MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ತುಮಕೂರು ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನಿಗೂಢ ಸಾವು; ತಂದೆ-ತಾಯಿ ಹೇಳಿಕೆಯಿಂದ ಪೊಲೀಸರಿಗೆ ಅನುಮಾನ!

ತುಮಕೂರು ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನಿಗೂಢ ಸಾವು; ತಂದೆ-ತಾಯಿ ಹೇಳಿಕೆಯಿಂದ ಪೊಲೀಸರಿಗೆ ಅನುಮಾನ!

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಿದ್ದನಕಟ್ಟೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಅಶ್ವಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ. ಹೊಟ್ಟೆನೋವೆಂದು ಪೋಷಕರ ಹೇಳಿಕೆ, ಪೊಲೀಸರಿಗೆ ಅನುಮಾನ.

1 Min read
Sathish Kumar KH
Published : Aug 23 2025, 10:45 AM IST
Share this Photo Gallery
  • FB
  • TW
  • Linkdin
  • Whatsapp
14
Image Credit : Asianet News

ತುಮಕೂರು/ಚಿಕ್ಕನಾಯಕನಹಳ್ಳಿ (ಆ.23): ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

24
Image Credit : Asianet News

ಅಶ್ವಿನಿ (20) ಮೃತ ದುರ್ದೈವಿ. ದೇವರಾಜು ಮತ್ತು ನಾಗರತ್ನಮ್ಮ ದಂಪತಿಯ ಪುತ್ರಿಯಾಗಿರುವ ಅಶ್ವಿನಿ, ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯಾಗಿ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆಕೆ ಆತ್ಮಹ*ತ್ಯೆಗೆ ಶರಣಾಗಿದ್ದಾಳೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೆ, ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Related Articles

Related image1
ತುಮಕೂರು: ವರಹ ಧ್ವಜ ಹಾರಿಸಿದ್ದಕ್ಕೆ ಐವರು ಹಿಂದೂ ಯುವಕರ ವಿರುದ್ಧ FIR!
Related image2
ಬ್ಯಾಂಕಿನಲ್ಲಿ ಸಹೋದ್ಯೋಗಿಗಳ ಕಿರುಕುಳಕ್ಕೆ ಬೇಸತ್ತು, ಬ್ಯಾಂಕ್ ಮ್ಯಾನೇಜರ್ ಆತ್ಮಹ*ತ್ಯೆ
34
Image Credit : Asianet News

ಮಗಳ ಸಾವಿನ ಕುರಿತು ಪೋಷಕರು ನೀಡಿದ ಹೇಳಿಕೆ ಪೊಲೀಸರಲ್ಲಿ ಅನುಮಾನ ಮೂಡಿಸಿದೆ. ಅಶ್ವಿನಿ ಹೊಟ್ಟೆ ನೋವಿನಿಂದಾಗಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರು ನೀಡಿದ್ದಾರೆ. ಆದರೆ, ಈ ರೀತಿಯ ಹೇಳಿಕೆ ಘಟನೆಯ ಹಿಂದಿನ ನಿಜವಾದ ಕಾರಣವನ್ನು ಮರೆಮಾಚುವ ಪ್ರಯತ್ನವಾಗಿರಬಹುದೆಂಬ ಸಂಶಯ ಪೊಲೀಸರನ್ನು ಕಾಡುತ್ತಿದೆ.

44
Image Credit : Google

ಈ ಕುರಿತು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಶ್ವಿನಿಯ ಸಾವಿನ ಹಿಂದಿನ ರಹಸ್ಯವನ್ನು ಭೇದಿಸಲು ಪೊಲೀಸರು ಆಕೆಯ ಸ್ನೇಹಿತರು, ಸಹಪಾಠಿಗಳು ಮತ್ತು ಕುಟುಂಬದ ಸದಸ್ಯರನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ. ಅಶ್ವಿನಿಯ ಮರಣೋತ್ತರ ಪರೀಕ್ಷೆಯ ವರದಿ ಕೂಡ ಪ್ರಕರಣದ ಮುಂದಿನ ತನಿಖೆಗೆ ಮಹತ್ವದ ಸುಳಿವು ನೀಡಲಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ತುಮಕೂರು
ಕರ್ನಾಟಕ ಸುದ್ದಿ
ವಿದ್ಯಾರ್ಥಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved