MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Varamahalakshmi Wishes
Darshan Renukaswamy Case
Farm Chemicals Under Scanner
Kanteerava Stadium Renovation
Karnataka Electoral Roll
Bengaluru 2nd International Airport
Bengaluru Land Scam
Mahatma Gandhi Manuscript Auction
Divorce Laws India
ISI Backed Terror Network
Mohan Bhagavat Canada Visit
  • Home
  • Karnataka Districts
  • ಉಡುಪಿ: ಭ್ರಷ್ಟಾಚಾರ ವರದಿ ಮಾಡಿದ್ದಕ್ಕೆ 'ಕನ್ನಡಪ್ರಭ' ವರದಿಗಾರನ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ!

ಉಡುಪಿ: ಭ್ರಷ್ಟಾಚಾರ ವರದಿ ಮಾಡಿದ್ದಕ್ಕೆ 'ಕನ್ನಡಪ್ರಭ' ವರದಿಗಾರನ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ!

ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ವರದಿ ಪ್ರಕಟಿಸಿದ್ದಕ್ಕೆ ಕನ್ನಡಪ್ರಭ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ವೈದ್ಯ ಡಾ. ಮಹೇಂದ್ರ ಶೆಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ. ಪತ್ನಿಯ ಎದುರೇ ಹೋಟೆಲ್‌ನಲ್ಲಿ ನಡೆದ ಈ ಘಟನೆಯನ್ನು ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.

1 Min read
Author : Sathish Kumar KH
Published : Aug 21 2026, 02:54 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ಸರಣಿ ವರದಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ, ‘ಕನ್ನಡಪ್ರಭ’ ದಿನಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಸರ್ಕಾರಿ ವೈದ್ಯರೊಬ್ಬರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

ಹಲ್ಲೆಗೊಳಗಾದ ಪತ್ರಕರ್ತರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಮಹೇಂದ್ರ ಶೆಟ್ಟಿ ಹಲ್ಲೆ ನಡೆಸಿದ ಆರೋಪಿಯಾಗಿದ್ದಾರೆ. ಇನ್ನು ಹಲ್ಲೆ ಮಾಡುವ ದೃಶ್ಯವೂ ಕೂಡ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೋಟೆಲ್ ಸಿಬ್ಬಂದಿ ಹಲ್ಲೆಯಾಗುವುದನ್ನು ತಡೆದಿದ್ದಾರೆ.

Related Articles

Related image1
ಸುವರ್ಣ ನ್ಯೂಸ್ ವರದಿಗಾರನ ಮೇಲೆ ಹಲ್ಲೆ ಮಾಡಿದ ಗಿರೀಶ್ ಮಟ್ಟೆಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಗ್ಯಾಂಗ್!
Related image2
Now Playing
ವರದಿಗಾರನ ಪ್ರಶ್ನೆಗೆ 'ಏಯ್ ನಡಿಯೋ ಆಚೆ..' ಎಂದ ನಾಸಿರ್‌ ಹುಸೇನ್‌!
35
Image Credit : Asianet News

ಪತ್ನಿ ಎದುರಲ್ಲೇ ಏಕಾಏಕಿ ಹಲ್ಲೆ:

ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರು ತಮ್ಮ ಪತ್ನಿಯೊಂದಿಗೆ ಕುಂದಾಪುರದ ಹೋಟೆಲೊಂದರಲ್ಲಿ ಚಹಾ ಕುಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಡಾ. ಮಹೇಂದ್ರ ಶೆಟ್ಟಿ, ಏಕಾಏಕಿ ಆಕ್ರೋಶ ವ್ಯಕ್ತಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. 'ನನ್ನ ವಿರುದ್ಧವೇ ವರದಿ ಪ್ರಕಟಿಸುತ್ತೀಯಾ?' ಎಂದು ಬೆದರಿಕೆ ಹಾಕಿ, ಪತ್ನಿಯ ಎದುರಲ್ಲೇ ಶ್ರೀಕಾಂತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

45
Image Credit : Asianet News

ಭ್ರಷ್ಟಾಚಾರ ವರದಿ ಮತ್ತು ವರ್ಗಾವಣೆಯ ದ್ವೇಷ:

ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಅಕ್ರಮಗಳು ಮತ್ತು ಡಾ. ಮಹೇಂದ್ರ ಶೆಟ್ಟಿ ಅವರ ಭ್ರಷ್ಟಾಚಾರದ ಕುರಿತು ಶ್ರೀಕಾಂತ್ ಹೆಮ್ಮಾಡಿ ಅವರು ಇತ್ತೀಚೆಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದರು. ಈ ವರದಿಗಳು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ವರದಿಯು ಸರ್ಕಾರಕ್ಕೂ ತಲುಪಿದ್ದು, ಇದರ ಪರಿಣಾಮವಾಗಿ ಸರ್ಕಾರವು ಕೂಡಲೇ ಡಾ. ಮಹೇಂದ್ರ ಶೆಟ್ಟಿ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ವೈದ್ಯ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ

55
Image Credit : Asianet News

ಕರ್ತವ್ಯನಿರತ ಪತ್ರಕರ್ತನ ಮೇಲೆ ವೈದ್ಯನೊಬ್ಬ ಗೂಂಡಾವರ್ತನೆ ತೋರಿ ಹಲ್ಲೆ ನಡೆಸಿರುವುದನ್ನು ಕುಂದಾಪುರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥ ವೈದ್ಯನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಸರ್ಕಾರಿ ಉದ್ಯೋಗ
ವೈದ್ಯರು
ಉಡುಪಿ

Latest Videos
Recommended Stories
Recommended image1
ಬೆಂಗಳೂರು ವಿಭಾಗದಲ್ಲಿನ ಎಸಿ ರೈಲು ಕೋಚ್‌ಗಳಿಗೆ ಇಲಿಗಳ ಕಾಟ, 84 ಲಕ್ಷ ವೆಚ್ಚದಲ್ಲಿ ಕೋಚ್‌ನಲ್ಲಿ ಮಾರ್ಪಾಡು
Recommended image2
ಬೆಂಗಳೂರು ಏರ್‌ಪೋರ್ಟ್‌ನಲ್ಲಿ 260 ಗ್ರಾಂ ಚಿನ್ನದ ಪುಡಿ ಜಪ್ತಿ: ಸೊಂಟಕ್ಕೆ ಸುತ್ತಿಕೊಂಡಿದ್ದ ಇಬ್ಬರು ವಶಕ್ಕೆ!
Recommended image3
ಬೆಂಗಳೂರು–ಹುಬ್ಬಳ್ಳಿ ನಡುವೆ ಸಂಚರಿಸುವ ಸೂಪರ್‌ಫಾಸ್ಟ್ ರೈಲು ಕುಷ್ಟಗಿಗೆ ವಿಸ್ತರಿಸಲು ಒತ್ತಾಯ!
Related Stories
Recommended image1
ಸುವರ್ಣ ನ್ಯೂಸ್ ವರದಿಗಾರನ ಮೇಲೆ ಹಲ್ಲೆ ಮಾಡಿದ ಗಿರೀಶ್ ಮಟ್ಟೆಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಗ್ಯಾಂಗ್!
Recommended image2
Now Playing
ವರದಿಗಾರನ ಪ್ರಶ್ನೆಗೆ 'ಏಯ್ ನಡಿಯೋ ಆಚೆ..' ಎಂದ ನಾಸಿರ್‌ ಹುಸೇನ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved