MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಟೈರ್ ಬ್ಲಾಸ್ಟ್ ಆಗಿ ಪಲ್ಟಿ, ಓರ್ವ ಸಾವು, ಏಳು ಮಂದಿಗೆ ಗಾಯ

ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಟೈರ್ ಬ್ಲಾಸ್ಟ್ ಆಗಿ ಪಲ್ಟಿ, ಓರ್ವ ಸಾವು, ಏಳು ಮಂದಿಗೆ ಗಾಯ

ಧಾರವಾಡದಿಂದ ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಪ್ರಯಾಣಿಕರ ವಾಹನದ ಟೈರ್ ಬ್ಲಾಸ್ಟ್ ಆಗಿ ನಡುರಸ್ತೆಯಲ್ಲೇ ಪಲ್ಟಿಯಾಗಿದೆ. ಈ ದುರಂತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಏಳು ಜನ ಗಾಯಗೊಂಡಿದ್ದಾರೆ. 

1 Min read
Author : Ravi Janekal
Published : May 02 2026, 10:05 AM IST
Share this Photo Gallery
  • FB
  • TW
  • Linkdin
  • Whatsapp
15
ಕೊಪ್ಪಳ: ಟೈರ್ ಬ್ಲಾಸ್ಟ್ ಆಗಿ ಕ್ರೂಷರ್ ವಾಹನ ಪಲ್ಟಿ
Image Credit : Asianet News

ಕೊಪ್ಪಳ: ಟೈರ್ ಬ್ಲಾಸ್ಟ್ ಆಗಿ ಕ್ರೂಷರ್ ವಾಹನ ಪಲ್ಟಿ

ಧಾರವಾಡದ ಆ ಹತ್ತು ಮಂದಿ ಭಕ್ತರ ಮನಸ್ಸಿನಲ್ಲಿ ಅಂಜನಾದ್ರಿಯ ಹನುಮನ ದರ್ಶನ ಪಡೆಯಬೇಕೆಂಬ ಅತೀವ ಹಂಬಲವಿತ್ತು. ಕ್ರೂಷರ್ ವಾಹನದಲ್ಲಿ ಹರಟೆ ಹೊಡೆಯುತ್ತಾ, ಸಂಭ್ರಮದಿಂದಲೇ ಅವರು ಅಂಜನಾದ್ರಿಯತ್ತ ಸಾಗುತ್ತಿದ್ದರು. ಆದರೆ, ವಿಧಿಯ ಆಟವೇ ಬೇರೆಯಾಗಿತ್ತು

25
ಟೈರ್ ಸ್ಫೋಟಕ್ಕೆ ವಾಹನವೇ ಪಲ್ಟಿ!
Image Credit : Asianet News

ಟೈರ್ ಸ್ಫೋಟಕ್ಕೆ ವಾಹನವೇ ಪಲ್ಟಿ!

ಕೊಪ್ಪಳ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಷರ್ ವಾಹನ ವೇಗವಾಗಿ ಚಲಿಸುತ್ತಿತ್ತು. ಇನ್ನೇನು ಅಂಜನಾದ್ರಿ ತಲುಪಲು ಕೆಲವೇ ಮೈಲುಗಳ ದೂರ ಬಾಕಿ ಇತ್ತು. ಅಷ್ಟರಲ್ಲಿ ಇಡೀ ಹೆದ್ದಾರಿಯೇ ನಡುಗುವಂತಹ ಭೀಕರ ಶಬ್ದವೊಂದು ಕೇಳಿಬಂತು!

Related Articles

Related image1
ಮೃತ್ಯುಪಾಶವಾದ ಚಾರ್ಮಾಡಿ ಘಾಟ್: ಒಂದೇ ದಿನ ಮೂರು ಲಾರಿಗಳು ಪಲ್ಟಿ, ಹೆದ್ದಾರಿಯಲ್ಲಿ ನೂರಾರು ವಾಹನಗಳು ಲಾಕ್!
Related image2
ಅಡ್ಡಾದಿಡ್ಡಿ ಕಾರು ಚಾಲನೆ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿ: ಕೈಗೆ ಸಿಕ್ಕ ಕಾರು ಚಾಲಕನಿಗೆ ಕೈರುಚಿ ತೋರಿಸಿದ ಜನ
35
ಕೊಪ್ಪಳ: ಟೈರ್ ಬ್ಲಾಸ್ಟ್ ಆಗಿ ವಾಹನ ಪಲ್ಟಿ
Image Credit : Asianet News

ಕೊಪ್ಪಳ: ಟೈರ್ ಬ್ಲಾಸ್ಟ್ ಆಗಿ ವಾಹನ ಪಲ್ಟಿ

ಬೆಂಕಿಯಂತಹ ಬಿಸಿಲಿನಲ್ಲಿ ಚಲಿಸುತ್ತಿದ್ದ ಕ್ರೂಷರ್ ವಾಹನದ ಟೈರ್ ಏಕಾಏಕಿ ಸ್ಫೋಟಗೊಂಡಿತ್ತು. ಕ್ಷಣಾರ್ಧದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಹತ್ತೂ ಮಂದಿಯ ಕಿರುಚಾಟ, ಆಕ್ರಂದನ ನಡುವೆ ಏನಾಯ್ತು ಎಂದು ಯೋಚಿಸುವಷ್ಟರಲ್ಲಿ ದಿಕ್ಕಪಾಲಾಗಿ ಬಿದ್ದಿದ್ದ ಪ್ರಯಾಣಿಕರು.

ಈ ಭೀಕರ ಅಪಘಾತದಲ್ಲಿ ಓರ್ವ ದುರ್ದೈವಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪ್ರಯಾಣಿಕರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

45
ಕೊಪ್ಪಳ: ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು
Image Credit : Asianet News

ಕೊಪ್ಪಳ: ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು

ಅದೃಷ್ಟವಶಾತ್ ಕ್ರೂಷರ್‌ನಲ್ಲಿದ್ದ ಉಳಿದ ಏಳು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಕೊಪ್ಪಳ ಗ್ರಾಮೀಣ ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

55
ಅಂಜನಾದ್ರಿ ದರ್ಶನಕ್ಕೆ ಬಂದವರು ಆಸ್ಪತ್ರೆಗೆ!
Image Credit : Asianet News

ಅಂಜನಾದ್ರಿ ದರ್ಶನಕ್ಕೆ ಬಂದವರು ಆಸ್ಪತ್ರೆಗೆ!

ಹನುಮನ ದರ್ಶನ ಪಡೆಯಬೇಕೆಂಬ ಭಕ್ತರ ಆಸೆ ಅರ್ಧ ದಾರಿಯಲ್ಲೇ ಕಮರಿ ಹೋಗಿದ್ದು, ಘಟನೆಯ ಮಾಹಿತಿ ತಿಳಿದು ಮೃತರ ಕುಟುಂಬದವರ ಗೋಳು ಮುಗಿಲು ಮುಟ್ಟಿದೆ. 

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಕೊಪ್ಪಳ
ಅಪಘಾತ
ಧಾರವಾಡ

Latest Videos
Recommended Stories
Recommended image1
ವರದಕ್ಷಿಣೆಗೆ ಬಲಿಯಾದ ಗೃಹಿಣಿ: ಹುಳಿಮಾವಿನಲ್ಲಿ ಮೂರು ತಿಂಗಳ ಮಗುವಿನ ತಾಯಿ ಆ*ತ್ಮಹ*ತ್ಯೆ!
Recommended image2
BS Yadiyurappa: ಅವರ ಹೋರಾಟವೇ ಪ್ರತ್ಯೇಕ ಇತಿಹಾಸ; ಸಹೃದಯ ರಾಜಕಾರಣದ ಮೇರು ನಾಯಕ ಬಿಎಸ್‌ವೈ
Recommended image3
Bangalore emergency alert test: ನಾಳೆ ನಗರ ನಿವಾಸಿಗಳ ಮೊಬೈಲ್‌ಗೆ ಎಮೆರ್ಜೆನ್ಸಿ ಅಲರ್ಟ್ ಸಂದೇಶ, ಗಾಬರಿಯಾಗಬೇಡಿ! ಕಾರಣ ತಿಳಿಯಿರಿ
Related Stories
Recommended image1
ಮೃತ್ಯುಪಾಶವಾದ ಚಾರ್ಮಾಡಿ ಘಾಟ್: ಒಂದೇ ದಿನ ಮೂರು ಲಾರಿಗಳು ಪಲ್ಟಿ, ಹೆದ್ದಾರಿಯಲ್ಲಿ ನೂರಾರು ವಾಹನಗಳು ಲಾಕ್!
Recommended image2
ಅಡ್ಡಾದಿಡ್ಡಿ ಕಾರು ಚಾಲನೆ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿ: ಕೈಗೆ ಸಿಕ್ಕ ಕಾರು ಚಾಲಕನಿಗೆ ಕೈರುಚಿ ತೋರಿಸಿದ ಜನ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved