MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಆಗಸ್ಟ್ ಮೊದಲ ದಿನವೇ ಭರ್ತಿಯಾದ ತುಂಗಾ ಜಲಾಶಯ, 65 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಆಗಸ್ಟ್ ಮೊದಲ ದಿನವೇ ಭರ್ತಿಯಾದ ತುಂಗಾ ಜಲಾಶಯ, 65 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನೀರಿನ ಆತಂಕ ಹೆಚ್ಚಾಗುತ್ತಿದ್ದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ಕೆಲ ಜಲಾಶಗಳು ಭರ್ತಿಯಾಗುತ್ತಿದೆ. ಆಗಸ್ಟ್ 1 ರಂದೇ ತುಂಗಾ ಜಲಾಶಯ ಭರ್ತಿಯಾಗಿದ್ದು ನೀರು ಬಿಡುಗಡೆ ಮಾಡಲಾಗಿದೆ.

1 Min read
Author : Chethan Kumar
Published : Aug 01 2026, 03:49 PM IST
Share this Photo Gallery
  • FB
  • TW
  • Linkdin
  • Whatsapp
16
ಆಗಸ್ಟ್ 1 ರಂದೇ ತುಂಗಾ ಜಲಾಶಯ
Image Credit : Asianet News

ಆಗಸ್ಟ್ 1 ರಂದೇ ತುಂಗಾ ಜಲಾಶಯ

ಮಲೆನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಪ್ರಮುಖವಾಗಿ ತುಂಗಾ ನದಿ ಪಾತ್ರದ ಶೃಂಗೇರಿ , ಕೊಪ್ಪ, ತೀರ್ಥಹಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಕಳೆದ ಹಲವು ದಿನಗಳಿಂದ ನೀರಿನ ಕೊರತೆ ಎದುರಿಸುತ್ತಿದ್ದ ತುಂಗಾ ಜಲಾಶಯ ಇದೀಗ ಭಾರಿ ಮಳೆಯಿಂದ ಭರ್ತಿಯಾಗಿದೆ. ಮಳೆಗಾಲ ಆರಂಭಗೊಂಡ ಬರೋಬ್ಬರಿ 2 ತಿಂಗಳ ಬಳಿಕ ತುಂಗಾ ಜಲಶಯ ಭರ್ತಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಮಲೆನಾಡಿನ ಜೀವನದಿಗೆ ಕಳೆ
Image Credit : Asianet News

ಮಲೆನಾಡಿನ ಜೀವನದಿಗೆ ಕಳೆ

ಮಲೆನಾಡಿನ ಜೀವನಾಡಿ ಎಂದೇ ಗುರುತಿಸಿಕೊಂಡಿರುವ ತುಂಗಾ ನದಿ ತುಂಬಿ ಹರಿಯುತ್ತಿದೆ. ಪರಿಣಾಮ ತುಂಬಾ ಜಲಾಶಯ ಭರ್ತಿಯಾಗಿದೆ. ಕಳೆದೆರಡು ದಿನದಿಂದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ತುಂಗಾಜಲಾಯಶಕ್ಕೆ ನೀರು ಹರಿದು ಬಂದಿದೆ. ತುಂಗಾ ಜಲಾಶಯ ಭರ್ತಿಯಾದ ಪರಿಣಾಮ ನದಿಗೆ ನೀರು ಬಿಡಲಾಗಿದೆ.

Related Articles

Related image1
ಕಾವೇರಿ ಕಿಚ್ಚು ಏರಿದ ನಡುವೆ, ನಳನಳಿಸಿದ ಕಬಿನಿ, ಹಾರಂಗಿ ಜಲಾಶಯ!
Related image2
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು? ಪತ್ತೆ ಹಚ್ಚಲು ಮಂಡ್ಯ ಹುಡುಗನ ಖತರ್ನಾಕ್‌ ಪ್ಲ್ಯಾನ್‌
36
65 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
Image Credit : Asianet News

65 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ತುಂಗಾ ಜಲಾಶಯದಿಂದ ಸುಮಾರು 65 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯದ 22 ಗೇಟ್ ತೆರೆಯಲಾಗಿದೆ. ತುಂಗಾ ಜಲಾಶಯದ ಎಲ್ಲಾ ಗೇಟ್ ತೆರೆಯಲಾಗಿದ್ದು ನೀರು ರಭಸದಿಂದ ಹರಿಯುತ್ತಿದೆ. ತುಂಗಾ ಜಲಾಶಯ ಇದೀಗ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

46
ನದಿ ಪಾತ್ರದ ಜನರಿಗೆ ಎಚ್ಚರಿಕೆ
Image Credit : Asianet News

ನದಿ ಪಾತ್ರದ ಜನರಿಗೆ ಎಚ್ಚರಿಕೆ

ತುಂಗಾ ಜಲಾಶದಲ್ಲಿ 3.24 ಟಿಎಂಸಿ ನೀರಿನ ಸಂಗ್ರವಾಗಲಿದೆ. 588.24 ಮೀಟರ್ ಎತ್ತರದ ತುಂಗಾ ಜಲಾಶಯ ಭರ್ತಿಯಾಗಿದೆ. ಪರಿಣಾಮ ನದಿ ಪಾತ್ರದ ಕೆಳಭಾಗದ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆಯಿಂದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.

56
ಚಿಕ್ಕಮಗಳೂರಿನಲ್ಲಿ ಭಾರಿ ಮಳೆ
Image Credit : Asianet News

ಚಿಕ್ಕಮಗಳೂರಿನಲ್ಲಿ ಭಾರಿ ಮಳೆ

ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಬಾರಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿದೆ. ಕುದುರೆಮುಖ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಾಲತಿ ನದಿ ಉಕ್ಕಿ ಹರಿಯುತ್ತಿದ್ದು ನಾಬಳ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

66
ರಸ್ತೆಗಳು ಜಲಾವೃತ
Image Credit : Asianet News

ರಸ್ತೆಗಳು ಜಲಾವೃತ

ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಸೆಗಳು ಜಲಾವೃತಗೊಂಡಿದೆ. ಶೃಂಗೇರಿ ದೇಗುಲದ ಪಾರ್ಕಿಂಗ್ ಲಾಟ್ ಗೆ ಹೋಗುವ ಪ್ಯಾರಲಲ್ ರಸ್ತೆ ಜಲಾವೃತಗೊಂಡಿದೆ. ರಸ್ತೆ ಮೇಲೆ ಮೂರರಿಂದ ನಾಲ್ಕು ಅಡಿಗಳಷ್ಟು ನೀರು ನಿಂತಿದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ತುಂಗಭದ್ರಾ ಅಣೆಕಟ್ಟು
ಕರ್ನಾಟಕದ ಜಲಾಶಯಗಳು
ಕರ್ನಾಟಕ ಸುದ್ದಿ
Latest Videos
Recommended Stories
Recommended image1
ರಸ್ತೆ ಕಾಮಗಾರಿ ವೇಳೆ ಸಿಕ್ಕಿತು ರಾಷ್ಟ್ರಕೂಟರ ಕಾಲದ ಅಪರೂಪದ ನಿಧಿ!
Recommended image2
ಉಡುಪಿಯಲ್ಲಿ ಭೀಕರ ಅಪಘಾತ: ಖಾಸಗಿ ಬಸ್‌ ಡಿಕ್ಕಿಯಾಗಿ ನಗರಸಭೆ ಮಾಜಿ ಉಪಾಧ್ಯಕ್ಷೆ ಸ್ಥಳದಲ್ಲೇ ಸಾವು!
Recommended image3
ಚಿತ್ರದುರ್ಗದಲ್ಲಿ ಗಿರೀಶ್ ಮಟ್ಟಣ್ಣವರ್ ಸ್ಫೋಟಕ ಹೇಳಿಕೆ: ನಿಗೂಢ ಸಾವುಗಳ ಹಿಂದೆ ಅಡಗಿದೆಯಾ ದೊಡ್ಡ ಷಡ್ಯಂತ್ರ?
Related Stories
Recommended image1
ಕಾವೇರಿ ಕಿಚ್ಚು ಏರಿದ ನಡುವೆ, ನಳನಳಿಸಿದ ಕಬಿನಿ, ಹಾರಂಗಿ ಜಲಾಶಯ!
Recommended image2
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು? ಪತ್ತೆ ಹಚ್ಚಲು ಮಂಡ್ಯ ಹುಡುಗನ ಖತರ್ನಾಕ್‌ ಪ್ಲ್ಯಾನ್‌
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved