MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Uttara Kannada Rain: ಶಿರೂರು ಗುಡ್ಡಕುಸಿತ ದುರಂತ ಮರೆತರಾ ಪ್ರವಾಸಿಗರು? ಅಪಾಯಕಾರಿ ಜಲಪಾತಗಳಡಿ ಮೋಜು-ಮಸ್ತಿ!

Uttara Kannada Rain: ಶಿರೂರು ಗುಡ್ಡಕುಸಿತ ದುರಂತ ಮರೆತರಾ ಪ್ರವಾಸಿಗರು? ಅಪಾಯಕಾರಿ ಜಲಪಾತಗಳಡಿ ಮೋಜು-ಮಸ್ತಿ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ತಾತ್ಕಾಲಿಕ ಜಲಪಾತಗಳು ಸೃಷ್ಟಿಯಾಗಿವೆ. ಗುಡ್ಡಕುಸಿತದ ತೀವ್ರ ಅಪಾಯವಿದ್ದರೂ, ಪ್ರವಾಸಿಗರು ಜಿಲ್ಲಾಡಳಿತದ ಎಚ್ಚರಿಕೆ ನಿರ್ಲಕ್ಷಿಸಿ ಈ ಜಲಪಾತಗಳಲ್ಲಿ ನೀರಾಟವಾಡುತ್ತಿದ್ದು, ಇದು ಅನಾಹುತಕ್ಕೆ ಆಹ್ವಾನ ನೀಡುತ್ತಿದೆ.

2 Min read
Author : Sathish Kumar KH
Published : Jul 02 2026, 11:15 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವರುಣನ ಆರ್ಭಟ (Heavy Rain) ಜೋರಾಗಿದೆ. ಮಳೆಯ ಅಬ್ಬರಕ್ಕೆ ಮಲೆನಾಡು ಮತ್ತು ಕರಾವಳಿ ಭಾಗ ಹಸಿರು ಹೊದ್ದು ಕಂಗೊಳಿಸುತ್ತಿದ್ದರೆ, ಇನ್ನೊಂದೆಡೆ ನೂರಾರು ತಾತ್ಕಾಲಿಕ ಜಲಪಾತಗಳು (Waterfalls) ಸೃಷ್ಟಿಯಾಗಿವೆ. ಆದರೆ, ಈ ಸುಂದರ ಜಲಪಾತಗಳೇ ಈಗ ಪ್ರವಾಸಿಗರಿಗೆ ಮೃತ್ಯುಪಾಶವಾಗುವ ಆತಂಕ ಎದುರಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
Image Credit : Asianet News

ಬಂಡೆ ಕೊರೆದ ಜಾಗದಲ್ಲೇ ಜಲಪಾತಗಳ ಉಗಮ!

ರಾಷ್ಟ್ರೀಯ ಹೆದ್ದಾರಿ 66ರ (National Highway 66) ಚತುಷ್ಪಥ ರಸ್ತೆ ಕಾಮಗಾರಿಗಾಗಿ ಕಾರವಾರ ಮತ್ತು ಅಂಕೋಲಾ ಭಾಗದಲ್ಲಿ ಬೃಹತ್ ಬಂಡೆಗಳನ್ನು ಮತ್ತು ಗುಡ್ಡಗಳನ್ನು ಅವೈಜ್ಞಾನಿಕವಾಗಿ ಕೊರೆಯಲಾಗಿದೆ. ಈಗ ಸುರಿಯುತ್ತಿರುವ ಮಳೆಗೆ ಈ ಕೊರೆದ ಬಂಡೆಗಳ ಮೇಲಿಂದ ನೀರು ಧುಮ್ಮಿಕ್ಕುತ್ತಿದ್ದು, ಜಲಪಾತದಂತೆ ಗೋಚರಿಸುತ್ತಿದೆ. ಇದನ್ನು ನೋಡಲು ಮುಗಿಬೀಳುತ್ತಿರುವ ಪ್ರವಾಸಿಗರು, ಹೆದ್ದಾರಿ ಪಕ್ಕದಲ್ಲೇ ವಾಹನ ನಿಲ್ಲಿಸಿ ನೀರಾಟ ಆಡುತ್ತಿದ್ದಾರೆ.

Related Articles

Related image1
ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್: ದಕ್ಷಿಣ ಕನ್ನಡ, ಕಾರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!
Related image2
ಶಿರೂರು ಗುಡ್ಡ ಕುಸಿತ: 71 ದಿನಗಳ ಬಳಿಕ ನಾಪತ್ತೆಯಾಗಿದ್ದ ಲಾರಿ ಮತ್ತು ಕೇರಳದ ಚಾಲಕ ಅರ್ಜುನ್‌ ಶವ ಪತ್ತೆ
36
Image Credit : Asianet News

324 ಕಡೆ ಗುಡ್ಡಕುಸಿತದ ಭೀತಿ (Landslide Alert)

ಭಾರತೀಯ ಭೂ ವಿಜ್ಞಾನ ಇಲಾಖೆ (Geological Survey of India) ಈಗಾಗಲೇ ಎಚ್ಚರಿಕೆ ನೀಡಿದ್ದು, ಉತ್ತರಕನ್ನಡ ಜಿಲ್ಲೆಯ ಸುಮಾರು 324 ಪ್ರದೇಶಗಳಲ್ಲಿ ಗುಡ್ಡ ಕುಸಿಯುವ ಸಾಧ್ಯತೆಯಿದೆ ಎಂದು ವರದಿ ನೀಡಿದೆ. ವಿಶೇಷವಾಗಿ ಹೆದ್ದಾರಿ ಬದಿಯ ಕೊರೆದ ಗುಡ್ಡಗಳು ಯಾವಾಗ ಕುಸಿಯುತ್ತವೆ ಎಂದು ಹೇಳಲು ಸಾಧ್ಯವಿಲ್ಲ.

46
Image Credit : Asianet News

ಕಳೆದ ಎರಡು ವರ್ಷಗಳ ಹಿಂದೆ ಅಂಕೋಲಾದ ಶಿರೂರು (Shirur) ಬಳಿ ಸಂಭವಿಸಿದ ಗುಡ್ಡ ಕುಸಿತದ ಭೀಕರತೆ ಇಡೀ ದೇಶವನ್ನೇ ನಡುಗಿಸಿತ್ತು. ಆ ದುರಂತದಲ್ಲಿ 13 ಅಮಾಯಕರು ಮೃತಪಟ್ಟಿದ್ದರು. ಇಷ್ಟೆಲ್ಲಾ ಕಣ್ಣಮುಂದಿದ್ದರೂ ಪ್ರವಾಸಿಗರು ಮಾತ್ರ ಬುದ್ಧಿ ಕಲಿಯುತ್ತಿಲ್ಲ.

56
Image Credit : Asianet News

ಜಿಲ್ಲಾಡಳಿತದ ಸೂಚನೆಗೆ ಬೆಲೆಯಿಲ್ಲ!

ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರು ಇಳಿಯಬಾರದು ಮತ್ತು ಜಲಪಾತಗಳಲ್ಲಿ ನೀರಾಟವಾಡಬಾರದು ಎಂದು ಜಿಲ್ಲಾಡಳಿತ (District Administration) ಕಟ್ಟುನಿಟ್ಟಿನ ನಿರ್ಬಂಧ ಹೇರಿದೆ. ಆದರೆ, ಪ್ರವಾಸಿಗರು ಮಾತ್ರ ಯಾವುದಕ್ಕೂ ಕೇರ್ ಮಾಡದೆ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ಮತ್ತು ಮೋಜು-ಮಸ್ತಿಯಲ್ಲಿ ತೊಡಗಿದ್ದಾರೆ.

66
Image Credit : Asianet News

ಸ್ಥಳೀಯರ ಆಕ್ರೋಶ:

'ಒಂದು ಸಣ್ಣ ಗುಡ್ಡ ಕುಸಿತವಾದರೂ ದೊಡ್ಡ ಅನಾಹುತ ಸಂಭವಿಸಬಹುದು. ಪ್ರವಾಸಿಗರ ಈ ಹುಚ್ಚಾಟಕ್ಕೆ ಜಿಲ್ಲಾಡಳಿತ ಕೂಡಲೇ ಕಡಿವಾಣ ಹಾಕಬೇಕು. ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿ ದಂಡ ವಿಧಿಸಬೇಕು' ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪ್ರಕೃತಿಯನ್ನು ಆಸ್ವಾದಿಸುವುದು ತಪ್ಪಲ್ಲ, ಆದರೆ ಅದು ಪ್ರಾಣಕ್ಕೆ ಕಂಟಕವಾಗಬಾರದು ಎಂಬುದು ಪರಿಸರ ಪ್ರೇಮಿಗಳ ಕಳಕಳಿಯಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಉತ್ತರ ಕನ್ನಡ
ಭೂಕುಸಿತ
ಭೂಕುಸಿತ
ಕರ್ನಾಟಕ ಮಳೆ

Latest Videos
Recommended Stories
Recommended image1
6ನೇ ತರಗತಿ ಫೇಲಾದ ಹುಡುಗ ಈಗ ₹4000 ಕೋಟಿ ಒಡೆಯ! ಬೆಂಗಳೂರು ಸಣ್ಣ ರೂಮಲ್ಲಿ ಆರಂಭಿಸಿದ ಉದ್ಯಮ, ಇಂದು ದೊಡ್ಡ ಕಂಪನಿ!
Recommended image2
ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್: ದಕ್ಷಿಣ ಕನ್ನಡ, ಕಾರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!
Recommended image3
Bengaluru Court verdict: ರೌಡಿಶೀಟರ್‌ಗಳಾದ ಕಪ್ಪೆ, ಕರಿಶ್ಮಾ, ಕಣ್ಣುರಿ ಮೂವರಿಗೂ ಜೀವಾವಧಿ ಶಿಕ್ಷೆ ಪ್ರಕಟ!
Related Stories
Recommended image1
ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್: ದಕ್ಷಿಣ ಕನ್ನಡ, ಕಾರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!
Recommended image2
ಶಿರೂರು ಗುಡ್ಡ ಕುಸಿತ: 71 ದಿನಗಳ ಬಳಿಕ ನಾಪತ್ತೆಯಾಗಿದ್ದ ಲಾರಿ ಮತ್ತು ಕೇರಳದ ಚಾಲಕ ಅರ್ಜುನ್‌ ಶವ ಪತ್ತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved