MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ತುಂಗಭದ್ರಾ ಜಲಾಶಯ 33 ಗೇಟ್‌ ಬದಲಾವಣೆ ಕಾಮಗಾರಿ, 18ನೇ ಗೇಟ್ ಅಳವಡಿಕೆ ಬರೋಬ್ಬರಿ 15 ದಿನದಲ್ಲಿ ಯಶಸ್ವಿ

ತುಂಗಭದ್ರಾ ಜಲಾಶಯ 33 ಗೇಟ್‌ ಬದಲಾವಣೆ ಕಾಮಗಾರಿ, 18ನೇ ಗೇಟ್ ಅಳವಡಿಕೆ ಬರೋಬ್ಬರಿ 15 ದಿನದಲ್ಲಿ ಯಶಸ್ವಿ

ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ನವೀಕರಣ ಕಾರ್ಯದಲ್ಲಿ ಮಹತ್ವದ ಪ್ರಗತಿಯಾಗಿದ್ದು, 18ನೇ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಒಟ್ಟು 33 ಹಳೆಯ ಗೇಟ್‌ಗಳನ್ನು ಬದಲಿಸುವ ಈ ಯೋಜನೆಯು ಜಲಾಶಯದ ಭದ್ರತೆ ಮತ್ತು ನೀರು ನಿರ್ವಹಣೆಯನ್ನು ಬಲಪಡಿಸುವ ಗುರಿ ಹೊಂದಿದೆ.  

2 Min read
Author : Gowthami K
Published : Jan 08 2026, 07:31 PM IST
Share this Photo Gallery
  • FB
  • TW
  • Linkdin
  • Whatsapp
15
18ನೇ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಸಂಪೂರ್ಣ
Image Credit : Asianet News

18ನೇ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಸಂಪೂರ್ಣ

ಕೊಪ್ಪಳ/ವಿಜಯನಗರ: ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನವೀಕರಣ ಕಾರ್ಯದಲ್ಲಿ ಮಹತ್ವದ ಹಂತವನ್ನು ಯಶಸ್ವಿಯಾಗಿ ದಾಟಲಾಗಿದೆ. ಮುನಿರಾಬಾದ್ ಸಮೀಪದಲ್ಲಿರುವ ತುಂಗಭದ್ರಾ ಜಲಾಶಯದಲ್ಲಿ 18ನೇ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಸಂಪೂರ್ಣಗೊಂಡಿದ್ದು, ಇದನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲಾಗಿದೆ. ತುಂಗಭದ್ರಾ ಜಲಾಶಯದ ಹಳೆಯ ಹಾಗೂ ಶಿಥಿಲಗೊಂಡ ಕ್ರಸ್ಟ್ ಗೇಟ್‌ಗಳನ್ನು ಬದಲಿಸುವ ಉದ್ದೇಶದಿಂದ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷಿ ಯೋಜನೆಯಡಿ, ಡಿಸೆಂಬರ್ 24, 2025ರಂದು 18ನೇ ಗೇಟ್ ಅಳವಡಿಕೆ ಕಾರ್ಯ ಆರಂಭವಾಗಿತ್ತು. ಈ ಗೇಟ್ ಅನ್ನು ಸಂಪೂರ್ಣವಾಗಿ ಅಳವಡಿಸಲು ಸುಮಾರು 15 ದಿನಗಳ ಸುದೀರ್ಘ ಸಮಯ ಬೇಕಾಗಿದ್ದು, ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ಸಿಬ್ಬಂದಿಯ ನಿರಂತರ ಪರಿಶ್ರಮದಿಂದ ಕಾರ್ಯ ಯಶಸ್ವಿಯಾಗಿದೆ.

25
18ನೇ ಕ್ರಸ್ಟ್ ಗೇಟ್‌ ಅಳವಡಿಕೆ ಯಶಸ್ವಿ
Image Credit : Asianet News

18ನೇ ಕ್ರಸ್ಟ್ ಗೇಟ್‌ ಅಳವಡಿಕೆ ಯಶಸ್ವಿ

ಇಂದು 18ನೇ ಕ್ರಸ್ಟ್ ಗೇಟ್‌ಗೆ ಚೈನ್ ಲಿಂಕ್ ಅಳವಡಿಸಲಾಗಿದ್ದು, ಗೇಟ್ ಅನ್ನು ಇಳಿಸುವ ಹಾಗೂ ಎತ್ತುವ ಕಾರ್ಯವನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಈ ಮೂಲಕ ಗೇಟ್ ಸಂಪೂರ್ಣ ಕಾರ್ಯನಿರ್ವಹಣೆಗೆ ಸಿದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮುನ್ನ ಜಲಾಶಯದ ಮೂರು ಹಳೆಯ ಮತ್ತು ಜೀರ್ಣಗೊಂಡ ಗೇಟ್‌ಗಳನ್ನು ಕತ್ತರಿಸಿ ತೆಗೆದುಹಾಕುವ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಕತ್ತರಿಸಲಾದ ಹಳೆಯ ಗೇಟ್‌ಗಳ ಜಾಗದಲ್ಲಿ ಹಂತ ಹಂತವಾಗಿ ಹೊಸ ಕ್ರಸ್ಟ್ ಗೇಟ್‌ಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಮೊದಲ ಹಂತದಲ್ಲಿ 18ನೇ ಗೇಟ್ ಅಳವಡಿಕೆ ಸಂಪೂರ್ಣವಾಗಿ ಯಶಸ್ವಿಯಾಗಿದ್ದು, ಇದು ಯೋಜನೆಯ ಪ್ರಗತಿಗೆ ಮಹತ್ವದ ಮೈಲುಗಲ್ಲಾಗಿದೆ. ಸರ್ಕಾರದ ಯೋಜನೆಯಂತೆ ಜಲಾಶಯದಲ್ಲಿರುವ ಒಟ್ಟು 33 ಕ್ರಸ್ಟ್ ಗೇಟ್‌ಗಳನ್ನು ಸಂಪೂರ್ಣವಾಗಿ ಬದಲಾಯಿಸಲು ನಿರ್ಧರಿಸಲಾಗಿದ್ದು, ಈ ಕಾರ್ಯಕ್ಕೆ ಸುಮಾರು ₹52 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಗೇಟ್ ಬದಲಾವಣೆಯ ಗುತ್ತಿಗೆಯನ್ನು ಗುಜರಾತ್ ಮೂಲದ ಖ್ಯಾತ ಕಂಪನಿಗೆ ಸರ್ಕಾರ ನೀಡಿದೆ.

Related Articles

Related image1
ತುಂಗಭದ್ರಾ ನದಿಯಲ್ಲಿ ಬಲೆಗೆ ಬಿದ್ದ ಅಪರೂಪದ ದೈತ್ಯ ಹದ್ದು ಮೀನು, ಬರೋಬ್ಬರಿ 12,800ಕ್ಕೆ ಮಾರಾಟ!
Related image2
ತುಂಗಭದ್ರಾ ಜಲಾಶಯದ ಕ್ರಸ್ಟ್‌ಡ್ ಗೇಟ್‌ ಅಳವಡಿಕೆ ಹಿನ್ನೆಲೆ, 6 ತಿಂಗಳು ಕಾಲುವೆಗಳಿಗೆ ನೀರು ಸ್ಥಗಿತ!
35
ಒಟ್ಟು 33 ಗೇಟ್‌ಗಳ ಬದಲಾವಣೆ
Image Credit : our own

ಒಟ್ಟು 33 ಗೇಟ್‌ಗಳ ಬದಲಾವಣೆ

ಈ ಯೋಜನೆಯಡಿ 33 ಗೇಟ್‌ಗಳ ಪೈಕಿ ಹಳೆಯ ಗೇಟ್‌ಗಳನ್ನು ಸಂಪೂರ್ಣವಾಗಿ ತೆಗೆದುಹಾಕಿ, ವೈಜ್ಞಾನಿಕ ತಳಹದಿಯ ಮೇಲೆ ಹೊಸ ಗೇಟ್‌ಗಳನ್ನು ಅಳವಡಿಸಲಾಗುತ್ತಿದೆ. ಪ್ರತಿಯೊಂದು ಗೇಟ್ ಅಳವಡಿಕೆಯ ನಂತರ ತಾಂತ್ರಿಕ ಪರೀಕ್ಷೆ ನಡೆಸಿ ಮಾತ್ರ ಮುಂದಿನ ಹಂತಕ್ಕೆ ಸಾಗಲಾಗುತ್ತಿದೆ. ಪ್ರಸ್ತುತ ಜಲಾಶಯದ 20ನೇ ಹಾಗೂ 27ನೇ ಗೇಟ್‌ಗಳ ಅಳವಡಿಕೆ ಕಾರ್ಯವೂ ಸಮಂತರವಾಗಿ ಪ್ರಗತಿಯಲ್ಲಿದೆ.

45
ಜೂನ್ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ವಿಶ್ವಾಸ
Image Credit : our own

ಜೂನ್ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ವಿಶ್ವಾಸ

ಗುತ್ತಿಗೆ ಪಡೆದ ಕಂಪನಿಯು, ಬರೋ ಜೂನ್ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾರ್ಯವನ್ನು ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದೆ. ಈ ಯೋಜನೆ ಪೂರ್ಣಗೊಂಡ ಬಳಿಕ ತುಂಗಭದ್ರಾ ಜಲಾಶಯದ ಭದ್ರತೆ ಮತ್ತಷ್ಟು ಬಲಗೊಳ್ಳಲಿದ್ದು, ಪ್ರವಾಹ ನಿಯಂತ್ರಣ ಹಾಗೂ ನೀರು ನಿರ್ವಹಣೆಯಲ್ಲಿ ಮಹತ್ವದ ಸುಧಾರಣೆ ಆಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

55
ಹಲವು ಜಿಲ್ಲೆಗಳ ಜೀವನಾಡಿ
Image Credit : our own

ಹಲವು ಜಿಲ್ಲೆಗಳ ಜೀವನಾಡಿ

ತುಂಗಭದ್ರಾ ಜಲಾಶಯವು ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಕೃಷಿ, ಕುಡಿಯುವ ನೀರು ಹಾಗೂ ಕೈಗಾರಿಕಾ ಚಟುವಟಿಕೆಗಳಿಗೆ ಆಧಾರವಾಗಿರುವುದರಿಂದ, ಈ ನವೀಕರಣ ಕಾರ್ಯವನ್ನು ಸರ್ಕಾರ ಅತ್ಯಂತ ಮಹತ್ವದ ಯೋಜನೆಯಾಗಿ ಕೈಗೊಂಡಿದೆ. 18ನೇ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ಸು, ಮುಂದಿನ ಗೇಟ್‌ಗಳ ಬದಲಾವಣೆಗೆ ದಾರಿ ತೋರಿಸುವ ಮಹತ್ವದ ಹೆಜ್ಜೆಯಾಗಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ತುಂಗಭದ್ರಾ ಅಣೆಕಟ್ಟು
ಕೊಪ್ಪಳ
ವಿಜಯನಗರ
ಕರ್ನಾಟಕ ಸುದ್ದಿ
ಕರ್ನಾಟಕದ ಜಲಾಶಯಗಳು

Latest Videos
Recommended Stories
Recommended image1
ಬಳ್ಳಾರಿ ಶೂಟೌಟ್ ಪ್ರಕರಣ: ಪೊಲೀಸರೇ ಆರೋಪಿಗಳಿಗೆ ಬಾಡಿಗಾರ್ಡ್ಸ್! ಗೃಹಸಚಿವರೇ ಅಸಮರ್ಥ, ಜನಾರ್ದನ ರೆಡ್ಡಿ ಕೆಂಡಾಮಂಡಲ
Recommended image2
ನಾನು ಚಾಮರಾಜ ಕ್ಷೇತ್ರದ ಆಕಾಂಕ್ಷಿ, ಪಕ್ಷದಲ್ಲಿ ಬ್ಯಾನರ್ ಕಟ್ಟುವ ಕಾರ್ಯಕರ್ತನಿಗೂ ಈ ಹಕ್ಕಿದೆ: ನಾಗೇಂದ್ರಗೆ ಸಿಂಹ ತಿರುಗೇಟು
Recommended image3
Breaking News: ಮ್ಯೂಸಿಕ್ ಮೈಲಾರಿಗೆ ಬಿಗ್ ಶಾಕ್; ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಅರ್ಜಿ ತಿರಸ್ಕೃತ!
Related Stories
Recommended image1
ತುಂಗಭದ್ರಾ ನದಿಯಲ್ಲಿ ಬಲೆಗೆ ಬಿದ್ದ ಅಪರೂಪದ ದೈತ್ಯ ಹದ್ದು ಮೀನು, ಬರೋಬ್ಬರಿ 12,800ಕ್ಕೆ ಮಾರಾಟ!
Recommended image2
ತುಂಗಭದ್ರಾ ಜಲಾಶಯದ ಕ್ರಸ್ಟ್‌ಡ್ ಗೇಟ್‌ ಅಳವಡಿಕೆ ಹಿನ್ನೆಲೆ, 6 ತಿಂಗಳು ಕಾಲುವೆಗಳಿಗೆ ನೀರು ಸ್ಥಗಿತ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved