MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಮುಂಗಾರಿಗೂ ಮುನ್ನವೇ ರೈತರಿಗೆ ಸಿಕ್ತು ಭರ್ಜರಿ ಗುಡ್ ನ್ಯೂಸ್, ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್ ಗೇಟ್‌ ಲೋಕಾರ್ಪಣೆಗೆ ದಿನಾಂಕ ಫಿಕ್ಸ್

ಮುಂಗಾರಿಗೂ ಮುನ್ನವೇ ರೈತರಿಗೆ ಸಿಕ್ತು ಭರ್ಜರಿ ಗುಡ್ ನ್ಯೂಸ್, ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್ ಗೇಟ್‌ ಲೋಕಾರ್ಪಣೆಗೆ ದಿನಾಂಕ ಫಿಕ್ಸ್

ಕಳೆದ ವರ್ಷದ ದುರಂತದ ಬಳಿಕ ತುಂಗಭದ್ರಾ ಜಲಾಶಯಕ್ಕೆ 51 ಕೋಟಿ ರೂ. ವೆಚ್ಚದಲ್ಲಿ ಹೊಸ ಕ್ರಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿದೆ. ಮುಂಗಾರು ಆರಂಭದ ಹೊತ್ತಿಗೆ ಕಾಮಗಾರಿ ಪೂರ್ಣಗೊಂಡಿದ್ದು, ಜೂನ್ 25ರಂದು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಲೋಕಾರ್ಪಣೆಗೊಳ್ಳಲಿದೆ.

2 Min read
Author : Santosh Naik
Published : Jun 16 2026, 06:20 PM IST
Share this Photo Gallery
  • FB
  • TW
  • Linkdin
  • Whatsapp
16
ಜೂನ್ 25ರಂದು ಹೊಸ ಕ್ರಸ್ಟ್ ಗೇಟ್‌ಗಳ ಭವ್ಯ ಲೋಕಾರ್ಪಣೆ
Image Credit : X

ಜೂನ್ 25ರಂದು ಹೊಸ ಕ್ರಸ್ಟ್ ಗೇಟ್‌ಗಳ ಭವ್ಯ ಲೋಕಾರ್ಪಣೆ

ಕಳೆದ ವರ್ಷ ತಾಂತ್ರಿಕ ದೋಷದಿಂದಾಗಿ ದುರಂತಕ್ಕೀಡಾಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ಗಳ ಅಳವಡಿಕೆ ಕಾಮಗಾರಿ ಈಗ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಮುಂಗಾರು ಮಳೆಗಾಲ ಆರಂಭವಾಗುತ್ತಿರುವ ಬೆನ್ನಲ್ಲೇ ಜೂನ್ 25ರಂದು ಹೊಸ ಗೇಟ್‌ಗಳನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಲು ದಿನಾಂಕ ನಿಗದಿಪಡಿಸಲಾಗಿದೆ. ಮುಂಗಾರು ಮುನ್ನವೇ ಡ್ಯಾಂ ಸಂಪೂರ್ಣ ಸಿದ್ಧವಾಗಿರುವುದು ರೈತರಲ್ಲಿ ಹರ್ಷ ಮೂಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಉದ್ಘಾಟನಾ ಸಮಾರಂಭದಲ್ಲಿ ಮೂರು ರಾಜ್ಯಗಳ ಸಿಎಂಗಳ ಸಮ್ಮಿಲನ
Image Credit : X

ಉದ್ಘಾಟನಾ ಸಮಾರಂಭದಲ್ಲಿ ಮೂರು ರಾಜ್ಯಗಳ ಸಿಎಂಗಳ ಸಮ್ಮಿಲನ

ತುಂಗಭದ್ರಾ ಜಲಾಶಯದ ನೀರು ಮೂರು ರಾಜ್ಯಗಳಿಗೆ ಹಂಚಿಕೆಯಾಗುವುದರಿಂದ, ಈ ಲೋಕಾರ್ಪಣೆ ಕಾರ್ಯಕ್ರಮ ಜಂಟಿ ಸಮಾರಂಭವಾಗಿ ಮೂಡಿಬರಲಿದೆ. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ಮೂರೂ ರಾಜ್ಯಗಳ ಹಲವು ಗಣ್ಯರು ಈ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದ್ದಾರೆ. ಇದಕ್ಕಾಗಿ ಕೊಪ್ಪಳ ಜಿಲ್ಲಾಡಳಿತ ಭರದ ಸಿದ್ಧತೆ ನಡೆಸುತ್ತಿದೆ.

Related Articles

Related image1
Photos: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ: ಮುರಿದಿದ್ದ 19ನೇ ಗೇಟ್ ರಿಪೇರಿ ಬಳಿಕ ಮೊದಲ ಬಾರಿಗೆ ವೀಕ್ಷಣೆ
Related image2
ತುಂಗಭದ್ರಾ ಡ್ಯಾಂಗೆ ಆಯ್ತು ಹೊಸ ಗೇಟ್: ನವಲಿ ಸಮಾನಾಂತರ ಜಲಾಶಯದ ಕನಸು ನನಸಾಗುವುದೇ?
36
2024ರ ಆಗಸ್ಟ್‌ನಲ್ಲಿ ಸಂಭವಿಸಿದ್ದ ದುರಂತ
Image Credit : X

2024ರ ಆಗಸ್ಟ್‌ನಲ್ಲಿ ಸಂಭವಿಸಿದ್ದ ದುರಂತ

1953ರಲ್ಲಿ ನಿರ್ಮಾಣವಾಗಿದ್ದ ತುಂಗಭದ್ರಾ ಅಣೆಕಟ್ಟಿನ ಮೂಲ ಗೇಟ್‌ಗಳ ಜೀವಿತಾವಧಿ ಕೇವಲ 50 ವರ್ಷಗಳೆಂದು ತಜ್ಞರು ಮೊದಲೇ ಎಚ್ಚರಿಸಿದ್ದರು. ಆದರೂ ಹಳೆಯ ಗೇಟ್‌ಗಳನ್ನೇ ಮುಂದುವರಿಸಲಾಗಿತ್ತು. ಪರಿಣಾಮವಾಗಿ, 2024ರ ಆಗಸ್ಟ್ 10ರಂದು ರಾತ್ರಿ ಸುಮಾರು 60 ಅಡಿ ಅಗಲ ಹಾಗೂ 20 ಅಡಿ ಎತ್ತರದ ಬೃಹತ್ ಗೇಟ್‌ವೊಂದು ಇದ್ದಕ್ಕಿದ್ದಂತೆ ಕಳಚಿ ಬಿದ್ದಿತ್ತು. ಇದರಿಂದಾಗಿ ಅಪಾರ ಪ್ರಮಾಣದ ನೀರು ನದಿಗೆ ಪೋಲಾಗಿ, ಭಾರಿ ರಾಜಕೀಯ ವಾಕ್ಸಮರ ಹಾಗೂ ಆತಂಕ ಸೃಷ್ಟಿಯಾಗಿತ್ತು.

46
51 ಕೋಟಿ ರೂ. ವೆಚ್ಚದಲ್ಲಿ ಗುಜರಾತ್ ಕಂಪನಿಯಿಂದ ಹಗಲಿರುಳು ಕಾಮಗಾರಿ
Image Credit : X

51 ಕೋಟಿ ರೂ. ವೆಚ್ಚದಲ್ಲಿ ಗುಜರಾತ್ ಕಂಪನಿಯಿಂದ ಹಗಲಿರುಳು ಕಾಮಗಾರಿ

ಈ ದುರಂತದ ನಂತರ ಎಚ್ಚೆತ್ತ ಸರ್ಕಾರ, ಕಳೆದ ಡಿಸೆಂಬರ್‌ನಲ್ಲಿ ಭಾರಿ ಬಜೆಟ್‌ನೊಂದಿಗೆ ಹೊಸ ಗೇಟ್‌ಗಳ ಅಳವಡಿಕೆಗೆ ಚಾಲನೆ ನೀಡಿತ್ತು. ದೇಶದ ಪ್ರಮುಖ ಡ್ಯಾಂಗಳಾದ ಕೆಆರ್‌ಎಸ್, ನಾರಾಯಣಪುರ ಹಾಗೂ ಪಶ್ಚಿಮ ಬಂಗಾಳದ ಫರಕ್ಕಾ ಬ್ಯಾರೇಜ್‌ಗಳಿಗೆ ಗೇಟ್ ಅಳವಡಿಸಿದ ಅನುಭವವಿರುವ ಗುಜರಾತ್ ಮೂಲದ 'ಹಾರ್ಡ್‌ವೇರ್ ಟೂಲ್ಸ್ ಮತ್ತು ಮೆಷಿನ್ ಪ್ರಾಜೆಕ್ಟ್ಸ್ ಲಿಮಿಟೆಡ್' ಸಂಸ್ಥೆಗೆ ಇದರ ಗುತ್ತಿಗೆ ನೀಡಲಾಗಿತ್ತು. ಒಟ್ಟು 51.81 ಕೋಟಿ ರೂಪಾಯಿ ವೆಚ್ಚದಲ್ಲಿ ಗದಗ ಸಮೀಪದ ಅಡವಿಸೋಮಾಪುರ ಹಾಗೂ ವಿಜಯನಗರದ ಟಿಬಿ ಬೋರ್ಡ್ ಯಾರ್ಡ್‌ಗಳಲ್ಲಿ ಈ ಗೇಟ್‌ಗಳನ್ನು ಅತ್ಯಂತ ವೇಗವಾಗಿ ಸಿದ್ಧಪಡಿಸಲಾಯಿತು.

56
ಕಾಮಗಾರಿಗಾಗಿ ಒಂದು ಇಡೀ ಬೆಳೆ ತ್ಯಾಗ ಮಾಡಿದ್ದ ಅನ್ನದಾತರು
Image Credit : X

ಕಾಮಗಾರಿಗಾಗಿ ಒಂದು ಇಡೀ ಬೆಳೆ ತ್ಯಾಗ ಮಾಡಿದ್ದ ಅನ್ನದಾತರು

ಹೊಸ ಗೇಟ್ ಅಳವಡಿಸುವ ತಾಂತ್ರಿಕ ಅನಿವಾರ್ಯತೆಯಿಂದಾಗಿ, ಕಳೆದ ಡಿಸೆಂಬರ್ ತಿಂಗಳ ಎರಡನೇ ಬೆಳೆಗೆ ನೀರು ಬಿಡದಿರಲು ಸರ್ಕಾರ ನಿರ್ಧರಿಸಿತ್ತು. ಡ್ಯಾಂ ಸುರಕ್ಷತೆಯ ದೃಷ್ಟಿಯಿಂದ ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಲಕ್ಷಾಂತರ ರೈತರು ತಮ್ಮ ಒಂದು ಇಡೀ ಬೆಳೆಯನ್ನು ತ್ಯಾಗ ಮಾಡಿದ್ದರು. ಮುಂಗಾರು ಮಳೆಗೂ ಮುನ್ನ ಕೆಲಸ ಮುಗಿಯುತ್ತಾ ಎಂಬ ಆತಂಕ ರೈತರನ್ನು ಕಾಡಿತ್ತಾದರೂ, ಗುತ್ತಿಗೆ ಕಂಪನಿಯು ಹಗಲಿರುಳು ಶ್ರಮಿಸಿ ಸಕಾಲಕ್ಕೆ ಕೆಲಸ ಮುಗಿಸುವ ಮೂಲಕ ರೈತರ ನಂಬಿಕೆಯನ್ನು ಉಳಿಸಿಕೊಂಡಿದೆ.

66
ಸದ್ಯ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?
Image Credit : X

ಸದ್ಯ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ (KSNDMC) ಇತ್ತೀಚಿನ ತಾಜಾ ಮಾಹಿತಿ ಪ್ರಕಾರ, ಜೂನ್ 16ರ ವೇಳೆಗೆ ತುಂಗಭದ್ರಾ ಜಲಾಶಯದಲ್ಲಿ ಸದ್ಯಕ್ಕೆ 9 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ (2025) ಇದೇ ಅವಧಿಯಲ್ಲಿ ಜಲಾಶಯದಲ್ಲಿ 28 ಟಿಎಂಸಿ ನೀರು ಲಭ್ಯವಿತ್ತು. ಸದ್ಯ ಮುಂಗಾರು ಮಳೆ ಆರಂಭವಾಗುತ್ತಿರುವುದರಿಂದ ಹೊಸ ಗೇಟ್‌ಗಳ ಬಲದೊಂದಿಗೆ ಡ್ಯಾಂನಲ್ಲಿ ನೀರಿನ ಸಂಗ್ರಹದ ಪ್ರಮಾಣ ವೇಗವಾಗಿ ಹೆಚ್ಚಾಗುವ ನಿರೀಕ್ಷೆಯಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ತುಂಗಭದ್ರಾ ಅಣೆಕಟ್ಟು
ಕೊಪ್ಪಳ
ಕರ್ನಾಟಕದ ಜಲಾಶಯಗಳು
ಕರ್ನಾಟಕ ಸರ್ಕಾರ
ಸುದ್ದಿ

Latest Videos
Recommended Stories
Recommended image1
ಬಾಗ್ಮನೆ ಟೆಕ್‌ಪಾರ್ಕ್‌ನಲ್ಲಿ 121 ಕೋಟಿಗೆ ಕಚೇರಿ ಸ್ಥಳ ಬಾಡಿಗೆಗೆ ಪಡೆದ ನೈಕಿ ಇಂಡಿಯಾ
Recommended image2
ದಶಕದ ಕನಸಿಗೆ ಜೀವ: ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಯೋಜನೆಗೆ ಬಿಗ್‌ ಬೂಸ್ಟ್‌, 3348 ಕೋಟಿ ಟೆಂಡರ್ ಒಪ್ಪಿಕೊಂಡ SNC!
Recommended image3
ಧರ್ಮಸ್ಥಳ ಕೇಸ್‌ನ ತನಿಖಾಧಿಕಾರಿ ಎಸ್‌ಪಿ ಸೈಮನ್ ಕಾರು ಚಾರ್ಮಾಡಿ ಘಾಟ್‌ನಲ್ಲಿ ಪಲ್ಟಿ: ತನಿಖೆಯಲ್ಲೊಂದು ತಿರುವು?
Related Stories
Recommended image1
Photos: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ: ಮುರಿದಿದ್ದ 19ನೇ ಗೇಟ್ ರಿಪೇರಿ ಬಳಿಕ ಮೊದಲ ಬಾರಿಗೆ ವೀಕ್ಷಣೆ
Recommended image2
ತುಂಗಭದ್ರಾ ಡ್ಯಾಂಗೆ ಆಯ್ತು ಹೊಸ ಗೇಟ್: ನವಲಿ ಸಮಾನಾಂತರ ಜಲಾಶಯದ ಕನಸು ನನಸಾಗುವುದೇ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved