MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಪರಶುರಾಮ ಥೀಂ ಪಾರ್ಕ್‌ನ ಲಕ್ಷಾಂತರ ಮೌಲ್ಯದ ಸೊತ್ತು ಕದ್ದವರು ಅರೆಸ್ಟ್, ಕಳ್ಳರು ಕಾಂಗ್ರೆಸ್ ಬ್ರದರ್ಸ್ ಎಂದ ಶಾಸಕ ಸುನೀಲ್ ಕುಮಾರ್!

ಪರಶುರಾಮ ಥೀಂ ಪಾರ್ಕ್‌ನ ಲಕ್ಷಾಂತರ ಮೌಲ್ಯದ ಸೊತ್ತು ಕದ್ದವರು ಅರೆಸ್ಟ್, ಕಳ್ಳರು ಕಾಂಗ್ರೆಸ್ ಬ್ರದರ್ಸ್ ಎಂದ ಶಾಸಕ ಸುನೀಲ್ ಕುಮಾರ್!

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ತಾಮ್ರದ ಹೊದಿಕೆ ಕಳವು ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ₹2.18 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.  ಶಾಸಕ ಸುನಿಲ್ ಕುಮಾರ್ ಕಳ್ಳರನ್ನು 'ಕಾಂಗ್ರೆಸ್ ಬ್ರದರ್ಸ್' ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 Min read
Author : Gowthami K
Published : Jan 11 2026, 06:16 PM IST
Share this Photo Gallery
  • FB
  • TW
  • Linkdin
  • Whatsapp
16
2.18 ಲಕ್ಷ ಮೌಲ್ಯದ ಕಳವುಗೊಳಿಸಿದ ಸೊತ್ತು ವಶ
Image Credit : google

2.18 ಲಕ್ಷ ಮೌಲ್ಯದ ಕಳವುಗೊಳಿಸಿದ ಸೊತ್ತು ವಶ

ಕಾರ್ಕಳ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ವಿವಾದಿತ ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ  45,000 ಮೌಲ್ಯದ 51 ಕೆಜಿ ತಾಮ್ರದ ಶೀಟು ಸಹಿತ ಸುಮಾರು ₹ 2.18 ಲಕ್ಷ ಮೌಲ್ಯದ ಕಳವುಗೊಳಿಸಿದ ಸೊತ್ತು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಳವಾರು ನಿವಾಸಿ ಆರೀಫ್ ಯಾನೆ ಮುನ್ನ (37) ಹಾಗೂ ಕಾವೂರು ನಿವಾಸಿ ಅಬ್ದುಲ್ ಹಮೀದ್ (32) ಎಂದು ಗುರುತಿಸಲಾಗಿದೆ.

26
ತಾಮ್ರದ ಹೊದಿಕೆ ಕಳವು
Image Credit : google

ತಾಮ್ರದ ಹೊದಿಕೆ ಕಳವು

ಜ.3 ರಂದು ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಮುಖ್ಯ ಬಾಗಿಲನ್ನು ಸಾಧನದ ಸಹಾಯದಿಂದ ಬಲವಂತವಾಗಿ ತೆರೆದು ಒಳಪ್ರವೇಶಿಸಿದ ದುಷ್ಕರ್ಮಿಗಳು, ಕಟ್ಟಡದ ಮೇಲ್ಛಾವಣಿಗೆ ಅಳವಡಿಸಲಾಗಿದ್ದ ತಾಮ್ರದ ಹೊದಿಕೆ ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ದಾಖಲಾಗಿದ್ದ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ 2023ರ ಕಲಂ 331(3), 331(4) ಹಾಗೂ 305ರಡಿ ಪ್ರಕರಣ ದಾಖಲಾಗಿತ್ತು.

Related Articles

Related image1
ಪಾಳುಬಿದ್ದ ವಿವಾದಿತ ಪರಶುರಾಮ ಥೀಮ್ ಪಾರ್ಕ್, ನಿರ್ಮಿತಿ ಕೇಂದ್ರ ಉಡುಪಿ ಸಂಸ್ಥೆ ಜವಾಬ್ದಾರಿ
Related image2
ಪರಶುರಾಮ ಪ್ರತಿಮೆ ವಿಚಾರದಲ್ಲಿ ಕಾಂಗ್ರೆಸ್‌ ಸುಳ್ಳು ಬಯಲು: ಸುನೀಲ್ ಕುಮಾರ್
36
ಮೂರು ವಿಶೇಷ ತಂಡಗಳ ರಚನೆ
Image Credit : google

ಮೂರು ವಿಶೇಷ ತಂಡಗಳ ರಚನೆ

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀ ಹರೀರಾಂ ಶಂಕರ ಐಪಿಎಸ್ ಅವರ ನಿರ್ದೇಶನದಂತೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ವ್ಯಾಪ್ತಿಯಲ್ಲಿ ತನಿಖೆ ನಡೆಸಿ ಖಚಿತ ಮಾಹಿತಿಯ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿವೆ.

46
ತಲೆಮರೆಸಿಕೊಂಡವರಿಗೆ ಹುಡುಕಾಟ
Image Credit : google

ತಲೆಮರೆಸಿಕೊಂಡವರಿಗೆ ಹುಡುಕಾಟ

ಬಂಧಿತ ಆರೀಫ್ ವಿರುದ್ಧ ಪಡುಬಿದ್ರೆ, ಉಡುಪಿ ನಗರ, ಬ್ರಹ್ಮಾವರ, ಕಾರ್ಕಳ ಗ್ರಾಮಾಂತರ ಹಾಗೂ ಮೂಲ್ಕಿ–ಮೂಡಬಿದ್ರೆ ಪೊಲೀಸ್ ಠಾಣೆಗಳಲ್ಲಿ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅಬ್ದುಲ್ ಹಮೀದ್ ವಿರುದ್ಧ ಬಂಟ್ವಾಳ ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ. ಬಂಧಿತರಿಂದ ಒಟ್ಟು ₹2,18,200 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

56
ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌ ಕಾರ್ಕಳ ಶಾಸಕ ಟ್ವೀಟ್
Image Credit : ‍

ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌ ಕಾರ್ಕಳ ಶಾಸಕ ಟ್ವೀಟ್

ಇದರ ಬೆನ್ನಲ್ಲೇ ಪರಶುರಾಮ ಥೀಂ ಪಾರ್ಕ್ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಟ್ಚೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಪರಶುರಾಮ ಥೀಂ ಪಾರ್ಕ್ ಹಾಳು ಬೀಳುವಂತೆ ಮಾಡಿದ್ದು ಕಾಂಗ್ರೆಸ್, ಕಳೆದ ವಾರ ಥೀಮ್ ಪಾರ್ಕ್ ನಲ್ಲಿ ನಡೆದ ಕಳ್ಳತನ ಪ್ರಕರಣ ವಿಚಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಅವರಿಗೆ ಅಭಿನಂದನೆಗಳು. ಭಾರತದ ಶ್ರದ್ಧಾ ಕೇಂದ್ರಗಳನ್ನು ಘಜ್ನಿ, ಘೋರಿ, ಖಿಲ್ಜಿ ಮೊಘಲರು ಒಡೆದರೆ, ಥೀಂ ಪಾರ್ಕ್ ಮೇಲ್ಚಾವಣಿ ಕದ್ದವರು ಅವರ ವಂಶಸ್ಥರು

66
ಇಲ್ಲಿಂದಲೇ ಕಾಂಗ್ರೆಸ್ ಅಧಃಪತನ
Image Credit : our own

ಇಲ್ಲಿಂದಲೇ ಕಾಂಗ್ರೆಸ್ ಅಧಃಪತನ

ಕರಾವಳಿಯಲ್ಲಿ ಪರಶುರಾಮನ ಹೆಜ್ಜೆ ಗುರುತು ಇರಲೇಬಾರದು ಎಂದು ಥೀಮ್ ಪಾರ್ಕ್ ಕಾಮಗಾರಿಯನ್ನ ಅರ್ಧಕ್ಕೆ ನೀವು ನಿಲ್ಲಿಸಿದ್ದೀರಿ. ಈಗ ನಿಮ್ಮ ಮತ ಬ್ಯಾಂಕ್ ನ ಪುಂಡರು ಇಲ್ಲಿ ಕಳ್ಳತನ ಮಾಡಿದ್ದಾರೆ, ಇವರಿಗೆ ಈ ಧೈರ್ಯ ಬಂದಿದ್ದು ಎಲ್ಲಿಂದ ? ಕಾಂಗ್ರೆಸ್ನ ಹಿಂದೂ ವಿರೋಧಿ ಭಾವನೆ, ಬಲದಿಂದಲ್ಲವೇ? ಏನು ಬೇಕಾದರೂ ಮಾಡಿ ನಾವಿದ್ದೇವೆ ಎಂಬಾ ಚಿತಾವಣೆಯಿಂದಲೋ? ಇಂದು ಭಾವನೆಗಳಿಗೆ ಘಾಸಿ ಮಾಡಿರುವವರ ಜೊತೆಗೆ ಪ್ರವಾಸೋದ್ಯಮಕ್ಕೆ ಅಡ್ಡಿ ಮಾಡಿದ್ದೀರಿ. ಮುಂದಿನ ಚುನಾವಣೆಯ ವರೆಗಲ್ಲ ಶತಶತಮಾನಗಳವರೆಗೂ ಸ್ಥಾಯಿಯಾಗಿರುತ್ತದೆ. ಇಲ್ಲಿಂದಲೇ ಕಾಂಗ್ರೆಸ್ ಅಧಃಪತನ ಕ್ಷಣಗಣನೆ ಪ್ರಾರಂಭ ಎಂದು ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಕಳ್ಳತನ ಪ್ರಕರಣ
ದಕ್ಷಿಣ ಕನ್ನಡ
ಉಡುಪಿ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಜಾತಿ ನಿಂದನೆ ಮಾಡಿ ಶ್ರೀರಾಮುಲು ಮೇಲೆ ದಾಳಿಗೆ ಸಂಚು? ಬಳ್ಳಾರಿ ಗಲಾಟೆಗೆ ರೆಡ್ಡಿ ಬಿಗ್ ಟ್ವಿಸ್ಟ್, ಬೆಚ್ಚಿಬಿಳಿಸುವ ಸಾಕ್ಷ್ಯ ಬಿಡುಗಡೆ!
Recommended image2
ಚಡ್ಡಿ ಹಾಕಿ ಓಡಾಡಬೇಡಮ್ಮ ಅಂತ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು, ರಕ್ತಬರುವಂತೆ ಹೋಂಗಾರ್ಡ್‌ಗೆ ನಡುರಸ್ತೆಯಲ್ಲಿ ಥಳಿಸಿದ ಯುವತಿ!
Recommended image3
Udyami Vokkaliga Expo 2026: ಸಾಲ ಕೊಡುವ ಮುನ್ನ ಹುಷಾರ್, ನಿಮ್ಮ ನೆರಳನ್ನೂ ನಂಬಬೇಡಿ: ಡಿಕೆಶಿ ಲೈಫ್ ಲೆಸನ್
Related Stories
Recommended image1
ಪಾಳುಬಿದ್ದ ವಿವಾದಿತ ಪರಶುರಾಮ ಥೀಮ್ ಪಾರ್ಕ್, ನಿರ್ಮಿತಿ ಕೇಂದ್ರ ಉಡುಪಿ ಸಂಸ್ಥೆ ಜವಾಬ್ದಾರಿ
Recommended image2
ಪರಶುರಾಮ ಪ್ರತಿಮೆ ವಿಚಾರದಲ್ಲಿ ಕಾಂಗ್ರೆಸ್‌ ಸುಳ್ಳು ಬಯಲು: ಸುನೀಲ್ ಕುಮಾರ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved