MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Koppal: ಗಂಡ-ಮಕ್ಕಳನ್ನ ಬಿಟ್ಟು ಬಾ ಅಂದ, ಇಬ್ಬರು ಕಂದಮ್ಮಗಳನ್ನು ಕೊಂದು ಪ್ರಾಣ ಬಿಟ್ಟ ತಾಯಿ

Koppal: ಗಂಡ-ಮಕ್ಕಳನ್ನ ಬಿಟ್ಟು ಬಾ ಅಂದ, ಇಬ್ಬರು ಕಂದಮ್ಮಗಳನ್ನು ಕೊಂದು ಪ್ರಾಣ ಬಿಟ್ಟ ತಾಯಿ

ಕೊಪ್ಪಳ ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮ*ಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮೃತ ಲಕ್ಷ್ಮೀ ಅವರ ತಾಯಿಯೇ, ತಮ್ಮ ಮಗಳ ಸಾವಿಗೆ ಬೀರಪ್ಪ ಎಂಬಾತನೊಂದಿಗಿನ ಅಕ್ರಮ ಸಂಬಂಧ ಮತ್ತು ಆತನ ಒತ್ತಡವೇ ಕಾರಣ ಎಂದು ದೂರು ದಾಖಲಿಸಿದ್ದಾರೆ.

1 Min read
Mahmad Rafik
Published : Oct 28 2025, 09:16 AM IST
Share this Photo Gallery
  • FB
  • TW
  • Linkdin
  • Whatsapp
14
ತಾಯಿ ಮತ್ತು ಇಬ್ಬರು ಮಕ್ಕಳ ಸಾವು
Image Credit : Asianet News

ತಾಯಿ ಮತ್ತು ಇಬ್ಬರು ಮಕ್ಕಳ ಸಾವು

ಕೊಪ್ಪಳ ಜಿಲ್ಲೆಯ ಕುಕನೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮ*ಹತ್ಯೆ ಮಾಡಿಕೊಂಡ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಇದೀಗ ಮೃತ ಲಕ್ಷ್ಮೀ ವಿರುದ್ಧವೇ ಪ್ರಕರಣ ದಾಖಲಾಗಿದೆ. ಈ ಸಂಬಂಧ ಲಕ್ಷ್ಮೀ ತಾಯಿ ದೂರು ದಾಖಲಿಸಿದ್ದಾರೆ.

24
ಮೃತ ಮಹಿಳೆ ತಾಯಿಯಿಂದ ದೂರು ದಾಖಲು
Image Credit : Asianet News

ಮೃತ ಮಹಿಳೆ ತಾಯಿಯಿಂದ ದೂರು ದಾಖಲು

ಮೃತ ಲಕ್ಷ್ಮೀ ತನ್ನದೇ ಗ್ರಾಮದ ಬೀರಪ್ಪ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಈ ಅಕ್ರಮ ಸಂಬಂಧವೇ ಲಕ್ಷ್ಮೀ ಮತ್ತು ಮಕ್ಕಳಾದ ರಮೇಶ್, ಜಾನವಿ ಸಾವಿಗೆ ಕಾರಣವಾಗಿದೆ. ಬೀರಪ್ಪನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಲಕ್ಷ್ಮೀ ತಾಯಿ ಆಗ್ರಹಿಸಿದ್ದಾರೆ

Related Articles

Related image1
ಬೆಳಗಾವಿ: ಪ್ರೇಯಸಿ ಜೊತೆ ಲಾಡ್ಜ್ ನಲ್ಲಿ ಗಂಡನ ಕುಚ್‌ ಕುಚ್‌, ಕತ್ತು ಹಿಡಿದು ಹೊರಗೆಳೆದು ಚಪ್ಪಲಿಯಲ್ಲಿ ಬಾರಿಸಿದ ಪತ್ನಿ!
Related image2
ಓದಿದ್ದು ಬರೀ 10ನೇ ಕ್ಲಾಸ್‌ - ಆ್ಯಪ್‌ ಹ್ಯಾಕ್‌ ಮಾಡಿ 2.5ತಾಸಲ್ಲಿ ₹ 49 ಕೋಟಿ ಲೂಟಿ
34
ಅಕ್ರಮ ಸಂಬಂಧದ ಗುಟ್ಟು
Image Credit : Asianet News

ಅಕ್ರಮ ಸಂಬಂಧದ ಗುಟ್ಟು

ಲಕ್ಷ್ಮೀ ಮತ್ತು ಬೀರಪ್ಪ ನಡುವಿನ ಅಕ್ರಮ ಸಂಬಂಧ ವಿಷಯ ಕುಟುಂಬದಲ್ಲಿ ಗೊತ್ತಾಗಿತ್ತು. ಕುಟುಂಬಸ್ಥರು ಇಬ್ಬರಿಗೂ ತಿಳಿಹೇಳಿ ದೂರವಾಗುವಂತೆ ಹೇಳಿದ್ದರು. ಆದರೂ ಲಕ್ಷ್ಮೀ ಮತ್ತು ಬೀರಪ್ಪ ತಮ್ಮ ಸಂಬಂಧವನ್ನು ಮುಂದುವರಿಸಿದ್ದರು. ಈ ವಿಷಯ ಗ್ರಾಮದಲ್ಲಿ ಹರಿದಾಡುತ್ತಿತ್ತು. ಗಂಡ ಮತ್ತು ಮಕ್ಕಳನ್ನು ಬಿಟ್ಟು ತನ್ನೊಂದಿಗೆ ಬರುವಂತೆ ಲಕ್ಷ್ಮೀ ಮೇಲೆ ಬೀರಪ್ಪ ಒತ್ತಡ ಹಾಕುತ್ತಿದ್ದನು.

ಇದನ್ನೂ ಓದಿ: ನಂದಿ ಗಿರಿಧಾಮದ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಮೇಲೆ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆದ ಕಿಡಿಗೇಡಿಗಳು!

44
ಮಾನಸಿಕವಾಗಿ ನೊಂದಿದ್ದ ಲಕ್ಷ್ಮೀ
Image Credit : Asianet News

ಮಾನಸಿಕವಾಗಿ ನೊಂದಿದ್ದ ಲಕ್ಷ್ಮೀ

ಬೀರಪ್ಪ ಒತ್ತಡದಿಂದ ಮಗಳು ಲಕ್ಷ್ಮೀ ಮಾನಸಿಕವಾಗಿ ನೊಂದಿದ್ದಳು. ಈ ಒತ್ತಡದಿಂದಾಗಿ ತನ್ನ ಮಕ್ಕಳಾದ ರಮೇಶ್ ಹಾಗೂ ಜಾನವಿಯನ್ನು ಕೊಂದು ಆತ್ಮ*ತ್ಯೆ ಮಾಡಿಕೊಂಡಿದ್ದಾಳೆ. ಬೀರಪ್ಪ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಲಕ್ಷ್ಮೀ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಲಕ್ಷ್ಮೀ ತಾಯಿ ದೂರು ನೀಡಿದ ಅನ್ವಯ ಕೂಕನೂರ ಪೊಲೀಸ್ ಠಾಣೆಯಲ್ಲಿ 103(1)108,351(2)(3)BNS2023 -3(1) ಹಾಗೂ SC ST ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Good Bye My Dear Life RIP ಸ್ಟೇಟಸ್ ಹಾಕಿ ಪ್ರಾಣ ಕಳೆದುಕೊಂಡ ತುಮಕೂರು ವಿದ್ಯಾರ್ಥಿ ಕೇಸ್‌ಗೆ ಟ್ವಿಸ್ಟ್

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಅಕ್ರಮ ಸಂಬಂಧ
ಕೊಪ್ಪಳ
ಮಹಿಳೆಯರು
ತಾಯಿ
ಕ್ರೈಮ್ ನ್ಯೂಸ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved