MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಈದ್ಗಾ ಜಮೀನಲ್ಲಿ ಕಲ್ಲು ಬ್ಲಾಸ್ಟ್; ಇರಾನ್-ಇಸ್ರೇಲ್ ಯುದ್ಧದ ಬಾಂಬ್ ಬಿತ್ತೆಂದು ಮನೆಯಿಂದ ಓಡಿಬಂದ ಮಹಿಳೆಯರು!

ಈದ್ಗಾ ಜಮೀನಲ್ಲಿ ಕಲ್ಲು ಬ್ಲಾಸ್ಟ್; ಇರಾನ್-ಇಸ್ರೇಲ್ ಯುದ್ಧದ ಬಾಂಬ್ ಬಿತ್ತೆಂದು ಮನೆಯಿಂದ ಓಡಿಬಂದ ಮಹಿಳೆಯರು!

ಹರಪನಹಳ್ಳಿಯ ಜನವಸತಿ ಪ್ರದೇಶದಲ್ಲಿ ನಡೆದ ಅಕ್ರಮ ಕಲ್ಲು ಬ್ಲಾಸ್ಟಿಂಗ್‌ನಿಂದಾಗಿ ಭೀಕರ ಸ್ಫೋಟ ಸಂಭವಿಸಿದೆ. ಈ ಶಬ್ದದಿಂದ ಭಯಭೀತರಾದ ಜನರು, ಇರಾನ್-ಇಸ್ರೇಲ್ ಯುದ್ಧದ ಬಾಂಬ್ ಎಂದು ಭಾವಿಸಿ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಪೊಲೀಸರು ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

2 Min read
Author : Sathish Kumar KH
Published : Mar 11 2026, 10:00 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ವಿಜಯನಗರ (ಮಾ.11): ಶಾಂತವಾಗಿದ್ದ ಹರಪನಹಳ್ಳಿ ಪಟ್ಟಣದಲ್ಲಿ ಇಂದು ಮಧ್ಯಾಹ್ನ ಕೇಳಿಬಂದ ಭೀಕರ ಸ್ಫೋಟದ ಶಬ್ದ ಜನರನ್ನು ಬೆಚ್ಚಿಬೀಳಿಸಿದೆ. ಹರಪನಹಳ್ಳಿಯ ಹೊಸಪೇಟೆ ರಸ್ತೆಯ ವಾರ್ಡ್ ಸಂಖ್ಯೆ 1 ರಲ್ಲಿರುವ ಈದ್ಗಾ ಜಮೀನಿನಲ್ಲಿ ಹಾಡಹಗಲೇ ಯಾವುದೇ ಅನುಮತಿ ಪಡೆಯದೆ ಸ್ಪೋಟಕಗಳನ್ನು ಬಳಸಿ ಕಲ್ಲು ಬ್ಲಾಸ್ಟಿಂಗ್ ಮಾಡಲಾಗಿದ್ದು, ಸ್ಥಳೀಯರು ಇರಾನ್-ಇಸ್ರೇಲ್ ಯುದ್ಧದ ಬಾಂಬ್ ನಮ್ಮ ಮೇಲೆ ಬಿತ್ತೆಂದು ಭಯಭೀತರಾಗಿ ಎದ್ನೋ ಬಿದ್ನೋ ಅಂತಾ ರಸ್ತೆಗೆ ಓಡಿಬಂದ ಘಟನೆ ನಡೆದಿದೆ.

26
Image Credit : Asianet News

ಈದ್ಗಾ ಜಮೀನಿನಲ್ಲಿ ನಡೆದ ಕಲ್ಲು ಬ್ಲಾಸ್ಟಿಂಗ್ ಎಷ್ಟು ಭೀಕರವಾಗಿತ್ತೆಂದರೆ, ಅದರ ಶಬ್ದಕ್ಕೆ ಇಡೀ ವಾರ್ಡ್ ನಲುಗಿ ಹೋಗಿದೆ. ಸದ್ಯ ವಿಶ್ವಮಟ್ಟದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿರುವುದರಿಂದ, ಜನರು ಆ ಯುದ್ಧದ ಬಾಂಬ್ ಏನಾದರೂ ಅಪ್ಪಿತಪ್ಪಿ ಭಾರತಕ್ಕೆ ಬಂದು ಬಿತ್ತಾ? ಎಂದು ಗಾಬರಿಗೊಂಡು ಮನೆಯಿಂದ ಹೊರಗೆ ಓಡೋಡಿ ಬಂದಿದ್ದಾರೆ. ಅಕ್ಕಪಕ್ಕದ ಮನೆಗಳ ನಿವಾಸಿಗಳು ಜೀವ ಕೈಯಲ್ಲಿ ಹಿಡಿದು ರಸ್ತೆಯಲ್ಲಿ ನಿಂತಿದ್ದ ದೃಶ್ಯ ಕಂಡುಬಂದಿದೆ.

Related Articles

Related image1
ಮಧ್ಯಪ್ರಾಚ್ಯ ಸಂಘರ್ಷ: ಇರಾನ್‌ ತೈಲ ಡಿಪೋಗಳ ಮೇಲೆ ಇಸ್ರೇಲ್ ಬಾಂಬ್ ದಾಳಿ: ಆಕಾಶದೆತ್ತರಕ್ಕೆ ಎದ್ದ ಬೆಂಕಿ ಜ್ವಾಲೆ
Related image2
ATM ಅನ್ಕೊಂಡು ಫೋನ್ ಕವರ್ ಒಳಗೆ ನೋಟು ತುರುಕಬೇಡಿ; ಫೋನ್ ಬ್ಲಾಸ್ಟ್ ಆದ್ರೆ ರಿಪೇರಿ ಮಾಡಿಸೋಕೂ ಆ ನೋಟು ಸಾಲಲ್ಲ!
36
Image Credit : Asianet News

ಜನವಸತಿ ಪ್ರದೇಶದ ನಡುವೆ ಯಾವುದೇ ಮುನ್ನೆಚ್ಚರಿಕೆ ಅಥವಾ ಮಾಹಿತಿ ನೀಡದೆ ಸ್ಪೋಟಕಗಳನ್ನು ಬಳಸಿರುವುದು ದೊಡ್ಡ ಅಪಾಯಕ್ಕೆ ನಾಂದಿ ಹಾಡಿತ್ತು. ಸ್ಫೋಟದ ತೀವ್ರತೆಗೆ ಸಮೀಪದ ಕೆಲ ಮನೆಗಳ ಕಾಂಪೌಂಡ್ ಗೋಡೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. 'ಒಮ್ಮೆಲೇ ದೊಡ್ಡ ಪ್ರಮಾಣದ ಶಬ್ದ ಕೇಳಿ ನಮಗೆ ಏನಾಗುತ್ತಿದೆ ಎಂದು ತಿಳಿಯಲೇ ಇಲ್ಲ, ಮಕ್ಕಳು-ವೃದ್ಧರು ಭಯದಿಂದ ನಡುಗುತ್ತಿದ್ದರು' ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

46
Image Credit : Asianet News

ಘಟನೆಯ ಗಂಭೀರತೆಯನ್ನು ಅರಿತು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಎಸ್. ಜಾಹ್ನವಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮವಾಗಿ ಬ್ಲಾಸ್ಟಿಂಗ್ ನಡೆಸಿದ ಜಾಗವನ್ನು ಪರಿಶೀಲಿಸಿದ ಅವರು, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

56
Image Credit : Asianet News

ಹರಪನಹಳ್ಳಿ ತಾಲೂಕು ಕಂದಾಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರ ವಿರುದ್ಧ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಶಹಬಾಜ್ ಅಕ್ರಂ ಭಾಷಾ, ಶಮೀವುಲ್ಲಾ, ಗಂಗಾಧರ ಹಾಗೂ ನಾಗರಾಜ್ ಎಂಬುವವರ ಮೇಲೆ ಅಕ್ರಮವಾಗಿ ಸ್ಪೋಟಕ ಬಳಕೆ ಮತ್ತು ಸಾರ್ವಜನಿಕರ ಜೀವಕ್ಕೆ ಸಂಚಕಾರ ತಂದ ಆರೋಪದಡಿ ಪ್ರಕರಣ ದಾಖಲಾಗಿದೆ.

66
Image Credit : Asianet News

ಕಾನೂನುಬಾಹಿರವಾಗಿ ಜನವಸತಿ ಪ್ರದೇಶದಲ್ಲಿ ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಸದ್ಯ ಹರಪನಹಳ್ಳಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ, ಆ ಸ್ಫೋಟದ ಶಬ್ದದಿಂದ ಜನರಿಗಿನ್ನೂ ಆತಂಕ ದೂರವಾಗಿಲ್ಲ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ವಿಜಯನಗರ
Latest Videos
Recommended Stories
Recommended image1
ಸಿಕ್ಕಿದ್ದೇ ಚಾನ್ಸ್‌, ಗ್ಯಾಸ್‌ ವಿಚಾರ ಇಟ್ಕೊಂಡು ಹಗಲು ದರೋಡೆಗೆ ಇಳಿದ ಬೆಂಗಳೂರು ಹೋಟೆಲ್‌ಗಳು!
Recommended image2
ಗ್ರಾಮೀಣ ಭಾಗದ ನೀರಿನ ಸಮಸ್ಯೆಗೆ ಮುಂಜಾಗ್ರತೆ ವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು
Recommended image3
ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಸ್ವಿಫ್ಟ್ ಕಾರು: ಮೂವರು ಗಂಭೀರ
Related Stories
Recommended image1
ಮಧ್ಯಪ್ರಾಚ್ಯ ಸಂಘರ್ಷ: ಇರಾನ್‌ ತೈಲ ಡಿಪೋಗಳ ಮೇಲೆ ಇಸ್ರೇಲ್ ಬಾಂಬ್ ದಾಳಿ: ಆಕಾಶದೆತ್ತರಕ್ಕೆ ಎದ್ದ ಬೆಂಕಿ ಜ್ವಾಲೆ
Recommended image2
ATM ಅನ್ಕೊಂಡು ಫೋನ್ ಕವರ್ ಒಳಗೆ ನೋಟು ತುರುಕಬೇಡಿ; ಫೋನ್ ಬ್ಲಾಸ್ಟ್ ಆದ್ರೆ ರಿಪೇರಿ ಮಾಡಿಸೋಕೂ ಆ ನೋಟು ಸಾಲಲ್ಲ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved