye My Dear Life RIP ಸ್ಟೇಟಸ್ ಹಾಕಿ ಪ್ರಾಣ ಕಳೆದುಕೊಂಡ ತುಮಕೂರು ವಿದ್ಯಾರ್ಥಿ ಕೇಸ್‌ಗೆ ಟ್ವಿಸ್ಟ್

Good Bye My Dear Life RIP ಸ್ಟೇಟಸ್ ಹಾಕಿ ಪ್ರಾಣ ಕಳೆದುಕೊಂಡ ತುಮಕೂರು ವಿದ್ಯಾರ್ಥಿ ಕೇಸ್‌ಗೆ ಟ್ವಿಸ್ಟ್

Tumakuru News: ತುಮಕೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿ ಸುರೇಶ್ ಆತ್ಮ*ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆತ್ಮ*ಹತ್ಯೆಗೂ ಮುನ್ನ ಆತ ತನ್ನ ವಾಟ್ಸಪ್ ಸ್ಟೇಟಸ್‌ನಲ್ಲಿ ಸಾವಿನ ಬಗ್ಗೆ ಬರೆದುಕೊಂಡಿದ್ದನು.

1 Min read
Mahmad Rafik
Published : Oct 28 2025, 08:21 AM IST
Share this Photo Gallery
  • FB
  • TW
  • Linkdin
  • Whatsapp
14
ನರ್ಸಿಂಗ್ ಕಾಲೇಜು ವಿದ್ಯಾರ್ಥಿ
Image Credit : Asianet News

ನರ್ಸಿಂಗ್ ಕಾಲೇಜು ವಿದ್ಯಾರ್ಥಿ

ತುಮಕೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಆತ್ಮ*ಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಒನ್ ಸೈಡ್ ಲವ್ ಎಂದು ತಿಳಿದು ಬಂದಿದೆ. ಮೃತ ಸುರೇಶ್ ತನ್ನದೇ ಕಾಲೇಜಿನ ಸೀನಿಯರ್ ಯುವತಿಯನ್ನು ಪ್ರೀತಿಸುತ್ತಿದ್ದ ಎಂಬ ಮಾಹಿತಿ ಆತನ ಗೆಳೆಯರ ವಿಚಾರಣೆಯಲ್ಲಿ ತಿಳಿದು ಬಂದಿದೆ.

24
ಕೊಪ್ಪಳ ಜಿಲ್ಲೆಯ ನಿವಾಸಿ
Image Credit : Asianet News

ಕೊಪ್ಪಳ ಜಿಲ್ಲೆಯ ನಿವಾಸಿ

20 ವರ್ಷದ ಸುರೇಶ್ ಮೂಲತಃ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿದ್ದು, ತುಮಕೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್‌ ಅಭ್ಯಾಸ ಮಾಡುತ್ತಿದ್ದನು. ಮೆರಿಟ್ ಆಧಾರದ ಮೇಲೆ ಸೀಟು ಪಡೆದುಕೊಂಡಿದ್ದ ಸುರೇಶ್ ಜಯನಗರದ ಸರಸ್ವತಿಪುರಂನ ಬಾಡಿಗೆ ಕೋಣೆಯೊಂದರಲ್ಲಿ ವಾಸವಾಗಿದ್ದನು. ಇತ್ತೀಚೆಗೆ ಸುರೇಶ್ ಜೊತೆಯಲ್ಲಿದ್ದ ಗೆಳೆಯ ಸಹ ರೂಮ್ ಖಾಲಿ ಮಾಡಿದ್ದನು. ಅಂದಿನಿಂದ ಸುರೇಶ್ ಒಂಟಿಯಾಗಿಯೇ ರೂಮ್‌ನಲ್ಲಿದ್ದನು.

Related Articles

Related image1
ಎಲ್ಲರೂ ದೀಪಾವಳಿ ಆಚರಿಸ್ತಿದ್ರೆ, ರಾತ್ರಿ 35ರ ಆಂಟಿ ಜೊತೆ ಕಾಡಿನೊಳಗೆ ಹೋದ 19ರ ಯುವಕ
Related image2
ಗಂಡನಿದ್ರೂ ಇಬ್ಬರೊಂದಿಗೆ 4 ಮಕ್ಕಳ ತಾಯಿಯ ರಂಗಿನಾಟ ರಕ್ತಸಿಕ್ತದಲ್ಲಿ ಅಂತ್ಯ! ಕೊಟ್ಟಿದ್ದು ಕೊಡದಿದ್ದಕ್ಕೆ ಮಟಾಷ್!
34
Good bye my dear life rip
Image Credit : Asianet News

Good bye my dear life rip

ಅಕ್ಟೋಬರ್ 26ರ ಬೆಳಗಿನ ಜಾವ ಸುಮಾರು 3 ಗಂಟೆಗೆ Good Bye My Dear Life RIP ಎಂದು ಬರೆದುಕೊಂಡು ಸ್ಟೇಟಸ್ ಹಾಕಿಕೊಂಡಿದ್ದನು. ವಾಟ್ಸಪ್ ಸ್ಟೇಟಸ್ ನೋಡಿದ ಪೋಷಕರು ಮಗನಿಗೆ ಕರೆ ಮಾಡಿದ್ದಾರೆ. ಮಗ ಸಂಪರ್ಕಕ್ಕೆ ಸಿಗದ ಹಿನ್ನೆಲೆ ಸುರೇಶ್ ತಂದೆ ಕೊಪ್ಪಳದಿಂದ ತುಮಕೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸಗಣಿ ಎರಚೋ ಹಬ್ಬಕ್ಕೆ ಅಮೆರಿಕ ಯೂಟ್ಯೂಬರ್ ಅಪಹಾಸ್ಯ: ನೆಟ್ಟಿಗರ ಆಕ್ರೋಶ

44
ಪ್ರಾಥಮಿಕ ತನಿಖೆ
Image Credit : Asianet News

ಪ್ರಾಥಮಿಕ ತನಿಖೆ

ಸದ್ಯ ಮೇಲ್ನೋಟಕ್ಕೆ ಇದು ಆತ್ಮ*ಹತ್ಯೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಸಂಬಂಧ ಸುರೇಶ್ ತಂದೆ ನೀಡಿದ ದೂರಿನಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಭವಿಷ್ಯ ನುಡಿಯಲು ಆಗುವುದಿಲ್ಲ: ಸಚಿವ ಸಂತೋಷ್‌ ಲಾಡ್‌

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ತುಮಕೂರು
ಕ್ರೈಮ್ ನ್ಯೂಸ್
ಆತ್ಮಹತ್ಯೆ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved